Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 18:19 - ಪರಿಶುದ್ದ ಬೈಬಲ್‌

19 ಅವರು ತಮ್ಮ ತಲೆಯ ಮೇಲೆ ಧೂಳನ್ನು ಸುರಿದುಕೊಂಡು, ದುಃಖದಿಂದ ಗೋಳಾಡುತ್ತಾ ಹೀಗೆ ಹೇಳಿದರು: ‘ಅಯ್ಯೋ! ಅಯ್ಯೋ! ಈ ಮಹಾನಗರಿಗೆ ಎಂಥಾ ಗತಿಯಾಯಿತು! ಸಮುದ್ರದ ಮೇಲೆ ಹಡಗುಗಳನ್ನು ಹೊಂದಿದ್ದ ಜನರೆಲ್ಲರೂ ಅವಳ ಸಂಪತ್ತಿನಿಂದ ಶ್ರೀಮಂತರಾದರು! ಆದರೆ ಅವಳು ಒಂದೇ ಗಳಿಗೆಯಲ್ಲಿ ನಾಶವಾಗಿಬಿಟ್ಟಳು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅನಂತರ ಅವರು ತಮ್ಮ ತಲೆಗಳ ಮೇಲೆ ಮಣ್ಣನ್ನು ಸುರಿದುಕೊಂಡು, ‘ಅಯ್ಯೋ ಅಯ್ಯೋ ಸಮುದ್ರದ ಮೇಲೆ ಹಡಗುಗಳನ್ನು ಹೊಂದಿದವರೆಲ್ಲರೂ ಅವಳ ಅಮೂಲ್ಯ ದ್ರವ್ಯಗಳಿಂದಲೇ ಐಶ್ವರ್ಯವಂತರಾದರಲ್ಲಾ, ಇವಳು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ’” ಎಂದು ಗೋಳಾಡುತ್ತಾ ದುಃಖಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅವರು ತಮ್ಮ ತಲೆಗಳ ಮೇಲೆ ಮಣ್ಣನ್ನು ಸುರಿದುಕೊಂಡು ಆರ್ತಧ್ವನಿಯಿಂದ : “ನಿನಗೆಂಥಾ ದುರ್ಗತಿ, ಓ ಮಹಾನಗರಿ ! ಕಡಲಲಿ ಸಾಗುವ ಹಡಗಿನವರನ್ನೆಲ್ಲಾ ಧನಿಕರನ್ನಾಗಿಸಿದೆ ನಿನ್ನ ಐಸಿರಿಯಿಂದ ತಾಸೊಂದರಲೇ, ಅಯ್ಯೋ ನೀ ನಾಶ ಆದೆಯಲ್ಲಾ !” ಎಂದು ಪರಿತಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆಗ ಅವರು ತಮ್ಮ ತಲೆಗಳ ಮೇಲೆ ಮಣ್ಣನ್ನು ಹೊಯಿದುಕೊಂಡು ಅಳುತ್ತಾ ಗೋಳಾಡುತ್ತಾ - ಅಯ್ಯೋ, ಅಯ್ಯೋ, ಸಮುದ್ರದ ಮೇಲೆ ಹಡಗುಳ್ಳವರೆಲ್ಲರನ್ನು ತನ್ನ ಅಮೂಲ್ಯ ದ್ರವ್ಯಗಳಿಂದ ಐಶ್ವರ್ಯವಂತರನ್ನಾಗಿ ಮಾಡಿದ ಈ ಮಹಾ ಪಟ್ಟಣಕ್ಕೆ ಎಂಥಾ ಗತಿ ಬಂತು; ಇವಳು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ ಎಂದು ಕೂಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಗ ಅವರು ತಮ್ಮ ತಲೆಯ ಮೇಲೆ ಧೂಳನ್ನು ಸುರಿದುಕೊಂಡು ಅಳುತ್ತಾ ದುಃಖಿಸುತ್ತಾ ಹೀಗೆ ಕೂಗುವರು: “ ‘ಅಯ್ಯೋ! ಅಯ್ಯೋ! ದುಃಖಭರಿತ ಮಹಾನಗರಿಯೇ, ಸಮುದ್ರದ ಮೇಲೆ ಹಡಗುಗಳನ್ನು ಹೊಂದಿದವರೆಲ್ಲರೂ ಆಕೆಯ ವೈಭವದಿಂದಲೇ ಐಶ್ವರ್ಯವಂತರಾದರಲ್ಲಾ! ಒಂದು ತಾಸಿನಲ್ಲಿ ಆಕೆ ಹಾಳಾದಳಲ್ಲಾ?’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತೆನಿ ಧುಳ್ ಅಪ್ನಾಚ್ಯಾ ಟಕ್ಲ್ಯಾ ವೈನಿ ಟಾಕುನ್ ಘೆಟ್ಲ್ಯಾನಿ, ಅನಿ, “ಕಸ್ಲಿ ಗತ್ ಹಿ! ಮೊಟ್ಯಾ ಶಾರಾಚೊ ಕಸ್ಟ್ ಕವ್ಡೊ ಮೊಟೊ ಹೊ! ತ್ಯೆಚ್ಯಾ ಆಸ್ತಿಚ್ಯಾ ವೈನಾ ಸಮುಂದರಾತ್ ಢೊನಿಯಾ ಇಕ್ತಲೆ ಸಗ್ಳೆ ಜಾನಾ ಸಾವ್ಕಾರ್ ಹೊಲೆ! ಖರೆ ಎಕುಚ್ ಎಕ್ ತಾಸಾತ್ ಮಟ್ಲ್ಯಾರ್ ತಿಚೆ ಸಗ್ಳೆ ಹಾಳ್ ಹೊವ್ನ್ ಗೆಲೆ!” ಮನುನ್ ರಡ್ಲ್ಯಾನಿ ಅನಿ ಮರಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 18:19
13 ತಿಳಿವುಗಳ ಹೋಲಿಕೆ  

ಅವಳ ಯಾತನೆಯನ್ನು ಕಂಡು ರಾಜರುಗಳು ಭಯದಿಂದ ದೂರನಿಂತು ಹೀಗೆನ್ನುವರು: ‘ಅಯ್ಯೋ, ಅಯ್ಯೋ, ಮಹಾನಗರಿಯೇ, ಬಲಿಷ್ಠವಾದ ಬಾಬಿಲೋನ್ ಪಟ್ಟಣವೇ, ಒಂದೇ ಗಳಿಗೆಯಲ್ಲಿ ನಿನಗೆ ದಂಡನೆ ಆಯಿತಲ್ಲಾ!’


ಇದನ್ನು ಕೇಳಿ ಯೆಹೋಶುವನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ಪವಿತ್ರ ಪೆಟ್ಟಿಗೆಯ ಮುಂದೆ ನೆಲದ ಮೇಲೆ ಬೋರಲಾಗಿ ಬಿದ್ದುಕೊಂಡನು. ಸಾಯಂಕಾಲದವರೆಗೂ ಯೆಹೋಶುವನು ಹಾಗೆಯೇ ಇದ್ದನು. ಇಸ್ರೇಲಿನ ಹಿರಿಯರೂ ಹಾಗೆಯೇ ಮಾಡಿದರು. ಅವರು ದುಃಖದಿಂದ ತಮ್ಮ ತಲೆಯ ಮೇಲೆ ಧೂಳನ್ನು ಸುರಿದುಕೊಂಡರು.


ನಿನಗೋಸ್ಕರ ಅವರು ದುಃಖಿಸುತ್ತಾ ಅಳುವರು; ತಲೆಯ ಮೇಲೆ ಧೂಳನ್ನು ತೂರಿಕೊಂಡು ಬೂದಿರಾಶಿಯ ಮೇಲೆ ಹೊರಳಾಡುವರು.


ದೇವರ ಕೋಪವೆಂಬ ಮತ್ತು ಅವಳ ಲೈಂಗಿಕ ಪಾಪವೆಂಬ ದ್ರಾಕ್ಷಾರಸವನ್ನು ಲೋಕದ ಜನರೆಲ್ಲರೂ ಕುಡಿದು ಮತ್ತರಾದರು. ಭೂಲೋಕದ ರಾಜರುಗಳೆಲ್ಲ ಅವಳೊಂದಿಗೆ ಲೈಂಗಿಕ ಪಾಪ ಮಾಡಿದರು. ಭೂಲೋಕದ ವರ್ತಕರು ಅವಳ ಅತಿಯಾದ ಸುಖದಿಂದ ಶ್ರೀಮಂತರಾದರು.


ಆದರೆ ಆ ಮೂವರು ಸ್ನೇಹಿತರು ಬಹು ದೂರದಿಂದ ಯೋಬನನ್ನು ಕಂಡಾಗ ಅವನ ಗುರುತೇ ಹಿಡಿಯಲಾರದೆ ಗಟ್ಟಿಯಾಗಿ ಅಳತೊಡಗಿದರು; ತಮ್ಮ ತಮ್ಮ ಮೇಲಂಗಿಗಳನ್ನು ಹರಿದುಕೊಂಡು ಮಣ್ಣನ್ನು ಮೇಲಕ್ಕೆ ತೂರಿ ತಮ್ಮ ತಲೆಗಳ ಮೇಲೆ ಸುರಿಸಿಕೊಂಡರು.


ಆದ್ದರಿಂದ ಅವಳಿಗೆ ಮರಣ, ಗೋಳಾಟ, ಭೀಕರ ಕ್ಷಾಮ ಎಂಬ ಉಪದ್ರವಗಳು ಒಂದೇ ದಿನದಲ್ಲಿ ಬರುತ್ತವೆ. ಅವಳಿಗೆ ತೀರ್ಪು ನೀಡಿದ ದೇವರಾಗಿರುವ ಪ್ರಭುವು ಬಲಿಷ್ಠನಾಗಿರುವುದರಿಂದ ಅವಳು ಬೆಂಕಿಯಿಂದ ನಾಶವಾಗುತ್ತಾಳೆ.”


ಆ ದಿನದಂದು ಬೆನ್ಯಾಮೀನ್ ಕುಲದ ಒಬ್ಬನು ದುಃಖದಿಂದ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಧೂಳನ್ನು ಹಾಕಿಕೊಂಡು, ರಣರಂಗದಿಂದ ತಪ್ಪಿಸಿಕೊಂಡು ಓಡಿಹೋದನು.


ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಇಸ್ರೇಲರು ತಿರಿಗಿ ಸೇರಿಬಂದು ಒಂದು ದಿನದ ಉಪವಾಸ ಮಾಡಿದರು. ಶೋಕಬಟ್ಟೆಯನ್ನು ಧರಿಸಿ, ತಲೆಗೆ ಬೂದಿಯನ್ನು ಹಾಕಿ ತಮ್ಮತಮ್ಮ ದುಃಖವನ್ನು ವ್ಯಕ್ತಪಡಿಸಿದರು.


ತಾಮಾರಳು ಬೂದಿಯನ್ನು ತೆಗೆದುಕೊಂಡು ತನ್ನ ತಲೆಯ ಮೇಲೆ ಸುರಿದುಕೊಂಡು ತನ್ನ ನಿಲುವಂಗಿಯನ್ನು ಹರಿದುಕೊಂಡಳು; ತನ್ನ ತಲೆಯ ಮೇಲೆ ಕೈಗಳನ್ನಿಟ್ಟುಕೊಂಡು ಗಟ್ಟಿಯಾಗಿ ಗೋಳಾಡಿದಳು.


ನೀನು ನೋಡಿದ ಆ ಮೃಗ ಮತ್ತು ಅದರ ಹತ್ತು ಕೊಂಬುಗಳು (ರಾಜರುಗಳು) ಆ ವೇಶ್ಯೆಯನ್ನು ದ್ವೇಷಿಸುತ್ತವೆ. ಅವಳಲ್ಲಿರುವುದನ್ನೆಲ್ಲ ಅವರು ಕಿತ್ತುಕೊಂಡು, ಅವಳನ್ನು ನಗ್ನಾವಸ್ಥೆಯಲ್ಲಿ ಬಿಡುತ್ತಾರೆ. ಅವರು ಅವಳ ದೇಹವನ್ನು ತಿಂದು, ಅವಳನ್ನು ಬೆಂಕಿಯಲ್ಲಿ ಸುಟ್ಟುಬಿಡುತ್ತಾರೆ.


ಬಾಬಿಲೋನು ಸೊದೋಮ್ ಗೊಮೋರಗಳಂತೆ ನಾಶವಾಗುವದು. ದೇವರೇ ಇದನ್ನು ಮಾಡುವನು. ಆಗ ಅಲ್ಲಿ ಏನೂ ಉಳಿಯದು. “ಎಲ್ಲಾ ರಾಜ್ಯಗಳಿಗಿಂತ ಬಾಬಿಲೋನ್ ಬಹಳ ಸುಂದರವಾಗಿದೆ. ಬಾಬಿಲೋನಿಯರು ತಮ್ಮ ನಗರದ ಬಗ್ಗೆ ತುಂಬಾ ಹೆಚ್ಚಳಪಡುತ್ತಾರೆ.


ಚೀಯೋನಿನ ಹಿರಿಯರು ನೆಲದ ಮೇಲೆ ಮೌನವಾಗಿ ಕುಳಿತುಕೊಂಡಿದ್ದಾರೆ. ಅವರು ತಮ್ಮ ತಲೆಗಳ ಮೇಲೆ ಧೂಳನ್ನು ತೂರಿಕೊಂಡು ಗೋಣಿತಟ್ಟನ್ನು ಸುತ್ತಿಕೊಂಡಿದ್ದಾರೆ. ಜೆರುಸಲೇಮಿನ ತರುಣಿಯರು ದುಃಖದಿಂದ ತಲೆ ತಗ್ಗಿಸಿಕೊಂಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು