Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 16:8 - ಪರಿಶುದ್ದ ಬೈಬಲ್‌

8 ನಾಲ್ಕನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಸೂರ್ಯನ ಮೇಲೆ ಸುರಿದನು. ಜನರನ್ನು ಕಡುಬಿಸಿಲಿನಿಂದ ಕಂದಿಸುವ ಅಧಿಕಾರವನ್ನು ಸೂರ್ಯನಿಗೆ ಕೊಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾಲ್ಕನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಸೂರ್ಯನ ಮೇಲೆ ಸುರಿದನು. ಆಗ ಸೂರ್ಯನಿಗೆ ಬೆಂಕಿಯಂಥ ಬಿಸಿಲಿನಿಂದ ಮನುಷ್ಯರನ್ನು ಸುಡುವ ಅನುಮತಿ ಕೊಡಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಾಲ್ಕನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಸೂರ್ಯನ ಮೇಲೆ ಸುರಿದನು. ಆಗ ಸೂರ್ಯನಿಗೆ, ಕಡುಬಿಸಿಲಿನಿಂದ ಮನುಷ್ಯರನ್ನು ಸುಡುವ ಶಕ್ತಿಯನ್ನು ಕೊಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾಲ್ಕನೆಯವನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸೂರ್ಯನ ಮೇಲೆ ಹೊಯ್ದನು; ಆಗ ಸೂರ್ಯನಿಗೆ ಕಡುಬಿಸಿಲಿನಿಂದ ಮನುಷ್ಯರನ್ನು ಕಂದಿಸುವ ಶಕ್ತಿಯು ಕೊಡಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾಲ್ಕನೆಯ ದೇವದೂತನು ತನ್ನ ಬೋಗುಣಿಯೊಳಗಿರುವುದನ್ನು ಸೂರ್ಯನ ಮೇಲೆ ಸುರಿಯಲು, ಸೂರ್ಯನಿಗೆ ಮನುಷ್ಯರನ್ನು ಬೆಂಕಿಯಿಂದ ಕಂದಿಸುವ ಅಧಿಕಾರ ಕೊಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಮಾನಾ ಚಾರ್‍ವೆಚ್ಯಾ ದೆವಾಚ್ಯಾ ದುತಾನ್ ಅಪ್ನಾಚ್ಯಾ ಕಟೊರ್‍ಯಾತ್ಲೆ ದಿಸಾಚ್ಯಾ ವರ್ತಿ ವೊತ್ಲ್ಯಾನ್, ತನ್ನಾ ತ್ಯೆಚ್ಯಾ ಝಳಾನ್ ಲೊಕಾಕ್ನಿ ಜಾಳ್ವುನ್ ಟಾಕ್ತಲಿ ಪರವಾನ್ಗಿ ತೆಕಾ ದಿವ್ನ್ ಹೊಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 16:8
11 ತಿಳಿವುಗಳ ಹೋಲಿಕೆ  

ನಂತರ ಮತ್ತೊಬ್ಬ ದೇವದೂತನು ಯಜ್ಞವೇದಿಕೆಯಿಂದ ಬಂದನು. ಅವನಿಗೆ ಬೆಂಕಿಯ ಮೇಲೆ ಅಧಿಕಾರವಿತ್ತು. ಅವನು ಹರಿತವಾದ ಕುಡುಗೋಲಿದ್ದ ದೇವದೂತನನ್ನು ಕರೆದು, “ನಿನ್ನ ಹರಿತವಾದ ಕುಡುಗೋಲನ್ನು ತೆಗೆದುಕೊಂಡು, ಭೂಮಿಯ ದ್ರಾಕ್ಷಿತೋಟದಿಂದ ದ್ರಾಕ್ಷಿಗೊಂಚಲುಗಳನ್ನು ಒಟ್ಟುಗೂಡಿಸು. ಭೂಮಿಯ ದ್ರಾಕ್ಷಿಯೆಲ್ಲಾ ಮಾಗಿವೆ” ಎಂದು ಹೇಳಿದನು.


ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತದಂತೆ ಕೆಂಪಾಗುವನು, ಆಗ ಪ್ರಭುವಿನ ಗಂಭೀರವಾದ ಮಹಾದಿನವು ಬರುವುದು;


ಆದರೆ ಬಿಸಿಲೇರಿದಾಗ ಆ ಮೊಳಕೆಗಳು ಒಣಗಿಹೋದವು. ಏಕೆಂದರೆ ಅವುಗಳಿಗೆ ಆಳವಾದ ಬೇರಿರಲಿಲ್ಲ.


ಸೂರ್ಯನು ಆಕಾಶದಲ್ಲಿ ಏರಿ ಬಂದಾಗ ದೇವರು ಪೂರ್ವದ ಬಿಸಿಗಾಳಿ ಬೀಸುವಂತೆ ಮಾಡಿದನು. ಬಿಸಿಲಿನ ತಾಪವು ಯೋನನ ತಲೆಯ ಮೇಲೆ ಹೆಚ್ಚಾಯಿತು. ಯೋನನಿಗೆ ಶಾಖ ತಡೆಯಲಾಗಲಿಲ್ಲ. ಬಹಳ ಬಲಹೀನನಾದನು. ನನ್ನನ್ನು ಸಾಯಿಸು ಎಂದು ಯೋನನು ದೇವರನ್ನು ಬೇಡುತ್ತಾ, “ದೇವರೇ, ನಾನು ಬದುಕುವದಕ್ಕಿಂತ ಸಾಯುವುದೇ ಲೇಸು” ಅಂದನು.


ನಂತರ ಆ ನಕ್ಷತ್ರವು ತಳವಿಲ್ಲದ ಆಳವಾದ ಕೂಪವನ್ನು ತೆರೆಯಿತು. ದೊಡ್ಡ ಕುಲುಮೆಯಿಂದ ಹೊಗೆಯು ಬರುವಂತೆ ಆ ಕೂಪದಿಂದ ಹೊಗೆ ಮೇಲಕ್ಕೆ ಬಂದಿತು. ಆ ಕೂಪದಿಂದ ಬಂದ ಹೊಗೆಯಿಂದ ಸೂರ್ಯನೂ ಆಕಾಶವೂ ಕಪ್ಪಾದವು.


ನಾಲ್ಕನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಸೂರ್ಯನಲ್ಲಿ ಮೂರನೆಯ ಒಂದು ಭಾಗ, ಚಂದ್ರನಲ್ಲಿ ಮೂರನೆಯ ಒಂದು ಭಾಗ ಮತ್ತು ನಕ್ಷತ್ರಗಳಲ್ಲಿ ಮೂರನೆಯ ಒಂದು ಭಾಗ ಬಡಿಯಲ್ಪಟ್ಟು ಅವುಗಳಲ್ಲಿ ಮೂರನೆಯ ಒಂದು ಭಾಗ ಕತ್ತಲಾಯಿತು. ಹಗಲಿನಲ್ಲಿಯೂ ರಾತ್ರಿಯಲ್ಲಿಯೂ ಮೂರನೆಯ ಒಂದು ಭಾಗಕ್ಕೆ ಬೆಳಕಿಲ್ಲದಂತಾಯಿತು.


ಆ ಜನರಿಗೆ ಮತ್ತೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಸೂರ್ಯನ ತಾಪವಾಗಲಿ ಇರುವುದಿಲ್ಲ. ಅವರನ್ನು ಯಾವ ತಾಪವೂ ಸುಡುವುದಿಲ್ಲ.


ಆ ಕುರಿಮರಿಯು ಆರನೆಯ ಮುದ್ರೆಯನ್ನು ತೆರೆಯುವುದನ್ನು ನಾನು ನೋಡುತ್ತಲೇ ಇದ್ದೆನು. ಆಗ ಮಹಾಭೂಕಂಪವಾಯಿತು. ಸೂರ್ಯನು ಕಪ್ಪು ಕಂಬಳಿಯಂತೆ ಕಪ್ಪಾದನು. ಪೂರ್ಣಚಂದ್ರನು ರಕ್ತದಂತೆ ಕೆಂಪಾದನು.


“ಸೂರ್ಯ, ಚಂದ್ರ ಮತ್ತು ನಕ್ಷತ್ರಗಳಲ್ಲಿ ವಿಚಿತ್ರವಾದ ಸೂಚನೆಗಳು ಕಾಣಿಸಿಕೊಳ್ಳುವವು. ಮೊರೆಯುವ ತೆರೆಗಳ ಹಾಗೂ ಭೋರ್ಗರೆಯುವ ಸಮುದ್ರದ ನಿಮಿತ್ತ ಭೂಮಿಯಲ್ಲಿ ಜನಾಂಗಗಳು ದಿಕ್ಕುತೋಚದೆ ತತ್ತರಿಸಿ ಹೋಗುವವು.


ಯೆಹೋವನು ಜೆರುಸಲೇಮಿನ ಚೀಯೋನ್ ಪರ್ವತದಿಂದ ರಾಜ್ಯವನ್ನಾಳುವನು. ಆತನ ಮಹಿಮೆಯು ಹಿರಿಯರ ಮುಂದಿರುವದು. ಆತನ ಮಹಿಮೆಯ ಪ್ರಕಾಶಕ್ಕೆ ಚಂದ್ರನು ನಾಚಿಕೊಳ್ಳುವನು; ಸೂರ್ಯನು ಲಜ್ಜೆಗೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು