Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 2:27 - ಪರಿಶುದ್ದ ಬೈಬಲ್‌

27 ‘ಅವನು ಕಬ್ಬಿಣದ ಕೋಲಿನಿಂದ ಅವರನ್ನು ಆಳುತ್ತಾನೆ. ಮಣ್ಣಿನ ಕುಡಿಕೆಗಳೋ ಎಂಬಂತೆ ಅವರನ್ನು ಚೂರುಚೂರು ಮಾಡುತ್ತಾನೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅವನು ಕಬ್ಬಿಣದ ಕೋಲಿನಿಂದ ಅವರನ್ನು ಆಳುವನು; ಮಣ್ಣಿನ ಮಡಿಕೆಗಳು ಒಡೆಯುವಂತೆ ಅವರ ಬಲ ಮುರಿದು ಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನಾನು ನನ್ನ ತಂದೆಯಿಂದ ಹೊಂದಿದ ಅಧಿಕಾರದಂತೆ, ‘ಅವರು ಕಬ್ಬಿಣದ ಕೋಲಿನಿಂದ ರಾಷ್ಟ್ರಗಳನ್ನು ಆಳುವರು. ಮಣ್ಣಿನ ಮಡಿಕೆಗಳು ಒಡೆಯುವಂತೆ ಬಲ ಮುರಿದು ಹೋಗುವುದು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಅನಿ ತೊ ಎಕ್ ಲೊಂಗ್ಟಾಚ್ಯಾ ಸೊಳ್ಳಿನ್ ತೆಂಚೆ ವರ್ತಿ ಅಧಿಕಾರ್ ಚಾಲ್ವುತಾ. ಎಕ್ ಮಾಟಿನ್ ಕರಲ್ಲ್ಯಾ ಗಾಡ್ಗ್ಯಾ ಸರ್ಕೆ ತೊ ತುಕ್ಡೆತುಕ್ಡೆ ಕರ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 2:27
12 ತಿಳಿವುಗಳ ಹೋಲಿಕೆ  

ಆ ಸ್ತ್ರೀಯು ಅವನು ಎಲ್ಲಾ ಜನಾಂಗಗಳನ್ನು ಕಬ್ಬಿಣದ ಕೋಲಿನಿಂದ ಆಳುವ ಒಂದು ಗಂಡು ಮಗುವನ್ನು ಹೆತ್ತಳು. ಅವಳ ಮಗುವನ್ನು ದೇವರ ಬಳಿಗೂ ಆತನ ಸಿಂಹಾಸನದ ಬಳಿಗೂ ತೆಗೆದುಕೊಂಡು ಹೋಗಲಾಯಿತು.


ಕುದುರೆಯ ಮೇಲೆ ಕುಳಿತಿದ್ದಾತನ ಬಾಯಿಂದ ಹರಿತವಾದ ಕತ್ತಿಯೊಂದು ಹೊರಗೆ ಬರುತ್ತಿತ್ತು. ಆತನು ಜನಾಂಗಗಳನ್ನು ಸೋಲಿಸಲು ಈ ಕತ್ತಿಯನ್ನು ಬಳಸುತ್ತಾನೆ. ಆತನು ಕಬ್ಬಿಣದ ಕೋಲಿನಿಂದ ಜನಾಂಗಗಳನ್ನು ಆಳುತ್ತಾನೆ. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ದ್ರಾಕ್ಷಿಯನ್ನು ಕಿವುಚಿ ಹಾಕುತ್ತಾನೆ.


ಒಂದು ದೊಡ್ಡ ಆವೆಮಣ್ಣಿನ ಭರಣಿ ನಚ್ಚುನೂರಾಗಿ ಹೋಗುವಂತೆ ನೀವಿದ್ದೀರಿ. ಅದರ ತುಂಡುಗಳಿಂದ ಏನೂ ಪ್ರಯೋಜನವಿಲ್ಲ. ಆ ಭರಣಿಯ ಚೂರಿನಿಂದ ಸುಡುವ ಕಲ್ಲಿದ್ದಲನ್ನು ಹೊರತೆಗೆಯಲು ಅಥವಾ ಅದರಿಂದ ನೀರು ಸೇದಲು ಆಗುವದಿಲ್ಲ.”


“ನನ್ನ ತಂದೆ ನನಗೆ ಎಲ್ಲವನ್ನು ಕೊಟ್ಟಿದ್ದಾನೆ. ಯಾವನೂ ಮಗನನ್ನು ಅರಿತಿಲ್ಲ. ತಂದೆ ಮಾತ್ರ ಮಗನನ್ನು ಅರಿತಿದ್ದಾನೆ. ಯಾವನೂ ತಂದೆಯನ್ನು ಅರಿತಿಲ್ಲ. ಮಗನು ಮಾತ್ರ ತಂದೆಯನ್ನು ಅರಿತಿದ್ದಾನೆ. ಮಗನು ತಂದೆಯನ್ನು ಯಾರಿಗೆ ಪ್ರಕಟಿಸಬೇಕೆಂದು ಇಷ್ಟಪಡುತ್ತಾನೋ ಅವರು ತಂದೆಯನ್ನು ತಿಳಿದುಕೊಳ್ಳುತ್ತಾರೆ.


“ತಂದೆಯೇ, ನೀನು ನನಗೆ ಕೊಟ್ಟಿರುವ ಇವರು, ನಾನು ಇರುವಲ್ಲೆಲ್ಲಾ ನನ್ನೊಂದಿಗೆ ಇರಬೇಕೆಂದು ಮತ್ತು ನನ್ನ ಮಹಿಮೆಯನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ. ಈ ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲೇ ನೀನು ನನ್ನನ್ನು ಪ್ರೀತಿಸಿದ್ದರಿಂದ ನೀನೇ ನನಗೆ ಈ ಮಹಿಮೆಯನ್ನು ಕೊಟ್ಟೆ.


ನನ್ನ ತಂದೆ ನನಗೆ ರಾಜ್ಯವನ್ನು ಕೊಟ್ಟಿದ್ದಾನೆ. ನನ್ನ ಸಂಗಡ ಆಳುವುದಕ್ಕೆ ನಾನು ಸಹ ನಿಮಗೆ ಅಧಿಕಾರ ಕೊಡುತ್ತೇನೆ.


ಹೀಗೆ ಹೇಳು: ‘ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ಈ ಮಣ್ಣಿನ ಕೊಡವನ್ನು ಒಡೆದುಹಾಕಿದಂತೆ ನಾನು ಯೆಹೂದ ಜನಾಂಗವನ್ನು ಮತ್ತು ಜೆರುಸಲೇಮ್ ನಗರವನ್ನು ಒಡೆದುಹಾಕುವೆನು. ಈ ಕೊಡವನ್ನು ಪುನಃ ಜೋಡಿಸಲು ಸಾಧ್ಯವಿಲ್ಲ. ಯೆಹೂದ ಜನಾಂಗದ ಸ್ಥಿತಿಯೂ ಹೀಗೆಯೇ ಆಗುವುದು. ತೋಫೆತಿನಲ್ಲಿ ಸ್ಥಳವಿಲ್ಲದಂತಾಗುವವರೆಗೂ ಸತ್ತವರನ್ನು ಅಲ್ಲಿ ಹೂಳಲಾಗುವುದು.


ಅವರು ಕುರಿಗಳಂತಿದ್ದಾರೆ. ಸಮಾಧಿಯೇ ಅವರ ಕೊಟ್ಟಿಗೆ. ಮರಣವೇ ಅವರ ಕುರುಬ. ಒಂದು ಮುಂಜಾನೆ, ಅವರ ದೇಹಗಳು ಅವರ ಮನೆಗಳಿಂದ ದೂರವಾಗಿ ಸಮಾಧಿಯಲ್ಲಿ ಕೊಳೆಯುತ್ತಿರಲು, ನೀತಿವಂತರು ಜಯಶಾಲಿಗಳಾಗಿರುವರು.


ಪುರಾತನ ರಾಜನು ಬಂದು ನ್ಯಾಯತೀರಿಸುವವರೆಗೂ ಆ ಚಿಕ್ಕಕೊಂಬು ದೇವಭಕ್ತರ ಕೊಲೆ ಮಾಡುತ್ತಿತ್ತು. ಪುರಾತನ ರಾಜನು ಈ ಚಿಕ್ಕ ಕೊಂಬಿನ ಬಗ್ಗೆ ತೀರ್ಪನ್ನು ಕೊಟ್ಟನು. ಈ ತೀರ್ಪು ದೇವಭಕ್ತರ ಪರವಾಗಿತ್ತು. ಆದ್ದರಿಂದ ಅವರು ಸಾಮ್ರಾಜ್ಯವನ್ನು ಪಡೆದರು.


ಆದರೆ ದೇವರ ವಿಶೇಷ ಜನರಿಗೆ ಆ ಸಾಮ್ರಾಜ್ಯಗಳು ದೊರೆಯುವವು. ಅವರು ಆ ಸಾಮ್ರಾಜ್ಯವನ್ನು ಶಾಶ್ವತವಾಗಿ ಅನುಭವಿಸುವರು’ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು