Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 20:10 - ಪರಿಶುದ್ದ ಬೈಬಲ್‌

10 ಸೈತಾನನನ್ನು (ಇವನೇ ಜನರನ್ನು ಮೋಸಗೊಳಿಸಿದವನು.) ಬೆಂಕಿಗಂಧಕಗಳು ಉರಿಯುತ್ತಿದ್ದ ಕೆರೆಗೆ ಎಸೆಯಲಾಯಿತು. ಅಲ್ಲಿ ಮೃಗವೂ ಇತ್ತು, ಸುಳ್ಳುಪ್ರವಾದಿಗಳೂ ಇದ್ದರು. ಅಲ್ಲಿ ಅವರು ಹಗಲಿರುಳು ಎಂದೆಂದಿಗೂ ಹಿಂಸೆ ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿ ಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ ಮೃಗವೂ, ಸುಳ್ಳುಪ್ರವಾದಿಯೂ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಜನರನ್ನು ಮರುಳುಗೊಳಿಸುತ್ತಿದ್ದ ಪಿಶಾಚಿಯನ್ನು ಗಂಧಕದ ಅಗ್ನಿ ಸರೋವರಕ್ಕೆ ಎಸೆಯಲಾಯಿತು. ಆ ಮೃಗವನ್ನೂ ಕಪಟ ಪ್ರವಾದಿಯನ್ನೂ ಮೊದಲೇ ಅದಕ್ಕೆ ಎಸೆಯಲಾಗಿತ್ತು. ಇವರೆಲ್ಲರೂ ಯುಗಯುಗಾಂತರಗಳವರೆಗೆ ಹಗಲಿರುಳೆನ್ನದೆ ಅಲ್ಲಿಯೇ ಬೇನೆಬೇಗುದಿಗಳಿಂದ ನರಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲಾಯಿತು. ಅಲ್ಲಿ ಮೃಗವೂ ಸುಳ್ಳು ಪ್ರವಾದಿ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಮಾನಾ ತೆಂಕಾ ಪಸ್ವಲ್ಲ್ಯಾ ಗಿರೊ ತ್ಯಾ ಭಯಾನಕ್ ಸಾಪ್ ಅನಿ ಝುಟ್ಯಾ ಪ್ರವಾದ್ಯಾಕ್ ಅದ್ದಿಚ್ ಟಾಕಲ್ಲ್ಯಾ ಗಂದಕಾಚ್ಯಾ ಆಗಿಚ್ಯಾ ಸಮುಂದರಾತ್ ಟಾಕುನ್ ಹೊತಾ; ಅನಿ ಥೈ ತೆನಿ ಸದಾ ಸರ್ವತಾಕ್ ದಿಸ್ ಅನಿ ರಾತ್ ವಳ್ಮಳುನ್ಗೆತ್ ರ್‍ಹಾತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 20:10
12 ತಿಳಿವುಗಳ ಹೋಲಿಕೆ  

“ಆಮೇಲೆ ರಾಜನು ತನ್ನ ಎಡಗಡೆಯಿದ್ದ ಜನರಿಗೆ, ‘ನನ್ನಿಂದ ತೊಲಗಿಹೋಗಿರಿ, ನಿಮಗೆ ಶಿಕ್ಷೆಯಾಗಬೇಕೆಂದು ದೇವರು ತೀರ್ಮಾನಿಸಿದ್ದಾನೆ. ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.


“ಆಗ ಕೆಟ್ಟಜನರು ಅಲ್ಲಿಂದ ಹೊರಟುಹೋಗುವರು. ಅವರಿಗೆ ನಿತ್ಯದಂಡನೆಯಾಗುವುದು. ಒಳ್ಳೆಯ ಜನರಾದರೋ ನಿತ್ಯಜೀವವನ್ನು ಹೊಂದುವರು.”


ಸೈತಾನನು ಗೋಗ್ ಮತ್ತು ಮಾಗೋಗ್ ಜನಾಂಗಗಳನ್ನು ಮರುಳುಗೊಳಿಸಲು ಭೂಲೋಕದಲ್ಲೆಲ್ಲಾ ಹೋಗಿ ಆ ಜನರನ್ನು ಯುದ್ಧಕ್ಕೆ ಒಟ್ಟುಗೂಡಿಸುತ್ತಾನೆ. ಅವರು ಸಮುದ್ರ ತೀರದ ಮರಳಿನ ಕಣಗಳಂತೆ ಅಸಂಖ್ಯಾತವಾಗಿರುತ್ತಾರೆ.


ಆಗ ಕಪ್ಪೆಗಳಂತಿದ್ದ ಮೂರು ಅಶುದ್ಧಾತ್ಮಗಳನ್ನು ನಾನು ನೋಡಿದೆನು. ಅವು ಘಟಸರ್ಪದ ಬಾಯಿಂದ, ಮೃಗದ ಬಾಯಿಂದ ಮತ್ತು ಸುಳ್ಳುಪ್ರವಾದಿಯ ಬಾಯಿಂದ ಹೊರಗೆ ಬಂದವು.


“ನಾನು ನೋಡುತ್ತಲೇ ಇದ್ದುಬಿಟ್ಟೆ. ಏಕೆಂದರೆ ಆ ಚಿಕ್ಕ ಕೊಂಬು ಜಂಬ ಕೊಚ್ಚಿಕೊಳ್ಳುತ್ತಿತ್ತು. ಕೊನೆಗೆ ನಾಲ್ಕನೆ ಮೃಗವು ಕೊಲ್ಲಲ್ಪಟ್ಟಿತು. ಅದರ ಹೆಣವನ್ನು ಉರಿಯುವ ಬೆಂಕಿಗೆ ಹಾಕಿ ನಾಶಮಾಡಲಾಯಿತು.


“ಸುಳ್ಳುಪ್ರವಾದಿಗಳ ಬಗ್ಗೆ ಎಚ್ಚರವಾಗಿರಿ. ಅವರು ಕುರಿಗಳ ಹಾಗೆ ಕಾಣಿಸಿಕೊಂಡು ನಿಮ್ಮ ಬಳಿಗೆ ಬರುತ್ತಾರೆ. ಆದರೆ ಅವರು ತೋಳಗಳಂತೆ ನಿಜವಾಗಿಯೂ ಅಪಾಯಕಾರಿಗಳಾಗಿದ್ದಾರೆ.


ನಾನು ದರ್ಶನದಲ್ಲಿ ಕುದುರೆಗಳನ್ನೂ ಕುದುರೆಗಳ ಮೇಲಿದ್ದ ಸವಾರರನ್ನೂ ನೋಡಿದೆನು. ಅವರು ಹೀಗೆ ಕಾಣುತ್ತಿದ್ದರು: ಅವರು ಬೆಂಕಿಯಂತೆ ಕೆಂಪಾದ, ಕಪ್ಪಾದ, ನೀಲಿಯ ಮತ್ತು ಗಂಧಕದಂತೆ ಹಳದಿಯಾದ ಕವಚಗಳನ್ನು ಹೊಂದಿದ್ದರು. ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತೆ ಕಾಣುತ್ತಿದ್ದವು. ಕುದುರೆಗಳ ಬಾಯಿಂದ ಬೆಂಕಿ, ಹೊಗೆ ಮತ್ತು ಗಂಧಕಗಳು ಬರುತ್ತಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು