Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 19:20 - ಪರಿಶುದ್ದ ಬೈಬಲ್‌

20 ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ಆ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಪರವಾಗಿ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರೊಂದಿಗೆ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಗೆ ಹಾಕಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಮೃಗವನ್ನು ಸೆರೆಹಿಡಿಯಲಾಯಿತು. ಅದರ ಜೊತೆಯಲ್ಲಿ ಕಪಟ ಪ್ರವಾದಿಯೂ ಸೆರೆಸಿಕ್ಕಿಬಿದ್ದನು. ಮೃಗದ ಮುಂದೆ ಪವಾಡ ಕಾರ್ಯಗಳನ್ನೆಸಗಿ ಅದರ ಮುದ್ರೆ ಒತ್ತಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಪೂಜೆ ಮಾಡಿದವರನ್ನು ಮರುಳುಗೊಳಿಸಿದವನು ಇವನೇ. ಇವರಿಬ್ಬರನ್ನೂ ಜೀವಸಹಿತ ಹಿಡಿದು ಗಂಧಕದಿಂದ ಉರಿಯುವ ಅಗ್ನಿಸರೋವರಕ್ಕೆ ಎಸೆಯಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ನಮಸ್ಕರಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲ್ಪಟ್ಟರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಸುಳ್ಳು ಪ್ರವಾದಿ ಸಹ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತ್ಯಾ ಭಯಾನಕ್ ಜನಾವರಾಚೆ ಅನಿ ತೆಚ್ಯಾ ವಾಂಗ್ಡಾ ಹೊತ್ತ್ಯಾ ಝುಟ್ಯಾ ಪ್ರವಾದ್ಯಾಕ್ ಧರುನ್ ಘೆವ್ನ್ ಹೊಲೆ, ತ್ಯಾ ಭಯಾನಕ್ ಜನಾವರಾಚೆ ಅನಿ ತ್ಯೆಚ್ಯಾ ಮುರ್ತಿಚೆ ಆರಾದನ್ ಕರ್ತಲ್ಯಾಕ್ನಿ ವಿಚಿತ್ರ್ ಕಾಮಾ ಕರುನ್ ದಾಕ್ವುನ್ ಪಸ್ವಲ್ಲೊ ಪ್ರವಾದಿ ಹ್ಯೊಚ್ ತೊ. ತ್ಯಾ ಭಯಾನಕ್ ಜನಾವರಾ ಅನಿ ತ್ಯಾ ಝುಟ್ಯಾ ಪ್ರವಾದ್ಯಾಕ್ ದೊಗ್ಯಾಕ್ನಿಬಿ ಝಿತ್ತೆಚ್ ಗಂದಕಾಚ್ಯಾ ಆಗಿಚ್ಯಾ ಸಮುಂದರಾತ್ ಟಾಕುನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 19:20
30 ತಿಳಿವುಗಳ ಹೋಲಿಕೆ  

ಸೈತಾನನನ್ನು (ಇವನೇ ಜನರನ್ನು ಮೋಸಗೊಳಿಸಿದವನು.) ಬೆಂಕಿಗಂಧಕಗಳು ಉರಿಯುತ್ತಿದ್ದ ಕೆರೆಗೆ ಎಸೆಯಲಾಯಿತು. ಅಲ್ಲಿ ಮೃಗವೂ ಇತ್ತು, ಸುಳ್ಳುಪ್ರವಾದಿಗಳೂ ಇದ್ದರು. ಅಲ್ಲಿ ಅವರು ಹಗಲಿರುಳು ಎಂದೆಂದಿಗೂ ಹಿಂಸೆ ಅನುಭವಿಸುವರು.


ಆದರೆ ಹೇಡಿಗಳಿಗೆ, ನಂಬಿಕೆಯಿಲ್ಲದವರಿಗೆ, ಅಸಹ್ಯಕೃತ್ಯ ಮಾಡುವವರಿಗೆ, ಕೊಲೆಗಾರರಿಗೆ, ಲೈಂಗಿಕ ಪಾಪಮಾಡುವವರಿಗೆ, ಮಾಟಮಂತ್ರಗಾರರಿಗೆ, ವಿಗ್ರಹಾರಾಧಕರಿಗೆ, ಸುಳ್ಳುಗಾರರಿಗೆ ಸಿಕ್ಕುವ ಸ್ಥಳ ಬೆಂಕಿಗಂಧಕಗಳು ಉರಿಯುವ ಕೆರೆಯೇ. ಇದು ಎರಡನೆಯ ಮರಣವಾಗಿರುತ್ತದೆ.”


ಅವನು ದೇವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಯುತ್ತಾನೆ. ದೇವರ ಕೋಪವೆಂಬ ಬಟ್ಟಲಿನಲ್ಲಿ ಈ ದ್ರಾಕ್ಷಾರಸವನ್ನು ಅದರ ಪೂರ್ಣಶಕ್ತಿಯ ಸಮೇತವಾಗಿ ತಯಾರಿಸಲಾಗಿದೆ. ಅವನನ್ನು ಪರಿಶುದ್ಧ ದೇವದೂತರ ಮತ್ತು ಕುರಿಮರಿಯಾದಾತನ ಮುಂದೆ ಉರಿಯುವ ಗಂಧಕದಿಂದ ಯಾತನೆಪಡಿಸಲಾಗುವುದು.


ಬಹುಕಾಲದವರೆಗೆ ಅಗ್ನಿಕುಂಡ ಸಿದ್ಧವಾಗಿತ್ತು. ಅದು ರಾಜನಿಗಾಗಿ ಸಿದ್ಧವಾಗಿದೆ. ಅದು ಆಳವಾಗಿಯೂ ಅಗಲವಾಗಿಯೂ ಮಾಡಲ್ಪಟ್ಟಿದೆ. ಅಲ್ಲಿ ಒಂದು ದೊಡ್ಡ ಕಟ್ಟಿಗೆಯ ರಾಶಿಯೂ ಬೆಂಕಿಯೂ ಇದೆ ಮತ್ತು ಯೆಹೋವನ ಬಾಯುಸಿರು ಗಂಧಕದ ಪ್ರವಾಹದಂತೆ ಬಂದು ಎಲ್ಲವನ್ನು ನಾಶಮಾಡುವದು.


“ನೀನು ನೋಡಿದ ಹತ್ತು ಕೊಂಬುಗಳೇ ಹತ್ತು ರಾಜರುಗಳಾಗಿವೆ. ಈ ಹತ್ತು ರಾಜರುಗಳು ಇನ್ನೂ ತಮ್ಮ ರಾಜ್ಯವನ್ನು ಪಡೆದಿಲ್ಲ. ಆದರೆ ಅವರು ಆಳುವ ಅಧಿಕಾರವನ್ನು ಮೃಗದ ಸಂಗಡ ಒಂದು ಗಂಟೆ ಪಡೆಯುತ್ತಾರೆ.


ನಿಮ್ಮ ದೇಶವೆಲ್ಲಾ ನಿಷ್ಪ್ರಯೋಜಕವಾಗಿರುವುದು. ಅದರ ಮೇಲೆ ಉಪ್ಪೂ ಗಂಧಕವೂ ತುಂಬಿರುವುದು. ಅದರ ಮೇಲೆ ಯಾವ ಸಸಿಯೂ ಬೆಳೆಯಲಾರದು; ಕೂಳೆಯೂ ಬೆಳೆಯುವುದಿಲ್ಲ. ಸೊದೋಮ್, ಗೊಮೋರ, ಅದ್ಮಾ ಮತ್ತು ಚೆಬೋಯೀಮ್ ಎಂಬ ಪಟ್ಟಣಗಳು ಯೆಹೋವನ ಕೋಪದ ನಿಮಿತ್ತ ನಾಶವಾದಂತೆ ನಿಮ್ಮ ದೇಶವೂ ನಾಶವಾಗುವುದು.


ಆಗ ಯೆಹೋವನು ಸೊದೋಮ್ ಮತ್ತು ಗೊಮೋರ ಪಟ್ಟಣಗಳ ಮೇಲೆ ಆಕಾಶದಿಂದ ಉರಿಯುವ ಗಂಧಕದ ಮಳೆಯನ್ನು ಸುರಿಸಿದನು.


ನಗರದ ಹೊರಭಾಗದಲ್ಲಿ ನಾಯಿಗಳಿವೆ (ಕೆಟ್ಟಜನರು), ಕೆಟ್ಟ ಮಾಟವನ್ನು ಮಾಡುವ ಜನರಿದ್ದಾರೆ, ಲೈಂಗಿಕ ಪಾಪಗಳನ್ನು ಮಾಡುವ ಜನರಿದ್ದಾರೆ, ಕೊಲೆಗಾರರಿದ್ದಾರೆ, ವಿಗ್ರಹಗಳನ್ನು ಆರಾಧಿಸುವ ಜನರಿದ್ದಾರೆ ಮತ್ತು ಸುಳ್ಳನ್ನು ಪ್ರೀತಿಸುವ ಮತ್ತು ಹೇಳುವ ಜನರಿದ್ದಾರೆ.


ಈ ಅರಸನು ಬಹಳ ಪ್ರಬಲನಾಗಿರುವನು. ಆದರೆ ಆ ಪ್ರಾಬಲ್ಯ ಸ್ವಶಕ್ತಿಯಿಂದ ಬಂದುದಲ್ಲ. ಈ ಅರಸನು ಅಪಾರ ವಿನಾಶವನ್ನುಂಟು ಮಾಡುವನು. ಅವನು ಕೈಕೊಂಡ ಪ್ರತಿಯೊಂದು ಕೆಲಸದಲ್ಲಿ ಅವನಿಗೆ ಜಯ ಲಭಿಸುವುದು. ಅವನು ಬಲಿಷ್ಠರನ್ನೂ ದೇವಭಕ್ತರನ್ನೂ ನಾಶಮಾಡುವನು.


ನಾನು ಗೋಗನನ್ನು ರೋಗಮರಣಗಳಿಂದ ಶಿಕ್ಷಿಸುವೆನು. ಅವನ ಮೇಲೆಯೂ ಅವನೊಂದಿಗೆ ಬಂದ ಬಹುದೇಶದ ಸೈನಿಕರ ಮೇಲೆಯೂ ಆಲಿಕಲ್ಲು, ಬೆಂಕಿ, ಗಂಧಕದ ಮಳೆಯಿಂದ ಶಿಕ್ಷಿಸುವೆನು.


ಎದೋಮಿನ ನದಿಗಳು ಕರಗಿರುವ ರಾಳದಂತಿರುವದು. ಅದರ ನೆಲವು ಸುಡುವ ಗಂಧಕದಂತಿರುವದು.


ಆತನು ಆ ದುಷ್ಟರ ಮೇಲೆ ಬೆಂಕಿಗಂಧಕಗಳ ಮಳೆಯನ್ನು ಸುರಿಸುವನು. ಅವರಿಗೆ ಸಿಕ್ಕುವುದೆಂದರೆ ಕಾದ ಉರಿಗಾಳಿಯೊಂದೇ.


ನಂತರ ನಾನು ಲೋಕದ ರಾಜರನ್ನು ಮತ್ತು ಮೃಗವನ್ನು ನೋಡಿದೆನು. ಅವರು ಕುದುರೆಯ ಮೇಲೆ ಕುಳಿತಿದ್ದವನ ಮೇಲೆ ಮತ್ತು ಅವನ ಸೈನ್ಯದ ಮೇಲೆ ಯುದ್ಧ ಮಾಡುವುದಕ್ಕಾಗಿ ತಮ್ಮ ಸೈನ್ಯವನ್ನೆಲ್ಲ ಒಟ್ಟುಗೂಡಿಸಿದ್ದರು.


ಸಮುದ್ರಕ್ಕೂ ಸುಂದರವಾದ ಪರಿಶುದ್ಧ ಪರ್ವತಕ್ಕೂ ನಡುವೆ, ಅರಮನೆಯಂತಹ ತನ್ನ ಗುಡಾರಗಳನ್ನು ಹಾಕಿಸುವನು. ಕೊನೆಗೆ ಆ ಕೆಟ್ಟ ಅರಸನು ಸತ್ತುಹೋಗುವನು. ಅವನ ಅಂತ್ಯಕಾಲದ ಹೊತ್ತಿಗೆ ಅವನಿಗೆ ಸಹಾಯ ಮಾಡಲು ಯಾರೂ ಇರುವುದಿಲ್ಲ.


ಅವನ ಮನೆಯಲ್ಲಿ ಅವನದೇನೂ ಉಳಿದಿರುವುದಿಲ್ಲ. ಉರಿಯುವ ಗಂಧಕವು ಅವನ ಆಸ್ತಿಯಲ್ಲೆಲ್ಲಾ ಹರಡಿಕೊಂಡಿರುತ್ತದೆ.


“ಆಗಿನ ಕಾಲದ ಮತ್ತು ಪರಿಸ್ಥಿತಿಯ ಬಗ್ಗೆ ಕಂಡ ದರ್ಶನಗಳು ನಿಜವಾಗುವವು. ಈ ದರ್ಶನ ಗುಟ್ಟಾಗಿರಲಿ. ಅದೆಲ್ಲ ನಡೆಯಬೇಕಾದರೆ ಇನ್ನೂ ಬಹಳ ಕಾಲಬೇಕು” ಎಂದು ಹೇಳಿದನು.


“ಸುಳ್ಳುಪ್ರವಾದಿಗಳ ಬಗ್ಗೆ ಎಚ್ಚರವಾಗಿರಿ. ಅವರು ಕುರಿಗಳ ಹಾಗೆ ಕಾಣಿಸಿಕೊಂಡು ನಿಮ್ಮ ಬಳಿಗೆ ಬರುತ್ತಾರೆ. ಆದರೆ ಅವರು ತೋಳಗಳಂತೆ ನಿಜವಾಗಿಯೂ ಅಪಾಯಕಾರಿಗಳಾಗಿದ್ದಾರೆ.


ನಾನು ದರ್ಶನದಲ್ಲಿ ಕುದುರೆಗಳನ್ನೂ ಕುದುರೆಗಳ ಮೇಲಿದ್ದ ಸವಾರರನ್ನೂ ನೋಡಿದೆನು. ಅವರು ಹೀಗೆ ಕಾಣುತ್ತಿದ್ದರು: ಅವರು ಬೆಂಕಿಯಂತೆ ಕೆಂಪಾದ, ಕಪ್ಪಾದ, ನೀಲಿಯ ಮತ್ತು ಗಂಧಕದಂತೆ ಹಳದಿಯಾದ ಕವಚಗಳನ್ನು ಹೊಂದಿದ್ದರು. ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತೆ ಕಾಣುತ್ತಿದ್ದವು. ಕುದುರೆಗಳ ಬಾಯಿಂದ ಬೆಂಕಿ, ಹೊಗೆ ಮತ್ತು ಗಂಧಕಗಳು ಬರುತ್ತಿದ್ದವು.


ಆದರೆ “ಆಯಿ”ಯ ಅರಸನನ್ನು ಜೀವಸಹಿತ ಉಳಿಸಿ ಯೆಹೋಶುವನ ಬಳಿಗೆ ತಂದರು.


ಹಿಂಡಿನಿಂದ ಉತ್ತಮವಾದ ಪಶುವನ್ನು ತೆಗೆದುಕೊ. ಹಂಡೆಯ ಕೆಳಗೆ ಸೌದೆಗಳನ್ನು ಜೋಡಿಸು. ಮಾಂಸ ತುಂಡುಗಳನ್ನು ಬೇಯಿಸು. ಮೂಳೆಗಳನ್ನು ಸಹ ಹಂಡೆಯಲ್ಲಿ ಬೇಯಿಸು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು