Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 16:1 - ಪರಿಶುದ್ದ ಬೈಬಲ್‌

1 ನಂತರ ಆಲಯದಿಂದ ಒಂದು ಮಹಾಶಬ್ದವು ನನಗೆ ಕೇಳಿಸಿತು. ಆ ಶಬ್ದವು ಏಳು ದೇವದೂತರಿಗೆ, “ನೀವು ಹೋಗಿ ಏಳು ಪಾತ್ರೆಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿದುಬಿಡಿ” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಗ ಆಲಯದೊಳಗಿಂದ ಬಂದ ಮಹಾಧ್ವನಿಯನ್ನು ನಾನು ಕೇಳಿದೆನು. ಅದು ಆ ಏಳು ಮಂದಿ ದೇವದೂತರಿಗೆ, “ನೀವು ಹೋಗಿ ಆ ಏಳು ಬಟ್ಟಲುಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿಯಿರಿ” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅನಂತರ ದೇವಾಲಯದೊಳಗಿಂದ ಬಂದ ಮಹಾಶಬ್ದವನ್ನು ಕೇಳಿದೆ. ಅದು ಆ ಏಳು ದೇವದೂತರಿಗೆ, “ನೀವು ಹೋಗಿ ಏಳು ಪಾತ್ರೆಗಳಲ್ಲಿ ತುಂಬಿರುವ ದೇವರ ರೋಷವನ್ನು ಭೂಮಿಯ ಮೇಲೆ ಸುರಿಯಿರಿ,” ಎಂದು ಆಜ್ಞಾಪಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಗ ಪವಿತ್ರಸ್ಥಾನದಿಂದ ಬಂದ ಮಹಾ ಶಬ್ದವನ್ನು ಕೇಳಿದೆನು. ಅದು ಆ ಏಳು ಮಂದಿ ದೇವದೂತರಿಗೆ - ನೀವು ಹೋಗಿ ಆ ಏಳು ಪಾತ್ರೆಗಳಲ್ಲಿರುವ ದೇವರ ರೌದ್ರವನ್ನು ಭೂವಿುಯ ಮೇಲೆ ಹೊಯ್ಯಿರಿ ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ದೇವಾಲಯದಿಂದ ಬಂದ ಗಟ್ಟಿಯಾದ ಧ್ವನಿಯು, ಏಳು ದೇವದೂತರಿಗೂ, “ಹೋಗಿರಿ, ಏಳು ಬೋಗುಣಿಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿದುಬಿಡಿರಿ!” ಎಂದು ಹೇಳುವುದನ್ನು ನಾನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಾನಾ ದೆವಾಚ್ಯಾ ಗುಡಿಚ್ಯಾ ಸಾತ್ ದೆವ್‍ದುತಾನಿಕ್ಡೆ ಬೊಲ್ತಲೊ ಅವಾಜ್ ಮಿಯಾ ಆಯಿಕ್ಲೊ; “ಜಾವಾ ಅನಿ ತ್ಯಾ ಸಾತ್ ದೆವಾಚ್ಯಾ ರಾಗಾಚ್ಯಾ ಕಟೊರ್‍ಯಾನಿತ್ಲೆ ಜಗಾ ವರ್ತಿ ವೊತಾ!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 16:1
17 ತಿಳಿವುಗಳ ಹೋಲಿಕೆ  

ಯೆಹೋವನು ಹೀಗೆ ಹೇಳುತ್ತಾನೆ: “ನನ್ನನ್ನು ಕಾದುಕೊಂಡಿರಿ. ನೀವು ನನ್ನ ನ್ಯಾಯತೀರ್ಪಿನ ತನಕ ಕಾದುಕೊಂಡಿರಿ. ನಾನು ಬೇರೆ ಜನಾಂಗಗಳನ್ನು ಇಲ್ಲಿಗೆ ಕರೆದು ನಿಮ್ಮನ್ನು ಶಿಕ್ಷಿಸುವಂತೆ ಮಾಡುವ ಹಕ್ಕು ನನಗಿದೆ. ನಿಮ್ಮ ಮೇಲೆ ನನಗಿರುವ ಸಿಟ್ಟು ತೋರಿಸಲು ನಾನು ಆ ಜನಾಂಗಗಳನ್ನು ಉಪಯೋಗಿಸುವೆನು. ನಿಮ್ಮ ಮೇಲೆ ನಾನು ಎಷ್ಟರಮಟ್ಟಿಗೆ ಕೋಪಗೊಂಡಿದ್ದೇನೆ ಎಂದು ಅವರ ಮೂಲಕ ನಿಮಗೆ ತಿಳಿದುಬರುವುದು. ಆಗ ಇಡೀ ದೇಶವೇ ನಾಶವಾಗುವುದು.


ನಂತರ ಪರಲೋಕದಲ್ಲಿ ಮತ್ತೊಂದು ಅದ್ಭುತವನ್ನು ನಾನು ನೋಡಿದೆನು. ಅದು ಮಹಾ ಆಶ್ಚರ್ಯಕರವಾಗಿತ್ತು. ಏಳು ಉಪದ್ರವಗಳನ್ನು ತರುವ ಏಳು ಮಂದಿ ದೇವದೂತರು ಅಲ್ಲಿದ್ದರು. ದೇವರ ಕೋಪವು ಈ ಉಪದ್ರವಗಳೊಂದಿಗೆ ಮುಗಿಯುತ್ತಿದ್ದುದರಿಂದ ಇವು ಕಡೆಯ ಉಪದ್ರವಗಳಾಗಿದ್ದವು.


ನಿನಗೆ ಕೋಪ ಬಂದಿದ್ದರೆ ಬೇರೆ ಜನಾಂಗಗಳನ್ನು ಶಿಕ್ಷಿಸು. ಅವರು ನಿನ್ನನ್ನು ಅರಿಯದವರಾಗಿದ್ದಾರೆ; ಗೌರವಿಸದವರಾಗಿದ್ದಾರೆ. ಅವರು ನಿನ್ನನ್ನು ಆರಾಧಿಸುವುದಿಲ್ಲ. ಆ ಜನಾಂಗಗಳು ಯಾಕೋಬ್ಯರ ವಂಶವನ್ನು ನಾಶಮಾಡಿದರು. ಅವರು ಇಸ್ರೇಲನ್ನು ಸಂಪೂರ್ಣವಾಗಿ ನಾಶಮಾಡಿದರು. ಅವರು ಇಸ್ರೇಲರ ವಾಸಸ್ಥಳವನ್ನು ನಾಶಮಾಡಿದರು.


ಏಳನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಗಾಳಿಯಲ್ಲಿ ಸುರಿದನು. ಆಗ ಒಂದು ಮಹಾಧ್ವನಿಯು ಸಿಂಹಾಸನದಿಂದ ಆಲಯದ ಹೊರಕ್ಕೆ ಬಂದಿತು. ಆ ಧ್ವನಿಯು, “ಮುಗಿದುಹೋಯಿತು!” ಎಂದು ಹೇಳಿತು.


ನಿನ್ನನ್ನು ಅರಿಯದ ಜನಾಂಗಗಳ ಮೇಲೆಯೂ ನಿನ್ನ ಹೆಸರನ್ನು ಆರಾಧಿಸದ ಜನಾಂಗಗಳ ಮೇಲೆಯೂ ನಿನ್ನ ರೌದ್ರವನ್ನು ಸುರಿದುಬಿಡು.


ಆಗ ಸಿಂಹಾಸನದಲ್ಲಿ ಕೂತಿದ್ದಾತನು ನಾರುಮಡಿ ಧರಿಸಿದ್ದವನಿಗೆ, “ಕೆರೂಬಿದೂತರ ಕೆಳಗಿರುವ ಚಕ್ರಗಳ ನಡುವೆ ಹೋಗು. ಕೆರೂಬಿಗಳ ನಡುವೆ ಇರುವ ಉರಿಯುವ ಕೆಂಡಗಳನ್ನು ನಿನ್ನ ಅಂಗೈಗಳಲ್ಲಿ ತುಂಬಿಕೊಂಡು ಜೆರುಸಲೇಮ್ ನಗರದ ಮೇಲೆ ಹರಡು” ಎಂದು ಹೇಳಿದನು. ನಾನು ನೋಡುತ್ತಿರಲು ಆ ಮನುಷ್ಯನು ಒಳಗೆ ಹೋದನು.


ನಂತರ ಮತ್ತೊಬ್ಬ ದೇವದೂತನು ಯಜ್ಞವೇದಿಕೆಯಿಂದ ಬಂದನು. ಅವನಿಗೆ ಬೆಂಕಿಯ ಮೇಲೆ ಅಧಿಕಾರವಿತ್ತು. ಅವನು ಹರಿತವಾದ ಕುಡುಗೋಲಿದ್ದ ದೇವದೂತನನ್ನು ಕರೆದು, “ನಿನ್ನ ಹರಿತವಾದ ಕುಡುಗೋಲನ್ನು ತೆಗೆದುಕೊಂಡು, ಭೂಮಿಯ ದ್ರಾಕ್ಷಿತೋಟದಿಂದ ದ್ರಾಕ್ಷಿಗೊಂಚಲುಗಳನ್ನು ಒಟ್ಟುಗೂಡಿಸು. ಭೂಮಿಯ ದ್ರಾಕ್ಷಿಯೆಲ್ಲಾ ಮಾಗಿವೆ” ಎಂದು ಹೇಳಿದನು.


ಆಗ ಮತ್ತೊಬ್ಬ ದೇವದೂತನು ಆಲಯದಿಂದ ಹೊರಗೆ ಬಂದನು. ಈ ದೇವದೂತನು ಮೋಡದ ಮೇಲೆ ಕುಳಿತಿರುವಾತನಿಗೆ, “ನಿನ್ನ ಕುಡುಗೋಲನ್ನು ತೆಗೆದುಕೊಂಡು ಭೂಮಿಯ ಫಸಲನ್ನು ಒಟ್ಟುಗೂಡಿಸು. ಯಾಕೆಂದರೆ ಸುಗ್ಗಿಕಾಲವು ಬಂದಿದೆ. ಭೂಮಿಯ ಫಸಲು ಮಾಗಿದೆ” ಎಂದು ಹೇಳಿದನು.


ಈಗ, ನೀನು ಹೋಗಿ ಅಮಾಲೇಕ್ಯರ ವಿರುದ್ಧ ಹೋರಾಡು. ನೀನು ಅಮಾಲೇಕ್ಯರನ್ನೂ ಮತ್ತು ಅವರಿಗೆ ಸೇರಿದ ಎಲ್ಲವನ್ನೂ ನಾಶಗೊಳಿಸಬೇಕು. ಯಾರನ್ನೂ ಜೀವದಿಂದ ಉಳಿಸಬೇಡ, ನೀನು ಎಲ್ಲ ಗಂಡಸರನ್ನು ಮತ್ತು ಹೆಂಗಸರನ್ನು ಕೊಲ್ಲಬೇಕು. ನೀನು ಎಲ್ಲ ಮಕ್ಕಳನ್ನೂ ಎಳೆಕೂಸುಗಳನ್ನೂ ಕೊಲ್ಲಬೇಕು. ನೀನು ಅವರಿಗೆ ಸೇರಿದ ಎಲ್ಲ ಹಸುಗಳನ್ನೂ ಕುರಿಗಳನ್ನೂ ಒಂಟೆಗಳನ್ನೂ ಕತ್ತೆಗಳನ್ನೂ ಕೊಂದುಹಾಕಬೇಕು’” ಎಂದು ಹೇಳಿದನು.


ಆತನು ನಿನಗೆ, ‘ಹೋಗು ದುಷ್ಟರಾದ ಅಮಾಲೇಕ್ಯರ ಮೇಲೆ ಯುದ್ಧ ಮಾಡಿ ಅವರೆಲ್ಲರನ್ನೂ ಸಂಪೂರ್ಣವಾಗಿ ನಾಶಗೊಳಿಸು’ ಎಂದು ಆಜ್ಞಾಪಿಸಿದರು.


ಅದಕ್ಕಾಗಿ ನಾನು ಅವರಿಗೆ ನನ್ನ ಕೋಪವನ್ನು ತೋರಿಸುವೆನು. ಅವರ ದುಷ್ಟತನಕ್ಕಾಗಿ ನಾನು ಅವರನ್ನು ಶಿಕ್ಷಿಸುವೆನು. ಅವರೇ ಅದಕ್ಕೆ ಜವಾಬ್ದಾರರು.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.


ನಂತರ ಪರಲೋಕದಲ್ಲಿರುವ ದೇವರ ಆಲಯವು ತೆರೆಯಿತು. ದೇವರು ತನ್ನ ಜನರಿಗೆ ಅನುಗ್ರಹಿಸಿದ ಒಡಂಬಡಿಕೆಯನ್ನು ಇಟ್ಟಿದ್ದ ಪೆಟ್ಟಿಗೆಯು ಆತನ ಆಲಯದಲ್ಲಿ ಕಾಣಿಸಿತು. ಆಗ ಮಿಂಚುಗಳು ಹೊಳೆದವು, ಶಬ್ದಗಳಾದವು, ಗುಡುಗುಗಳಾದವು, ಭೂಕಂಪಗಳಾದವು ಮತ್ತು ಆಲಿಕಲ್ಲಿನ ಮಳೆಯೂ ಸುರಿಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು