Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 2:10 - ಪರಿಶುದ್ದ ಬೈಬಲ್‌

10 ನಿನಗೆ ಸಂಭವಿಸುವ ಸಂಗತಿಗಳ ವಿಷಯದಲ್ಲಿ ಭಯಪಡಬೇಡ. ನಾನು ನಿನಗೆ ಹೇಳುವುದೇನೆಂದರೆ, ಸೈತಾನನು ನಿಮ್ಮಲ್ಲಿ ಕೆಲವರನ್ನು ಪರೀಕ್ಷಿಸುವುದಕ್ಕಾಗಿ ಸೆರೆಮನೆಗೆ ಹಾಕಿಸುತ್ತಾನೆ. ನೀವು ಹತ್ತು ದಿನಗಳ ಕಾಲ ಸಂಕಟವನ್ನು ಅನುಭವಿಸುವಿರಿ. ನೀನು ಸಾಯಬೇಕಾದರೂ ನಂಬಿಗಸ್ತನಾಗಿದ್ದರೆ, ನಾನು ನಿನಗೆ ಜೀವವೆಂಬ ಕಿರೀಟವನ್ನು ದಯಪಾಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು ಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವ ತನಕ ನಂಬಿಗಸ್ತನಾಗಿರು, ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಿನಗೆ ಬಂದೊದಗಲಿರುವ ಯಾತನೆಯಿಂದಾಗಿ ಎದೆಗುಂದಬೇಡ. ನೋಡು, ಪರಿಶೋಧನೆಗೆ ಗುರಿಯಾಗುವಂತೆ ನಿಮ್ಮಲ್ಲಿ ಕೆಲವರನ್ನು ಸೈತಾನನು ಸೆರೆಮನೆಗೆ ತಳ್ಳುವನು. ಹತ್ತು ದಿನಗಳು ನೀನು ಕಷ್ಟಸಂಕಟಗಳನ್ನು ಅನುಭವಿಸಬೇಕಾಗುವುದು; ಸಾಯಬೇಕಾಗಿ ಬಂದರೂ ಸ್ವಾಮಿನಿಷ್ಠೆಯಿಂದಿರು. ಆಗ ನಾನು ಜೀವವೆಂಬ ಜಯಮಾಲೆಯನ್ನು ನಿನಗೆ ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಿನಗೆ ಸಂಭವಿಸುವದಕ್ಕಿರುವ ಬಾಧೆಗಳಿಗೆ ಹೆದರಬೇಡ. ಇಗೋ ನೀವು ದುಷ್ಪ್ರೇರಣೆಗೆ ಒಳಗಾಗುವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವದಕ್ಕಿದ್ದಾನೆ; ಮತ್ತು ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವದು. ನೀನು ಸಾಯಬೇಕಾದರೂ ನಂಬಿಗಸ್ತನಾಗಿರು; ನಾನು ನಿನಗೆ ಜೀವವೆಂಬ ಜಯಮಾಲೆಯನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಿನಗೆ ಸಂಭವಿಸುವುದಕ್ಕಿರುವ ಬಾಧೆಗಳಿಗೆ ಭಯಪಡಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು, ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕೆ ಇದ್ದಾನೆ. ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವವರೆಗೆ ನಂಬಿಗಸ್ತನಾಗಿರು. ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತುಮ್ಕಾ ಕಸ್ಟ್ ಸೊಸುಕ್ ಪಾಜೆ ಮನುನ್ ತುಮಿ ಭಿಂವ್ನಕಾಶಿ.ಆಯ್ಕಾ! ತುಮ್ಚ್ಯಾತ್ಲ್ಯಾ ಉಲ್ಲ್ಯಾಕ್ನಿ ಬಂದಿಖಾನ್ಯಾತ್ ಘಾಲಿ ಸರ್ಕೆ ಕರುನ್ ಗಿರೊ ತುಮ್ಚಿ ಪರಿಕ್ಷಾ ಕರ್ತಾ ಅನಿ ಧಾ ದಿಸಾತ್ನಿ ಮಟ್ಲ್ಯಾರ್ ತುಮ್ಚೊ ತರಾಸಾಚೊ ಎಳ್ ಸರ್ತಾ. ಮರಿ ಪತರ್‍ಬಿ ತುಮಿ ಮಾಕಾ ವಿಶ್ವಾಸಾನ್ ರ್‍ಹಾವಾ ಅನಿ ಜಿಕಲ್ಲ್ಯಾಚೆ ಮುಕುಟ್ ಮನುನ್ ಜಿವ್ ಮಿಯಾ ತುಮ್ಕಾ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 2:10
36 ತಿಳಿವುಗಳ ಹೋಲಿಕೆ  

ಶೋಧನೆಯನ್ನು ಎದುರಿಸುತ್ತಿದ್ದರೂ ದೃಢವಾಗಿರುವವನೇ ಧನ್ಯನು. ಏಕೆಂದರೆ ಅವನು ತನ್ನ ನಂಬಿಕೆಯನ್ನು ನಿರೂಪಿಸಿದಾಗ, ಜೀವವೆಂಬ ಜಯಮಾಲೆಯನ್ನು ಹೊಂದುವನು. ದೇವರು ತನ್ನನ್ನು ಪ್ರೀತಿಸುವ ಜನರಿಗೆಲ್ಲರಿಗೂ ಇದನ್ನು ವಾಗ್ದಾನ ಮಾಡಿದ್ದಾನೆ.


ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರೆಲ್ಲರೂ ನಿಮ್ಮನ್ನು ದ್ವೇಷಿಸುತ್ತಾರೆ. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆ ಹೊಂದುವನು.


ಪ್ರಧಾನ ಕುರುಬನು (ಕ್ರಿಸ್ತನು) ಪ್ರತ್ಯಕ್ಷನಾದಾಗ, ನಿಮಗೆ ಕಿರೀಟವು ಲಭಿಸುವುದು. ಮಹಾ ಪ್ರಭಾವವನ್ನು ಹೊಂದಿರುವ ಆ ಕಿರೀಟವು ತನ್ನ ಸೌಂದರ್ಯವನ್ನು ಕಳೆದುಕೊಳ್ಳುವುದೇ ಇಲ್ಲ.


ನೀವು ನನ್ನನ್ನು ಹಿಂಬಾಲಿಸುವ ಕಾರಣ ಜನರೆಲ್ಲರೂ ನಿಮ್ಮನ್ನು ದ್ವೇಷಿಸುವರು. ಆದರೆ ಕೊನೆಯವರೆಗೆ ತಾಳುವವನು ರಕ್ಷಣೆ ಹೊಂದುವನು.


ನಮ್ಮ ಹೋರಾಟವು ಜನರ ವಿರುದ್ಧವಲ್ಲ. ನಾವು ಅಂಧಕಾರದ ಅಧಿಪತಿಗಳಿಗೂ ಅಧಿಕಾರಿಗಳಿಗೂ ಮತ್ತು ಈ ಲೋಕದ ಕತ್ತಲೆಯ ಶಕ್ತಿಗಳಿಗೂ ಆಕಾಶಮಂಡಲದ ದುಷ್ಟಶಕ್ತಿಗಳಿಗೂ ವಿರುದ್ಧವಾಗಿ ಹೋರಾಡುತ್ತಿದ್ದೇವೆ.


“ನಿನ್ನ ಸಂಕಟಗಳನ್ನು ನಾನು ಬಲ್ಲೆನು. ನೀನು ಬಡವನೆಂಬುದೂ ನನಗೆ ತಿಳಿದಿದೆ. ಆದರೆ ನೀನು ನಿಜವಾಗಿಯೂ ಶ್ರೀಮಂತ. ನಿನ್ನ ಬಗ್ಗೆ ಕೆಲವು ಜನರು ಹೇಳುವ ಕೆಟ್ಟ ಸಂಗತಿಗಳು ನನಗೆ ತಿಳಿದಿವೆ. ಆ ಜನರು ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುತ್ತಾರೆ. ಆದರೆ ಅವರು ನಿಜವಾದ ಯೆಹೂದ್ಯರಲ್ಲ. ಅವರು ಸೈತಾನನ ಸಮಾಜದವರಾಗಿದ್ದಾರೆ.


ಆದರೆ ಕಡೆಯವರೆಗೂ ದೃಢವಾಗಿರುವವನು ರಕ್ಷಣೆಹೊಂದುತ್ತಾನೆ.


ಸ್ವಸ್ಥಚಿತ್ತರಾಗಿರಿ ಮತ್ತು ಎಚ್ಚರವಾಗಿರಿ! ಸೈತಾನನು ನಿಮ್ಮ ಶತ್ರು. ಗರ್ಜಿಸುವ ಸಿಂಹವು ಯಾರನ್ನು ತಿನ್ನಲಿ ಎಂದು ಹುಡುಕುತ್ತಿರುವಂತೆ ಅವನು ಮನುಷ್ಯನನ್ನು ಹುಡುಕುತ್ತಿದ್ದಾನೆ.


ಪಂದ್ಯಗಳಲ್ಲಿ ಸ್ಪರ್ಧಿಸುವ ಕ್ರೀಡಾಪಟುಗಳು ಪದಕಗಳಿಸಲು ಕಟ್ಟುನಿಟ್ಟಾದ ತರಬೇತಿಯಲ್ಲಿರುತ್ತಾರೆ. ಆದರೆ ಈ ಲೋಕದ ಆ ಪದಕವು ಸ್ವಲ್ಪಕಾಲ ಮಾತ್ರ ಇರುತ್ತದೆ. ಆದರೆ ನಮ್ಮ ಪದಕವು ಶಾಶ್ವತವಾದದ್ದು.


“ಜನರಿಗೆ ಹೆದರಬೇಡಿ. ಅವರು ಶರೀರವನ್ನು ಮಾತ್ರ ಕೊಲ್ಲಬಹುದು. ಆತ್ಮವನ್ನು ಅವರು ಕೊಲ್ಲಲಾರರು. ಶರೀರವನ್ನೂ ಆತ್ಮವನ್ನೂ ನರಕಕ್ಕೆ ಹಾಕಬಲ್ಲ ದೇವರಿಗೆ ಭಯಪಡಿರಿ.


ಕಾವಲುಗಾರನು ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರುಗಳನ್ನು ಹತ್ತು ದಿನಗಳವರೆಗೆ ಪರೀಕ್ಷಿಸಲು ಒಪ್ಪಿಕೊಂಡನು.


ದೇವರ ಪರಿಶುದ್ಧ ಜನರ ವಿರುದ್ಧ ಯುದ್ಧಮಾಡಿ, ಅವರನ್ನು ಸೋಲಿಸುವ ಶಕ್ತಿಯನ್ನು ಮೃಗಕ್ಕೆ ನೀಡಲಾಯಿತು. ಸಕಲ ಕುಲ, ಪ್ರಜೆ, ಭಾಷೆ ಮತ್ತು ಜನಾಂಗಗಳ ಮೇಲಿನ ಅಧಿಕಾರವನ್ನು ಆ ಮೃಗಕ್ಕೆ ಕೊಡಲಾಯಿತು.


ಹೌದು, ಮೊದಲು ನೀವು ಆ ಪಾಪಗಳನ್ನೇ ಮಾಡುತ್ತಿದ್ದಿರಿ. ಈ ಲೋಕದ ಮಾರ್ಗಗಳಿಗನುಸಾರವಾಗಿ ನೀವು ಜೀವಿಸಿದಿರಿ. ವಾಯುಮಂಡಲದಲ್ಲಿರುವ ದುಷ್ಟಶಕ್ತಿಗಳ ಅಧಿಪತಿಯನ್ನು ನೀವು ಅನುಸರಿಸಿದಿರಿ. ದೇವರಿಗೆ ಅವಿಧೇಯರಾದ ಜನರಲ್ಲಿ ಈಗ ಕಾರ್ಯಮಾಡುತ್ತಿರುವುದು ಅದೇ ಆತ್ಮ.


ಯೇಸು ಮತ್ತು ಆತನ ಶಿಷ್ಯರು ರಾತ್ರಿಯ ಊಟಕ್ಕಾಗಿ ಕುಳಿತುಕೊಂಡಿದ್ದರು. ಯೇಸುವಿಗೆ ದ್ರೋಹ ಮಾಡುವಂತೆ ಸೈತಾನನು ಇಸ್ಕರಿಯೋತ ಯೂದನನ್ನು ಈಗಾಗಲೇ ಪ್ರೇರೇಪಿಸಿದ್ದನು. (ಯೂದನು ಸಿಮೋನನ ಮಗ.)


ತನ್ನ ಸ್ವಂತ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುವನು. ಆದರೆ ಈ ಲೋಕದಲ್ಲಿ ತನ್ನ ಪ್ರಾಣವನ್ನು ದ್ವೇಷಿಸುವವನು ಅದನ್ನು ಉಳಿಸಿಕೊಳ್ಳುವನು. ಅವನು ನಿತ್ಯಜೀವವನ್ನು ಹೊಂದುವನು.


“ಆದರೆ ಈ ಎಲ್ಲಾ ಸಂಗತಿಗಳು ಸಂಭವಿಸುವ ಮೊದಲು, ಜನರು ನಿಮ್ಮನ್ನು ಬಂಧಿಸುವರು ಮತ್ತು ಹಿಂಸಿಸುವರು. ಸಭಾಮಂದಿರಗಳಲ್ಲಿ ಜನರು ನಿಮಗೆ ತೀರ್ಪು ನೀಡಿ ಸೆರೆಮನೆಗೆ ಹಾಕುವರು. ರಾಜರ ಮುಂದೆ ಮತ್ತು ರಾಜ್ಯಪಾಲರ ಮುಂದೆ ನಿಮ್ಮನ್ನು ಬಲವಂತವಾಗಿ ನಿಲ್ಲಿಸುವರು. ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರು ನಿಮಗೆ ಹೀಗೆಲ್ಲಾ ಮಾಡುವರು.


ತನ್ನ ಪ್ರಾಣವನ್ನು ಕಾಪಾಡಿಕೊಳ್ಳಲು ಇಚ್ಛಿಸುವವನು ಅದನ್ನು ಕಳೆದುಕೊಳ್ಳುತ್ತಾನೆ. ನನಗಾಗಿ ಹಾಗೂ ಸುವಾರ್ತೆಗಾಗಿ ತನ್ನ ಪ್ರಾಣವನ್ನು ಕೊಡುವ ಪ್ರತಿಯೊಬ್ಬನೂ ತನ್ನ ಪ್ರಾಣವನ್ನು ನಿರಂತರವಾಗಿ ಕಾಪಾಡಿಕೊಳ್ಳುತ್ತಾನೆ.


ಭವಿಷ್ಯದ ಒಂದು ವಿಶೇಷ ಸಮಯದ ಕುರಿತಾಗಿ ಈ ಸಂದೇಶ. ಈ ಸಂದೇಶವು ಅಂತ್ಯದ ವಿಷಯವಾಗಿ ಇದೆ. ಇದು ಖಂಡಿತವಾಗಿಯೂ ನೆರವೇರುತ್ತದೆ. ಆ ಸಮಯವು ಎಂದಿಗೂ ಬರುವುದಿಲ್ಲ ಎಂಬಂತೆ ಕಾಣಬಹುದು. ಆದರೆ ತಾಳ್ಮೆಯಿಂದಿರು; ಅದನ್ನು ನಿರೀಕ್ಷಿಸುತ್ತಾ ಇರು. ಆ ಸಮಯವು ಬರುವದು. ಅದು ತಡವಾಗುವುದಿಲ್ಲ.


ದಾನಿಯೇಲನು ಕಾವಲುಗಾರನಿಗೆ, “ದಯವಿಟ್ಟು ಹತ್ತು ದಿನಗಳವರೆಗೆ ನಮ್ಮನ್ನು ಪರೀಕ್ಷಿಸಿರಿ. ತಿನ್ನುವದಕ್ಕೆ ಕಾಯಿಪಲ್ಯ, ಕುಡಿಯುವದಕ್ಕೆ ನೀರು, ಇವುಗಳ ಹೊರತು ನಮಗೆ ಇನ್ನೇನೂ ಕೊಡಬೇಡಿ.


ಈ ಮೃಗವು ನೋಡಲು ಚಿರತೆ ಯಂತಿತ್ತು. ಅದರ ಪಾದಗಳು ಕರಡಿಯ ಪಾದಗಳಂತಿದ್ದವು. ಅದರ ಬಾಯಿಯು ಸಿಂಹದ ಬಾಯಿಯಂತಿತ್ತು. ಘಟಸರ್ಪವು ಆ ಮೃಗಕ್ಕೆ ತನ್ನ ಶಕ್ತಿಯನ್ನು, ತನ್ನ ಸಿಂಹಾಸನವನ್ನು ಮತ್ತು ಅಧಿಕವಾದ ಅಧಿಕಾರವನ್ನು ನೀಡಿತು.


ಆದರೆ ಪೌಲನು, “ನೀವು ಯಾಕೆ ಅಳುತ್ತಿರುವಿರಿ? ನೀವು ನನಗೆ ಬಹು ದುಃಖವನ್ನು ಯಾಕೆ ಉಂಟು ಮಾಡುತ್ತಿದ್ದೀರಿ? ನಾನು ಜೆರುಸಲೇಮಿನಲ್ಲಿ ಬಂಧಿಸಲ್ಪಡುವುದಕ್ಕಲ್ಲದೆ ಪ್ರಭು ಯೇಸುವಿನ ಹೆಸರಿಗಾಗಿ ಸಾಯುವುದಕ್ಕೂ ಸಿದ್ಧನಾಗಿದ್ದೇನೆ!” ಎಂದು ಹೇಳಿದನು.


ನಾನು ನನ್ನ ಸ್ವಂತ ಪ್ರಾಣದ ಬಗ್ಗೆ ಚಿಂತಿಸುವುದಿಲ್ಲ. ಪ್ರಭುವಾದ ಯೇಸು ನನಗೆ ಕೊಟ್ಟಿರುವ ಕೆಲಸವನ್ನು ಪೂರೈಸುವುದೇ ನನಗೆ ಅತ್ಯಂತ ಮುಖ್ಯವಾಗಿದೆ. ದೇವರ ಕೃಪೆಯ ವಿಷಯವಾದ ಸುವಾರ್ತೆಯ ಬಗ್ಗೆ ಸಾಕ್ಷಿ ನೀಡುವುದೇ ನನ್ನ ಕೆಲಸವಾಗಿದೆ. ಆ ಕೆಲಸವನ್ನು ಮಾಡಿ ಪೂರೈಸುವುದೇ ನನ್ನ ಅಪೇಕ್ಷೆಯಾಗಿದೆ.


ಯೂದನು ಆ ರೊಟ್ಟಿಯನ್ನು ತೆಗೆದುಕೊಂಡಾಗ ಸೈತಾನನು ಅವನೊಳಗೆ ಪ್ರವೇಶಿಸಿದನು. ಯೇಸು ಯೂದನಿಗೆ, “ನೀನು ಮಾಡುವ ಕೆಲಸವನ್ನು ಬೇಗನೆ ಮಾಡು!” ಎಂದು ಹೇಳಿದನು.


ದೇವರ ಭಕ್ತರೇ, ನೀವು ಯೆಹೋವನನ್ನು ಪ್ರೀತಿಸಲೇಬೇಕು! ಆತನು ನಂಬಿಗಸ್ತರನ್ನು ಕಾಪಾಡುವನು; ಗರ್ವಿಷ್ಠರನ್ನಾದರೋ ದಂಡಿಸುವನು.


“ನೀನು ಎಲ್ಲಿ ವಾಸಮಾಡುತ್ತಿರುವೆ ಎಂಬುದು ನನಗೆ ತಿಳಿದಿದೆ. ಸೈತಾನನ ಸಿಂಹಾಸನ ವಿರುವ ಕಡೆಯಲ್ಲಿ ನೀನು ವಾಸಿಸುತ್ತಿರುವೆ. ಆದರೆ ನೀನು ನನಗೆ ನಂಬಿಗಸ್ತನಾಗಿರುವೆ. ಅಂತಿಪನ ಕಾಲದಲ್ಲಿಯೂ ನೀನು ನನ್ನಲ್ಲಿಟ್ಟಿರುವ ನಂಬಿಕೆಯನ್ನು ತಿಳಿಸಲು ನಿರಾಕರಿಸಲಿಲ್ಲ. ನಿನ್ನ ಪಟ್ಟಣದಲ್ಲಿ ಕೊಲ್ಲಲ್ಪಟ್ಟ ಅಂತಿಪನು ನನ್ನ ನಂಬಿಗಸ್ತ ಸಾಕ್ಷಿಯಾಗಿದ್ದನು. ನಿನ್ನ ನಗರ ಸೈತಾನನು ವಾಸಿಸುವ ನಗರವಾಗಿದೆ.


ಈ ಎರಡನೆಯ ಮೃಗವು ಅದ್ಭುತಗಳನ್ನು ಮಾಡಲು ತನಗೆ ನೀಡಿರುವ ಶಕ್ತಿಯಿಂದ ಭೂಮಿಯ ಮೇಲೆ ವಾಸಿಸುವ ಜನರನ್ನು ಮರುಳು ಗೊಳಿಸುತ್ತದೆ. ಮೊದಲನೆಯ ಮೃಗದ ಸೇವೆಯನ್ನು ಮಾಡಲು ಅದು ಈ ಅದ್ಭುತಗಳನ್ನು ಮಾಡುತ್ತದೆ. ಕತ್ತಿಯಿಂದ ಗಾಯಗೊಂಡಿದ್ದೂ ಸಾಯದೆ ಬದುಕಿದ ಮೊದಲನೆಯ ಮೃಗಕ್ಕೆ ಗೌರವ ತೋರಲು ವಿಗ್ರಹವನ್ನು ನಿರ್ಮಿಸುವಂತೆ ಅದು ಜನರಿಗೆ ಆಜ್ಞಾಪಿಸಿತು.


ಅವರು ಕುರಿಮರಿಯಾದಾತನ ವಿರುದ್ಧ ಯುದ್ಧಗಳನ್ನು ಮಾಡುತ್ತಾರೆ. ಆದರೆ ಕುರಿಮರಿಯಾದಾತನು ಪ್ರಭುಗಳ ಪ್ರಭುವಾದ್ದರಿಂದ ಮತ್ತು ರಾಜಾಧಿರಾಜನಾದ್ದರಿಂದ ಅವರನ್ನು ಸೋಲಿಸುತ್ತಾನೆ. ಆತನೊಂದಿಗೆ, ತಾನು ಕರೆದಿರುವ ಜನರು, ಆಯ್ಕೆಮಾಡಿಕೊಂಡಿರುವ ಜನರು ಮತ್ತು ತನ್ನ ನಂಬಿಗಸ್ತ ಹಿಂಬಾಲಕರು ಇದ್ದರು” ಎಂದನು.


ನಾನು ನಿನ್ನನ್ನು ಕರೆದಾಗ, ನೀನು ಸಮೀಪಕ್ಕೆ ಬಂದು, “ಭಯಪಡದಿರು” ಎಂದು ಹೇಳಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು