Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 20:3 - ಪರಿಶುದ್ದ ಬೈಬಲ್‌

3 ಆ ದೇವದೂತನು ಘಟಸರ್ಪವನ್ನು ತಳವಿಲ್ಲದ ಕೂಪಕ್ಕೆ ತಳ್ಳಿ ಬಾಗಿಲನ್ನು ಮುಚ್ಚಿ ಬೀಗಹಾಕಿದನು, ಆ ಘಟಸರ್ಪವು ಒಂದುಸಾವಿರ ವರ್ಷಗಳ ಕಾಲ ಮುಗಿಯುವ ತನಕ ಲೋಕದ ಜನರನ್ನು ಮರುಳು ಮಾಡದಿರಲೆಂದು ಆ ದೇವದೂತನು ಹೀಗೆ ಮಾಡಿದನು. ಒಂದುಸಾವಿರ ವರ್ಷಗಳ ತರುವಾಯ ಆ ಘಟಸರ್ಪಕ್ಕೆ ಸ್ವಲ್ಪಕಾಲ ಬಿಡುಗಡೆ ಮಾಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆ ಸಾವಿರ ವರ್ಷ ಮುಗಿಯುವ ತನಕ ಸೈತಾನನು ಇನ್ನೂ ಜನಾಂಗಗಳನ್ನು ಮೋಸಗೊಳಿಸದಂತೆ ದೇವದೂತನು ಅವನನ್ನು ಅಧೋಲೋಕಕ್ಕೆ ತಳ್ಳಿ ಬಾಗಿಲು ಮುಚ್ಚಿ ಅದಕ್ಕೆ ಮುದ್ರೆಹಾಕಿದನು. ಆ ಸಾವಿರ ವರ್ಷಗಳಾದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆ ಒಂದು ಸಾವಿರ ವರ್ಷಗಳ ಕಾಲದವರೆಗೆ, ಅದು ಜನಾಂಗಗಳನ್ನು ಮರುಳುಗೊಳಿಸದಂತೆ ದೇವದೂತನು ಸೈತಾನನನ್ನು ಪಾತಾಳಕ್ಕೆ ದಬ್ಬಿ, ಬಾಗಿಲು ಮುಚ್ಚಿ, ಅದಕ್ಕೆ ಮುದ್ರೆ ಹಾಕಿದನು. ಆ ಸಾವಿರ ವರ್ಷಗಳ ಕಾಲ ಮುಗಿದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆ ದೊರೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆ ಸಾವಿರ ವರುಷ ತೀರುವ ತನಕ ಸೈತಾನನು ಇನ್ನೂ ಜನಗಳನ್ನು ಮರುಳುಗೊಳಿಸದ ಹಾಗೆ ದೇವದೂತನು ಅವನನ್ನು ಅಧೋಲೋಕದಲ್ಲಿ ದೊಬ್ಬಿ ಬಾಗಿಲು ಮುಚ್ಚಿ ಅದಕ್ಕೆ ಮುದ್ರೆಹಾಕಿದನು. ಆ ಸಾವಿರ ವರುಷಗಳಾದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆ ಸಾವಿರ ವರ್ಷ ತೀರುವ ತನಕ ಅವನು ಇನ್ನೂ ಜನಾಂಗಗಳನ್ನು ಮೋಸಗೊಳಿಸದಂತೆ ದೂತನು ಅವನನ್ನು ಅಧೋಲೋಕದಲ್ಲಿ ತಳ್ಳಿ, ಬಾಗಿಲು ಮುಚ್ಚಿ ಅದಕ್ಕೆ ಮುದ್ರೆ ಹಾಕಿದನು. ಇವುಗಳಾದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆಯಾಗತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಹಜಾರ್ ವರ್ಸಾ ಸರಿ ಪತರ್ ಅನಿಫಿಡೆ ದೆಶಾಂಚ್ಯಾ ಲೊಕಾಕ್ನಿ ತೆನಿ ಪಸ್ವಿನಸ್ತಾನಾ ರ್‍ಹಾವ್‍ಸಾಟ್ನಿ, ದೆವಾಚ್ಯಾ ದುತಾನ್ ತೆಕಾ ಪಾತಾಳಾತ್ ಟಾಕ್ಲ್ಯಾನ್, ಅನಿ ಚಾವಿ ಲಾವುನ್ ಛಪ್ಪೊ ಮಾರುನ್ ಬಂದೊಬಸ್ತ್ ಕರ್ಲ್ಯಾನ್. ತ್ಯೆಚ್ಯಾ ಮಾನಾ ತೆಕಾ ಉಲ್ಲ್ಯಾ ಎಳಾ ಪತರ್ ಸೈಲ್ ಸೊಡುನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 20:3
17 ತಿಳಿವುಗಳ ಹೋಲಿಕೆ  

ಆಗ ಒಬ್ಬ ದೇವದೂತನು ಪರಲೋಕದಿಂದ ಬರುತ್ತಿರುವುದನ್ನು ನಾನು ನೋಡಿದೆನು. ಆ ದೇವದೂತನು ತಳವಿಲ್ಲದ ಕೂಪದ ಬೀಗದ ಕೈಯನ್ನು ಹೊಂದಿದ್ದನು ಮತ್ತು ಒಂದು ದೊಡ್ಡ ಸರಪಣಿಯನ್ನೂ ತನ್ನ ಕೈಯಲ್ಲಿ ಹಿಡಿದಿದ್ದನು.


ನೀನು ನೋಡಿದ ಆ ಮೃಗವು ಒಂದು ಕಾಲದಲ್ಲಿ ಜೀವಿಸಿತ್ತು. ಆದರೆ ಈಗ ಆ ಮೃಗವು ಜೀವಂತವಾಗಿಲ್ಲ. ಆದರೆ ಆ ಮೃಗವು ತಳವಿಲ್ಲದ ಕೂಪದಿಂದ ಜೀವಂತವಾಗಿ ಮೇಲೆದ್ದುಬಂದು ನಾಶವಾಗು ವುದು. ಲೋಕದಲ್ಲಿ ಜೀವಿಸುತ್ತಿರುವ ಜನರು ಆ ಮೃಗವನ್ನು ನೋಡಿ, ಅದು ಒಂದು ಕಾಲದಲ್ಲಿ ಜೀವಂತವಾಗಿತ್ತು, ಈಗ ಇಲ್ಲ, ಆದರೆ ಮತ್ತೆ ಬರುವುದು ಎಂಬುದನ್ನು ತಿಳಿದು ಅವರು ಆಶ್ಚರ್ಯಪಡುವರು. ಲೋಕವು ಸೃಷ್ಟಿಯಾದಂದಿನಿಂದ ಜೀವಬಾಧ್ಯರ ಪುಸ್ತಕದಲ್ಲಿ ಈ ಜನರ ಹೆಸರುಗಳನ್ನು ಬರೆದೇ ಇಲ್ಲ.


ಕೂಡಲೆ ಒಂದು ದೊಡ್ಡ ಕಲ್ಲುಬಂಡೆಯನ್ನು ತಂದು ಆ ಸಿಂಹದ ಗುಹೆಯ ಬಾಯಿಯನ್ನು ಮುಚ್ಚಿದರು. ಅರಸನು ತನ್ನ ಮುದ್ರೆಯುಂಗುರದಿಂದ ಆ ಬಂಡೆಗೆ ಮುದ್ರೆ ಹಾಕಿದನು. ಅರಸನ ಅಧಿಕಾರಗಳ ಮುದ್ರೆಯುಂಗುರಗಳಿಂದಲೂ ಸಹ ಆ ಕಲ್ಲುಬಂಡೆಗೆ ಮುದ್ರೆ ಹಾಕಲಾಯಿತು. ಇದರಿಂದಾಗಿ ಯಾರೂ ಆ ಕಲ್ಲುಬಂಡೆಯನ್ನು ಸರಿಸಿ ದಾನಿಯೇಲನನ್ನು ಆ ಸಿಂಹದ ಗುಹೆಯಿಂದ ಹೊರಗೆ ತೆಗೆಯದಂತಾಯಿತು.


ಆ ಘಟಸರ್ಪವನ್ನು ಪರಲೋಕದಿಂದ (ಆ ಘಟಸರ್ಪಕ್ಕೆ ಸೈತಾನನೆಂತಲೂ ಪಿಶಾಚನೆಂತಲೂ ಹೆಸರಿದೆ. ಅದು ಲೋಕವನ್ನೆಲ್ಲಾ ತಪ್ಪು ಮಾರ್ಗಕ್ಕೆ ಎಳೆಯುತ್ತಿತ್ತು.) ಅದರ ದೂತರೊಂದಿಗೆ ಭೂಮಿಯ ಮೇಲೆ ಎಸೆಯಲಾಯಿತು.


ಅವರು ಹೋಗಿ, ಸಮಾಧಿಗೆ ಮುದ್ರೆ ಹಾಕಿ, ಸೈನಿಕರನ್ನು ಕಾವಲಿರಿಸಿ, ಸಮಾಧಿಯನ್ನು ಸುಭದ್ರಪಡಿಸಿದರು.


ಹವ್ವಳು ಸರ್ಪದ ಕುಯುಕ್ತಿಯಿಂದ ಮೋಸಗೊಂಡಂತೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿ ಇರಬೇಕಾದ ಯಥಾರ್ಥತೆಯನ್ನೂ ಪರಿಶುದ್ಧತೆಯನ್ನೂ ಬಿಟ್ಟು ಕೆಟ್ಟುಹೋದೀತೆಂಬ ಭಯ ನನಗಿದೆ.


ಆದರೆ ಪ್ರಿಯ ಸ್ನೇಹಿತರೇ, ಇದೊಂದನ್ನು ಮಾತ್ರ ಮರೆಯದಿರಿ. ಪ್ರಭುವಿಗೆ ಒಂದು ದಿನವು ಸಾವಿರ ವರ್ಷಗಳಂತಿದೆ ಮತ್ತು ಸಾವಿರ ವರ್ಷಗಳು ಒಂದು ದಿನದಂತಿದೆ.


ಸಾವಿರ ವರ್ಷಗಳು ನಿನಗೆ ಗತಿಸಿಹೋದ ನಿನ್ನೆಯಂತೆಯೂ ರಾತ್ರಿಯ ಜಾವದಂತೆಯೂ ಇವೆ.


ಲೋಕದ ರಾಜರುಗಳು ಅವಳೊಂದಿಗೆ ಲೈಂಗಿಕ ಪಾಪ ಮಾಡಿದರು. ಲೋಕದ ಜನರು ಅವಳ ಲೈಂಗಿಕ ಪಾಪವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು” ಎಂದು ಹೇಳಿದನು.


ಈ ಎರಡನೆಯ ಮೃಗವು ಅದ್ಭುತಗಳನ್ನು ಮಾಡಲು ತನಗೆ ನೀಡಿರುವ ಶಕ್ತಿಯಿಂದ ಭೂಮಿಯ ಮೇಲೆ ವಾಸಿಸುವ ಜನರನ್ನು ಮರುಳು ಗೊಳಿಸುತ್ತದೆ. ಮೊದಲನೆಯ ಮೃಗದ ಸೇವೆಯನ್ನು ಮಾಡಲು ಅದು ಈ ಅದ್ಭುತಗಳನ್ನು ಮಾಡುತ್ತದೆ. ಕತ್ತಿಯಿಂದ ಗಾಯಗೊಂಡಿದ್ದೂ ಸಾಯದೆ ಬದುಕಿದ ಮೊದಲನೆಯ ಮೃಗಕ್ಕೆ ಗೌರವ ತೋರಲು ವಿಗ್ರಹವನ್ನು ನಿರ್ಮಿಸುವಂತೆ ಅದು ಜನರಿಗೆ ಆಜ್ಞಾಪಿಸಿತು.


ಸುಳ್ಳುಕ್ರಿಸ್ತರು ಮತ್ತು ಸುಳ್ಳುಪ್ರವಾದಿಗಳು ಬಂದು ದೇವರು ಆರಿಸಿಕೊಂಡಿರುವ ಜನರನ್ನು ಮೋಸಗೊಳಿಸುವುದಕ್ಕಾಗಿ ಮಹತ್ಕಾರ್ಯಗಳನ್ನು ಮತ್ತು ಅದ್ಭುತಕಾರ್ಯಗಳನ್ನು ಮಾಡುವರು.


ಕೆಲವು ಜನರು ದೇವರ ವಾಕ್ಯವನ್ನು ಕೇಳುತ್ತಾರೆ. ಆದರೆ ಅವರಲ್ಲಿ ಬಿತ್ತಿದ ವಾಕ್ಯವನ್ನು ಸೈತಾನನು ಬಂದು ತೆಗೆದುಬಿಡುತ್ತಾನೆ. ಈ ಜನರೇ ದಾರಿಯ ಮಗ್ಗುಲಾಗಿದ್ದಾರೆ.


ತಮ್ಮನ್ನು ಪಾತಾಳಕ್ಕೆ ಕಳುಹಿಸಕೂಡದೆಂದು ಆ ದೆವ್ವಗಳು ಯೇಸುವನ್ನು ಬೇಡಿಕೊಂಡವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು