Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 19:7 - ಪರಿಶುದ್ದ ಬೈಬಲ್‌

7 ನಾವೆಲ್ಲರೂ ಆನಂದಿಸೋಣ ಮತ್ತು ಸಂತಸಪಡೋಣ! ದೇವರನ್ನು ಮಹಿಮೆಪಡಿಸೋಣ! ಕುರಿಮರಿಯಾದಾತನ (ಯೇಸು) ವಿವಾಹಕಾಲ ಬಂದಿರುವುದರಿಂದ ದೇವರನ್ನು ಘನಪಡಿಸೋಣ. ಕುರಿಮರಿಯಾದಾತನ ವಧು (ಸಭೆ) ತನ್ನನ್ನು ಸಿದ್ಧಪಡಿಸಿಕೊಂಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯಜ್ಞದ ಕುರಿಮರಿಯಾದಾತನ ವಿವಾಹಕಾಲವು ಬಂದಿತೆಂದು ಸಂತೋಷಪಡೋಣ, ಹರ್ಷಗೊಳ್ಳೋಣ, ಆತನನ್ನು ಘನಪಡಿಸೋಣ, ಏಕೆಂದರೆ ಆತನನ್ನು ವಿವಾಹವಾಗುವ ಕನ್ಯೆಯು ತನ್ನನ್ನು ತಾನೇ ಸಿದ್ಧಮಾಡಿಕೊಂಡಿದ್ದಾಳೆ” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಬಂದಿದೆ ಯಜ್ಞದ ಕುರಿಮರಿಯ ಶುಭ ವಿವಾಹ ಸಿದ್ಧಳಿಹಳು ಮದುಮಗಳು ಶೃಂಗಾರ ಸಹಿತ ಸಂತೋಷಿಸೋಣ, ಸಂಭ್ರಮಿಸೋಣ ! ಆತನ ಮಹಿಮೆಯನು ಕೀರ್ತಿಸೋಣ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯಜ್ಞದ ಕುರಿಯಾದಾತನ ವಿವಾಹ ಕಾಲವು ಬಂತು; ಆತನಿಗೆ ವಿವಾಹವಾಗುವ ಕನ್ಯೆ ತನ್ನನ್ನು ಸಿದ್ಧಮಾಡಿಕೊಂಡಿದ್ದಾಳೆ; ಸಂತೋಷಪಡೋಣ, ಹರ್ಷಗೊಳ್ಳೋಣ, ಆತನನ್ನು ಘನಪಡಿಸೋಣ ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಕುರಿಮರಿ ಆಗಿರುವವರ ವಿವಾಹ ಕಾಲವು ಬಂತು. ಅವರಿಗೆ ವಿವಾಹವಾಗುವ ಕನ್ಯೆ ತನ್ನನ್ನು ಸಿದ್ಧಮಾಡಿಕೊಂಡಿದ್ದಾಳೆ. ಸಂತೋಷಪಡೋಣ, ಹರ್ಷಗೊಳ್ಳೋಣ, ಅವರನ್ನು ಮಹಿಮೆಪಡಿಸೋಣ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಅಮಿ ಸಂತೊಸ್ ಹೊವಾ, ಅನಿ ಖುಶಿ ಹೊವಾ; ತ್ಯೆಚ್ಯಾ ಮೊಟ್ಯಾಪಾನಾಚ್ಯಾ ವಿಶಯಾತ್ ಹೊಗ್ಳುವಾ! ಕಶ್ಯಾಕ್ ಮಟ್ಲ್ಯಾರ್ ಬೊಕ್ಡಾಚ್ಯಾ ಲಗ್ನಾಚೊ ಎಳ್ ಯೆವ್ನ್ ಪಾವ್ಲೊ, ಅನಿ ನ್ಹವ್ರಿ ಅಪ್ನಾಕುಚ್ ಲಗ್ನಾಕ್ ತಯಾರ್ ಕರುನ್ ಘೆವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 19:7
29 ತಿಳಿವುಗಳ ಹೋಲಿಕೆ  

ಕಡೆಯ ಏಳು ಉಪದ್ರವಗಳನ್ನು ತಮ್ಮ ಪಾತ್ರೆಗಳಲ್ಲಿ ತುಂಬಿಕೊಂಡಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ನನ್ನ ಬಳಿಗೆ ಬಂದು, “ನನ್ನ ಸಂಗಡ ಬಾ. ಕುರಿಮರಿಯಾದಾತನ ಪತ್ನಿಯಾಗಲಿರುವ ವಧುವನ್ನು ನಾನು ನಿನಗೆ ತೋರಿಸುತ್ತೇನೆ” ಎಂದನು.


ಪರಿಶುದ್ಧ ನಗರವು ಪರಲೋಕದಿಂದ ದೇವರ ಬಳಿಯಿಂದ ಇಳಿದು ಬರುತ್ತಿರುವುದನ್ನು ನಾನು ನೋಡಿದೆನು. ಈ ಪರಿಶುದ್ಧ ನಗರವೇ ನೂತನ ಜೆರುಸಲೇಮ್. ವಧುವು ತನ್ನ ಪತಿಗಾಗಿ ಶೃಂಗರಿಸಿಕೊಳ್ಳುವಂತೆ ಅದನ್ನು ಸಿದ್ಧಪಡಿಸಿದ್ದರು.


ನಿಮ್ಮ ವಿಷಯದಲ್ಲಿ ನಾನು ಚಿಂತಿಸುತ್ತೇನೆ. ಈ ಚಿಂತೆಯು ದೇವರಿಂದ ಬಂದದ್ದು. ನಿಮ್ಮನ್ನು ಕ್ರಿಸ್ತನಿಗೆ ಕೊಡುವುದಾಗಿ ನಾನು ವಾಗ್ದಾನ ಮಾಡಿದೆನು. ಕ್ರಿಸ್ತನೊಬ್ಬನೇ ನಿಮ್ಮ ಪತಿಯಾಗಿರಬೇಕು. ನಾನು ನಿಮ್ಮನ್ನು ಕ್ರಿಸ್ತನಿಗೆ ಆತನ ಶುದ್ಧ ವಧುವನ್ನಾಗಿ ಕೊಡಲು ಅಪೇಕ್ಷಿಸುತ್ತೇನೆ.


“ಪರಲೋಕರಾಜ್ಯವು ತನ್ನ ಮಗನ ಮದುವೆಯನ್ನು ಸಿದ್ಧಪಡಿಸಿದ ಒಬ್ಬ ರಾಜನಿಗೆ ಹೋಲಿಕೆಯಾಗಿದೆ.


ಆಗ ದೇವದೂತನು ನನಗೆ ಹೀಗೆ ಹೇಳಿದನು: “ಈ ರೀತಿ ಬರೆ: ಯಜ್ಞದ ಕುರಿಮರಿಯಾದಾತನ ವಿವಾಹದ ಔತಣಕ್ಕೆ ಆಹ್ವಾನಿಸಲ್ಪಟ್ಟ ಜನರು ಧನ್ಯರು!” ನಂತರ ದೇವದೂತನು, “ಇವು ದೇವರ ಸತ್ಯವಾದ ನುಡಿಗಳು” ಎಂದು ಹೇಳಿದನು.


ನಾನು ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತಾಡುತ್ತಿದ್ದೇನೆ. ರಹಸ್ಯವಾದ ಈ ಸತ್ಯವು ಬಹು ಮುಖ್ಯವಾದದ್ದು.


ಮದುಮಗಳು ಮದುಮಗನಿಗೆ ಮಾತ್ರ ಸೇರಿದವಳಾಗಿದ್ದಾಳೆ. ಮದುಮಗನಿಗೆ ಸಹಾಯಮಾಡುವ ಸ್ನೇಹಿತನು ಮದುಮಗನ ಬರುವಿಕೆಗಾಗಿ ಕಾಯುತ್ತಿರುತ್ತಾನೆ ಮತ್ತು ಆತನ ಕರೆಗಾಗಿ ಆಲಿಸುತ್ತಿರುತ್ತಾನೆ. ಮದುಮಗನ ಸ್ವರವನ್ನು ಕೇಳುವಾಗ ಈ ಸ್ನೇಹಿತನು ಬಹು ಸಂತೋಷಪಡುವನು. ಅದೇ ಸಂತೋಷ ನನಗಿದೆ. ನನ್ನ ಪೂರ್ಣಾನಂದದ ಸಮಯವು ಇದೇ ಆಗಿದೆ.


ಯೌವನಸ್ಥನು ಕನ್ನಿಕೆಯನ್ನು ಪ್ರೀತಿಸಿ ಮದುವೆಯಾಗುವನು; ತನ್ನ ಹೆಂಡತಿಯನ್ನಾಗಿ ಆಕೆಯನ್ನು ಸ್ವೀಕರಿಸುವನು. ಅದೇ ರೀತಿಯಲ್ಲಿ ದೇವರು ನಿನ್ನನ್ನು ವಿವಾಹವಾಗುತ್ತಾನೆ. ದೇಶವು ತುಂಬಿಹೋಗುವಷ್ಟು ಮಕ್ಕಳನ್ನು ಆತನು ಪಡೆದುಕೊಳ್ಳುತ್ತಾನೆ. ಒಬ್ಬನು ಹೊಸದಾಗಿ ಮದುವೆಯಾದ ತನ್ನ ಹೆಂಡತಿಯೊಡನೆ ಉಲ್ಲಾಸದಿಂದಿರುವಂತೆ ನಿನ್ನ ದೇವರು ನಿನ್ನಲ್ಲಿ ಆನಂದಿಸುವನು.


ಕ್ರಿಸ್ತನು ಸಭೆಗೆ ಶಿರಸ್ಸಾಗಿರುವಂತೆ ಗಂಡನು ಹೆಂಡತಿಗೆ ಶಿರಸ್ಸಾಗಿದ್ದಾನೆ. ಸಭೆಯು ಕ್ರಿಸ್ತನ ದೇಹವಾಗಿದೆ. ಕ್ರಿಸ್ತನು ಆ ದೇಹದ ರಕ್ಷಕನಾಗಿದ್ದಾನೆ.


ಜೆರುಸಲೇಮೇ, ಹರ್ಷಿಸು. ಜೆರುಸಲೇಮನ್ನು ಪ್ರೀತಿಸುವ ಜನರೇ, ಹರ್ಷಿಸಿರಿ. ಜೆರುಸಲೇಮಿಗೆ ದುಃಖಕೊಡುವ ವಿಷಯಗಳು ಜರುಗಿದ್ದರಿಂದ ನೀವು ದುಃಖಪಡುತ್ತಿದ್ದೀರಿ. ಆದರೆ ನೀವೀಗ ಸಂತೋಷಪಡಬೇಕು.


ಮದುವೆಯ ಔತಣದಿಂದ ಮನೆಗೆ ಮರಳಿಬರುವ ಯಜಮಾನನನ್ನು ಎದುರುನೋಡುತ್ತಿರುವ ಸೇವಕರಂತಿರಿ. ಯಜಮಾನನು ಬಂದು ಬಾಗಿಲನ್ನು ತಟ್ಟಿದಾಗ ಸೇವಕರು ಬಾಗಿಲನ್ನು ತೆರೆಯುತ್ತಾರೆ.


ಚೀಯೋನ್ ನಗರಿಯೇ, ಹರ್ಷಿಸು! ಜೆರುಸಲೇಮ್ ಜನರೇ, ಸಂತೋಷದಿಂದ ಆರ್ಭಟಿಸಿರಿ. ನಿಮ್ಮ ಅರಸನು ನಿಮ್ಮ ಬಳಿಗೆ ಬರುತ್ತಿದ್ದಾನೆ! ಆತನು ವಿಜಯಶಾಲಿಯಾದ ನೀತಿವಂತನಾಗಿದ್ದಾನೆ. ಆದರೆ ದೀನನಂತೆ ಕತ್ತೆಯ ಮೇಲೆ, ಹೌದು, ಕತ್ತೆಯ ಮರಿಯ ಮೇಲೆ ಸವಾರಿ ಮಾಡಿಕೊಂಡು ಬರುವನು.


ಚೀಯೋನೇ, ಎಚ್ಚರಗೊಳ್ಳು, ಎದ್ದೇಳು! ನಿನ್ನ ಉಡುಪನ್ನು ಹಾಕಿಕೊ; ನಿನ್ನ ಪ್ರತಾಪವನ್ನು ಧರಿಸಿಕೊ. ಪರಿಶುದ್ಧ ಜೆರುಸಲೇಮೇ, ಎದ್ದುನಿಲ್ಲು. ಸುನ್ನತಿಯಿಲ್ಲದವರೂ ಅಶುದ್ಧರೂ ನಿನ್ನಲ್ಲಿಗೆ ಮತ್ತೇ ಪ್ರವೇಶಿಸರು.


ಚೀಯೋನಿನ ಸ್ತ್ರೀಯರೇ, ಹೊರಗೆ ಹೋಗಿ ರಾಜನಾದ ಸೊಲೊಮೋನನನ್ನು ನೋಡಿರಿ. ಅವನ ಮದುವೆಯ ದಿನದಲ್ಲಿ ಹೃದಯವು ಹರ್ಷಗೊಂಡಿದ್ದಾಗ ಅವನ ತಾಯಿ ತಲೆಗಿಟ್ಟ ಕಿರೀಟವನ್ನು ಧರಿಸಿಕೊಂಡಿದ್ದಾನೆ.


ನಾವಾದರೋ ನಿಜವಾದ ಸುನ್ನತಿಯನ್ನು ಹೊಂದಿದವರಾಗಿದ್ದೇವೆ; ದೇವರನ್ನು ಆತ್ಮನ ಮೂಲಕ ಆರಾಧಿಸುವವರಾಗಿದ್ದೇವೆ. ನಾವು ಕ್ರಿಸ್ತ ಯೇಸುವಿನಲ್ಲಿರಲು ಹೆಮ್ಮೆಪಡುತ್ತೇವೆ. ನಾವು ನಮ್ಮ ಮೇಲಾಗಲಿ ನಾವು ಮಾಡಬಲ್ಲವುಗಳ ಮೇಲಾಗಲಿ ಭರವಸೆ ಇಡುವುದಿಲ್ಲ.


ಆಗ ಜೆರುಸಲೇಮಿನ ದ್ವಾರಗಳ ಬಳಿಯಲ್ಲಿ ನಿನ್ನನ್ನು ಸಂಕೀರ್ತಿಸುವೆನು. ನೀನು ನನ್ನನ್ನು ರಕ್ಷಿಸಿದ್ದರಿಂದ ಹರ್ಷಿಸುವೆನು.


ಹನ್ನಳು ಇಂತೆಂದಳು: “ನನ್ನ ಹೃದಯವು ಯೆಹೋವನಲ್ಲಿ ಉಲ್ಲಾಸಿಸುತ್ತದೆ. ನಾನು ನನ್ನ ದೇವರಾದ ಯೆಹೋವನಲ್ಲಿ ಬಲಶಾಲಿಯಾಗಿದ್ದೇನೆ. ನಾನು ನನ್ನ ಶತ್ರುಗಳ ಬಗ್ಗೆ ನಗುವೆನು. ನಾನು ನಿನ್ನ ರಕ್ಷಣೆಯಲ್ಲಿ ಆನಂದಿಸುತ್ತೇನೆ.


ಅಧಿಪತಿಯು ಒಳ್ಳೆಯವನಾಗಿರುವಾಗ ಜನರೆಲ್ಲರೂ ಸಂತೋಷವಾಗಿರುವರು. ಕೆಡುಕನು ಆಳುವಾಗ ಜನರೆಲ್ಲರೂ ಸಂಕಟಪಡುವರು.


ಒಳ್ಳೆಯವರು ಇದನ್ನು ಕಂಡು ಸಂತೋಷಪಡುವರು. ದುಷ್ಟರು ಇದನ್ನು ಕಂಡು ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳುವರು.


ನಿನ್ನ ನ್ಯಾಯನಿರ್ಣಯಗಳಿಂದ ಚೀಯೋನ್ ಪರ್ವತವು ಹರ್ಷಿಸಲಿ; ಯೆಹೂದದ ಊರುಗಳು ಉಲ್ಲಾಸಿಸಲಿ.


“ಭೂಲೋಕವೆಲ್ಲಾ ದೇವಜನರಿಗಾಗಿ ಸಂತೋಷಿಸುವದು; ಯಾಕೆಂದರೆ ಆತನು ಅವರನ್ನು ಸಾಯಿಸುವನು; ತನ್ನ ಸೇವಕರನ್ನು ಸಂಹರಿಸುವವರನ್ನು ಶಿಕ್ಷಿಸುವನು; ತನ್ನ ವೈರಿಗಳಿಗೆ ತಕ್ಕ ದಂಡನೆ ಕೊಡುವನು. ತನ್ನ ದೇಶವನ್ನೂ ತನ್ನ ಜನರನ್ನೂ ಶುದ್ಧಿ ಮಾಡುವನು.”


ನಿಮ್ಮನ್ನು ಹರ್ಷಗೊಳಿಸುವಂಥ ಸಂಗತಿಗಳನ್ನು ನೀವು ನೋಡುವಿರಿ. ನೀವು ಸ್ವತಂತ್ರರಾಗಿದ್ದು ಹುಲ್ಲಿನಂತೆ ಹುಲುಸಾಗಿ ಬೆಳೆಯುವಿರಿ. ಯೆಹೋವನ ಸೇವಕರು ಆತನ ಶಕ್ತಿಯನ್ನು ನೋಡುವರು. ಆದರೆ ಯೆಹೋವನ ವೈರಿಗಳು ಆತನ ಕೋಪವನ್ನು ಕಾಣುವರು.


ಯೋಸೇಫನು ಹೀಗೆ ಆಲೋಚಿಸಿಕೊಂಡನಂತರ, ಪ್ರಭುವಿನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡನು. ಆ ದೂತನು, “ದಾವೀದನ ಮಗನಾದ ಯೋಸೇಫನೇ, ಮರಿಯಳನ್ನು ನಿನ್ನ ಹೆಂಡತಿಯಾಗಿ ಸ್ವೀಕರಿಸಲು ಭಯಪಡಬೇಡ. ಆಕೆ ಪವಿತ್ರಾತ್ಮನ ಪ್ರಭಾವದಿಂದ ಗರ್ಭಿಣಿಯಾಗಿದ್ದಾಳೆ.


ಆ ಸಮಯದಲ್ಲಿ ಮಹಾಭೂಕಂಪವಾಯಿತು. ಆ ನಗರದ ಹತ್ತನೆಯ ಒಂದು ಭಾಗ ನಾಶವಾಯಿತು. ಭೂಕಂಪದಲ್ಲಿ ಏಳು ಸಾವಿರ ಜನರು ನಾಶವಾದರು. ಸಾಯದೆ ಉಳಿದಿದ್ದ ಜನರು ಬಹು ಭಯಗೊಂಡು ಪರಲೋಕದ ದೇವರನ್ನು ಘನಪಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು