Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 20:4 - ಪರಿಶುದ್ದ ಬೈಬಲ್‌

4 ನಂತರ ನಾನು ಕೆಲವು ಸಿಂಹಾಸನಗಳನ್ನು ಮತ್ತು ಅವುಗಳ ಮೇಲೆ ಜನರು ಕುಳಿತಿರುವುದನ್ನು ನೋಡಿದೆನು. ಈ ಜನರು ತೀರ್ಪು ನೀಡುವ ಅಧಿಕಾರವನ್ನು ಹೊಂದಿದ್ದರು. ಯೇಸುವಿನ ಸತ್ಯಕ್ಕೆ ಮತ್ತು ದೇವರ ಸಂದೇಶಕ್ಕೆ ನಂಬಿಗಸ್ತರಾಗಿದ್ದರ ನಿಮಿತ್ತವಾಗಿ ಕೊಲ್ಲಲ್ಪಟ್ಟವರ ಜೀವಾತ್ಮಗಳನ್ನು ನಾನು ನೋಡಿದೆನು. ಆ ಜನರು ಮೃಗವನ್ನಾಗಲಿ ಅದರ ವಿಗ್ರಹವನ್ನಾಗಲಿ ಆರಾಧಿಸಿರಲಿಲ್ಲ. ಅವರು ತಮ್ಮ ಹಣೆಯ ಮೇಲಾಗಲಿ ಕೈಗಳ ಮೇಲಾಗಲಿ ಮೃಗದ ಗುರುತನ್ನು ಹಾಕಿಸಿಕೊಂಡಿರಲಿಲ್ಲ. ಆ ಜನರು ಮತ್ತೆ ಜೀವವನ್ನು ಪಡೆದು ಕ್ರಿಸ್ತನೊಂದಿಗೆ ಒಂದುಸಾವಿರ ವರ್ಷ ಆಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯ ತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ, ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನಗೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡದೇ ತಮ್ಮ ಹಣೆಯ ಮೇಲೆ ಮತ್ತು ಕೈಗಳ ಮೇಲೆ ಅದರ ಗುರುತು ಹಾಕಿಸಿಕೊಳ್ಳದವರನ್ನೂ ಕಂಡೆನು. ಅವರು ಪುನಃ ಜೀವಿತರಾಗಿ ಎದ್ದು ಸಾವಿರ ವರ್ಷ ಕ್ರಿಸ್ತನೊಂದಿಗೆ ಆಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಬಳಿಕ ಸಿಂಹಾಸನಗಳನ್ನು ಕಂಡೆ. ಅವುಗಳ ಮೇಲೆ ಕುಳಿತಿದ್ದವರಿಗೆ ತೀರ್ಪುಕೊಡುವ ಅಧಿಕಾರವನ್ನು ಕೊಡಲಾಗಿತ್ತು. ಇದಲ್ಲದೆ, ಕ್ರಿಸ್ತೇಸುವಿನ ಪರವಾಗಿ ಸಾಕ್ಷಿಕೊಟ್ಟು ದೇವರ ವಾಕ್ಯದ ಪ್ರಚಾರಕ್ಕಾಗಿ ತಲೆತೆತ್ತ ಜೀವಾತ್ಮಗಳನ್ನು ಕಂಡೆ. ಇವರು ಆ ಮೃಗವನ್ನಾಗಲಿ, ಅದರ ವಿಗ್ರಹವನ್ನಾಗಲಿ ಪೂಜಿಸಿದವರಲ್ಲ; ತಮ್ಮ ಹಣೆಗಳ ಮೇಲಾಗಲಿ, ಕೈಗಳ ಮೇಲಾಗಲಿ ಅದರ ಗುರುತಿನ ಹಚ್ಚೆಯನ್ನೂ ಚುಚ್ಚಿಸಿಕೊಂಡವರಲ್ಲ. ಇವರು ಜೀವಂತರಾಗಿ ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳು ಆಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಜನರು ಕೂತಿದ್ದರು; ನ್ಯಾಯತೀರಿಸುವ ಅಧಿಕಾರವು ಅವರಿಗೆ ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿವಿುತ್ತವಾಗಿಯೂ ದೇವರ ವಾಕ್ಯದ ನಿವಿುತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ನಮಸ್ಕರಿಸದೆ ತಮ್ಮ ಹಣೆಯ ಮೇಲೆ ಮತ್ತು ಕೈಯ ಮೇಲೆ ಗುರುತುಹಾಕಿಸಿಕೊಳ್ಳದೆ ಇರುವವರನ್ನೂ ಕಂಡೆನು. ಅವರು ಜೀವಿತರಾಗಿ ಎದ್ದು ಸಾವಿರ ವರುಷ ಕ್ರಿಸ್ತನೊಂದಿಗೆ ಆಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲಾಯಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನ ಗೊಂಡವರ ಆತ್ಮಗಳನ್ನೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸದೆ ತಮ್ಮ ಹಣೆಯ ಮೇಲೆ ಇಲ್ಲವೆ ಕೈಯ ಮೇಲೆ ಅದರ ಗುರುತುಹಾಕಿಸಿಕೊಳ್ಳದವರನ್ನೂ ನೋಡಿದೆನು. ಅವರು ಪುನಃ ಜೀವಿತರಾಗಿ ಎದ್ದು ಯೇಸುಕ್ರಿಸ್ತರೊಂದಿಗೆ ಸಾವಿರ ವರ್ಷ ಆಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತನ್ನಾ ಸಿವಾಸನಾಂಚ್ಯಾ ವರ್ತಿ ಬಸಲ್ಲ್ಯಾಕ್ನಿ ಝಡ್ತಿ ಕರ್ತಲೊ ಅಧಿಕಾರ್ ದಿವ್ನ್ ಹೊಲ್ಲೆ ಮಿಯಾ ಬಗಟ್ಲೊ, ಅನಿ ಜೆಜುನ್ ದಾಕ್ವುನ್ ದಿಲ್ಲೆ ಅನಿ ದೆವಾಚ್ಯಾ ಗೊಸ್ಟಿಯಾನಿ ದಾಕ್ವುನ್ ದಿಲ್ಲೆ ಖರೆ ಲೊಕಾಕ್ನಿ ಸಾಂಗಲ್ಲ್ಯಾಸಾಟ್ನಿ ಚೆಂಡಾ ತೊಡುನ್ ಹೊಲ್ಲ್ಯಾಂಚೆ ಆತ್ಮೆಬಿ ಮಿಯಾ ಬಗಟ್ಲೊ, ತೆನಿ ತ್ಯಾ ಭಯಾನಕ್ ಜನಾವಾರಾಚೆ ಹೊಂವ್ದಿತ್, ತ್ಯೆಚ್ಯಾ ಮುರ್ತಿಚೆ ಹೊಂವ್ದಿತ್ ಆರಾದನ್ ಕರುಕ್ನ್ಯಾತ್, ನಾಹೊಲ್ಯಾರ್ ತೆಂಚ್ಯಾ ಕಪಾಳಾ ವೈನಿ ಹೊಂವ್ದಿತ್, ಹಾತಾ ವೈನಿ ಹೊಂವ್ದಿತ್ ತ್ಯಾ ಭಯಾನಕ್ ಜನಾವಾರಾಚಿ ವಳಕ್ ಕರುನ್ ಘೆವನಸಲ್ಲ್ಯಾನಿ. ತೆನಿ ಝಿತ್ತೆ ಹೊವ್ನ್ ಉಟ್ಲೆ, ಅನಿ ಎಕ್ ಹಜಾರ್ ವರ್ಸಾ ಕ್ರಿಸ್ತಾಚ್ಯಾ ವಾಂಗ್ಡಾ ರಾಜಾಂಚ್ಯಾ ಸರ್ಕೆ ರಾಜ್ ಚಾಲ್ವುಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 20:4
40 ತಿಳಿವುಗಳ ಹೋಲಿಕೆ  

ಆಗ ದೇವಭಕ್ತರು ರಾಜ್ಯವನ್ನು ಆಳುವರು. ಅವರು ಸಮಸ್ತ ಭೂಮಂಡಲದ ರಾಜ್ಯಗಳ ಮೇಲೆ ಆಳ್ವಿಕೆ ಮಾಡುವರು. ಈ ಸಾಮ್ರಾಜ್ಯವು ಕೊನೆಯವರೆಗೂ ಉಳಿಯುವುದು. ಮಿಕ್ಕ ಎಲ್ಲ ರಾಜ್ಯಗಳ ಜನರು ಅವರನ್ನು ಗೌರವಿಸುವರು ಮತ್ತು ಸೇವಿಸುವರು.’


ಆದರೆ ದೇವರ ವಿಶೇಷ ಜನರಿಗೆ ಆ ಸಾಮ್ರಾಜ್ಯಗಳು ದೊರೆಯುವವು. ಅವರು ಆ ಸಾಮ್ರಾಜ್ಯವನ್ನು ಶಾಶ್ವತವಾಗಿ ಅನುಭವಿಸುವರು’ ಎಂದು ಹೇಳಿದನು.


ಯೇಸು ಶಿಷ್ಯರಿಗೆ ಹೀಗೆಂದನು: “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಹೊಸ ಲೋಕವು ಸೃಷ್ಟಿಸಲ್ಪಟ್ಟಾಗ ಮನುಷ್ಯಕುಮಾರನು ತನ್ನ ಮಹಾಸಿಂಹಾಸನದ ಮೇಲೆ ಕುಳಿತುಕೊಳ್ಳುವನು. ನನ್ನನ್ನು ಹಿಂಬಾಲಿಸಿದ ನೀವೆಲ್ಲರೂ ಸಿಂಹಾಸನಗಳ ಮೇಲೆ ಕುಳಿತು ಇಸ್ರೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


ಕುರಿಮರಿಯು ಐದನೆಯ ಮುದ್ರೆಯನ್ನು ತೆರೆಯಿತು. ಆಗ ಯಜ್ಞವೇದಿಕೆಯ ಕೆಳಗೆ ಕೆಲವು ಆತ್ಮಗಳಿರುವುದನ್ನು ನಾನು ನೋಡಿದೆನು. ದೇವರ ಸಂದೇಶಕ್ಕೂ ತಾವು ಸ್ವೀಕರಿಸಿ ಕೊಂಡ ಸತ್ಯಕ್ಕೂ ನಂಬಿಗಸ್ತರಾಗಿದ್ದ ಕಾರಣ ಕೊಲ್ಲಲ್ಪಟ್ಟವರ ಆತ್ಮಗಳೇ ಅವು.


“ನಾನು ಜಯಗಳಿಸಿ ನನ್ನ ತಂದೆಯೊಡನೆ ಆತನ ಸಿಂಹಾಸನದ ಮೇಲೆ ಕುಳಿತುಕೊಂಡೆನು. ಅಂತೆಯೇ ಜಯಗಳಿಸುವ ಪ್ರತಿಯೊಬ್ಬನೂ ನನ್ನ ಸಂಗಡ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು.


ನಾವು ಸಂಕಟವನ್ನು ಸ್ವೀಕರಿಸಿಕೊಂಡರೆ, ಆತನೊಡನೆ ಆಳುವೆವು. ನಾವು ಆತನನ್ನು ಸ್ವೀಕರಿಸಿಕೊಳ್ಳದಿದ್ದರೆ, ಆತನೂ ನಮ್ಮನ್ನು ಸ್ವೀಕರಿಸಿಕೊಳ್ಳುವುದಿಲ್ಲ.


ಪುರಾತನ ರಾಜನು ಬಂದು ನ್ಯಾಯತೀರಿಸುವವರೆಗೂ ಆ ಚಿಕ್ಕಕೊಂಬು ದೇವಭಕ್ತರ ಕೊಲೆ ಮಾಡುತ್ತಿತ್ತು. ಪುರಾತನ ರಾಜನು ಈ ಚಿಕ್ಕ ಕೊಂಬಿನ ಬಗ್ಗೆ ತೀರ್ಪನ್ನು ಕೊಟ್ಟನು. ಈ ತೀರ್ಪು ದೇವಭಕ್ತರ ಪರವಾಗಿತ್ತು. ಆದ್ದರಿಂದ ಅವರು ಸಾಮ್ರಾಜ್ಯವನ್ನು ಪಡೆದರು.


ಪ್ರಥಮ ಪುನರುತ್ಥಾನದಲ್ಲಿ ಸೇರಿರುವವರು ಪವಿತ್ರರೂ ಧನ್ಯರೂ ಆಗಿದ್ದಾರೆ. ಈ ಜನರ ಮೇಲೆ ಎರಡನೆ ಮರಣಕ್ಕೆ ಅಧಿಕಾರವಿಲ್ಲ. ಆ ಜನರು ದೇವರಿಗೆ ಮತ್ತು ಕ್ರಿಸ್ತನಿಗೆ ಯಾಜಕರಾಗಿರುತ್ತಾರೆ. ಅವರು ಆತನೊಂದಿಗೆ ಒಂದು ಸಾವಿರ ವರ್ಷ ಆಳುತ್ತಾರೆ.


“ನಾನು ನೋಡುತ್ತಿದ್ದಂತೆಯೇ, ಆಸನಗಳನ್ನು ಅವುಗಳ ಸ್ಥಳದಲ್ಲಿ ಹಾಕಲಾಯಿತು. ಪುರಾತನ ರಾಜನು ತನ್ನ ಆಸನದ ಮೇಲೆ ಕುಳಿತುಕೊಂಡನು. ಆತನ ಉಡುಪು ಬಹಳ ಶುಭ್ರವಾಗಿತ್ತು. ಅದು ಹಿಮದಂತೆ ಶುಭ್ರವಾಗಿತ್ತು. ಆತನ ತಲೆಕೂದಲು ಶುಭ್ರವಾಗಿತ್ತು. ಅದು ಬಿಳಿಯ ಉಣ್ಣೆಯಂತೆ ಶುಭ್ರವಾಗಿತ್ತು. ಆತನ ಆಸನವು ಬೆಂಕಿಯಿಂದ ಮಾಡಲಾಗಿತ್ತು. ಅದರ ಚಕ್ರಗಳು ಬೆಂಕಿಯ ಜ್ವಾಲೆಗಳಿಂದ ಮಾಡಲಾಗಿದ್ದವು.


ನನ್ನ ರಾಜ್ಯದಲ್ಲಿ ನೀವು ನನ್ನ ಸಂಗಡ ಊಟಮಾಡುವಿರಿ ಮತ್ತು ಕುಡಿಯುವಿರಿ. ನೀವು ಸಿಂಹಾಸನಗಳಲ್ಲಿ ಕುಳಿತುಕೊಂಡು ಇಸ್ರೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


ಅಲ್ಲಿ ರಾತ್ರಿಯೆಂಬುದೇ ಇರುವುದಿಲ್ಲ. ಜನರಿಗೆ ದೀಪದ ಬೆಳಕಾಗಲಿ ಸೂರ್ಯನ ಬೆಳಕಾಗಲಿ ಬೇಕಾಗುವುದಿಲ್ಲ. ಪ್ರಭುವಾದ ದೇವರೇ ಅವರಿಗೆ ಬೆಳಕನ್ನು ನೀಡುತ್ತಾನೆ. ಅವರು ಯುಗಯುಗಾಂತರಗಳಲ್ಲಿ ರಾಜರುಗಳಂತೆ ಆಳುತ್ತಾರೆ.


ನಮ್ಮ ಸಹೋದರರು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ವಾಕ್ಯದ ಬಲದಿಂದಲೂ ಅವನನ್ನು ಸೋಲಿಸಿದರು. ಅವರು ತಮ್ಮ ಜೀವಗಳನ್ನು ಪ್ರೀತಿಸಲಿಲ್ಲ. ಅವರು ಮರಣಕ್ಕೆ ಭಯಪಡಲಿಲ್ಲ.


ಯೋಹಾನನೆಂಬ ನಾನು ಕ್ರಿಸ್ತನಲ್ಲಿ ನಿಮ್ಮ ಸಹೋದರನಾಗಿದ್ದೇನೆ. ನಾವೆಲ್ಲರೂ ಒಟ್ಟಾಗಿ ಯೇಸುವಿನ ನಿಮಿತ್ತ ಸಂಕಟಗಳಲ್ಲಿಯೂ ರಾಜ್ಯದಲ್ಲಿಯೂ ತಾಳ್ಮೆಯಲ್ಲಿಯೂ ಪಾಲುಗಾರರಾಗಿದ್ದೇವೆ. ನಾನು ದೇವರ ಸಂದೇಶಕ್ಕೂ ಯೇಸುವಿನ ಸತ್ಯಕ್ಕೂ ನಂಬಿಗಸ್ತನಾಗಿದ್ದುದರಿಂದ ಪತ್ಮೊಸ್ ದ್ವೀಪದಲ್ಲಿದ್ದೆನು.


ನಾವು ದೇವರ ಮಕ್ಕಳಾಗಿದ್ದರೆ, ಬಾಧ್ಯರಾಗಿದ್ದೇವೆ. ಹೌದು, ದೇವರಿಗೆ ಬಾಧ್ಯರಾಗಿದ್ದೇವೆ ಮತ್ತು ಕ್ರಿಸ್ತನೊಂದಿಗೆ ಬಾಧ್ಯರಾಗಿದ್ದೇವೆ. ಹೇಗೆಂದರೆ, ಕ್ರಿಸ್ತನ ಬಾಧೆಯಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.


ಬೆಂಕಿಯನ್ನು ಬೆರಸಿದ ಗಾಜಿನ ಸಮುದ್ರದಂತೆ ಕಾಣಿಸುವ ಏನೋ ಒಂದು ನನಗೆ ಕಾಣಿಸಿತು. ಮೃಗವನ್ನು, ಅದರ ವಿಗ್ರಹವನ್ನು ಮತ್ತು ಅದರ ಹೆಸರಿನ ಸಂಖ್ಯೆಯನ್ನು ಸೋಲಿಸಿ ಜಯಗಳಿಸಿದವರೆಲ್ಲರೂ ಸಮುದ್ರ ತೀರದಲ್ಲಿ ನಿಂತಿದ್ದರು. ದೇವರು ಅವರಿಗೆ ನೀಡಿದ ತಂತಿವಾದ್ಯಗಳು ಅವರಲ್ಲಿದ್ದವು.


ಅವರ ಯಾತನೆಯೆಂಬ ಹೊಗೆಯು ಸದಾ ಏಳುತ್ತಲೇ ಇರುವುದು. ಮೃಗವನ್ನು ಮತ್ತು ಅದರ ವಿಗ್ರಹವನ್ನು ಆರಾಧಿಸುವ ಮತ್ತು ಅದರ ಹೆಸರನ್ನು ಗುರುತು ಹಾಕಿಸಿಕೊಳ್ಳುವ ಜನರಿಗೆ ಹಗಲಲ್ಲೂ ರಾತ್ರಿಯಲ್ಲೂ ವಿಶ್ರಾಂತಿಯೆಂಬುದೇ ಇರುವುದಿಲ್ಲ.”


ಈ ಇಬ್ಬರು ಸಾಕ್ಷಿಗಳು ತಮ್ಮ ಸಂದೇಶವನ್ನು ಹೇಳಿ ಮುಗಿಸಿದ ನಂತರ, ತಳವಿಲ್ಲದ ಕೂಪದಿಂದ ಮೇಲಕ್ಕೆ ಬರುವ ಮೃಗವು ಅವರ ವಿರುದ್ಧ ಹೋರಾಟ ಮಾಡುತ್ತದೆ. ಈ ಮೃಗವು ಅವರನ್ನು ಸೋಲಿಸಿ, ಕೊಂದು ಹಾಕುತ್ತದೆ.


ಇನ್ನು ಸ್ವಲ್ಪ ಕಾಲವಾದ ಮೇಲೆ ಈ ಲೋಕದ ಜನರು ನನ್ನನ್ನು ಇನ್ನೆಂದಿಗೂ ಕಾಣುವುದಿಲ್ಲ. ಆದರೆ ನೀವು ನನ್ನನ್ನು ನೋಡುವಿರಿ. ನಾನು ಜೀವಿಸುವುದರಿಂದ ನೀವೂ ಜೀವಿಸುವಿರಿ.


“ನಾಲ್ಕನೇ ರಾಜ್ಯದ ಅರಸರ ಕಾಲದಲ್ಲಿ ಪರಲೋಕದ ದೇವರು ಇನ್ನೊಂದು ಹೊಸ ಸಾಮ್ರಾಜ್ಯವನ್ನು ಸ್ಥಾಪಿಸುವನು. ಈ ಸಾಮ್ರಾಜ್ಯವು ಎಂದೆಂದಿಗೂ ಉಳಿಯುವದು. ಎಂದಿಗೂ ಅಳಿಯದು; ಬೇರೊಂದು ಜನರ ಗುಂಪಿಗೆ ಹೋಗದಂಥ ಸಾಮ್ರಾಜ್ಯವಾಗಿರುವುದು. ಈ ಸಾಮ್ರಾಜ್ಯವು ಉಳಿದೆಲ್ಲ ಸಾಮ್ರಾಜ್ಯಗಳನ್ನು ನಾಶಮಾಡಿ ಕೊನೆಗಾಣಿಸುವುದು. ಆದರೆ ಆ ಸಾಮ್ರಾಜ್ಯವು ಮಾತ್ರ ಶಾಶ್ವತವಾಗಿ ನಿಲ್ಲುವದು.


ನೀನು ನೋಡಿದ ಆ ಮೃಗವು ಒಂದು ಕಾಲದಲ್ಲಿ ಜೀವಿಸಿತ್ತು. ಆದರೆ ಈಗ ಆ ಮೃಗವು ಜೀವಂತವಾಗಿಲ್ಲ. ಆದರೆ ಆ ಮೃಗವು ತಳವಿಲ್ಲದ ಕೂಪದಿಂದ ಜೀವಂತವಾಗಿ ಮೇಲೆದ್ದುಬಂದು ನಾಶವಾಗು ವುದು. ಲೋಕದಲ್ಲಿ ಜೀವಿಸುತ್ತಿರುವ ಜನರು ಆ ಮೃಗವನ್ನು ನೋಡಿ, ಅದು ಒಂದು ಕಾಲದಲ್ಲಿ ಜೀವಂತವಾಗಿತ್ತು, ಈಗ ಇಲ್ಲ, ಆದರೆ ಮತ್ತೆ ಬರುವುದು ಎಂಬುದನ್ನು ತಿಳಿದು ಅವರು ಆಶ್ಚರ್ಯಪಡುವರು. ಲೋಕವು ಸೃಷ್ಟಿಯಾದಂದಿನಿಂದ ಜೀವಬಾಧ್ಯರ ಪುಸ್ತಕದಲ್ಲಿ ಈ ಜನರ ಹೆಸರುಗಳನ್ನು ಬರೆದೇ ಇಲ್ಲ.


ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳು ಉಂಟಾದವು. ಆ ಶಬ್ದಗಳು ಹೀಗೆ ಹೇಳಿದವು: “ಈ ಲೋಕದ ರಾಜ್ಯವು ಈಗ ನಮ್ಮ ಪ್ರಭುವಿನ ಮತ್ತು ಆತನವನಾಗಿರುವ ಕ್ರಿಸ್ತನ ರಾಜ್ಯವಾಗಿ ಮಾರ್ಪಾಟಾಯಿತು. ಆತನು ಯುಗಯುಗಾಂತರಗಳಲ್ಲಿಯೂ ಆಳುವನು.”


ಆದರೆ ಮೂರುವರೆ ದಿನಗಳ ನಂತರ ದೇವರು ಆ ಇಬ್ಬರು ಪ್ರವಾದಿಗಳೊಳಗೆ ಮತ್ತೆ ಜೀವ ಪ್ರವೇಶಿಸುವಂತೆ ಮಾಡಿದನು. ಆಗ ಅವರು ತಮ್ಮ ಕಾಲೂರಿ ನಿಂತುಕೊಂಡರು. ಅವರನ್ನು ನೋಡಿದ ಜನರೆಲ್ಲರೂ ಭಯಗ್ರಸ್ತರಾದರು.


ನಾನು ನನ್ನ ಇಬ್ಬರು ಸಾಕ್ಷಿಗಳಿಗೆ ಅಧಿಕಾರವನ್ನು ಕೊಡುತ್ತೇನೆ. ಅವರು ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಪ್ರವಾದನೆ ಮಾಡುತ್ತಾರೆ. ಅವರು ಗೋಣಿತಟ್ಟುಗಳನ್ನು ಧರಿಸಿಕೊಂಡಿರುತ್ತಾರೆ.”


ಇಸ್ರೇಲರು ತಿರಸ್ಕೃತರಾದ್ದರಿಂದ ಜಗತ್ತು ದೇವರೊಡನೆ ಸಂಧಾನವಾಗಲು ಸಾಧ್ಯವಾಯಿತಾದರೆ ಅವರು ಸ್ವೀಕೃತರಾದಾಗ ಇನ್ನೇನು ತಾನೆ ಸಂಭವಿಸದು! ಸತ್ತವರು ಜೀವ ಪಡೆದುಕೊಂಡಂತಾಗುವುದಿಲ್ಲವೇ?


ಅವನು ಪ್ರಭುವಿಗೆ ಮುಂದೂತನಾಗಿ ಹೋಗುವನು. ಅವನು ಎಲೀಯನ ಗುಣಶಕ್ತಿಗಳಿಂದ ಕೂಡಿದವನಾಗಿರುವನು; ತಂದೆ ಮತ್ತು ಮಕ್ಕಳ ನಡುವೆ ಸಮಾಧಾನವನ್ನು ಉಂಟುಮಾಡುವನು; ಅವಿಧೇಯರಾದ ಅನೇಕರನ್ನು ನೀತಿವಂತರ ಜ್ಞಾನದ ಕಡೆಗೆ ನಡೆಸುವನು; ಜನರನ್ನು ಪ್ರಭುವಿನ ಆಗಮನಕ್ಕೆ ಸಿದ್ಧಪಡಿಸುವನು” ಎಂದು ಹೇಳಿದನು.


ಯೆಹೋವನು ಹೀಗೆನ್ನುತ್ತಾನೆ, “ನಾನು ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು. ಅವನು ಯೆಹೋವನಿಂದ ಪ್ರಾಪ್ತಿಯಾಗುವ ಭಯಂಕರವಾದ ಮಹಾ ನ್ಯಾಯತೀರ್ಪಿನ ಕಾಲದಲ್ಲಿ ಬರುವನು.


ಶಿಷ್ಯರು ಯೇಸುವಿಗೆ, “ಎಲೀಯನೇ ಮೊದಲು ಬರಬೇಕೆಂದು ಧರ್ಮೋಪದೇಶಕರು ಹೇಳಲು ಕಾರಣವೇನು?” ಎಂದು ಕೇಳಿದರು.


ಆದ್ದರಿಂದ ರಾಜನು ಯೋಹಾನನ ತಲೆಯನ್ನು ಕತ್ತರಿಸಿ ತರಲು ಒಬ್ಬ ಸೈನಿಕನನ್ನು ಕಳುಹಿಸಿದನು. ಸೈನಿಕನು ಸೆರೆಮನೆಗೆ ಹೋಗಿ ಯೋಹಾನನ ತಲೆಯನ್ನು ಕತ್ತರಿಸಿ,


ಜನರು ಯೇಸುವಿನ ಬಗ್ಗೆ ಹೇಳುತ್ತಿದ್ದ ಈ ಮಾತುಗಳನ್ನೆಲ್ಲಾ ಕೇಳಿದ ಹೆರೋದನು, “ನಾನು ಶಿರಚ್ಛೇದನ ಮಾಡಿಸಿದ ಯೋಹಾನನು ಈಗ ಮತ್ತೆ ಬದುಕಿಬಂದಿದ್ದಾನೆ!” ಎಂದು ಹೇಳಿದನು.


ಆ ಸಮಯದಲ್ಲಿ ಅನೇಕ ವಿಶ್ವಾಸಿಗಳು ತಮ್ಮ ನಂಬಿಕೆಯನ್ನು ಕಳೆದುಕೊಳ್ಳುವರು. ಅವರು ಒಬ್ಬರಿಗೊಬ್ಬರಿಗೆ ವಿರೋಧವಾಗಿ ತಿರುಗಿಕೊಂಡು ಒಬ್ಬರನ್ನೊಬ್ಬರು ದ್ವೇಷಿಸುವರು.


ಆಗ ನಿನಗೆ ಆಶೀರ್ವಾದ ದೊರೆಯುವುದು. ಏಕೆಂದರೆ, ಈ ಜನರು ನಿನ್ನನ್ನು ಔತಣಕ್ಕೆ ಆಮಂತ್ರಿಸಲಾರರು. ಅವರಲ್ಲಿ ಏನೂ ಇಲ್ಲ. ಆದರೆ ನೀತಿವಂತರು ಜೀವಂತವಾಗಿ ಎದ್ದುಬರುವಾಗ, ನಿನಗೆ ಪ್ರತಿಫಲ ದೊರೆಯುವುದು” ಎಂದು ಹೇಳಿದನು.


ಯೋಹಾನನು ತಾನು ಕಂಡದ್ದೆಲ್ಲವನ್ನು ತಿಳಿಸಿದನು. ಇದು ಯೇಸು ಕ್ರಿಸ್ತನು ಅವನಿಗೆ ಹೇಳಿದ ಸತ್ಯ. ಇದು ದೇವರಿಂದ ಬಂದ ಸಂದೇಶ.


“ಜಯಗಳಿಸುವವನಿಗೆ ಮತ್ತು ನಾನು ಅಪೇಕ್ಷಿಸುವುದನ್ನು ಕೊನೆಯವರೆಗೆ ಮಾಡುವವನಿಗೆ ಜನಾಂಗಗಳ ಮೇಲಿನ ಅಧಿಕಾರವನ್ನು ನೀಡುತ್ತೇನೆ:


ಆ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತುಕೊಂಡಿದ್ದರು. ಅವರು ಬಿಳಿ ವಸ್ತ್ರಗಳನ್ನು ಧರಿಸಿದ್ದರು. ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು.


“ನಮ್ಮ ದೇವರ ಸೇವೆಮಾಡುವ ಜನರ ಹಣೆಯ ಮೇಲೆ ಮುದ್ರೆ ಒತ್ತುವ ತನಕ ಭೂಮಿಗಾಗಲಿ ಸಮುದ್ರಕ್ಕಾಗಲಿ ಮರಗಳಿಗಾಗಲಿ ತೊಂದರೆಯನ್ನು ಮಾಡಬೇಡಿ” ಎಂದು ಕೂಗಿ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು