Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 18:4 - ಪರಿಶುದ್ದ ಬೈಬಲ್‌

4 ನಂತರ ಪರಲೋಕದಿಂದ ಮತ್ತೊಂದು ಧ್ವನಿಯು ಹೀಗೆ ಹೇಳುವುದು ನನಗೆ ಕೇಳಿತು: “ನನ್ನ ಜನರೇ, ನೀವು ಆ ನಗರದಿಂದ ಹೊರಗೆ ಬಂದುಬಿಡಿ. ಆಗ ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗುವುದಿಲ್ಲ; ಅವಳಿಗಾಗುವ ಉಪದ್ರವಗಳು ನಿಮಗೆ ಸಂಭವಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಪರಲೋಕದಿಂದ ಹೇಳುವ ಮತ್ತೊಂದು ಧ್ವನಿಯನ್ನು ಕೇಳಿದೆನು, “ನನ್ನ ಜನರೇ, ಅವಳನ್ನು ಬಿಟ್ಟು ಬನ್ನಿರಿ, ಏಕೆಂದರೆ ಅವಳ ಪಾಪಗಳಲ್ಲಿ ನೀವೂ ಪಾಲುಗಾರರಾಗಬಾರದು. ಅವಳಿಗೆ ಆಗುವ ಉಪದ್ರವಗಳು ನಿಮ್ಮನ್ನು ಬಾಧಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸ್ವರ್ಗದಿಂದ ಬಂದ ಮತ್ತೊಂದು ವಾಣಿಯನು ಕೇಳಿದೆ. ಅದು : ನನ್ನ ಜನರೇ, ಅವಳನ್ನು ತೊರೆದು ಹೊರಬನ್ನಿ ಪಾಲುಗಾರರಾಗದಿರಿ ಅವಳ ಪಾಪಗಳಲಿ ತುತ್ತಾಗದಿರಿ ಅವಳಿಗೆ ಬಂದೆರಗುವ ವಿಪತ್ತುಗಳಲಿ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಪರಲೋಕದಿಂದ ಬಂದ ಮತ್ತೊಂದು ಶಬ್ದವನ್ನು ಕೇಳಿದೆನು; ಅದು ಹೇಳಿದ್ದೇನಂದರೆ - ನನ್ನ ಪ್ರಜೆಗಳೇ, ಅವಳನ್ನು ಬಿಟ್ಟುಬನ್ನಿರಿ; ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗಬಾರದು; ಅವಳಿಗಾಗುವ ಉಪದ್ರವಗಳಿಗೆ ಗುರಿಯಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅನಂತರ ಪರಲೋಕದಿಂದ ಇನ್ನೊಂದು ಧ್ವನಿಯು: “ ‘ನನ್ನ ಜನರೇ, ಆಕೆಯನ್ನು ಬಿಟ್ಟು ಬನ್ನಿರಿ, ನೀವು ಆಕೆಯ ಪಾಪಗಳಲ್ಲಿ ಪಾಲುಗಾರರಾಗಬಾರದು, ಆಕೆಯ ಉಪದ್ರವಗಳಿಗೆ ಗುರಿಯಾಗಬಾರದು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತನ್ನಾ ಸರ್‍ಗಾ ವೈನಾ ಅನಿಎಕ್ ಅವಾಜ್ ಮಿಯಾ ಆಯಿಕ್ಲೊ, ಮಾಜ್ಯಾ ಲೊಕಾನು ಭಾಯ್ರ್ ಯೆವಾ! ತಿಚೆಕ್ನಾ ಭಾಯ್ರ್ ಯೆವಾ! ತುಮಿ ತಿಚ್ಯಾ ಪಾಪ್ನಾತ್ನಿ ಭಾಗ್ ಘೆತಲೆ ನಕ್ಕೊ; ತಿಚ್ಯಾ ಶಿಕ್ಷೆತ್ ತುಮಿ ಭಾಗ್ ಘೆತಲೆ ನಕ್ಕೊ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 18:4
16 ತಿಳಿವುಗಳ ಹೋಲಿಕೆ  

“ಆದ್ದರಿಂದ ಆ ಜನರನ್ನು ಬಿಟ್ಟು ಹೊರಬನ್ನಿರಿ; ಅವರಿಂದ ಬೇರ್ಪಡಿರಿ ಎನ್ನುತ್ತಾನೆ ಪ್ರಭುವು. ಅಶುದ್ಧವಾದ ಯಾವುದನ್ನೂ ಮುಟ್ಟಬೇಡಿ, ಆಗ ನಾನು ನಿಮ್ಮನ್ನು ಸ್ವೀಕರಿಸಿಕೊಳ್ಳುವೆನು.”


ಬಾಬಿಲೋನಿನಿಂದ ದೂರ ಓಡಿಹೋಗಿರಿ. ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುವುದಕ್ಕಾಗಿ ಓಡಿಹೋಗಿರಿ. ಇಲ್ಲವಾದರೆ ಬಾಬಿಲೋನಿನ ಪಾಪದಿಂದ ನೀವೂ ಮರಣಕ್ಕೆ ಗುರಿಯಾಗುವಿರಿ. ಅವರು ಮಾಡಿದ ದುಷ್ಕೃತ್ಯಗಳಿಗಾಗಿ ದೇವರು ಬಾಬಿಲೋನಿನ ಜನರನ್ನು ಶಿಕ್ಷಿಸುವ ಕಾಲವಿದು. ಅದು ತಕ್ಕ ಶಿಕ್ಷೆಯನ್ನು ಪಡೆಯುವುದು.


ನನ್ನ ಜನರೇ, ಬಾಬಿಲೋನ್ ನಗರದಿಂದ ಹೊರಗೆ ಬನ್ನಿ. ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಲು ಓಡಿಹೋಗಿರಿ. ಯೆಹೋವನ ಭಯಂಕರ ಕೋಪದಿಂದ ತಪ್ಪಿಸಿಕೊಳ್ಳಲು ಓಡಿಹೋಗಿರಿ.


ನೀವು ಬಾಬಿಲೋನಿನಿಂದ ಹೊರಟುಹೋಗಬೇಕು; ನೀವು ಆ ಸ್ಥಳವನ್ನು ಬಿಟ್ಟುಹೋಗಬೇಕು. ಯಾಜಕರೇ, ಆರಾಧನೆಗೆ ಬೇಕಾದ ಸಾಮಗ್ರಿಗಳನ್ನು ಹೊತ್ತುಕೊಳ್ಳಿರಿ. ನಿಮ್ಮನ್ನು ಶುದ್ಧಿ ಮಾಡಿಕೊಳ್ಳಿರಿ; ಅಶುದ್ಧವಾದ ಯಾವುದನ್ನೂ ಮುಟ್ಟದಿರಿ.


“ಬಾಬಿಲೋನಿನಿಂದ ಓಡಿಹೋಗಿರಿ. ಬಾಬಿಲೋನಿನ ಪ್ರದೇಶವನ್ನು ಬಿಟ್ಟುಬಿಡಿ. ಕುರಿಮಂದೆಯ ಮುಂದೆ ಹೋಗುವ ಹೋತದಂತೆ ಹೋಗಿರಿ.


ನೀನು ನಿನ್ನ ಹಸ್ತಗಳನ್ನು ಯಾರ ಮೇಲಾದರೂ ಇಟ್ಟು ಅವನನ್ನು ಸಭಾಹಿರಿಯನನ್ನಾಗಿ ನೇಮಿಸುವುದಕ್ಕಿಂತ ಮೊದಲೇ ಗಮನವಿಟ್ಟು ಆಲೋಚನೆಮಾಡು. ಇತರ ಜನರ ಪಾಪಗಳಲ್ಲಿ ಪಾಲುಗಾರನಾಗದೆ ಶುದ್ಧನಾಗಿರು.


ನನ್ನ ಜನರೇ, ಬಾಬಿಲೋನನ್ನು ತೊರೆಯಿರಿ. ನನ್ನ ಜನರೇ, ಕಸ್ದೀಯರಿಂದ ಓಡಿಹೋಗಿರಿ. ಈ ವರ್ತಮಾನವನ್ನು ಜನರಿಗೆ ಹರ್ಷಿಸುತ್ತಾ ತಿಳಿಸಿರಿ. ಲೋಕದ ಕಟ್ಟಕಡೆಯ ಸ್ಥಳದಲ್ಲೂ ಈ ವರ್ತಮಾನವನ್ನು ಪ್ರಕಟಿಸಿರಿ. “ಯಾಕೋಬನನ್ನು ಯೆಹೋವನು ರಕ್ಷಿಸಿದನೆಂದು” ಜನರಿಗೆಲ್ಲಾ ತಿಳಿಸಿರಿ.


ನೀವು ಕಳ್ಳನನ್ನು ಕಂಡು ಅವನೊಂದಿಗೆ ಸೇರಿಕೊಳ್ಳಲು ಓಡಿಹೋಗುವಿರಿ; ವ್ಯಭಿಚಾರಿಗಳ ಒಡನಾಟ ಮಾಡುವಿರಿ.


ನೀವು ಅವನನ್ನು ಸ್ವಾಗತಿಸಿದರೆ ಅವನ ಕೆಟ್ಟಕಾರ್ಯಕ್ಕೆ ನೀವೂ ಸಹಾಯ ಮಾಡಿದಂತಾಗುವುದು.


ನೀವು ಖಡ್ಗಗಳಿಂದ ತಪ್ಪಿಸಿಕೊಂಡಿರಿ. ನೀವು ಅವಸರ ಮಾಡಿ ಬಾಬಿಲೋನನ್ನು ಬಿಡಬೇಕು. ತಡೆಯಬೇಡಿ, ನೀವು ಬಹಳ ದೂರಪ್ರದೇಶದಲ್ಲಿ ಇದ್ದೀರಿ. ಆದರೆ ನೀವು ಇರುವಲ್ಲಿಯೇ ಯೆಹೋವನನ್ನು ಸ್ಮರಿಸಿರಿ; ಜೆರುಸಲೇಮನ್ನೂ ಸ್ಮರಿಸಿಕೊಳ್ಳಿರಿ.


‘ನಮ್ಮ ಪಿತೃಗಳ ಕಾಲದಲ್ಲಿ ನಾವು ಇದ್ದಿದ್ದರೆ ಈ ಪ್ರವಾದಿಗಳನ್ನು ಕೊಲ್ಲುವುದಕ್ಕೆ ಅವರಿಗೆ ಸಹಾಯ ಮಾಡುತ್ತಿರಲಿಲ್ಲ’ ಎಂದು ಹೇಳುತ್ತೀರಿ.


ಆದ್ದರಿಂದ ಲೋಟನು ಹೊರಗೆ ಹೋಗಿ, ತನ್ನ ಹೆಣ್ಣುಮಕ್ಕಳೊಡನೆ ನಿಶ್ಚಿತಾರ್ಥವಾಗಿದ್ದ ಅಳಿಯಂದಿರೊಡನೆ ಮಾತಾಡಿ, “ಬೇಗನೆ ಈ ಪಟ್ಟಣವನ್ನು ಬಿಟ್ಟು ಹೊರಡಿರಿ; ಯೆಹೋವನು ಈ ಪಟ್ಟಣವನ್ನು ನಾಶಮಾಡುವನು” ಎಂದು ಹೇಳಿದನು. ಲೋಟನ ಈ ಮಾತು ಅವರಿಗೆ ತಮಾಷೆಯಂತೆ ಕಂಡಿತು.


ನಾವು ಬಾಬಿಲೋನನ್ನು ವಾಸಿಮಾಡುವ ಪ್ರಯತ್ನ ಮಾಡಿದೆವು. ಆದರೆ ಅದನ್ನು ವಾಸಿಮಾಡಲು ಆಗುವದಿಲ್ಲ. ಆದ್ದರಿಂದ ಅದನ್ನು ಬಿಟ್ಟುಬಿಡೋಣ. ನಾವು ನಮ್ಮನಮ್ಮ ದೇಶಗಳಿಗೆ ಹೋಗೋಣ. ಪರಲೋಕದ ದೇವರು ಬಾಬಿಲೋನಿಗೆ ವಿಧಿಸಬೇಕಾದ ಶಿಕ್ಷೆಯನ್ನು ನಿರ್ಧರಿಸುವನು. ಬಾಬಿಲೋನಿಗೆ ಏನಾಗಬೇಕೆಂಬುದನ್ನು ಆತನು ನಿರ್ಧರಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು