Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 17:15 - ಪರಿಶುದ್ದ ಬೈಬಲ್‌

15 ನಂತರ ದೇವದೂತನು ನನಗೆ ಹೀಗೆ ಹೇಳಿದನು: “ಆ ವೇಶ್ಯೆಯು ಕುಳಿತುಕೊಳ್ಳುವ ನೀರುಗಳನ್ನು ನೀನು ನೋಡಿದೆ. ಈ ನೀರುಗಳು ಈ ಲೋಕದ ಅನೇಕ ಜನರನ್ನೂ ವಿವಿಧ ಜನಾಂಗಗಳನ್ನೂ ಪ್ರಜೆಗಳನ್ನೂ ಭಾಷೆಗಳನ್ನೂ ಸೂಚಿಸು ತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇನ್ನೂ ಆ ದೇವದೂತನು ನನಗೆ ಹೇಳಿದ್ದೇನಂದರೆ, “ಆ ಜಾರಸ್ತ್ರೀ ಕುಳಿತ್ತಿದ್ದ ನೀರನ್ನು ನೀನು ನೋಡಿದೆಯಲ್ಲ, ಅವು ಜನಾಂಗಳನ್ನು, ಜನ ಸಮೂಹಗಳನ್ನು, ರಾಷ್ಟ್ರಗಳನ್ನು, ಭಾಷೆಗಳನ್ನು ಸೂಚಿಸುತ್ತದೆ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆ ದೇವದೂತನು ಮುಂದುವರೆದು ಹೀಗೆ ನುಡಿದನು : “ಜಲರಾಶಿಗಳ ಮೇಲೆ ನಿಂತಿದ್ದ ಆ ವೇಶ್ಯೆಯನ್ನು ನೋಡಿದೆಯಲ್ಲಾ ! ಆ ಜಲರಾಶಿಯು ಜನಾಂಗಗಳನ್ನೂ ಜನಸಮೂಹವನ್ನೂ ರಾಷ್ಟ್ರಗಳನ್ನೂ ಭಾಷೆಗಳನ್ನೂ ಸೂಚಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇನ್ನೂ ಆ ದೇವದೂತನು ನನಗೆ ಹೇಳಿದ್ದು - ಆ ಜಾರಸ್ತ್ರೀಯು ವಾಸಿಸಿರುವ ನೀರುಗಳನ್ನು ಕಂಡಿಯಲ್ಲ? ಅವು ಪ್ರಜೆ ಸಮೂಹ ಜನ ಭಾಷೆಗಳನ್ನು ಸೂಚಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅನಂತರ ದೂತನು ನನಗೆ, “ಜಾರಸ್ತ್ರೀ ಕೂತಿದ್ದ ಕಡೆ ನೀನು ಕಂಡ ನೀರುಗಳು, ಪ್ರಜೆಗಳನ್ನೂ ಸಮೂಹಗಳನ್ನೂ ರಾಷ್ಟ್ರಗಳನ್ನೂ ಭಾಷೆಗಳನ್ನೂ ಸೂಚಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ದೆವಾಚ್ಯಾ ದುತಾನ್ ಅಸೆಬಿ ಮಾಕಾ ಸಾಂಗಟ್ಲ್ಯಾನ್, “ತಿ ವ್ಯೆಭಿಚಾರ್ ಕರ್ತಲಿ ಬಾಯ್ಕೊಮನುಸ್ ಬಸಲ್ಲೆ ತಿಯಾ ಬಗ್ತಲೆ ಪಾನಿ ಕಾಯ್ ಮಟ್ಲ್ಯಾರ್, ದೆಶಾ, ಘರಾನ್ಯಾಚೆ ಕುಳಿಯಾ ಅನಿ ಬಾಶಾಂಚಿ ಲೊಕಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 17:15
14 ತಿಳಿವುಗಳ ಹೋಲಿಕೆ  

ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿದನು. ಏಳು ಪಾತ್ರೆಗಳನ್ನು ಹೊಂದಿದ್ದವರಲ್ಲಿ ಇವನೂ ಒಬ್ಬನಾಗಿದ್ದನು. ಆ ದೇವದೂತನು, “ಬಾ, ಪ್ರಸಿದ್ಧಳಾದ ವೇಶ್ಯಾಸ್ತ್ರೀಗೆ ನೀಡುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ. ಬಹಳ ನೀರುಗಳ ಮೇಲೆ ಕುಳಿತುಕೊಂಡಿರುವವಳು ಅವಳೇ.


ಯೆಹೋವನು ಬಾಬಿಲೋನನ್ನು ಬಹುಬೇಗನೆ ನಾಶಮಾಡುವನು. ಆ ನಗರದ ದೊಡ್ಡ ಧ್ವನಿಗಳು ಶಾಂತವಾಗುವಂತೆ ಆತನು ಮಾಡುವನು. ವೈರಿಗಳು ಸಾಗರದ ತರಂಗಮಾಲೆಗಳಂತೆ ಗರ್ಜಿಸುತ್ತಾ ಬರುವರು. ಸುತ್ತಮುತ್ತಲಿನ ಜನರೆಲ್ಲರು ಆ ಗರ್ಜನೆಯನ್ನು ಕೇಳುವರು.


ಬಾಬಿಲೋನೇ, ನೀನು ಸಮೃದ್ಧವಾದ ನೀರಿನ ಹತ್ತಿರ ಇರುವೆ. ನೀನು ಸಂಪತ್ತಿನಿಂದ ಸಮೃದ್ಧವಾಗಿರುವೆ. ಆದರೆ ಒಂದು ಜನಾಂಗವಾಗಿ ನೀನು ಬಹಳ ಕಾಲ ಮುಂದುವರೆಯಲಾರೆ. ನಿನ್ನ ವಿನಾಶ ಕಾಲ ಸಮೀಪಿಸಿದೆ.


ಸಕಲ ಪ್ರಜೆ, ಕುಲ, ಭಾಷೆ, ಜನಾಂಗದವರು ಮೂರುವರೆ ದಿನಗಳ ಕಾಲ ಈ ಸಾಕ್ಷಿಗಳ ಶವಗಳನ್ನು ನೋಡುತ್ತಾ ಇರುತ್ತಾರೆ. ಅವರನ್ನು ಸಮಾಧಿ ಮಾಡಲು ಜನರು ಒಪ್ಪುವುದಿಲ್ಲ.


ಆಗ ಅವನು ನನಗೆ, “ನೀನು ಮತ್ತೆ ಅನೇಕ ಜನಾಂಗಗಳ, ಪ್ರಜೆಗಳ, ಭಾಷೆಗಳ ಮತ್ತು ರಾಜರುಗಳ ವಿಷಯದಲ್ಲಿ ಪ್ರವಾದನೆ ಮಾಡಬೇಕು” ಎಂದು ತಿಳಿಸಿದನು.


ಸಮುದ್ರವು ಬಾಬಿಲೋನಿನ ಮೇಲೆ ನುಗ್ಗುವುದು. ಅದರ ಆರ್ಭಟಿಸುವ ತೆರೆಗಳು ಅದನ್ನು ಮುಚ್ಚಿಬಿಡುವವು.


ಭೋರ್ಗರೆಯುವ ಸಮುದ್ರಗಳನ್ನೂ ಅನ್ಯಜನಾಂಗಗಳ ದಂಗೆಯನ್ನೂ ಶಾಂತಗೊಳಿಸುವಾತನು ದೇವರೇ.


ಮರಣಕರವಾದ ಹಗ್ಗಗಳು ನನ್ನನ್ನು ಬಿಗಿದುಕೊಂಡವು. ನಾಶಪ್ರವಾಹವು ನನ್ನನ್ನು ಪಾತಾಳಕ್ಕೆ ಕೊಚ್ಚಿಕೊಂಡು ಹೋಗುತ್ತಿತ್ತು.


ಯೆಹೋವನು ಹೀಗೆನ್ನುತ್ತಾನೆ: “ನೋಡಿರಿ, ಉತ್ತರದಲ್ಲಿ ಶತ್ರು ಸೈನಿಕರು ಒಟ್ಟುಗೂಡುತ್ತಿದ್ದಾರೆ. ದಡಮೀರಿ ಭೋರ್ಗರೆಯುವ ನದಿಯಂತೆ ಅವರು ಬರುವರು. ಅವರು ಪ್ರವಾಹದಂತೆ ಇಡೀ ದೇಶವನ್ನು ವ್ಯಾಪಿಸುವರು. ಅವರು ಪಟ್ಟಣಗಳನ್ನೂ ಅಲ್ಲಿ ವಾಸಿಸುವ ಜನರನ್ನೂ ಮುತ್ತುವರು. ಆ ದೇಶಗಳಲ್ಲಿ ವಾಸಮಾಡುವ ಎಲ್ಲರೂ ಸಹಾಯಕ್ಕಾಗಿ ಗೋಳಿಡುವರು.


ನೀರು ಆ ಮರವನ್ನು ಬೆಳೆಯುವಂತೆ ಮಾಡಿತು. ನದಿಯು ಅದನ್ನು ಎತ್ತರವಾಗುವಂತೆ ಮಾಡಿತು. ಆ ಮರವು ನೆಡಲ್ಪಟ್ಟ ಸ್ಥಳದ ಸುತ್ತಲೂ ಹೊಳೆಯು ಹರಿಯುತ್ತಿದೆ. ಆ ಮರದಿಂದ ಬೇರೆ ಮರಗಳಿಗೆ ಸಣ್ಣ ಕಾಲುವೆಗಳು ಹೊರಡುತ್ತವೆ.


ಅವರೆಲ್ಲರೂ ಕುರಿಮರಿಗೋಸ್ಕರ ಒಂದು ಹೊಸ ಹಾಡನ್ನು ಹಾಡಿದರು: “ನೀನು ಕೊಲ್ಲಲ್ಪಟ್ಟವನಾದ್ದರಿಂದ, ಸುರುಳಿಯನ್ನು ತೆಗೆದುಕೊಂಡು, ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯನಾಗಿರುವೆ. ನೀನು ನಿನ್ನ ರಕ್ತದಿಂದ (ಮರಣದಿಂದ) ಸಕಲ ಕುಲ, ಭಾಷೆ, ಜನಾಂಗಗಳಿಂದ ಜನರನ್ನು ದೇವರಿಗಾಗಿ ಕೊಂಡುಕೊಂಡಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು