7 “ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. ಯಾವನು ಜಯಗಳಿಸುತ್ತಾನೋ ಅವನಿಗೆ ತಿನ್ನಲು ಜೀವದಾಯಕ ಮರದ ಹಣ್ಣನ್ನು ಕೊಡುತ್ತೇನೆ. ಈ ಮರವು ದೇವರ ತೋಟದಲ್ಲಿದೆ.
7 ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾರು ಜಯಹೊಂದುತ್ತಾನೋ ಅಂಥವನಿಗೆ ದೇವರ ಪರಂಧಾಮದಲ್ಲಿ ಇರುವ ಜೀವವೃಕ್ಷದ ಫಲವನ್ನು ಸವಿಯುವ ಸೌಭಾಗ್ಯವನ್ನು ನಾನು ಅನುಗ್ರಹಿಸುತ್ತೇನೆ.
“ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. “ಜಯಗಳಿಸಿದ ಪ್ರತಿಯೊಬ್ಬ ವ್ಯಕ್ತಿಗೂ ನಾನು ಅಡಗಿಸಿಟ್ಟಿರುವ ಮನ್ನವನ್ನು ಕೊಡುತ್ತೇನೆ. ಅವನಿಗೆ ನಾನು ಬಿಳುಪಾದ ಕಲ್ಲನ್ನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಹೊಸ ಹೆಸರನ್ನು ಕೆತ್ತಲಾಗಿದೆ. ಈ ಹೊಸ ಹೆಸರು ಯಾರಿಗೂ ತಿಳಿದಿಲ್ಲ. ಈ ಕಲ್ಲನ್ನು ಪಡೆದುಕೊಂಡ ವ್ಯಕ್ತಿಯು ಮಾತ್ರ ಹೊಸ ಹೆಸರನ್ನು ತಿಳಿದುಕೊಳ್ಳುತ್ತಾನೆ.
ದೇವರಾದ ಯೆಹೋವನು ಆ ತೋಟದಲ್ಲಿ ಸುಂದರವಾದ ಪ್ರತಿಯೊಂದು ಮರವನ್ನು ಮತ್ತು ಊಟಕ್ಕೆ ಬೇಕಾದ ಒಳ್ಳೆಯ ಹಣ್ಣುಗಳನ್ನು ಬಿಡುವ ಪ್ರತಿಯೊಂದು ಮರವನ್ನು ಬೆಳೆಸಿದನು. ಇದಲ್ಲದೆ ತೋಟದ ಮಧ್ಯಭಾಗದಲ್ಲಿ ಜೀವದಾಯಕ ಮರವನ್ನೂ ಅಲ್ಲದೆ ಒಳ್ಳೆಯದರ ಮತ್ತು ಕೆಟ್ಟದ್ದರ ಬಗ್ಗೆ ಜ್ಞಾನ ಕೊಡುವ ಮರವನ್ನೂ ಬೆಳೆಸಿದನು.
ಆತ್ಮನೂ ಮದುಮಗಳೂ, “ಬಾ!” ಎನ್ನುತ್ತಾರೆ. ಇದನ್ನು ಕೇಳುವ ಪ್ರತಿಯೊಬ್ಬ ವ್ಯಕ್ತಿಯೂ, “ಬಾ!” ಎಂದು ಹೇಳಬೇಕು. ಬಾಯಾರಿದವನು ನನ್ನ ಬಳಿಗೆ ಬರಲಿ; ಅವನಿಗೆ ಇಷ್ಟವಿದ್ದರೆ ಜೀವಜಲವನ್ನು ಉಚಿತವಾಗಿ ಪಡೆದುಕೊಳ್ಳಲಿ.
ಒಬ್ಬ ವ್ಯಕ್ತಿಯ ಅಂತರಂಗದೊಳಕ್ಕೆ ಹೋಗಿ ಅವನನ್ನು ಅಶುದ್ಧನನ್ನಾಗಿ ಮಾಡುವಂಥದ್ದು ಯಾವುದೂ ಇಲ್ಲ. ಒಬ್ಬ ವ್ಯಕ್ತಿಯ ಒಳಗಿಂದ ಬಂದ ಸಂಗತಿಗಳೇ ಅವನನ್ನು ಅಶುದ್ಧನನ್ನಾಗಿ ಮಾಡುತ್ತವೆ” ಎಂದು ಹೇಳಿದನು.
ನಗರದ ಬೀದಿಯ ಮಧ್ಯಭಾಗದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲಿಯೂ ಜೀವವೃಕ್ಷಗಳಿದ್ದ್ದವು. ಆ ಜೀವವೃಕ್ಷವು ಪ್ರತಿತಿಂಗಳು ಫಲವನ್ನು ಫಲಿಸುತ್ತಾ ವರ್ಷದಲ್ಲಿ ಹನ್ನೆರಡು ತರದ ಫಲಗಳನ್ನು ನೀಡುತ್ತದೆ. ಆ ವೃಕ್ಷದ ಎಲೆಗಳು ಜನಾಂಗದವರನ್ನು ಗುಣಪಡಿಸುತ್ತವೆ.
“ನೀವು ನನ್ನಲ್ಲಿ ಶಾಂತಿಯನ್ನು ಹೊಂದಿದವರಾಗಿರಬೇಕೆಂದು ನಾನು ನಿಮಗೆ ಈ ಸಂಗತಿಗಳನ್ನೆಲ್ಲಾ ಹೇಳಿದ್ದೇನೆ. ಈ ಲೋಕದಲ್ಲಿ ನಿಮಗೆ ಸಂಕಟವಿದೆ. ಆದರೆ ಧೈರ್ಯದಿಂದಿರಿ! ನಾನು ಈ ಲೋಕವನ್ನು ಸೋಲಿಸಿದ್ದೇನೆ!” ಎಂದು ಹೇಳಿದನು.
ದೇವರ ಉದ್ಯಾನವನವಾಗಿದ್ದ ಏದೆನಿನಲ್ಲಿ ನೀನಿದ್ದೆ. ನಿನ್ನ ಬಳಿಯಲ್ಲಿ ಬಂಗಾರದ ಚೌಕಟ್ಟಿನಲ್ಲಿ ಕುಳ್ಳಿರಿಸಿದ ವಜ್ರ, ವೈಢೂರ್ಯ, ನವರತ್ನಗಳ ಆಭರಣಗಳಿದ್ದವು. ನೀನು ಸೃಷ್ಟಿಸಲ್ಪಟ್ಟ ದಿನದಲ್ಲಿ ಈ ಸೌಂದರ್ಯವು ನಿನಗೆ ಕೊಡಲ್ಪಟ್ಟಿತು. ದೇವರು ನಿನ್ನನ್ನು ಬಲಾಢ್ಯನನ್ನಾಗಿ ಮಾಡಿದನು.
ದೇವರ ತೋಟದಲ್ಲಿರುವ ದೇವದಾರು ಮರಗಳೂ ಈ ಮರದಷ್ಟು ಎತ್ತರವಾಗಿರಲಿಲ್ಲ. ಈ ಮಹಾ ಮರಕ್ಕಿರುವಷ್ಟು ಕೊಂಬೆಗಳು ಸೈಪ್ರಸ್ ಮರಗಳಿಗೂ ಇಲ್ಲ. ದೇವರ ತೋಟದಲ್ಲಿದ್ದ ಯಾವ ಮರವಾದರೂ ಇದರಷ್ಟು ಅಂದವಾಗಿರಲಿಲ್ಲ.
ಬೆಂಕಿಯನ್ನು ಬೆರಸಿದ ಗಾಜಿನ ಸಮುದ್ರದಂತೆ ಕಾಣಿಸುವ ಏನೋ ಒಂದು ನನಗೆ ಕಾಣಿಸಿತು. ಮೃಗವನ್ನು, ಅದರ ವಿಗ್ರಹವನ್ನು ಮತ್ತು ಅದರ ಹೆಸರಿನ ಸಂಖ್ಯೆಯನ್ನು ಸೋಲಿಸಿ ಜಯಗಳಿಸಿದವರೆಲ್ಲರೂ ಸಮುದ್ರ ತೀರದಲ್ಲಿ ನಿಂತಿದ್ದರು. ದೇವರು ಅವರಿಗೆ ನೀಡಿದ ತಂತಿವಾದ್ಯಗಳು ಅವರಲ್ಲಿದ್ದವು.
ನಂತರ ನಾನು ಪರಲೋಕದಿಂದ ಒಂದು ಧ್ವನಿಯನ್ನು ಕೇಳಿದೆನು. ಆ ಧ್ವನಿಯು ಹೀಗೆ ಹೇಳಿತು: “ಇದನ್ನು ಬರೆ: ಇಂದಿನಿಂದ ಪ್ರಭುವಿನ ಭಕ್ತರಾಗಿದ್ದು ಸಾಯುವಂತಹ ಜನರು ಧನ್ಯರು.” “ಹೌದು, ಇದು ನಿಜ. ಆ ಜನರು ತಮ್ಮ ಪ್ರಯಾಸದ ಕೆಲಸವನ್ನು ಮುಗಿಸಿದವರಾಗಿ ವಿಶ್ರಾಂತಿ ಪಡೆಯುತ್ತಾರೆ. ಅವರು ಮಾಡಿದುದೆಲ್ಲವೂ ಅವರೊಂದಿಗೇ ಇರುತ್ತದೆ” ಎಂದು ಪವಿತ್ರಾತ್ಮನು ಹೇಳುತ್ತಾನೆ.
ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದವು. ಈ ಬೀಜಗಳು ಮೊಳೆತು ಬೆಳೆದು ನೂರರಷ್ಟು ಹೆಚ್ಚು ಫಲವನ್ನು ಕೊಟ್ಟವು.” ಯೇಸು ಈ ಸಾಮ್ಯವನ್ನು ಹೇಳಿ ಮುಗಿಸಿದ ಮೇಲೆ, “ನನ್ನ ಮಾತನ್ನು ಆಲಿಸುತ್ತಿರುವ ಜನರೇ, ಕೇಳಿರಿ” ಎಂದು ಹೇಳಿದನು.