Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 16:16 - ಪರಿಶುದ್ದ ಬೈಬಲ್‌

16 ಬಳಿಕ ಅಶುದ್ಧಾತ್ಮಗಳು ರಾಜರುಗಳನ್ನು ಹೀಬ್ರೂ ಭಾಷೆಯಲ್ಲಿ ಹರ್ಮೆಗದೋನ್ ಎಂಬ ಹೆಸರುಳ್ಳ ಸ್ಥಳದಲ್ಲಿ ಒಟ್ಟಾಗಿ ಸೇರಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ಅವು ಭೂರಾಜರನ್ನು ಇಬ್ರಿಯ ಭಾಷೆಯಲ್ಲಿ ಅರ್ಮಗೆದ್ದೋನ್ ಎಂದು ಕರೆಯಲ್ಪಡುವ ಸ್ಥಳಕ್ಕೆ ಕೂಡಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆ ದೆವ್ವಗಳು ಭೂರಾಜರೆಲ್ಲರನ್ನೂ ಒಂದು ಸ್ಥಳದಲ್ಲಿ ಸೇರಿಸಿದವು. ಆ ಸ್ಥಳಕ್ಕೆ ಹಿಬ್ರಿಯ ಭಾಷೆಯಲ್ಲಿ, ‘ಹರ್ಮಗೆದೋನ್’ ಎಂದು ಹೆಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆ ದೆವ್ವಗಳು ಭೂರಾಜರನ್ನು ಇಬ್ರಿಯ ಭಾಷೆಯಲ್ಲಿ ಹರ್ಮಗೆದೋನ್ ಎಂಬ ಹೆಸರುಳ್ಳ ಸ್ಥಳಕ್ಕೆ ಕೂಡಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಅವು ಅವರನ್ನು ಹೀಬ್ರೂ ಭಾಷೆಯಲ್ಲಿ ಹರ್ಮಗೆದೋನ್ ಎಂಬ ಹೆಸರಿನ ಸ್ಥಳಕ್ಕೆ ಸೇರಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತನ್ನಾ ತ್ಯಾ ಬುರ್ಶ್ಯಾ ಆತ್ಮ್ಯಾನಿ ರಾಜಾಕ್ನಿ ಗೊಳಾ ಕರುನ್ ಹೆಬ್ರೆವ್ ಬಾಶೆತ್ ಆರ್ಮ್‍ಗೆದ್ದೊನ್ ಮನುನ್ ಬಲ್ವುತಲ್ಯಾ ಜಾಗ್ಯಾಕ್ ಹಾನ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 16:16
14 ತಿಳಿವುಗಳ ಹೋಲಿಕೆ  

ಜೆರುಸಲೇಮಿನಲ್ಲಿ ಅತೀವ ಗೋಳಾಟದ ಮತ್ತು ದುಃಖದ ಕಾಲ ಬರುವದು. ಅದು ಮೆಗಿದ್ದೋ ತಗ್ಗಿನಲ್ಲಿ ಹದದ್ ರಿಮ್ಮೋನನು ಸತ್ತಾಗ ಜನರು ಗೋಳಾಡಿದ ಸಮಯದಂತೆ ಇರುವದು.


ಕಾನಾನ್ಯ ಅರಸರು ಬಂದು ಯುದ್ಧಮಾಡಿದರು; ಅವರು ಮೆಗಿದ್ದೋ ಪ್ರವಾಹಗಳ ಬಳಿಯಲ್ಲಿರುವ ತಾನಾಕದಲ್ಲಿ ಹೋರಾಡಿದರು. ಆದರೆ ಅವರು ಯಾವ ಸಂಪತ್ತನ್ನು ತೆಗೆದುಕೊಂಡು ಹೋಗಲಿಲ್ಲ!


ಮಿಡತೆಗಳಿಗೆ ಒಬ್ಬ ರಾಜನಿದ್ದನು. ತಳವಿಲ್ಲದ ಕೂಪದ ದೂತನೇ ಅವುಗಳ ರಾಜನಾಗಿದ್ದನು. ಅವನಿಗೆ ಹಿಬ್ರೂ ಭಾಷೆಯಲ್ಲಿ “ಅಬದ್ದೋನ್” ಎಂಬ ಹೆಸರಿತ್ತು. ಗ್ರೀಕ್ ಭಾಷೆಯಲ್ಲಿ “ಅಪೊಲ್ಲುವೋನ್” (ವಿನಾಶಕರ) ಎಂದೂ ಹೆಸರಿತ್ತು.


ಅವರು ಕುರಿಮರಿಯಾದಾತನ ವಿರುದ್ಧ ಯುದ್ಧಗಳನ್ನು ಮಾಡುತ್ತಾರೆ. ಆದರೆ ಕುರಿಮರಿಯಾದಾತನು ಪ್ರಭುಗಳ ಪ್ರಭುವಾದ್ದರಿಂದ ಮತ್ತು ರಾಜಾಧಿರಾಜನಾದ್ದರಿಂದ ಅವರನ್ನು ಸೋಲಿಸುತ್ತಾನೆ. ಆತನೊಂದಿಗೆ, ತಾನು ಕರೆದಿರುವ ಜನರು, ಆಯ್ಕೆಮಾಡಿಕೊಂಡಿರುವ ಜನರು ಮತ್ತು ತನ್ನ ನಂಬಿಗಸ್ತ ಹಿಂಬಾಲಕರು ಇದ್ದರು” ಎಂದನು.


ಯೆಹೂದ್ಯರು ಹೇಳಿದ್ದನ್ನು ಕೇಳಿ ಪಿಲಾತನು ಯೇಸುವನ್ನು ಹೊರಗೆ ಕರೆಯಿಸಿ, “ಹಾಸುಗಲ್ಲು” ಎಂಬ ಕಟ್ಟೆಯ (ಯೆಹೂದ್ಯರ ಭಾಷೆ ಯಲ್ಲಿ ಅದರ ಹೆಸರು ಗಬ್ಬಥ.) ಮೇಲಿದ್ದ ನ್ಯಾಯಪೀಠದಲ್ಲಿ ಕುಳಿತುಕೊಂಡನು.


ನಾವೆಲ್ಲರೂ ನೆಲಕ್ಕೆ ಬಿದ್ದೆವು. ಆಗ ವಾಣಿಯೊಂದು ಯೆಹೂದ್ಯರ ಭಾಷೆಯಲ್ಲಿ ನನ್ನೊಂದಿಗೆ ಮಾತಾಡುವುದನ್ನು ಕೇಳಿದೆನು. ಆ ವಾಣಿಯು, ‘ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸಿಸುತ್ತಿರುವೆ? ಮುಳ್ಳುಗೋಲನ್ನು ಒದೆಯುವುದು ನಿನಗೆ ಕಷ್ಟ’ ಎಂದು ಹೇಳಿತು.


ಯೇಸು ತನ್ನ ಸ್ವಂತ ಶಿಲುಬೆಯನ್ನು ಹೊತ್ತುಕೊಂಡು, “ಕಪಾಲ” ಎಂಬ ಸ್ಥಳಕ್ಕೆ ಹೊರಟನು. (ಯೆಹೂದ್ಯರ ಭಾಷೆಯಲ್ಲಿ ಈ ಸ್ಥಳದ ಹೆಸರು “ಗೊಲ್ಗೊಥಾ.”)


ಜೆರುಸಲೇಮಿನಲ್ಲಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಯೆಹೂದ್ಯರ ಭಾಷೆಯಲ್ಲಿ ಅದಕ್ಕೆ “ಬೆತ್ಸಥ” ಎಂದು ಕರೆಯುತ್ತಾರೆ. ಈ ಕೊಳವು “ಕುರಿಬಾಗಿಲು” ಎಂಬ ಸ್ಥಳದ ಸಮೀಪದಲ್ಲಿದೆ.


ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ ಅವನ ರಥಗಳನ್ನೂ ಅವನ ಸೈನ್ಯವನ್ನೂ ಕೀಷೋನ್ ನದಿಗೆ ಬರುವಂತೆ ಮಾಡುತ್ತೇನೆ. ಅಲ್ಲಿ ನೀನು ಸೀಸೆರನನ್ನು ಸೋಲಿಸುವಂತೆ ಮಾಡುತ್ತೇನೆ’ ಎಂದು ಹೇಳಿದ್ದಾನೆ” ಎಂದಳು.


ಆದರೆ ಅರಸನಾದ ಯೋಷೀಯನು ಹಿಂದಕ್ಕೆ ಹೋಗಲಿಲ್ಲ. ಅವನು ನೆಕೋನನ್ನು ಎದುರಿಸಲು ನಿರ್ಧರಿಸಿದನು. ತನ್ನ ವೇಷ ಬದಲಾಯಿಸಿ ಯುದ್ಧಕ್ಕೆ ಹೋದನು. ದೇವರ ಅಪ್ಪಣೆಯ ಬಗ್ಗೆ ನೆಕೋ ಹೇಳಿದ್ದನ್ನು ಕೇಳಲು ಯೋಷೀಯನು ನಿರಾಕರಿಸಿ ಮೆಗಿದ್ದೋ ಕಣಿವೆಯಲ್ಲಿ ಯುದ್ಧಕ್ಕೆ ಹೊರಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು