Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 20:9 - ಪರಿಶುದ್ದ ಬೈಬಲ್‌

9 ಸೈತಾನನ ಸೈನ್ಯವು ಭೂಮಿಯಲ್ಲೆಲ್ಲಾ ಶಿಸ್ತಿನಿಂದ ನಡೆದಾಡಿ ದೇವಜನರ ಶಿಬಿರದ ಸುತ್ತಲೂ ದೇವರ ಪ್ರಿಯ ನಗರದ ಸುತ್ತಲೂ ಒಟ್ಟುಗೂಡಿದರು. ಆದರೆ ಪರಲೋಕದಿಂದ ಇಳಿದು ಬಂದ ಬೆಂಕಿಯು ಸೈತಾನನ ಸೈನ್ಯವನ್ನು ನಾಶಗೊಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರು ಭೂಮಿಯಲ್ಲೆಲ್ಲಾ ಹರಡಿಕೊಂಡು ದೇವಜನರ ಪಾಳೆಯಕ್ಕೂ ಆ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕುವರು. ಆದರೆ ಪರಲೋಕದಿಂದ ಬೆಂಕಿ ಇಳಿದು ಬಂದು ಅವರನ್ನು ದಹಿಸಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವರು ದೇಶದಲ್ಲೆಲ್ಲಾ ಹರಡಿಕೊಂಡು ದೇವಜನರ ಪಾಳೆಯಕ್ಕೂ ದೇವರ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕಿದರು. ಆಗ ಸ್ವರ್ಗದಿಂದ ಬೆಂಕಿ ಇಳಿದುಬಂದು ಅವರನ್ನು ದಹಿಸಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವರು ದೇಶದಲ್ಲೆಲ್ಲಾ ಹರಡಿಕೊಂಡು ದೇವಜನರ ದಂಡಿಗೂ ನಮ್ಮ ಪ್ರಿಯ ಪಟ್ಟಣಕ್ಕೂ ಮುತ್ತಿಗೆಹಾಕಿದರು. ಆಗ ಪರಲೋಕದಿಂದ ಬೆಂಕಿ ಇಳಿದು ಬಂದು ಅವರನ್ನು ದಹಿಸಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವರು ದೇಶದಲ್ಲೆಲ್ಲಾ ಹರಡಿಕೊಂಡು ಪರಿಶುದ್ಧರ ದಂಡಿಗೂ ಆ ಪ್ರಿಯಪಟ್ಟಣಕ್ಕೂ ಮುತ್ತಿಗೆ ಹಾಕಿದರು. ಆಗ ಪರಲೋಕದಿಂದ ಬೆಂಕಿ ಬಿದ್ದು ಅವರನ್ನು ದಹಿಸಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತೆನಿ ಸಗ್ಳ್ಯಾ ಜಗಾತ್ ಪಗಳ್ತ್ಯಾತ್, ಅನಿ ದೆವಾಚಿ ಸೈನಿಕಾ ರ್‍ಹಾತಲ್ಯಾ ಜಾಗ್ಯಾಕ್ನಿ, ಅನಿ ತ್ಯೆಚ್ಯಾ ಪ್ರೆಮಾಚ್ಯಾ ಶಾರಾಚ್ಯಾ ಭೊತ್ಯಾನಿ ಘೆರ್ ಘಾಲುನ್ ಇಬೆ ರ್‍ಹಾತ್ಯಾತ್. ಖರೆ ಸರ್‍ಗಾ ವೈನಾ ಆಗ್ ಯೆತಾ ಅನಿ ತೆಂಕಾ ನಾಸ್ ಕರುನ್ ಟಾಕ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 20:9
33 ತಿಳಿವುಗಳ ಹೋಲಿಕೆ  

ನನ್ನ ಜನರಾದ ಇಸ್ರೇಲಿನವರೊಂದಿಗೆ ಯುದ್ಧಕ್ಕೆ ಬರುವಿರಿ. ನೀವು ಕರೀ ಮೋಡದಂತೆ ದೇಶವನ್ನು ಕವಿಯುವಿರಿ. ಆ ಸಮಯ ಬಂದಾಗ ನನ್ನ ದೇಶಕ್ಕೆ ವಿರುದ್ಧವಾಗಿ ಯುದ್ಧ ಮಾಡಲು ನಿಮ್ಮನ್ನು ತರಿಸುವೆನು. ಆಗ ಗೋಗ್ ಮತ್ತು ಅವನೊಂದಿಗಿರುವ ರಾಜ್ಯಗಳು ನಾನು ಎಷ್ಟು ಸಾಮರ್ಥ್ಯಶಾಲಿ ಎಂದು ತಿಳಿದುಕೊಳ್ಳುವರು. ಅವರು ನನ್ನನ್ನು ಗೌರವಿಸಲು ಕಲಿಯುವರು. ನಾನು ಪವಿತ್ರನು ಎಂದು ತಿಳಿಯುವರು. ನಾನು ನಿನಗೇನು ಮಾಡಬೇಕಿದ್ದೇನೆಂದು ಅವರು ಕಾದು ನೋಡುವರು.’”


ದೇವರು ಹೇಳಿದ್ದೇನೆಂದರೆ, “ನಾನು ಮಾಗೋಗ್ ಮತ್ತು ಕಡಲ ತೀರದಲ್ಲಿ ವಾಸಿಸುವ ಜನರ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ. ತಾವು ಸುರಕ್ಷಿತವಾಗಿದ್ದೇವೆ ಎಂದು ಅವರು ನೆನಸುತ್ತಾರೆ. ಆದರೆ ನಾನು ಯೆಹೋವನು ಎಂದು ಅವರಿಗೆ ತಿಳಿಯುವದು.


ನಾನು ಗೋಗನನ್ನು ರೋಗಮರಣಗಳಿಂದ ಶಿಕ್ಷಿಸುವೆನು. ಅವನ ಮೇಲೆಯೂ ಅವನೊಂದಿಗೆ ಬಂದ ಬಹುದೇಶದ ಸೈನಿಕರ ಮೇಲೆಯೂ ಆಲಿಕಲ್ಲು, ಬೆಂಕಿ, ಗಂಧಕದ ಮಳೆಯಿಂದ ಶಿಕ್ಷಿಸುವೆನು.


ಆದರೆ ನೀನು ಮತ್ತು ಬೇರೆ ದೇಶಗಳ ಸೈನಿಕರು ಅವರೊಂದಿಗೆ ಯುದ್ಧಮಾಡಲು ಬಿರುಗಾಳಿಯಂತೆಯೂ ಕಾರ್ಮುಗಿಲಿನಂತೆಯೂ ಬರುವಿರಿ.’”


ಪ್ರಭು ಯೇಸು ಪರಲೋಕದಿಂದ ಬೆಂಕಿಯ ಜ್ವಾಲೆಗಳೊಡನೆ ಪ್ರತ್ಯಕ್ಷನಾದಾಗ ದೇವರನ್ನು ತಿಳಿದಿಲ್ಲದವರಿಗೂ ಸುವಾರ್ತೆಗೆ ವಿಧೇಯರಾಗಿಲ್ಲದವರಿಗೂ ದಂಡನೆಯನ್ನು ಬರಮಾಡುತ್ತಾನೆ.


ಬಳಿಕ ಅವರ ಮಧ್ಯದಲ್ಲಿ ಬೆಂಕಿಯುಂಟಾಯಿತು; ಅಗ್ನಿಜ್ವಾಲೆಯು ಆ ದುಷ್ಟರನ್ನು ದಹಿಸಿಬಿಟ್ಟಿತು.


ಬೆಂಕಿಯು ಆತನ ಮುಂದೆ ಹೋಗಿ ಆತನ ಶತ್ರುಗಳನ್ನು ನಾಶಮಾಡುವುದು.


ಈ ಎರಡನೆಯ ಮೃಗವು ಮಹಾ ಅದ್ಭುತಗಳನ್ನು ಮಾಡುತ್ತದೆ. ಅದು ಜನರ ಕಣ್ಣೆದುರಿನಲ್ಲಿಯೇ ಬೆಂಕಿಯನ್ನು ಆಕಾಶದಿಂದ ಭೂಮಿಗೆ ಸುರಿಸುತ್ತದೆ.


ಈ ಸಾಕ್ಷಿಗಳಿಗೆ ಯಾರಾದರೂ ಕೇಡು ಮಾಡಲು ಪ್ರಯತ್ನಿಸಿದರೆ, ಸಾಕ್ಷಿಗಳ ಬಾಯಿಂದ ಬೆಂಕಿಯು ಹೊರಬಂದು ಅವರ ಶತ್ರುವನ್ನು ಅಂದರೆ ಅವರಿಗೆ ತೊಂದರೆ ಮಾಡಲು ಪ್ರಯತ್ನಿಸಿದ್ದವರನ್ನೆಲ್ಲ ಸಾಯಿಸುತ್ತದೆ.


ಲೋಟನು ಆ ಪಟ್ಟಣವನ್ನು ಬಿಟ್ಟು ಹೊರಟ ದಿನದಲ್ಲಿಯೂ ಜನರು ಹಾಗೆಯೇ ಮಾಡುತ್ತಿದ್ದರು. ಆಗ ಆಕಾಶದಿಂದ ಬೆಂಕಿಯ ಸುರಿಮಳೆಯಾಗಿ ಅವರೆಲ್ಲರನ್ನೂ ನಾಶಮಾಡಿತು.


ಯೇಸುವಿನ ಶಿಷ್ಯರಾದ ಯಾಕೋಬ ಮತ್ತು ಯೋಹಾನ ಇದನ್ನು ಕಂಡು, “ಸ್ವಾಮೀ, ಆಕಾಶದಿಂದ ಬೆಂಕಿ ಬಿದ್ದು ಇವರನ್ನು ನಾಶಮಾಡಲಿ ಎಂದು ನಾವು ಆಜ್ಞಾಪಿಸಬೇಕೆನ್ನುವಿಯೋ!” ಎಂದು ಕೇಳಿದರು.


ಆ ರಾತ್ರಿ, ಯೆಹೋವನ ದೂತನು ಹೊರಟುಹೋಗಿ ಅಶ್ಶೂರದ ಪಾಳೆಯದಲ್ಲಿ ಒಂದು ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಸಂಹರಿಸಿದನು. ಜನರು ಬೆಳಿಗ್ಗೆ ಎದ್ದಾಗ ಸುತ್ತಲೂ ಹೆಣಗಳು ಬಿದ್ದಿದ್ದವು.


ಅಲ್ಲದೆ ಯೆಹೋವನಿಂದ ಬೆಂಕಿಯು ಹೊರಟುಬಂದು ಧೂಪವನ್ನು ಅರ್ಪಿಸುತ್ತಿದ್ದ ಇನ್ನೂರೈವತ್ತು ಮಂದಿಯನ್ನು ದಹಿಸಿಬಿಟ್ಟಿತು.


ಜನರು ತಮಗೆ ತೊಂದರೆ ಉಂಟಾಯಿತೆಂದು ಗಟ್ಟಿಯಾಗಿ ಗುಣುಗುಟ್ಟಿದರು. ಅದನ್ನು ಯೆಹೋವನು ಕೇಳಿ ಕೋಪಗೊಂಡನು. ಯೆಹೋವನಿಂದ ಬಂದ ಬೆಂಕಿ ಅವರ ವಿರುದ್ಧವಾಗಿ ಹೊತ್ತಿಕೊಂಡದ್ದರಿಂದ ಪಾಳೆಯದ ಹೊರಭಾಗದಲ್ಲಿದ್ದವರು ಸುಟ್ಟುಹೋದರು.


ನಾವು ಪಾಳೆಯದ ಹೊರಗಡೆಯಲ್ಲಿರುವ ಆತನ ಬಳಿಗೆ ಹೋಗಬೇಕು. ಆತನಿಗಾದ ಅಪಮಾನವನ್ನು ನಾವೂ ಸ್ವೀಕರಿಸಿಕೊಳ್ಳಬೇಕು.


ನಾನು ಬಾಬಿಲೋನಿನವರನ್ನು ಬಲಾಢ್ಯ ಜನಾಂಗವಾಗಿ ಮಾಡುವೆನು. ಅವರು ಬಲಶಾಲಿಗಳೂ ನಿರ್ದಯಿಗಳೂ ಆಗಿದ್ದಾರೆ. ಅವರು ಲೋಕದಲ್ಲೆಲ್ಲಾ ಸಂಚರಿಸುವರು. ತಮ್ಮದಲ್ಲದ ಮನೆಗಳನ್ನು ಮತ್ತು ನಗರಗಳನ್ನು ತಮ್ಮ ವಶಮಾಡಿಕೊಳ್ಳುವರು.


ಆಗ ಒಡೆದುಹಾಕುವವನು ಜನಗಳ ಮುಂದೆ ಮುನ್ನುಗ್ಗಿ ಹೋಗಿ, ದ್ವಾರಗಳನ್ನು ಒಡೆದುಹಾಕಿದಾಗ ಜನರು ಪಟ್ಟಣವನ್ನು ಬಿಟ್ಟುಹೋಗುವರು. ಅವರು ತಮ್ಮ ರಾಜನನ್ನೂ ಕರ್ತನನ್ನೂ ಹಿಂಬಾಲಿಸಿಕೊಂಡು ಅಲ್ಲಿಂದ ಹೋಗುವರು.


ಬಹುಕಾಲದವರೆಗೆ ಅಗ್ನಿಕುಂಡ ಸಿದ್ಧವಾಗಿತ್ತು. ಅದು ರಾಜನಿಗಾಗಿ ಸಿದ್ಧವಾಗಿದೆ. ಅದು ಆಳವಾಗಿಯೂ ಅಗಲವಾಗಿಯೂ ಮಾಡಲ್ಪಟ್ಟಿದೆ. ಅಲ್ಲಿ ಒಂದು ದೊಡ್ಡ ಕಟ್ಟಿಗೆಯ ರಾಶಿಯೂ ಬೆಂಕಿಯೂ ಇದೆ ಮತ್ತು ಯೆಹೋವನ ಬಾಯುಸಿರು ಗಂಧಕದ ಪ್ರವಾಹದಂತೆ ಬಂದು ಎಲ್ಲವನ್ನು ನಾಶಮಾಡುವದು.


ಎಲೀಷನ ಸೇವಕನು ಹೊತ್ತಾರೆ ನಸುಕಿನಲ್ಲಿಯೇ ಮೇಲಕ್ಕೆದ್ದನು. ಸೇವಕನು ಹೊರಕ್ಕೆ ಹೋದಾಗ ರಥಗಳಿಂದ ಮತ್ತು ಕುದುರೆಗಳಿಂದ ಕೂಡಿದ ಸೈನ್ಯವು ನಗರವನ್ನು ಸುತ್ತುವರಿದಿರುವುದನ್ನು ನೋಡಿದನು! ಆ ಸೇವಕನು ಎಲೀಷನಿಗೆ, “ಅಯ್ಯೋ, ನನ್ನ ಒಡೆಯನೇ, ನಾವು ಈಗ ಏನು ಮಾಡೋಣ?” ಎಂದು ಕೇಳಿದನು.


ಆಗ ಯೆಹೋವನು ಸೊದೋಮ್ ಮತ್ತು ಗೊಮೋರ ಪಟ್ಟಣಗಳ ಮೇಲೆ ಆಕಾಶದಿಂದ ಉರಿಯುವ ಗಂಧಕದ ಮಳೆಯನ್ನು ಸುರಿಸಿದನು.


“ಜೆರುಸಲೇಮಿನ ಸುತ್ತಲೂ ಸೈನ್ಯಗಳು ಮುತ್ತಿಗೆ ಹಾಕುವುದನ್ನು ನೀವು ನೋಡುವಿರಿ. ಆಗ ಜೆರುಸಲೇಮಿನ ನಾಶನದ ಕಾಲ ಬಂತೆಂದು ನೀವು ತಿಳಿದುಕೊಳ್ಳಿರಿ.


ನಿನ್ನ ವೈರಿಗಳು ನಿನ್ನ ಸುತ್ತಲೂ ಗೋಡೆ ಕಟ್ಟಿ ನಿನ್ನನ್ನು ಎಲ್ಲಾ ಕಡೆಗಳಿಂದಲೂ ಮುತ್ತಿಗೆ ಹಾಕಿ,


ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸಂರಕ್ಷಿಸಲೂ ವೈರಿಗಳನ್ನು ಸೋಲಿಸುವಂತೆ ಸಹಾಯ ಮಾಡಲೂ ನಿಮ್ಮೊಂದಿಗೆ ಪಾಳೆಯದಲ್ಲಿರುವುದರಿಂದ ನಿಮ್ಮ ಪಾಳೆಯವು ಪವಿತ್ರವಾಗಿರಬೇಕು. ಇಲ್ಲದಿದ್ದಲ್ಲಿ ನಿಮ್ಮ ಪಾಳೆಯದಲ್ಲಿರುವ ಹೊಲಸನ್ನು ನೋಡಿ ಆತನು ಹಿಂದಿರುಗಿ ಹೋಗುವನು.


ಯೆಹೋವನು ಚೀಯೋನಿನ ಬಾಗಿಲುಗಳನ್ನು ಇಸ್ರೇಲಿನ ಇತರ ಸ್ಥಳಗಳಿಗಿಂತಲೂ ಹೆಚ್ಚಾಗಿ ಪ್ರೀತಿಸುವನು.


ಯೋಬನೇ, ಭೂಮಿಯ ವಿಶಾಲತೆಯನ್ನು ನೋಡಿರುವಿಯಾ? ನೀನು ನಿಜವಾಗಿಯೂ ಅರ್ಥಮಾಡಿಕೊಳ್ಳುವಿಯಾ? ನಿನಗೆ ಇದೆಲ್ಲಾ ತಿಳಿದಿದ್ದರೆ, ನನಗೆ ಹೇಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು