Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 15:1 - ಪರಿಶುದ್ದ ಬೈಬಲ್‌

1 ನಂತರ ಪರಲೋಕದಲ್ಲಿ ಮತ್ತೊಂದು ಅದ್ಭುತವನ್ನು ನಾನು ನೋಡಿದೆನು. ಅದು ಮಹಾ ಆಶ್ಚರ್ಯಕರವಾಗಿತ್ತು. ಏಳು ಉಪದ್ರವಗಳನ್ನು ತರುವ ಏಳು ಮಂದಿ ದೇವದೂತರು ಅಲ್ಲಿದ್ದರು. ದೇವರ ಕೋಪವು ಈ ಉಪದ್ರವಗಳೊಂದಿಗೆ ಮುಗಿಯುತ್ತಿದ್ದುದರಿಂದ ಇವು ಕಡೆಯ ಉಪದ್ರವಗಳಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪರಲೋಕದಲ್ಲಿ ಆಶ್ಚರ್ಯಕರವಾದ ಮತ್ತೊಂದು ಮಹಾ ಚಿಹ್ನೆಯನ್ನು ನಾನು ನೋಡಿದೆನು. ಏಳು ಮಂದಿ ದೇವದೂತರ ಕೈಯಲ್ಲಿ ಏಳು ಉಪದ್ರವಗಳಿದ್ದವು, ಇವು ಕಡೇ ಉಪದ್ರವಗಳು. ಇವುಗಳೊಂದಿಗೆ ದೇವರ ರೌದ್ರವು ಸಂಪೂರ್ಣವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸ್ವರ್ಗದಲ್ಲಿ ಮತ್ತೊಂದು ಚಿಹ್ನೆಯನ್ನು ಕಂಡೆ. ಅದು ಅತ್ಯಾಶ್ಚರ್ಯಕರವಾಗಿ ಇತ್ತು. ಏಳು ದೇವದೂತರ ಕೈಯಲ್ಲಿ ಏಳು ವಿಪತ್ತುಗಳು ಇದ್ದವು. ಇವು ಅಂತಿಮವಾಗಿ ಬಂದೆರಗುವ ವಿಪತ್ತುಗಳು. ಏಕೆಂದರೆ, ಅವುಗಳೊಡನೆ ದೇವರ ಕೋಪಾಗ್ನಿ ಪೂರ್ತಿಯಾಗಿ ಬಂದೆರಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಪರಲೋಕದಲ್ಲಿ ಆಶ್ಚರ್ಯಕರವಾದ ಮತ್ತೊಂದು ಮಹಾಲಕ್ಷಣವು ನನಗೆ ಕಾಣಿಸಿತು. ಏಳು ಮಂದಿ ದೇವದೂತರ ಕೈಯಲ್ಲಿ ಏಳು ಉಪದ್ರವಗಳಿದ್ದವು; ಇವು ಕಡೇ ಉಪದ್ರವಗಳು; ಇವುಗಳಲ್ಲಿ ದೇವರ ರೌದ್ರವು ಮುಗಿದಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಾನು ಪರಲೋಕದಲ್ಲಿ ಆಶ್ಚರ್ಯಕರವಾದ ಮತ್ತೊಂದು ಮಹಾ ಚಿಹ್ನೆಯನ್ನು ಕಂಡೆನು. ಏಳುಮಂದಿ ದೂತರಲ್ಲಿ ಕಡೆಯ ಏಳು ಉಪದ್ರವಗಳಿದ್ದವು. ಏಕೆಂದರೆ, ಅವುಗಳಲ್ಲಿ ದೇವರ ಕೋಪವು ಸಂಪೂರ್ಣವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಾನಾ ಮಳ್ಬಾರ್ ಅನಿಎಕ್ ಮೊಟಿ ಅನಿ ವಿಚಿತ್ರ್ ವಳಕ್ ಮಿಯಾ ಬಗಟ್ಲೊ. ಸಾತ್ ದೆವ್‍ದುತಾ ಸಾತ್ ಆಕ್ರಿಚಿ ತರಾಸಾ ಘೆವ್ನ್ ಇಬೆ ಹೊತ್ತಿ ಕಶ್ಯಾಕ್ ಮಟ್ಲ್ಯಾರ್ ಹಿ ತರಾಸಾ ದೆವಾಚ್ಯಾ ರಾಗಾಚಿ ಆಕ್ರಿಚಿ ಫಿಡಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 15:1
21 ತಿಳಿವುಗಳ ಹೋಲಿಕೆ  

“ನೀವು ಇನ್ನೂ ನನಗೆ ವಿರುದ್ಧವಾಗಿ ತಿರುಗಿ ಅವಿಧೇಯರಾದರೆ, ನಾನು ಇನ್ನೂ ಏಳರಷ್ಟು ಕಠಿಣವಾಗಿ ನಿಮ್ಮನ್ನು ಬಾಧಿಸುವೆನು. ನೀವು ಹೆಚ್ಚು ಪಾಪಮಾಡಿದಂತೆಲ್ಲಾ ಹೆಚ್ಚೆಚ್ಚಾಗಿ ಶಿಕ್ಷಿಸಲ್ಪಡುವಿರಿ.


ಕಡೆಯ ಏಳು ಉಪದ್ರವಗಳನ್ನು ತಮ್ಮ ಪಾತ್ರೆಗಳಲ್ಲಿ ತುಂಬಿಕೊಂಡಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ನನ್ನ ಬಳಿಗೆ ಬಂದು, “ನನ್ನ ಸಂಗಡ ಬಾ. ಕುರಿಮರಿಯಾದಾತನ ಪತ್ನಿಯಾಗಲಿರುವ ವಧುವನ್ನು ನಾನು ನಿನಗೆ ತೋರಿಸುತ್ತೇನೆ” ಎಂದನು.


ಕುದುರೆಯ ಮೇಲೆ ಕುಳಿತಿದ್ದಾತನ ಬಾಯಿಂದ ಹರಿತವಾದ ಕತ್ತಿಯೊಂದು ಹೊರಗೆ ಬರುತ್ತಿತ್ತು. ಆತನು ಜನಾಂಗಗಳನ್ನು ಸೋಲಿಸಲು ಈ ಕತ್ತಿಯನ್ನು ಬಳಸುತ್ತಾನೆ. ಆತನು ಕಬ್ಬಿಣದ ಕೋಲಿನಿಂದ ಜನಾಂಗಗಳನ್ನು ಆಳುತ್ತಾನೆ. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ದ್ರಾಕ್ಷಿಯನ್ನು ಕಿವುಚಿ ಹಾಕುತ್ತಾನೆ.


ನಂತರ ಆಲಯದಿಂದ ಒಂದು ಮಹಾಶಬ್ದವು ನನಗೆ ಕೇಳಿಸಿತು. ಆ ಶಬ್ದವು ಏಳು ದೇವದೂತರಿಗೆ, “ನೀವು ಹೋಗಿ ಏಳು ಪಾತ್ರೆಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿದುಬಿಡಿ” ಎಂದು ಹೇಳಿತು.


ಆ ದೇವದೂತನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಬೀಸಿ, ದ್ರಾಕ್ಷಿಯನ್ನೆಲ್ಲಾ ಒಟ್ಟುಗೂಡಿಸಿ, ದೇವರ ಕೋಪವೆಂಬ ದ್ರಾಕ್ಷಿಯ ಆಲೆಗೆ ಎಸೆದನು.


ಅವನು ದೇವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಯುತ್ತಾನೆ. ದೇವರ ಕೋಪವೆಂಬ ಬಟ್ಟಲಿನಲ್ಲಿ ಈ ದ್ರಾಕ್ಷಾರಸವನ್ನು ಅದರ ಪೂರ್ಣಶಕ್ತಿಯ ಸಮೇತವಾಗಿ ತಯಾರಿಸಲಾಗಿದೆ. ಅವನನ್ನು ಪರಿಶುದ್ಧ ದೇವದೂತರ ಮತ್ತು ಕುರಿಮರಿಯಾದಾತನ ಮುಂದೆ ಉರಿಯುವ ಗಂಧಕದಿಂದ ಯಾತನೆಪಡಿಸಲಾಗುವುದು.


ದೇವರು ಜನರಿಗೆ ಸಹಾಯ ಮಾಡುತ್ತಾನೆ ಮತ್ತು ರಕ್ಷಿಸುತ್ತಾನೆ. ದೇವರು ಭೂಮ್ಯಾಕಾಶಗಳಲ್ಲಿ ಅದ್ಭುತಕಾರ್ಯಗಳನ್ನು ಮಾಡುತ್ತಾನೆ. ದೇವರು ದಾನಿಯೇಲನನ್ನು ಸಿಂಹಗಳಿಂದ ರಕ್ಷಿಸಿದನು.


ಎರಡನೆಯ ಮಹಾವಿಪತ್ತು ಮುಗಿಯಿತು. ಮೂರನೆಯ ಮಹಾವಿಪತ್ತು ಬೇಗನೆ ಬರಲಿದೆ.


ಸಿಂಹ ಗರ್ಜಿಸುವಂತೆ ಗಟ್ಟಿಯಾಗಿ ಆರ್ಭಟಿಸಿದನು. ಆ ಬಳಿಕ ಏಳು ಗುಡುಗುಗಳ ಧ್ವನಿಯು ಮಾತನಾಡಿತು.


ನಂತರ ಆ ಏಳು ಮಂದಿ ದೇವದೂತರು ಏಳು ತುತೂರಿಗಳನ್ನು ಊದಲು ಸಿದ್ಧರಾದರು.


ನಾನು ನೋಡುತ್ತಿದ್ದಂತೆ, ವಾಯುಮಂಡಲದ ಅತಿ ಎತ್ತರದಲ್ಲಿ ಗರುಡ ಪಕ್ಷಿಯೊಂದು ಹಾರಾಡುತ್ತಿರುವುದನ್ನು ಕಂಡೆನು. ಆ ಪಕ್ಷಿಯು ಗಟ್ಟಿಯಾದ ಧ್ವನಿಯಲ್ಲಿ, “ತೊಂದರೆ! ತೊಂದರೆ! ಭೂಮಿಯ ಮೇಲೆ ವಾಸಿಸುವ ಜನರಿಗೆ ತೊಂದರೆ! ಇತರ ಮೂರು ಮಂದಿ ದೇವದೂತರು ತಮ್ಮ ತುತೂರಿಗಳನ್ನು ಊದಿದಾಗ ವಿಪತ್ತುಗಳು ಆರಂಭವಾಗುತ್ತವೆ” ಎಂದು ಕೂಗಿತು.


ದೇವರ ಎದುರಿನಲ್ಲಿ ಏಳು ದೇವದೂತರು ನಿಂತಿರುವುದನ್ನು ನಾನು ನೋಡಿದೆನು. ಅವರಿಗೆ ಏಳು ತುತೂರಿಗಳನ್ನು ಕೊಡಲಾಯಿತು.


ಈ ಉಪದ್ರವಗಳಿಂದ ಸಾಯದೆ ಉಳಿದ ಜನರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಲಿಲ್ಲ. ತಮ್ಮ ಸ್ವಂತ ಕೈಗಳಿಂದ ನಿರ್ಮಿಸಿದ ವಿಗ್ರಹಗಳನ್ನು ತೊರೆದುಬಿಡಲಿಲ್ಲ. ಅವರು ದೆವ್ವಗಳ ಆರಾಧನೆಯನ್ನು ನಿಲ್ಲಿಸಲಿಲ್ಲ. ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳಿಂದ ಮಾಡಲ್ಪಟ್ಟು, ನಡೆಯಲಾರದ, ನೋಡಲಾರದ ಮತ್ತು ಕೇಳಲಾರದ ವಿಗ್ರಹಗಳನ್ನು ಪೂಜಿಸುವುದನ್ನು ಅವರು ನಿಲ್ಲಿಸಲಿಲ್ಲ.


ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿದನು. ಏಳು ಪಾತ್ರೆಗಳನ್ನು ಹೊಂದಿದ್ದವರಲ್ಲಿ ಇವನೂ ಒಬ್ಬನಾಗಿದ್ದನು. ಆ ದೇವದೂತನು, “ಬಾ, ಪ್ರಸಿದ್ಧಳಾದ ವೇಶ್ಯಾಸ್ತ್ರೀಗೆ ನೀಡುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ. ಬಹಳ ನೀರುಗಳ ಮೇಲೆ ಕುಳಿತುಕೊಂಡಿರುವವಳು ಅವಳೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು