Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 19:9 - ಪರಿಶುದ್ದ ಬೈಬಲ್‌

9 ಆಗ ದೇವದೂತನು ನನಗೆ ಹೀಗೆ ಹೇಳಿದನು: “ಈ ರೀತಿ ಬರೆ: ಯಜ್ಞದ ಕುರಿಮರಿಯಾದಾತನ ವಿವಾಹದ ಔತಣಕ್ಕೆ ಆಹ್ವಾನಿಸಲ್ಪಟ್ಟ ಜನರು ಧನ್ಯರು!” ನಂತರ ದೇವದೂತನು, “ಇವು ದೇವರ ಸತ್ಯವಾದ ನುಡಿಗಳು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇದಲ್ಲದೆ ಅವನು ನನ್ನ ಸಂಗಡ ಮಾತನಾಡುತ್ತಾ, “ಯಜ್ಞದ ಕುರಿಮರಿಯಾದಾತನ ವಿವಾಹದ ಔತಣಕ್ಕೆ ಆಹ್ವಾನಿಸಲ್ಪಟ್ಟವರು ಧನ್ಯರು ಎಂಬುದಾಗಿ ಬರೆ” ಎಂದು ನನಗೆ ಹೇಳಿ, “ಈ ಮಾತುಗಳು ದೇವರ ಸತ್ಯವಚನಗಳಾಗಿವೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅನಂತರ ದೇವದೂತನು, “ ‘ಯಜ್ಞದ ಕುರಿಮರಿಯ ವಿವಾಹದ ಔತಣಕ್ಕೆ ಆಹ್ವಾನಿತರು ಭಾಗ್ಯವಂತರು’ ಎಂದು ಬರೆ,” ಎಂದು ನನಗೆ ಆಜ್ಞಾಪಿಸಿದನು. “ಇವು ದೇವರ ಸತ್ಯವಾದ ವಾಕ್ಯಗಳು,” ಎಂದು ಸಹ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇದಲ್ಲದೆ ಅವನು ನನ್ನ ಸಂಗಡ ಮಾತಾಡುತ್ತಾ - ಯಜ್ಞದ ಕುರಿಯಾದಾತನ ವಿವಾಹದ ಔತಣಕ್ಕೆ ಕರಸಿಕೊಂಡವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿ - ಈ ಮಾತುಗಳು ದೇವರ ಸತ್ಯವಚನಗಳಾಗಿವೆ, ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇದಲ್ಲದೆ ಅವನು ನನಗೆ, “ಕುರಿಮರಿ ಆಗಿರುವವರ ವಿವಾಹದ ಔತಣಕ್ಕೆ ಕರೆಯಲಾದವರು ಧನ್ಯರು ಮತ್ತು ಅವರು ಹೀಗೆ ಹೇಳಿದರು, ದೇವರ ಈ ಮಾತುಗಳು ಸತ್ಯವಾಗಿವೆ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತನ್ನಾ ದೆವಾಚ್ಯಾ ದುತಾನ್ ಮಾಕಾ, “ಹೆ ಲಿವ್; ಜೆ ಕೊನಾಕ್ ಬೊಕ್ಡಾಚ್ಯಾ ಲಗ್ನಾಚ್ಯಾ ಸನಾಕ್ ಬಲ್ವನ್ ಗಾವ್ಲಾ, ತೆನಿ ಕವ್ಡೆ ಸುಖಿ. ದೆವಾಚ್ಯಾ ದುತಾನ್ ಹೆಬಿ ಮಿಳ್ವುಲ್ಯಾನ್ ಅನಿ, ಹ್ಯಾ ದೆವಾಚ್ಯಾ ಗೊಸ್ಟಿಯಾ ಖರ್‍ಯಾ”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 19:9
27 ತಿಳಿವುಗಳ ಹೋಲಿಕೆ  

ಆ ದೇವದೂತನು ನನಗೆ, “ಈ ವಾಕ್ಯಗಳು ಸತ್ಯವಾದವುಗಳೂ ನಂಬತಕ್ಕವುಗಳೂ ಆಗಿವೆ. ಪ್ರವಾದಿಗಳ ಆತ್ಮಗಳಿಗೆ ಪ್ರಭುವೇ ದೇವರಾಗಿದ್ದಾನೆ. ಬೇಗನೆ ಸಂಭವಿಸಲಿರುವ ಸಂಗತಿಗಳನ್ನು ತನ್ನ ಸೇವಕರಿಗೆ ತೋರಿಸಲು ದೇವರು ತನ್ನ ದೂತನನ್ನು ಕಳುಹಿಸಿದ್ದಾನೆ:


ಸಿಂಹಾಸನದ ಮೇಲೆ ಕುಳಿತಿದ್ದವನು, “ನೋಡು! ನಾನು ಎಲ್ಲವನ್ನೂ ಹೊಸದಾಗಿ ಸೃಷ್ಟಿಸುತ್ತೇನೆ!” ಎಂದು ಹೇಳಿದನು. ನಂತರ ಆತನು, “ಈ ವಾಕ್ಯಗಳು ಸತ್ಯವಾದುವುಗಳೂ ನಂಬತಕ್ಕವುಗಳೂ ಆಗಿರುವುದರಿಂದ ಇವುಗಳನ್ನು ಬರೆ” ಎಂದು ಹೇಳಿದನು.


ಆದ್ದರಿಂದ ನೀನು ನೋಡಿದ ಸಂಗತಿಗಳನ್ನು ಬರೆ. ಈಗ ಸಂಭವಿಸುವ ಸಂಗತಿಗಳನ್ನು ಮತ್ತು ಮುಂದೆ ಸಂಭವಿಸಬೇಕಾದ ಸಂಗತಿಗಳನ್ನು ಬರೆ.


ಇಗೋ, ನಾನು ಬಾಗಿಲ ಬಳಿ ನಿಂತುಕೊಂಡು ತಟ್ಟುತ್ತಿದ್ದೇನೆ. ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ, ನಾನು ಒಳಗೆ ಬಂದು ಅವನೊಂದಿಗೆ ಊಟ ಮಾಡುತ್ತೇನೆ ಮತ್ತು ಅವನು ನನ್ನೊಂದಿಗೆ ಊಟ ಮಾಡುತ್ತಾನೆ.


ಯೆಹೋವನು ನನಗೆ ಹೇಳಿದ್ದು: “ನಾನು ನಿನಗೆ ತೋರಿಸುವದನ್ನು ಬರೆ. ಜನರು ಸುಲಭವಾಗಿ ಓದುವಂತೆ ಅದನ್ನು ದೊಡ್ಡ ಹಲಗೆಗಳ ಮೇಲೆ ಬರೆ.


ನಂತರ ನಾನು ಪರಲೋಕದಿಂದ ಒಂದು ಧ್ವನಿಯನ್ನು ಕೇಳಿದೆನು. ಆ ಧ್ವನಿಯು ಹೀಗೆ ಹೇಳಿತು: “ಇದನ್ನು ಬರೆ: ಇಂದಿನಿಂದ ಪ್ರಭುವಿನ ಭಕ್ತರಾಗಿದ್ದು ಸಾಯುವಂತಹ ಜನರು ಧನ್ಯರು.” “ಹೌದು, ಇದು ನಿಜ. ಆ ಜನರು ತಮ್ಮ ಪ್ರಯಾಸದ ಕೆಲಸವನ್ನು ಮುಗಿಸಿದವರಾಗಿ ವಿಶ್ರಾಂತಿ ಪಡೆಯುತ್ತಾರೆ. ಅವರು ಮಾಡಿದುದೆಲ್ಲವೂ ಅವರೊಂದಿಗೇ ಇರುತ್ತದೆ” ಎಂದು ಪವಿತ್ರಾತ್ಮನು ಹೇಳುತ್ತಾನೆ.


ಅದನ್ನು ನಾನು ಬರೆಯಬೇಕೆಂದಿದ್ದಾಗ ಪರಲೋಕದಿಂದ ಬಂದ ಒಂದು ಧ್ವನಿಯು ನನಗೆ, “ಏಳು ಗುಡುಗುಗಳು ಹೇಳಿದ್ದನ್ನು ನೀನು ಬರೆಯಬೇಡ. ಅವುಗಳನ್ನು ರಹಸ್ಯವಾಗಿಟ್ಟಿರು” ಎಂದು ಹೇಳಿತು.


“ಲವೊದಿಕೀಯದ ಸಭೆಗೆ ಈ ಪತ್ರವನ್ನು ಬರೆ: “ಆಮೆನ್ ಎಂಬಾತನು ಅಂದರೆ ನಂಬಿಗಸ್ತನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಅಧಿಪತಿಯೂ ಆಗಿರುವಾತನು ಹೇಳುವುದೇನೆಂದರೆ:


“ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಪವಿತ್ರನೂ ಸತ್ಯವಂತನೂ ಆಗಿರುವಾತನು ನೀಡುವ ಸಂದೇಶವಿದು: ದಾವೀದನ ಬೀಗದ ಕೈ ನನ್ನಲ್ಲಿದೆ. ನಾನು ತೆರೆದದ್ದನ್ನು ಯಾರೂ ಮುಚ್ಚಲಾರರು; ಮುಚ್ಚಿದ್ದನ್ನು ಯಾರೂ ತೆರೆಯಲಾರರು.


“ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಏಳು ಆತ್ಮಗಳು ಮತ್ತು ಏಳು ನಕ್ಷತ್ರಗಳನ್ನು ಹೊಂದಿರುವಾತನು ಹೇಳುವುದೇನೆಂದರೆ: ನೀನು ಮಾಡುತ್ತಿರುವುದು ನನಗೆ ತಿಳಿದಿದೆ. ನೀನು ಜೀವವುಳ್ಳವನೆಂದು ಜನರು ಹೇಳುತ್ತಾರೆ. ಆದರೆ ನೀನು ನಿಜವಾಗಿಯೂ ಸತ್ತು ಹೋಗಿರುವೆ.


“ಥುವತೈರದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ದೇವಕುಮಾರನು ಈ ಸಂಗತಿಗಳನ್ನು ಹೇಳುತ್ತಾನೆ. ಬೆಂಕಿಯ ಉರಿಯಂತೆ ಪ್ರಜ್ವಲಿಸುವ ಕಣ್ಣುಗಳೂ ಹೊಳೆಯುವ ತಾಮ್ರದಂತಿರುವ ಪಾದಗಳೂ ಇರುವಾತನು, ನಿನಗೆ ಇವುಗಳನ್ನು ಹೇಳುತ್ತಾನೆ.


“ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಹರಿತವಾದ ಇಬ್ಬಾಯಿಖಡ್ಗವನ್ನು ಹೊಂದಿರುವಾತನು ನಿನಗೆ ಇವುಗಳನ್ನು ಹೇಳುತ್ತಾನೆ.


“ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಆದಿಯೂ ಅಂತ್ಯವೂ ಆಗಿರುವಾತನು ನಿನಗೆ ಇವುಗಳನ್ನು ಹೇಳುತ್ತಾನೆ. ಸತ್ತು ಜೀವಂತವಾಗಿ ಎದ್ದುಬಂದಾತನು ಆತನೇ.


“ಎಫೆಸದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ತನ್ನ ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದಿರುವಾತನು ಮತ್ತು ಏಳು ದೀಪಸ್ತಂಭಗಳ ನಡುವೆ ತಿರುಗಾಡುವಾತನು ನಿನಗೆ ಇವುಗಳನ್ನು ಹೇಳುತ್ತಾನೆ.


ಯೆಹೋವನು ಹೇಳಿದ್ದೇನೆಂದರೆ, “ಒಂದು ದೊಡ್ಡ ಸುರುಳಿಯನ್ನು ತಂದು ಅದರ ಮೇಲೆ ಹೀಗೆ ಲೇಖನಿಯಿಂದ ಬರೆ: ‘ಮಹೇರ್ ಶಾಲಾಲ್ ಹಾಷ್ ಬಜ್‌.’” (ಇದರರ್ಥ: “ಕೊಳ್ಳೆಗೆ ಅವಸರ, ಸೂರೆಗೆ ಆತುರ.”)


ಈ ಬೋಧನೆಯು ಸತ್ಯವಾದದ್ದು. ನೀನು ಜನರಿಗೆ ಈ ಸಂಗತಿಗಳನ್ನು ಒತ್ತಿಹೇಳಬೇಕೆಂದು ನಾನು ಅಪೇಕ್ಷಿಸುತ್ತೇನೆ. ಆಗ, ದೇವರಲ್ಲಿ ನಂಬಿಕೆ ಇಟ್ಟಿರುವವರು ಜಾಗರೂಕರಾಗಿದ್ದು ತಮ್ಮ ಜೀವನದಲ್ಲಿ ಒಳ್ಳೆಯ ಕಾರ್ಯಗಳನ್ನು ಮಾಡುವರು. ಇವು ಎಲ್ಲರಿಗೂ ಹಿತಕರವಾಗಿವೆ ಮತ್ತು ಪ್ರಯೋಜನಕರವಾಗಿವೆ.


ಈ ಉಪದೇಶವು ಸತ್ಯವಾದದ್ದು: ನಾವು ಆತನೊಂದಿಗೆ (ಯೇಸು) ಸತ್ತಿದ್ದರೆ, ಆತನೊಡನೆ ಜೀವಿಸುವೆವು.


ಈ ಸಂಗತಿಯು ನಂಬತಕ್ಕದ್ದೂ ಸರ್ವಾಂಗಿಕಾರಕ್ಕೆ ಯೋಗ್ಯವಾದದ್ದೂ ಆಗಿದೆ.


ನಾನು ಹೇಳುತ್ತಿರುವ ಈ ಸಂಗತಿ ಸತ್ಯವಾದದ್ದು. ಆದ್ದರಿಂದ ನೀವು ಅದನ್ನು ಸಂಪೂರ್ಣವಾಗಿ ಒಪ್ಪಿಕೊಳ್ಳಬೇಕು. ಅದೇನೆಂದರೆ: ಪಾಪಿಗಳನ್ನು ರಕ್ಷಿಸುವುದಕ್ಕೆ ಕ್ರಿಸ್ತ ಯೇಸು ಈ ಲೋಕದಲ್ಲಿ ಪ್ರತ್ಯಕ್ಷನಾದನು. ಆ ಪಾಪಿಗಳಲ್ಲಿ ನಾನೇ ಮುಖ್ಯನು.


ಇದರ ನಿಜವಾದ ಅರ್ಥವು ದೇವರ ರಾಜ್ಯದಲ್ಲಿ ನೆರವೇರುವ ತನಕ, ನಾನೆಂದಿಗೂ ಇನ್ನೊಂದು ಪಸ್ಕದ ಊಟವನ್ನು ಮಾಡುವುದೇ ಇಲ್ಲ” ಅಂದನು.


ಇದು ಯೇಸು ಕ್ರಿಸ್ತನ ಪ್ರಕಟನೆ. ದೇವರು ಬೇಗನೆ ಸಂಭವಿಸಲಿರುವುದನ್ನು ತನ್ನ ಸೇವಕರಿಗೆ ತೋರ್ಪಡಿಸುವುದಕ್ಕಾಗಿ ಯೇಸುವಿಗೆ ಇವುಗಳನ್ನು ಪ್ರಕಟಿಸಿದನು. ಕ್ರಿಸ್ತನು ತನ್ನ ಸೇವಕನಾದ ಯೋಹಾನನಿಗೆ ಇವುಗಳನ್ನು ತೋರಿಸಲು ತನ್ನ ದೂತನನ್ನು ಕಳುಹಿಸಿದನು.


ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿದನು. ಏಳು ಪಾತ್ರೆಗಳನ್ನು ಹೊಂದಿದ್ದವರಲ್ಲಿ ಇವನೂ ಒಬ್ಬನಾಗಿದ್ದನು. ಆ ದೇವದೂತನು, “ಬಾ, ಪ್ರಸಿದ್ಧಳಾದ ವೇಶ್ಯಾಸ್ತ್ರೀಗೆ ನೀಡುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ. ಬಹಳ ನೀರುಗಳ ಮೇಲೆ ಕುಳಿತುಕೊಂಡಿರುವವಳು ಅವಳೇ.


ತನ್ನ ಕಾರ್ಯವನ್ನು ಮಾಡಬೇಕೆಂಬ ಬಯಕೆಯನ್ನು ದೇವರು ಆ ಹತ್ತು ರಾಜರುಗಳಲ್ಲಿ ಉಂಟುಮಾಡಿದ್ದರಿಂದ ಅವರು ಆಳಲು ತಮಗಿದ್ದ ಅಧಿಕಾರವನ್ನು ಮೃಗಕ್ಕೆ ಕೊಡಲು ಸಮ್ಮತಿಸಿದರು. ದೇವರು ಹೇಳಿದ್ದೆಲ್ಲ ಸಂಪೂರ್ಣವಾಗಿ ನೆರವೇರುವ ತನಕ ಅವರು ಆಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು