Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 19:18 - ಪರಿಶುದ್ದ ಬೈಬಲ್‌

18 ನೀವು ರಾಜರುಗಳ ಮತ್ತು ಸಹಸ್ರಾಧಿಪತಿಗಳ ಮತ್ತು ಸುಪ್ರಸಿದ್ಧ ಜನರ ದೇಹಗಳನ್ನು ತಿನ್ನಲು ಒಟ್ಟಾಗಿ ಬನ್ನಿರಿ. ಕುದುರೆಗಳ, ಕುದುರೆ ಸವಾರರ, ಸ್ವತಂತ್ರರಾದವರ, ಗುಲಾಮರ, ಚಿಕ್ಕವರ ಮತ್ತು ದೊಡ್ಡವರ ದೇಹಗಳನ್ನು ತಿನ್ನಲು ಬನ್ನಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ರಾಜರ ಮಾಂಸವನ್ನೂ, ಸಹಸ್ರಾಧಿಪತಿಗಳ ಮಾಂಸವನ್ನೂ, ಪರಾಕ್ರಮಶಾಲಿಗಳ ಮಾಂಸವನ್ನೂ, ಕುದುರೆಗಳ ಮಾಂಸವನ್ನೂ, ಕುದುರೆ ಸವಾರರ ಮಾಂಸವನ್ನೂ, ಸ್ವತಂತ್ರರೂ, ದಾಸರೂ, ಶ್ರೇಷ್ಠರು ಮತ್ತು ಕನಿಷ್ಠರು ಇವರೆಲ್ಲರ ಮಾಂಸವನ್ನೂ ತಿನ್ನುವುದಕ್ಕೆ ಬನ್ನಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ರಾಜರುಗಳ ಮಾಂಸವನ್ನು, ಸೇನಾಧಿಪತಿಗಳ ಮಾಂಸವನ್ನು ಮತ್ತು ಪರಾಕ್ರಮಶಾಲಿಗಳ ಮಾಂಸವನ್ನು ತಿನ್ನ ಬನ್ನಿ; ಕುದುರೆಗಳ ಮಾಂಸವನ್ನೂ ರಾವುತರ ಮಾಂಸವನ್ನೂ ಉಣ ಬನ್ನಿ; ಯಜಮಾನರ, ಗುಲಾಮರ, ಚಿಕ್ಕವರ, ದೊಡ್ಡವರ ಈ ಎಲ್ಲಾ ನರಮಾನವರ ಮಾಂಸವನ್ನು ರುಚಿಸ ಬನ್ನಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ರಾಜರ ಮಾಂಸವನ್ನೂ ಸಹಸ್ರಾಧಿಪತಿಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ರಾಹುತರ ಮಾಂಸವನ್ನೂ, ಸ್ವತಂತ್ರರೂ ದಾಸರೂ ದೊಡ್ಡವರೂ ಚಿಕ್ಕವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ರಾಜರು, ಸಹಸ್ರಾಧಿಪತಿಗಳು, ಪರಾಕ್ರಮಶಾಲಿಗಳು, ಅಶ್ವಗಳು, ಅಶ್ವಾರೂಢರು, ಸ್ವತಂತ್ರರು, ದಾಸರು, ದೊಡ್ಡವರು, ಚಿಕ್ಕವರು, ಇವರೆಲ್ಲರ ಮಾಂಸವನ್ನು ತಿನ್ನುವುದಕ್ಕೆ ಬನ್ನಿರಿ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಯೆವಾ ಅನಿ ರಾಜಾಂಚೆ, ಹಜಾರಾನಿ ಸೈನಿಕಾಂಚ್ಯಾ ವೈಲ್ಯಾ ಅದಿಕಾರ್ಯಾಂಚೆ, ಅನಿ ಸೈನಿಕಾಂಚೆ, ಘೊಡ್ಕ್ಯಾಂಚೆ ಅನಿ ಘೊಡ್ಕ್ಯಾ ವರ್ತಿ ಸವಾರಿ ಕರ್‍ತಲ್ಯಾಂಚೆ ಸಗ್ಳ್ಯಾ ಲೊಕಾಂಚೆ ಗುಲಾಮಾಂಚೆ, ಅನಿ ಸ್ವತಂತ್ರ್ ಹೊತ್ತ್ಯಾಂಚೆ, ಮೊಟ್ಯಾಂಚೆ ಅನಿ ಬಾರಿಕ್ಲ್ಯಾಂಚೆ ಮಾಸ್ ಖಾವಾ!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 19:18
18 ತಿಳಿವುಗಳ ಹೋಲಿಕೆ  

ಆಗ ಲೋಕದ ರಾಜರುಗಳೂ ಅಧಿಪತಿಗಳೂ ಸೇನಾಧಿಪತಿಗಳೂ ಶ್ರೀಮಂತರೂ ಬಲಿಷ್ಠರೂ ಪ್ರತಿಯೊಬ್ಬ ಗುಲಾಮನೂ ಸ್ವತಂತ್ರ ಪ್ರಜೆಯೂ ಗವಿಗಳಲ್ಲಿ ಮತ್ತು ಬೆಟ್ಟಗಳ ಮೇಲಿನ ಬಂಡೆಗಳ ಮರೆಯಲ್ಲಿ ಅಡಗಿಕೊಂಡರು.


ಆದ್ದರಿಂದ ನಾನು ಆ ಜನರನ್ನು ಅವರ ವೈರಿಗಳಿಗೆ ಮತ್ತು ಅವರನ್ನು ಕೊಲ್ಲಲು ಇಚ್ಛಿಸುವ ಪ್ರತಿಯೊಬ್ಬರಿಗೆ ಕೊಡುತ್ತೇನೆ. ಆ ಜನರ ದೇಹಗಳು ಗಾಳಿಯಲ್ಲಿ ಹಾರಾಡುವ ಪಕ್ಷಿಗಳಿಗೂ ಭೂಮಿಯ ಮೇಲಿನ ಕಾಡುಪ್ರಾಣಿಗಳಿಗೂ ಆಹಾರವಾಗುವವು.


ಈ ಸ್ಥಳದಲ್ಲಿ ನಾನು ಯೆಹೂದದ ಮತ್ತು ಜೆರುಸಲೇಮಿನ ಜನರ ಯೋಜನೆಗಳನ್ನು ಹಾಳು ಮಾಡುತ್ತೇನೆ. ಶತ್ರುವು ಈ ಜನರನ್ನು ಬೆನ್ನಟ್ಟಿ ಬರುವನು. ನಾನು ಈ ಸ್ಥಳದಲ್ಲಿ ಖಡ್ಗದಿಂದ ಯೆಹೂದದ ಜನರ ಕೊಲೆಯಾಗುವಂತೆ ಮಾಡುವೆನು. ಅವರ ಹೆಣಗಳು ಪಕ್ಷಿಗಳಿಗೆ ಮತ್ತು ಕಾಡುಪ್ರಾಣಿಗಳಿಗೆ ಆಹಾರವಾಗುವಂತೆ ಮಾಡುವೆನು.


“ಅವರು ಒಂದು ಭಯಾನಕವಾದ ರೀತಿಯಲ್ಲಿ ಮರಣಹೊಂದುತ್ತಾರೆ. ಅವರನ್ನು ಯಾರೂ ಹೂಳುವುದಿಲ್ಲ. ಅವರ ದೇಹಗಳು ಭೂಮಿಯ ಮೇಲೆ ಗೊಬ್ಬರದಂತೆ ಬಿದ್ದಿರುತ್ತವೆ. ಅವರು ವೈರಿಗಳ ಖಡ್ಗಗಳಿಂದ ಮಡಿಯುವರು. ಅವರು ಅನ್ನವಿಲ್ಲದೆ ಸಾಯುವರು. ಅವರ ಶವಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೇಲಿನ ಕಾಡುಪ್ರಾಣಿಗಳಿಗೂ ಆಹಾರವಾಗುವವು.”


ಆಗ ಸತ್ತವರ ದೇಹಗಳು ಭೂಮಿಯ ಮೇಲೆ ಬಿದ್ದಿರುತ್ತವೆ; ಅವು ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೂ ಕಾಡುಪ್ರಾಣಿಗಳಿಗೂ ಆಹಾರವಾಗುತ್ತವೆ. ಆ ಪಕ್ಷಿಗಳನ್ನು ಮತ್ತು ಪ್ರಾಣಿಗಳನ್ನು ಓಡಿಸುವದಕ್ಕೆ ಒಬ್ಬನಾದರೂ ಜೀವಂತವಾಗಿರುವುದಿಲ್ಲ.


ಇಂದು ನಾನು ನಿನ್ನನ್ನು ಸೋಲಿಸಲು ಯೆಹೋವನು ಸಹಾಯಮಾಡುತ್ತಾನೆ. ನಾನು ನಿನ್ನನ್ನು ಕೊಲ್ಲುತ್ತೇನೆ. ಇಂದು ನಾನು ನಿನ್ನ ತಲೆಯನ್ನು ಕತ್ತರಿಸಿ ನಿನ್ನ ದೇಹವನ್ನು ಪಕ್ಷಿಗಳಿಗೂ ಕ್ರೂರಮೃಗಗಳಿಗೂ ಆಹಾರವನ್ನಾಗಿ ಕೊಡುತ್ತೇನೆ. ಉಳಿದೆಲ್ಲ ಫಿಲಿಷ್ಟಿಯರಿಗೂ ಸಹ ನಾವು ಅದೇ ರೀತಿ ಮಾಡುತ್ತೇವೆ. ಆಗ ಇಸ್ರೇಲಿನಲ್ಲಿ ದೇವರಿದ್ದಾನೆಂಬುದು ಇಡೀ ಜಗತ್ತಿಗೆಲ್ಲ ಗೊತ್ತಾಗುವುದು!


ಗೊಲ್ಯಾತನು ದಾವೀದನಿಗೆ, “ಬಾ ಇಲ್ಲಿಗೆ, ನಿನ್ನ ದೇಹವನ್ನು ಪಕ್ಷಿಗಳಿಗೂ ಕ್ರೂರಪ್ರಾಣಿಗಳಿಗೂ ಆಹಾರವನ್ನಾಗಿ ಮಾಡುತ್ತೇನೆ!” ಎಂದನು.


ಕಾಡುಪಕ್ಷಿಗಳಿಗೆ ಮತ್ತು ಕಾಡುಪ್ರಾಣಿಗಳಿಗೆ ನಿಮ್ಮ ಹೆಣಗಳು ಆಹಾರವಾಗುವವು. ಅವುಗಳನ್ನು ಓಡಿಸಲು ಯಾರೂ ಇರುವುದಿಲ್ಲ.


ಎರಡನೆಯ ಮೃಗವು ಸಹ ಎಲ್ಲರನ್ನು ಅಂದರೆ ಚಿಕ್ಕವರನ್ನು, ದೊಡ್ಡವರನ್ನು, ಶ್ರೀಮಂತರನ್ನು, ಬಡವರನ್ನು, ಗುಲಾಮರನ್ನು ಮತ್ತು ಸ್ವತಂತ್ರರನ್ನು, ತಮ್ಮ ಬಲಗೈಯ ಮೇಲಾಗಲಿ ಅಥವಾ ತಮ್ಮ ಹಣೆಗಳ ಮೇಲಾಗಲಿ ಗುರುತು ಹಾಕಿಕೊಳ್ಳಬೇಕೆಂದು ಒತ್ತಾಯಪಡಿಸಿತು.


ಶಿಷ್ಯರು ಯೇಸುವಿಗೆ, “ಪ್ರಭುವೇ, ಇದೆಲ್ಲಾ ಎಲ್ಲಿ ಸಂಭವಿಸುವುದು?” ಎಂದು ಕೇಳಿದರು. ಯೇಸು ಅವರಿಗೆ, “ಹದ್ದುಗಳು ಎಲ್ಲಿ ಕೂಡಿಬಂದಿರುತ್ತವೆಯೋ ಅಲ್ಲಿ ಹೆಣ ಇದ್ದೇ ಇರುತ್ತದೆಯೆಂದು ಜನರು ತಿಳಿದುಕೊಳ್ಳುತ್ತಾರೆ” ಎಂದು ಉತ್ತರಿಸಿದನು.


ಹದ್ದುಗಳು ಎಲ್ಲಿ ಕೂಡಿಬರುತ್ತವೆಯೋ ಅಲ್ಲಿ ಹೆಣವಿರುತ್ತದೆ ಎಂಬುದು ನಿಮಗೆ ಗೊತ್ತೇ ಇದೆ. ಅದೇ ರೀತಿ ನನ್ನ ಬರುವಿಕೆಯೂ ಸ್ಪಷ್ಟವಾಗಿರುವುದು.


ನಾನು ನಿನ್ನನ್ನೂ ನಿನ್ನ ಮೀನುಗಳನ್ನೂ ನೀರಿನೊಳಗಿಂದ ಹೊರಕ್ಕೆತ್ತಿ ಒಣನೆಲದ ಮೇಲೆ ಹಾಕುವೆನು. ನೀನು ನೆಲದ ಮೇಲೆ ಬೀಳುವೆ. ಯಾರೂ ನಿನ್ನನ್ನು ಮೇಲಕ್ಕೆ ಎತ್ತುವುದೂ ಇಲ್ಲ ಹೂಣಿಡುವುದೂ ಇಲ್ಲ. ನಾನು ನಿನ್ನನ್ನು ಕಾಡುಪ್ರಾಣಿಗಳಿಗೂ ಪಕ್ಷಿಗಳಿಗೂ ಕೊಡುವೆನು. ಅವರಿಗೆ ನೀನು ಆಹಾರವಾಗುವೆ.


ನನ್ನ ಒಡೆಯನಾದ ಯೆಹೋವನು ಹೇಳಿದ್ದೇನೆಂದರೆ, “ನರಪುತ್ರನೇ, ಎಲ್ಲಾ ಪಕ್ಷಿಗಳಿಗೂ ಕಾಡುಪ್ರಾಣಿಗಳಿಗೂ ಹೀಗೆ ಹೇಳು: ‘ನೀವೆಲ್ಲಾ ಕೂಡಿ ಬನ್ನಿರಿ. ನಾನು ನಿಮಗಾಗಿ ಇಸ್ರೇಲಿನ ಪರ್ವತಗಳಲ್ಲಿ ಮಾಡುವ ಮಹಾಯಜ್ಞಕ್ಕೆ ಎಲ್ಲಾ ಕಡೆಯಿಂದಲೂ ನೆರೆದುಬಂದು ಮಾಂಸವನ್ನು ತಿಂದು ರಕ್ತವನ್ನು ಕುಡಿಯಿರಿ.


ಲೋಕದ ಜನರು ಕೋಪಗೊಂಡಿದ್ದರು. ಆದರೆ ಇದು ನಿನ್ನ ಕೋಪದ ಸಮಯ. ಸತ್ತವರಿಗೆ ತೀರ್ಪು ನೀಡುವ ಸಮಯವಿದು. ನಿನ್ನ ಸೇವಕರಾದ ಪ್ರವಾದಿಗಳಿಗೂ ನಿನ್ನ ಪರಿಶುದ್ಧ ಜನರಿಗೂ ನಿನ್ನನ್ನು ಗೌರವಿಸುವ ದೊಡ್ಡವರಿಗೂ ಚಿಕ್ಕವರಿಗೂ ಪ್ರತಿಫಲ ನೀಡುವ ಸಮಯವಿದು. ಲೋಕನಾಶಕರನ್ನು ನಾಶಪಡಿಸುವ ಸಮಯವಿದು.”


ನೀನು ನೋಡಿದ ಆ ಮೃಗ ಮತ್ತು ಅದರ ಹತ್ತು ಕೊಂಬುಗಳು (ರಾಜರುಗಳು) ಆ ವೇಶ್ಯೆಯನ್ನು ದ್ವೇಷಿಸುತ್ತವೆ. ಅವಳಲ್ಲಿರುವುದನ್ನೆಲ್ಲ ಅವರು ಕಿತ್ತುಕೊಂಡು, ಅವಳನ್ನು ನಗ್ನಾವಸ್ಥೆಯಲ್ಲಿ ಬಿಡುತ್ತಾರೆ. ಅವರು ಅವಳ ದೇಹವನ್ನು ತಿಂದು, ಅವಳನ್ನು ಬೆಂಕಿಯಲ್ಲಿ ಸುಟ್ಟುಬಿಡುತ್ತಾರೆ.


ಆಗ ಸಿಂಹಾಸನದಿಂದ ಒಂದು ಧ್ವನಿಯು ಬಂದಿತು. ಆ ಧ್ವನಿಯು, “ನಮ್ಮ ದೇವರ ಸೇವೆ ಮಾಡುವ ಜನರೆಲ್ಲರೇ, ಆತನಿಗೆ ಸ್ತೋತ್ರ ಮಾಡಿರಿ! ನಮ್ಮ ದೇವರಿಗೆ ಗೌರವ ನೀಡುವ ಚಿಕ್ಕವರೇ, ದೊಡ್ಡವರೇ, ಆತನಿಗೆ ಸ್ತೋತ್ರ ಮಾಡಿರಿ!” ಎಂದು ಹೇಳಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು