Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 18:11 - ಪರಿಶುದ್ದ ಬೈಬಲ್‌

11 “ಭೂಲೋಕದ ವರ್ತಕರು ಬಾಬಿಲೋನಿನ ವಿಷಯದಲ್ಲಿ ಗೋಳಾಡುವರು ಮತ್ತು ದುಃಖಿಸುವರು. ಅವರು ಮಾರುವ ವಸ್ತುಗಳನ್ನು ಕೊಂಡುಕೊಳ್ಳಲು ಯಾರೂ ಇಲ್ಲದಿರುವುದರಿಂದ ಅವರು ದುಃಖಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ಇದಲ್ಲದೆ ಭೂಮಿಯ ವರ್ತಕರು ಅವಳಿಗಾಗಿ ದುಃಖಿಸಿ ಗೋಳಾಡುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಈ ಲೋಕದ ವರ್ತಕರೂ ಅವಳ ನಿಮಿತ್ತ ಅತ್ತು ಗೋಳಾಡುತ್ತಾ ತಮ್ಮ ಸರಕು ಸಾಮಗ್ರಿಗಳನ್ನು ಕೊಂಡುಕೊಳ್ಳುವವರು ಯಾರೂ ಇಲ್ಲವಲ್ಲಾ ಎಂದು ದುಃಖಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇದಲ್ಲದೆ ಭೂಲೋಕದ ವರ್ತಕರು ಅವಳ ನಿವಿುತ್ತವಾಗಿ ಅತ್ತು ಗೋಳಾಡುತ್ತಾ - ನಮ್ಮ ಹಡಗುಗಳ ಸರಕುಗಳನ್ನು ಕೊಂಡುಕೊಳ್ಳುವವರು ಇನ್ನು ಇಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಭೂಮಿಯ ವರ್ತಕರು ಆಕೆಗಾಗಿ ದುಃಖಿಸಿ ಗೋಳಾಡುತ್ತಾ ತಮ್ಮ ಸರಕು ಸಾಮಗ್ರಿಗಳನ್ನು ಕೊಂಡುಕೊಳ್ಳುವವರು ಯಾರೂ ಇಲ್ಲವಲ್ಲಾ ಎಂದು ದುಃಖಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಜಗಾತ್ಲಿ ಯಾಪಾರ್ ಕರ್ತಲಿ ಲೊಕಾ ಸೈತ್ ತಿಚೆಸಾಟ್ನಿ ರಡ್ತ್ಯಾತ್ ಅನಿ ತರಾಸ್ ಕರುನ್ ಘೆತ್ಯಾತ್, ಕಶ್ಯಾಕ್ ಮಟ್ಲ್ಯಾರ್ ಅನಿಫಿಡೆ ತೆಂಚಿ ಸಾಮಾನಾ ಕೊನ್‍ಬಿ ಇಕಾತ್ ಘೆಯ್‍ನ್ಯಾತ್;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 18:11
18 ತಿಳಿವುಗಳ ಹೋಲಿಕೆ  

ದೇವರ ಕೋಪವೆಂಬ ಮತ್ತು ಅವಳ ಲೈಂಗಿಕ ಪಾಪವೆಂಬ ದ್ರಾಕ್ಷಾರಸವನ್ನು ಲೋಕದ ಜನರೆಲ್ಲರೂ ಕುಡಿದು ಮತ್ತರಾದರು. ಭೂಲೋಕದ ರಾಜರುಗಳೆಲ್ಲ ಅವಳೊಂದಿಗೆ ಲೈಂಗಿಕ ಪಾಪ ಮಾಡಿದರು. ಭೂಲೋಕದ ವರ್ತಕರು ಅವಳ ಅತಿಯಾದ ಸುಖದಿಂದ ಶ್ರೀಮಂತರಾದರು.


ದೀಪದ ಬೆಳಕು ಇನ್ನೆಂದಿಗೂ ನಿನ್ನಲ್ಲಿ ಪ್ರಕಾಶಿಸುವುದಿಲ್ಲ. ವಧೂವರರ ಧ್ವನಿಯು ಇನ್ನೆಂದಿಗೂ ನಿನ್ನಲ್ಲಿ ಕೇಳಿಬರುವುದಿಲ್ಲ. ನಿನ್ನ ವರ್ತಕರು ಪ್ರಪಂಚದ ಮಹಾಪುರುಷರಾಗಿದ್ದರು. ನಿನ್ನ ಮಾಟದಿಂದ ಎಲ್ಲಾ ಜನಾಂಗಗಳೂ ಮರುಳಾದರು.


ಪರಲೋಕವೇ, ಇದರಿಂದ ನೀನೂ ಸಂತೋಷಪಡು! ದೇವರ ಪರಿಶುದ್ಧ ಜನರೇ, ಅಪೊಸ್ತಲರೇ, ಪ್ರವಾದಿಗಳೇ, ನೀವೂ ಸಂತೋಷಪಡಿರಿ! ಅವಳು ನಿಮಗೆ ಮಾಡಿದ ಕೇಡುಗಳಿಗಾಗಿ ದೇವರು ಅವಳನ್ನು ದಂಡಿಸಿದನು.’”


“ಆ ವರ್ತಕರು ಅವಳ ಯಾತನೆಯನ್ನು ಕಂಡು ಭಯದಿಂದ ಅವಳಿಂದ ಬಹುದೂರದಲ್ಲಿ ನಿಂತುಕೊಳ್ಳುವರು. ಆ ವಸ್ತುಗಳನ್ನು ಅವಳಿಗೆ ಮಾರಿ ಶ್ರೀಮಂತರಾದ ವರ್ತಕರು ಇವರೇ.


ನಗರದ ಕೆಳಗಿನ ಭಾಗದಲ್ಲಿರುವವರೇ, ನೀವು ಅಳುವಿರಿ. ಯಾಕೆಂದರೆ ನಿಮ್ಮಲ್ಲಿರುವ ಧನಿಕರೂ ವ್ಯಾಪಾರಸ್ತರೂ ನಾಶವಾಗುವರು.


ಅವಳೊಂದಿಗೆ ಲೈಂಗಿಕ ಪಾಪಮಾಡಿ ಅವಳ ಸಂಪತ್ತಿನಲ್ಲಿ ಪಾಲುಗಾರರಾದ ಲೋಕದ ರಾಜರುಗಳು ಅವಳ ದಹನದಿಂದೇರುವ ಹೊಗೆಯನ್ನು ನೋಡುತ್ತಾರೆ. ಅವಳು ಸಾಯುತ್ತಿರುವುದನ್ನು ಕಂಡು ರಾಜರುಗಳು ಗೋಳಾಡುವರು ಮತ್ತು ದುಃಖಿಸುವರು.


ಆ ಸುಳ್ಳುಬೋಧಕರಿಗೆ ಬೇಕಾಗಿರುವುದು ಕೇವಲ ನಿಮ್ಮ ಹಣವಷ್ಟೆ. ಆದ್ದರಿಂದ ಅವರು ನಿಜವಲ್ಲದ ಸಂಗತಿಗಳನ್ನು ನಿಮಗೆ ಹೇಳಿ ನಿಮ್ಮನ್ನು ಬಳಸಿಕೊಳ್ಳುತ್ತಾರೆ. ಆದರೆ ಬಹಳ ಹಿಂದಿನಿಂದಲೇ ಆ ಸುಳ್ಳುಬೋಧಕರ ವಿರುದ್ಧವಾದ ತೀರ್ಪು ಸಿದ್ಧವಾಗಿದೆ. ಅವರನ್ನು ನಾಶಪಡಿಸುವಾತನಿಂದ (ದೇವರಿಂದ) ಅವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.


ಅವರ ಬೆಳ್ಳಿಬಂಗಾರಗಳು ಅವರ ಸಹಾಯಕ್ಕೆ ಬಾರವು. ಆ ಸಮಯದಲ್ಲಿ ಯೆಹೋವನು ಕೋಪಾಗ್ನಿಯಿಂದ ತುಂಬಿದವನಾಗುವನು. ಯೆಹೋವನು ಇಡೀ ಪ್ರಪಂಚವನ್ನೇ ನಾಶಮಾಡುವನು. ಭೂಮಿಯ ಮೇಲಿರುವ ಪ್ರತಿಯೊಬ್ಬನನ್ನು ಯೆಹೋವನು ಸಂಪೂರ್ಣವಾಗಿ ನಾಶಮಾಡುವನು.”


ನೀನು ಕಷ್ಟಪಟ್ಟು ಗಳಿಸಿದ ಸಂಪತ್ತಿಗೆಲ್ಲಾ ಹಾಗೆಯೇ ಆಗುವದು. ನಿನ್ನ ಜೀವಮಾನ ಕಾಲವೆಲ್ಲಾ ವ್ಯವಹಾರ ನಡಿಸಿದ್ದ ಜನರೆಲ್ಲಾ ನಿನ್ನನ್ನು ತೊರೆದುಬಿಡುವರು. ಪ್ರತಿಯೊಬ್ಬನು ತನ್ನ ಸ್ವಂತದಾರಿ ಹಿಡಿಯುವನು. ಆಗ ನಿನ್ನನ್ನು ರಕ್ಷಿಸಲು ಯಾರೂ ಇರುವದಿಲ್ಲ.”


“ಅಂತೆಯೇ ಸೇವಕರು ಹೋಗಿ ಆ ಜನರಿಗೆ ತಿಳಿಸಿದರು. ಆದರೆ ಅವರು ಸೇವಕರ ಮಾತಿಗೆ ಕಿವಿಗೊಡಲಿಲ್ಲ. ಒಬ್ಬನು ತನ್ನ ಹೊಲದಲ್ಲಿ ಕೆಲಸ ಮಾಡಲು ಹೊರಟುಹೋದನು. ಬೇರೊಬ್ಬನು ತನ್ನ ವ್ಯಾಪಾರಕ್ಕಾಗಿ ಹೊರಟುಹೋದನು.


ಪಾರಿವಾಳಗಳನ್ನು ಮಾರುತ್ತಿದ್ದವರಿಗೆ, “ಇವುಗಳನ್ನು ಹೊರಗೆ ತೆಗೆದುಕೊಂಡು ಹೋಗಿರಿ! ನನ್ನ ತಂದೆಯ ಮನೆಯನ್ನು ವ್ಯಾಪಾರ ಸ್ಥಳವನ್ನಾಗಿ ಮಾಡಬೇಡಿ!” ಎಂದು ಹೇಳಿದನು.


ಜ್ಞಾನವು ಬೆಳ್ಳಿಗಿಂತಲೂ ಲಾಭದಾಯಕ. ಅದರ ಆದಾಯವು ಬಂಗಾರಕ್ಕಿಂತಲೂ ಅಧಿಕ.


ಬಾಬಿಲೋನು ಸೊದೋಮ್ ಗೊಮೋರಗಳಂತೆ ನಾಶವಾಗುವದು. ದೇವರೇ ಇದನ್ನು ಮಾಡುವನು. ಆಗ ಅಲ್ಲಿ ಏನೂ ಉಳಿಯದು. “ಎಲ್ಲಾ ರಾಜ್ಯಗಳಿಗಿಂತ ಬಾಬಿಲೋನ್ ಬಹಳ ಸುಂದರವಾಗಿದೆ. ಬಾಬಿಲೋನಿಯರು ತಮ್ಮ ನಗರದ ಬಗ್ಗೆ ತುಂಬಾ ಹೆಚ್ಚಳಪಡುತ್ತಾರೆ.


ಗೆಬಲಿನ ಹಿರಿಯರೂ ಜ್ಞಾನಿಗಳೂ ನಿನ್ನ ಹಡಗುಗಳ ಬಿರುಕುಗಳನ್ನು ಸರಿಪಡಿಸುವವರಾಗಿದ್ದರು. ಸಾಗರದ ಹಡಗುಗಳೂ ಅದರ ನಾವಿಕರೂ ನಿನ್ನೊಂದಿಗೆ ವ್ಯಾಪಾರ ಮಾಡಲು ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು