Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 16:21 - ಪರಿಶುದ್ದ ಬೈಬಲ್‌

21 ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಆಲಿಕಲ್ಲುಗಳು ಬಿದ್ದವು. ಆ ಆಲಿಕಲ್ಲುಗಳು ನೂರು ಪೌಂಡುಗಳಷ್ಟು ಭಾರವಾಗಿದ್ದವು. ಈ ಉಪದ್ರವದ ಕಾಟದಿಂದ ಜನರು ದೇವರನ್ನು ದೂಷಿಸಿದರು. ಈ ಉಪದ್ರವವು ಬಹಳ ಭೀಕರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಮತ್ತು ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಆಲಿಕಲ್ಲಿನ ಮಳೆ ಸುರಿಯಿತು. ಒಂದೊಂದು ಅಲಿಕಲ್ಲು ಸುಮಾರು ನಲ್ವತ್ತು ಕಿಲೊಗ್ರಾಮಿನಷ್ಟು ತೂಕವಾಗಿತ್ತು. ಆ ಆಲಿಕಲ್ಲಿನ ಮಳೆಯ ಉಪದ್ರವವು ಬಹಳ ವಿಪರೀತವಾದ್ದರಿಂದ ಆ ಮಳೆಯಲ್ಲಿ ಸಿಕ್ಕಿಕೊಂಡ ಮನುಷ್ಯರು ದೇವರನ್ನು ದೂಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆಕಾಶದಿಂದ ಮನುಷ್ಯರ ಮೇಲೆ ಆಲಿಕಲ್ಲಿನ ಮಳೆ ಸುರಿಯಿತು. ಒಂದೊಂದು ಆಲಿಕಲ್ಲಿನ ತೂಕ ಸುಮಾರು ಐವತ್ತು ಕಿಲೊಗ್ರಾಮಿನಷ್ಟು ಇತ್ತು. ಆ ಆಲಿಕಲ್ಲಿನ ವಿಪತ್ತು ಅಧಿಕವಾದುದರಿಂದಲೂ ಭಯಂಕರವಾದುದರಿಂದಲೂ ಜನರು ದೇವರನ್ನು ದೂಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಮತ್ತು ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಆನೇಕಲ್ಲಿನ ಮಳೆ ಸುರಿಯಿತು; ಒಂದೊಂದು ಕಲ್ಲು ಹೆಚ್ಚುಕಡಿಮೆ ನಾಲ್ಕುಮಣ ತೂಕವಾಗಿತ್ತು. ಆ ಆನೇಕಲ್ಲಿನ ಮಳೆಯ ಕಾಟವು ಬಹಳ ಹೆಚ್ಚಾಗಿದ್ದದರಿಂದ ಆ ಮಳೆಯಲ್ಲಿ ಸಿಕ್ಕಿಕೊಂಡ ಮನುಷ್ಯರು ದೇವರನ್ನು ದೂಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಕಾಶದಿಂದ ಒಂದೊಂದು ಸುಮಾರು ನಲವತ್ತೈದು ಕಿಲೋಗ್ರಾಂ ತೂಕದ ಬಹುದೊಡ್ಡ ಆಲಿಕಲ್ಲುಗಳು ಮನುಷ್ಯರ ಮೇಲೆ ಬಿದ್ದವು. ಆಲಿಕಲ್ಲಿನ ಉಪದ್ರವವು ಬಹು ಹೆಚ್ಚಾಗಿದ್ದರಿಂದಲೂ ಮನುಷ್ಯರು ದೇವರನ್ನು ದೂಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಮೊಟ್ಯಾ-ಮೊಟ್ಯಾ ಘಾರ್‍ಬಿಯಾಂಚೊ ಪವ್ಸ್ ಮಳ್ಬಾ ವೈನಾ ಲೊಕಾಂಚ್ಯಾ ವರ್ತಿ ಪಡ್ಲೊ. ತ್ಯಾ ಎಕೆಕ್ ಘಾರ್‍ಬಿಯಾ ಜಗೊಳ್ -ಜಗೊಳ್ ಪನ್ನಾಸ್ ಕಿಲೊ ವಜ್ಜ್ಯಾ ಹೊತ್ತ್ಯಾ, ಹ್ಯಾ ಘಾರ್‍ಬಿಯಾಂಚ್ಯಾ ತರಾಸಾಸಾಟಿ ಲೊಕಾನಿ ದೆವಾಕ್ ಸರಾಪ್ಲ್ಯಾನಿ, ಕಶ್ಯಾಕ್ ಮಟ್ಲ್ಯಾರ್ ಹಿ ಫಿಡಾ ಭಯಾನಕ್ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 16:21
15 ತಿಳಿವುಗಳ ಹೋಲಿಕೆ  

ನಂತರ ಪರಲೋಕದಲ್ಲಿರುವ ದೇವರ ಆಲಯವು ತೆರೆಯಿತು. ದೇವರು ತನ್ನ ಜನರಿಗೆ ಅನುಗ್ರಹಿಸಿದ ಒಡಂಬಡಿಕೆಯನ್ನು ಇಟ್ಟಿದ್ದ ಪೆಟ್ಟಿಗೆಯು ಆತನ ಆಲಯದಲ್ಲಿ ಕಾಣಿಸಿತು. ಆಗ ಮಿಂಚುಗಳು ಹೊಳೆದವು, ಶಬ್ದಗಳಾದವು, ಗುಡುಗುಗಳಾದವು, ಭೂಕಂಪಗಳಾದವು ಮತ್ತು ಆಲಿಕಲ್ಲಿನ ಮಳೆಯೂ ಸುರಿಯಿತು.


ಜನರು ಕುಡುಬಿಸಿಲಿನಿಂದ ಕಂದಿಹೋಗಿ ದೇವರ ಹೆಸರನ್ನು ಶಪಿಸಿದರು. ಈ ಉಪದ್ರವಗಳನ್ನು ದೇವರೊಬ್ಬನೇ ನಿಯಂತ್ರಿಸ ಬಲ್ಲವನಾಗಿದ್ದಾನೆ. ಆದರೆ ಜನರು ತಮ್ಮ ಹೃದಯಗಳನ್ನೂ ಜೀವಿತಗಳನ್ನೂ ಪರಿವರ್ತಿಸಿಕೊಳ್ಳಲಿಲ್ಲ. ದೇವರನ್ನು ಮಹಿಮೆಪಡಿಸಲು ಒಪ್ಪಿಕೊಳ್ಳಲಿಲ್ಲ.


ಜನರು ತಮಗಾದ ಹುಣ್ಣುಗಳಿಂದ ಮತ್ತು ನೋವಿನಿಂದ ಪರಲೋಕದ ದೇವರನ್ನು ದೂಷಿಸಿದರು. ಆದರೆ ಜನರು ತಾವು ಮಾಡುವ ಕೆಟ್ಟಕಾರ್ಯಗಳನ್ನು ತೊರೆದುಬಿಟ್ಟು ತಮ್ಮ ಹೃದಯಗಳನ್ನು ಮಾರ್ಪಡಿಸಿಕೊಳ್ಳಲು ಒಪ್ಪಲಿಲ್ಲ.


ಮೊದಲನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ರಕ್ತದಲ್ಲಿ ಕಲಸಿದ್ದ ಆಲಿಕಲ್ಲುಗಳ ಮತ್ತು ಬೆಂಕಿಯ ಮಳೆಯು ಭೂಮಿಯ ಮೇಲೆ ಸುರಿಯಿತು. ಭೂಮಿಯ ಮೂರನೆಯ ಒಂದು ಭಾಗ ಮತ್ತು ಹಸಿರು ಹುಲ್ಲೆಲ್ಲಾ ಸುಟ್ಟುಹೋದವು; ಮತ್ತು ಮರಗಳಲ್ಲಿ ಮೂರನೆಯ ಒಂದು ಭಾಗ ಸುಟ್ಟುಹೋದವು.


ಬೇತ್‌ಹೋರೋನ್ ಇಳಿಜಾರಿನಿಂದ ಅಜೇಕದವರೆಗೆ ಅವರನ್ನು ಕೊಂದರು. ಅವರು ಶತ್ರುಗಳನ್ನು ಬೆನ್ನಟ್ಟುತ್ತಿದ್ದಾಗ ಯೆಹೋವನು ಆಕಾಶದಿಂದ ಆಲಿಕಲ್ಲು ಮಳೆ ಸುರಿಯುವಂತೆ ಮಾಡಿದನು. ಬಹಳಷ್ಟು ಮಂದಿ ಶತ್ರುಗಳು ಈ ದೊಡ್ಡ ಆಲಿಕಲ್ಲುಗಳಿಂದಲೇ ಮೃತಪಟ್ಟರು. ಇಸ್ರೇಲರು ತಮ್ಮ ಖಡ್ಗಗಳಿಂದ ಕೊಂದ ಜನರಿಗಿಂತ ಹೆಚ್ಚು ಜನರು ಈ ಆಲಿಕಲ್ಲಿನ ಮಳೆಯಿಂದ ಸತ್ತರು.


ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ನಾನು ಸಿಟ್ಟುಗೊಂಡಿದ್ದೇನೆ. ಮತ್ತು ನಿಮಗೆ ವಿರುದ್ಧವಾಗಿ ಬಿರುಗಾಳಿಯನ್ನು ಕಳುಹಿಸುತ್ತೇನೆ. ನಾನು ಕೋಪಗೊಂಡಿದ್ದೇನೆ. ಆದ್ದರಿಂದ ಭಾರೀ ಮಳೆಯು ಬೀಳುವಂತೆ ಮಾಡುವೆನು. ನಾನು ಕೋಪಗೊಂಡಿದ್ದರಿಂದ ನಾಶಕರವಾದ ಆಲಿಕಲ್ಲು ಆಕಾಶದಿಂದ ಬೀಳುವಂತೆ ಮಾಡುವೆನು.


ಗೋಡೆಗೆ ಮಡ್ಡಿ ಮಾಡುವವರಿಗೆ ಹೀಗೆ ಹೇಳು: ನಾನು ಆಲಿಕಲ್ಲು ಮತ್ತು ಬಲವಾದ ಮಳೆಯನ್ನು ಕಳುಹಿಸುವೆನು. ಗಾಳಿಯು ಬಲವಾಗಿ ಬೀಸಿ ಸುಂಟರಗಾಳಿಯು ಬರುವುದು. ಆಗ ಗೋಡೆಯು ಮುರಿದುಬೀಳುವುದು.


ನೀವು ಆ ತಪ್ಪಾದ ಆಜ್ಞೆಗಳನ್ನು ಅನುಸರಿಸಿದರೆ ನಿಮ್ಮ ದೇಶದಲ್ಲಿ ಸಂಕಟವೂ ಹಸಿವೆಯೂ ಉಂಟಾಗುತ್ತವೆ. ಜನರು ಹಸಿವಿನಿಂದ ಬಳಲುವರು. ಆಗ ಅವರಲ್ಲಿ ಸಿಟ್ಟು ಉಂಟಾಗಿ ತಮ್ಮ ಅರಸನನ್ನೂ ಅವನ ದೇವರುಗಳನ್ನೂ ಬೈಯುವರು ಮತ್ತು ಸಹಾಯಕ್ಕಾಗಿ ದೇವರಿಗೆ ಮೊರೆಯಿಡುವರು.


ಯೆಹೋವನು ತನ್ನ ಮಹಾಸ್ವರವನ್ನು ಜನರು ಕೇಳುವಂತೆ ಮಾಡುವನು. ತನ್ನ ಸಾಮರ್ಥ್ಯದ ಬಾಹುವು ಕೋಪದಿಂದ ನಡುಗುವದನ್ನು ಜನರು ನೋಡುವಂತೆ ಮಾಡುವನು. ಆ ಬಾಹುವು ಎಲ್ಲವನ್ನು ಸುಡುವ ದೊಡ್ಡ ಅಗ್ನಿಯಂತಿರುವದು. ಯೆಹೋವನ ಶಕ್ತಿಯು ಆಲಿಕಲ್ಲಿನಿಂದಲೂ ಮಳೆಯಿಂದಲೂ ಕೂಡಿರುವ ಬಿರುಗಾಳಿಯಂತಿರುವುದು.


ಆದ್ದರಿಂದ ನಾಳೆ ಇದೇ ಸಮಯಕ್ಕೆ ಸರಿಯಾಗಿ ಭೀಕರವಾದ ಆಲಿಕಲ್ಲಿನ ಮಳೆಯನ್ನು ಸುರಿಸುವೆನು. ಈಜಿಪ್ಟ್ ರಾಜ್ಯವು ಸ್ಥಾಪನೆಯಾದಂದಿನಿಂದ ಇಂಥ ಆಲಿಕಲ್ಲಿನ ಮಳೆ ಬಿದ್ದಿಲ್ಲ.


ಯೆಹೋವನು ಮೋಶೆಗೆ, “ನಿನ್ನ ಕೈಯನ್ನು ಆಕಾಶದ ಕಡೆಗೆ ಚಾಚು; ಆಗ ಈಜಿಪ್ಟಿನಲ್ಲೆಲ್ಲಾ ಆಲಿಕಲ್ಲಿನ ಮಳೆ ಬೀಳತೊಡಗುವುದು. ಆಲಿಕಲ್ಲಿನ ಮಳೆಯು ಜನರ, ಪ್ರಾಣಿಗಳ ಮತ್ತು ಈಜಿಪ್ಟಿನ ಹೊಲಗಳಲ್ಲಿರುವ ಎಲ್ಲಾ ಸಸ್ಯಗಳ ಮೇಲೆ ಬೀಳುವುದು” ಎಂದು ಹೇಳಿದನು.


“ಯೋಬನೇ, ನಾನು ಹಿಮವನ್ನೂ ಆಲಿಕಲ್ಲನ್ನೂ ಇಟ್ಟಿರುವ ಉಗ್ರಾಣಗಳೊಳಗೆ ನೀನು ಎಂದಾದರೂ ಹೋಗಿರುವಿಯಾ?


ಇಕ್ಕಟ್ಟಿನ ಕಾಲಕ್ಕಾಗಿಯೂ ಯುದ್ಧಕದನಗಳ ಕಾಲಕ್ಕಾಗಿಯೂ ನಾನು ಅವುಗಳನ್ನು ಕೂಡಿಸಿಟ್ಟಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು