Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 2:12 - ಪರಿಶುದ್ದ ಬೈಬಲ್‌

12 “ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಹರಿತವಾದ ಇಬ್ಬಾಯಿಖಡ್ಗವನ್ನು ಹೊಂದಿರುವಾತನು ನಿನಗೆ ಇವುಗಳನ್ನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ, ಹರಿತವಾದ ಇಬ್ಬಾಯಿ ಕತ್ತಿಯನ್ನು ಹಿಡಿದಾತನು ಹೇಳುವುದೇನಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ಪೆರ್ಗಮದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಹರಿತವಾದ ಇಬ್ಬಾಯಿಯ ಖಡ್ಗವುಳ್ಳವನು ನೀಡುವ ಸಂದೇಶವಿದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಪೆರ್ಗಮದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಹರಿತವಾದ ಇಬ್ಬಾಯಿಕತ್ತಿಯನ್ನು ಹಿಡಿದವರು ಹೇಳುವುದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಪೆರ್‍ಗಾಮಾಚ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ದೆವ್‍ದುತಾಕ್ ಲಿವ್. ದೊನಿಬಿ ಬಾಜುನ್ ಧಾರ್ ಹೊತ್ತೊ ಕೊಯ್ತೊ ಅಸಲ್ಲ್ಯಾಕ್ನಾ ಯೆಲ್ಲಿ ಬಾತ್ಮಿ ಹಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 2:12
10 ತಿಳಿವುಗಳ ಹೋಲಿಕೆ  

ಆದ್ದರಿಂದ ನಿನ್ನ ಮನಸ್ಸನ್ನು ಪರಿವರ್ತಿಸಿಕೊ! ಇಲ್ಲವಾದರೆ, ನಾನು ತ್ವರಿತವಾಗಿ ನಿನ್ನಲ್ಲಿಗೆ ಬಂದು, ನನ್ನ ಬಾಯಿಂದ ಹೊರಗೆ ಬರುವ ಖಡ್ಗದಿಂದ ಆ ಜನರ ವಿರುದ್ಧ ಹೋರಾಡುತ್ತೇನೆ.


ಆತನು ತನ್ನ ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದುಕೊಂಡಿದ್ದನು. ಆತನ ಬಾಯೊಳಗಿನಿಂದ ಹರಿತವಾದ ಇಬ್ಬಾಯಿಖಡ್ಗವು ಹೊರಬರುತ್ತಿತ್ತು. ಆತನ ಮುಖವು ಮಧ್ಯಾಹ್ನದಲ್ಲಿ ಪ್ರಕಾಶಿಸುವ ಸೂರ್ಯನಂತಿತ್ತು.


ದೇವರ ವಾಕ್ಯವು ಸಜೀವವಾದದ್ದು, ಕಾರ್ಯ ಸಾಧಕವಾದದ್ದು. ಅದು ಅತ್ಯಂತ ಹರಿತವಾದ ಖಡ್ಗಕ್ಕಿಂತಲೂ ಹರಿತವಾಗಿದ್ದು ನಾಟಿಕೊಳ್ಳುತ್ತದೆ. ಆತ್ಮಪ್ರಾಣಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುತ್ತದೆ; ನಮ್ಮ ಹೃದಯದ ಉದ್ದೇಶಗಳನ್ನು ಮತ್ತು ಆಲೋಚನೆಗಳನ್ನು ವಿವೇಚಿಸುತ್ತದೆ.


ಅವರ ಸೈನ್ಯಗಳನ್ನು ಕುದುರೆಯ ಮೇಲೆ ಕುಳಿತಿದ್ದವನ ಬಾಯಿಂದ ಹೊರಬಂದ ಕತ್ತಿಯಿಂದ ಕೊಲ್ಲಲಾಯಿತು. ಈ ದೇಹಗಳನ್ನು ಪಕ್ಷಿಗಳೆಲ್ಲ ಹೊಟ್ಟೆ ತುಂಬುವವರೆಗೆ ತಿಂದವು.


ಕುದುರೆಯ ಮೇಲೆ ಕುಳಿತಿದ್ದಾತನ ಬಾಯಿಂದ ಹರಿತವಾದ ಕತ್ತಿಯೊಂದು ಹೊರಗೆ ಬರುತ್ತಿತ್ತು. ಆತನು ಜನಾಂಗಗಳನ್ನು ಸೋಲಿಸಲು ಈ ಕತ್ತಿಯನ್ನು ಬಳಸುತ್ತಾನೆ. ಆತನು ಕಬ್ಬಿಣದ ಕೋಲಿನಿಂದ ಜನಾಂಗಗಳನ್ನು ಆಳುತ್ತಾನೆ. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ದ್ರಾಕ್ಷಿಯನ್ನು ಕಿವುಚಿ ಹಾಕುತ್ತಾನೆ.


ಆ ಧ್ವನಿಯು, “ನೀನು ನೋಡುವುದನ್ನೆಲ್ಲ ಒಂದು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ ಮತ್ತು ಲವೊದಿಕೀಯ ಎಂಬ ಏಳು ಸಭೆಗಳಿಗೆ ಕಳುಹಿಸು” ಎಂದು ಹೇಳಿತು.


ಆತನು ಬಡಜನರಿಗೆ ಅನ್ಯಾಯಮಾಡದೆ ನ್ಯಾಯವಾದ ತೀರ್ಪನ್ನು ಕೊಡುವನು, ದೇಶದ ಬಡಜನರಿಗೋಸ್ಕರವಾಗಿ ಮಾಡುವ ಆಲೋಚನೆಯನ್ನು ಪಕ್ಷಪಾತವಿಲ್ಲದೆ ಮಾಡುವನು. ಆತನು ಜನರಿಗೆ ಶಿಕ್ಷೆ ಕೊಡಬೇಕೆಂದು ತೀರ್ಮಾನಿಸಿದರೆ ಅದನ್ನು ಆಜ್ಞಾಪಿಸಿ ಶಿಕ್ಷಿಸುವನು. ದುಷ್ಟರಿಗೆ ಮರಣದಂಡನೆಯಾಗಬೇಕೆಂದು ಆತನು ತೀರ್ಮಾನಿಸಿದರೆ, ಆತನು ಆಜ್ಞಾಪಿಸಿ ಕೊಲ್ಲಿಸುವನು. ನ್ಯಾಯವೇ ಆತನಿಗೆ ನಡುಕಟ್ಟು, ಒಳ್ಳೆಯತನವೇ ಆತನಿಗೆ ಸೊಂಟಪಟ್ಟಿಯಾಗಿವೆ.


“ಎಫೆಸದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ತನ್ನ ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದಿರುವಾತನು ಮತ್ತು ಏಳು ದೀಪಸ್ತಂಭಗಳ ನಡುವೆ ತಿರುಗಾಡುವಾತನು ನಿನಗೆ ಇವುಗಳನ್ನು ಹೇಳುತ್ತಾನೆ.


ತನ್ನ ಪರವಾಗಿ ಮಾತನಾಡಲು ಯೆಹೋವನು ನನ್ನನ್ನು ಉಪಯೋಗಿಸುತ್ತಾನೆ. ಹದವಾದ ಕತ್ತಿಯಂತೆ ನನ್ನನ್ನು ಉಪಯೋಗಿಸುತ್ತಾನೆ. ಅದೇ ಸಮಯದಲ್ಲಿ ನನ್ನನ್ನು ತನ್ನ ಕೈಯೊಳಗೆ ಸುರಕ್ಷಿತವಾಗಿ ಇರಿಸುತ್ತಾನೆ. ಯೆಹೋವನು ನನ್ನನ್ನು ಬಾಣದಂತೆ ಉಪಯೋಗಿಸುತ್ತಾನೆ, ಅದೇ ಸಮಯದಲ್ಲಿ ಬತ್ತಳಿಕೆಯಲ್ಲಿ ನನ್ನನ್ನು ಅಡಗಿಸಿಡುತ್ತಾನೆ.


ಏಹೂದನು ತನಗೊಂದು ಖಡ್ಗವನ್ನು ಮಾಡಿಕೊಂಡನು. ಆ ಖಡ್ಗವು ಇಬ್ಬಾಯಿ ಖಡ್ಗವಾಗಿದ್ದು ಹದಿನೆಂಟು ಅಂಗುಲ ಉದ್ದವಾಗಿತ್ತು. ಅದನ್ನು ಅವನು ತನ್ನ ಬಲತೊಡೆಗೆ ಕಟ್ಟಿಕೊಂಡು ತನ್ನ ಬಟ್ಟೆಗಳಿಂದ ಮುಚ್ಚಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು