Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 19:5 - ಪರಿಶುದ್ದ ಬೈಬಲ್‌

5 ಆಗ ಸಿಂಹಾಸನದಿಂದ ಒಂದು ಧ್ವನಿಯು ಬಂದಿತು. ಆ ಧ್ವನಿಯು, “ನಮ್ಮ ದೇವರ ಸೇವೆ ಮಾಡುವ ಜನರೆಲ್ಲರೇ, ಆತನಿಗೆ ಸ್ತೋತ್ರ ಮಾಡಿರಿ! ನಮ್ಮ ದೇವರಿಗೆ ಗೌರವ ನೀಡುವ ಚಿಕ್ಕವರೇ, ದೊಡ್ಡವರೇ, ಆತನಿಗೆ ಸ್ತೋತ್ರ ಮಾಡಿರಿ!” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆ ಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಧ್ವನಿಯು, “ದೇವರ ಸೇವಕರೆಲ್ಲರೂ, ದೇವರಿಗೆ ಭಯಪಡುವ ಶ್ರೇಷ್ಠರು ಮತ್ತು ಕನಿಷ್ಠರು ನಮ್ಮ ದೇವರನ್ನು ಕೊಂಡಾಡಿರಿ” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಬಳಿಕ ಸಿಂಹಾಸನದ ಕಡೆಯಿಂದ ಬಂದ ಒಂದು ಧ್ವನಿ : “ದೇವರ ಎಲ್ಲಾ ದಾಸರೇ, ಅವರಲ್ಲಿ ಭಯಭಕ್ತಿಯುಳ್ಳ ಹಿರಿಯಕಿರಿಯರೇ, ನಮ್ಮ ದೇವರನ್ನು ಕೊಂಡಾಡಿ,” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಶಬ್ದವು - ದೇವರ ದಾಸರೆಲ್ಲರೇ, ದೇವರಿಗೆ ಭಯಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಕೊಂಡಾಡಿರಿ ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಸ್ವರವು: “ದೇವರ ಎಲ್ಲಾ ದಾಸರೇ, ದೇವರಿಗೆ ಭಯಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಸ್ತುತಿಸಿರಿ!” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಮಾನಾ ಸಿಂಹಾನಸಾಕ್ನಾ ಯೆಲ್ಲ್ಯಾ ಎಕ್ ಧನಾನ್, “ದೆವಾಚ್ಯಾ ಸಗ್ಳ್ಯಾ ಸೆವಕಾನೊ ಅನಿ ಸಗ್ಳ್ಯಾ ಲೊಕಾನು ಅನಿ ದೆವಾಕ್ ಭಿಂವ್ನ್ ಚಲ್ತಲ್ಯಾ ಮೊಟ್ಯಾನೊ ಅನಿ ಬಾರಿಕ್ಲ್ಯಾನೊ ಅಮ್ಚ್ಯಾ ದೆವಾಚಿ ಸುತ್ತಿ ಕರಾ!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 19:5
14 ತಿಳಿವುಗಳ ಹೋಲಿಕೆ  

ಯೆಹೋವನ ಸೇವಕರೆಲ್ಲರೇ, ಆತನನ್ನು ಕೊಂಡಾಡಿರಿ. ರಾತ್ರಿಯೆಲ್ಲಾ ದೇವಾಲಯದಲ್ಲಿ ಸೇವೆ ಮಾಡಿದವರೇ, ಆತನಿಗೆ ಸ್ತೋತ್ರಮಾಡಿರಿ.


ಸಮಸ್ತ ಜೀವಿಗಳೇ, ಯೆಹೋವನಿಗೆ ಸ್ತೋತ್ರಮಾಡಿರಿ! ಯೆಹೋವನಿಗೆ ಸ್ತೋತ್ರವಾಗಲಿ!


ಯೆಹೋವನಿಗೆ ಸ್ತೋತ್ರವಾಗಲಿ! ಯೆಹೋವನ ಸೇವಕರೇ, ಆತನ ಹೆಸರನ್ನು ಸ್ತುತಿಸಿರಿ!


ಆದ್ದರಿಂದ ಈ ಜನರು ಈಗ ದೇವರ ಸಿಂಹಾಸನದ ಮುಂದೆ ಇದ್ದಾರೆ. ಅವರು ದೇವರನ್ನು ಆತನ ಆಲಯದಲ್ಲಿ ಹಗಲಿರುಳು ಆರಾಧಿಸುತ್ತಾರೆ. ಸಿಂಹಾಸನದ ಮೇಲೆ ಕುಳಿತಿರುವಾತನು ಅವರನ್ನು ಸಂರಕ್ಷಿಸುತ್ತಾನೆ.


ಯೆಹೋವನನ್ನು ಆರಾಧಿಸುವವರೇ, ಆತನಿಗೆ ಸ್ತೋತ್ರಮಾಡಿರಿ. ಯಾಕೋಬನ ಸಂತತಿಗಳವರೇ, ಯೆಹೋವನಿಗೆ ಘನಮಾನವನ್ನು ಸಲ್ಲಿಸಿರಿ! ಇಸ್ರೇಲರೇ, ಆತನಲ್ಲಿ ಭಯಭಕ್ತಿಯಿಂದಿರಿ!


ಸತ್ತುಹೋಗಿದ್ದ ಚಿಕ್ಕವರು ಮತ್ತು ದೊಡ್ಡವರು ಸಿಂಹಾಸನದ ಮುಂದೆ ನಿಂತಿದ್ದರು. ಆಗ ಜೀವಬಾಧ್ಯರ ಪುಸ್ತಕವನ್ನು ತೆರೆಯಲಾಯಿತು. ತೆರೆದಿದ್ದ ಇತರ ಪುಸ್ತಕಗಳೂ ಅಲ್ಲಿದ್ದವು. ಸತ್ತುಹೋಗಿದ್ದ ಈ ಜನರಿಗೆ ಅವರು ಮಾಡಿದ್ದ ಕಾರ್ಯಗಳ ಆಧಾರದ ಮೇಲೆ ತೀರ್ಪು ನೀಡಲಾಯಿತು. ಇವುಗಳು ಪುಸ್ತಕಗಳಲ್ಲಿ ಬರೆಯಲ್ಪಟ್ಟಿವೆ.


ಏಳನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಗಾಳಿಯಲ್ಲಿ ಸುರಿದನು. ಆಗ ಒಂದು ಮಹಾಧ್ವನಿಯು ಸಿಂಹಾಸನದಿಂದ ಆಲಯದ ಹೊರಕ್ಕೆ ಬಂದಿತು. ಆ ಧ್ವನಿಯು, “ಮುಗಿದುಹೋಯಿತು!” ಎಂದು ಹೇಳಿತು.


ಆತನು ದೊಡ್ಡವರೂ ಚಿಕ್ಕವರೂ ಎಂದೆನ್ನದೆ ತನ್ನ ಭಕ್ತರನ್ನೆಲ್ಲಾ ಆಶೀರ್ವದಿಸುವನು.


ಎರಡನೆಯ ಮೃಗವು ಸಹ ಎಲ್ಲರನ್ನು ಅಂದರೆ ಚಿಕ್ಕವರನ್ನು, ದೊಡ್ಡವರನ್ನು, ಶ್ರೀಮಂತರನ್ನು, ಬಡವರನ್ನು, ಗುಲಾಮರನ್ನು ಮತ್ತು ಸ್ವತಂತ್ರರನ್ನು, ತಮ್ಮ ಬಲಗೈಯ ಮೇಲಾಗಲಿ ಅಥವಾ ತಮ್ಮ ಹಣೆಗಳ ಮೇಲಾಗಲಿ ಗುರುತು ಹಾಕಿಕೊಳ್ಳಬೇಕೆಂದು ಒತ್ತಾಯಪಡಿಸಿತು.


ನೀವು ರಾಜರುಗಳ ಮತ್ತು ಸಹಸ್ರಾಧಿಪತಿಗಳ ಮತ್ತು ಸುಪ್ರಸಿದ್ಧ ಜನರ ದೇಹಗಳನ್ನು ತಿನ್ನಲು ಒಟ್ಟಾಗಿ ಬನ್ನಿರಿ. ಕುದುರೆಗಳ, ಕುದುರೆ ಸವಾರರ, ಸ್ವತಂತ್ರರಾದವರ, ಗುಲಾಮರ, ಚಿಕ್ಕವರ ಮತ್ತು ದೊಡ್ಡವರ ದೇಹಗಳನ್ನು ತಿನ್ನಲು ಬನ್ನಿರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು