Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 21:8 - ಪರಿಶುದ್ದ ಬೈಬಲ್‌

8 ಆದರೆ ಹೇಡಿಗಳಿಗೆ, ನಂಬಿಕೆಯಿಲ್ಲದವರಿಗೆ, ಅಸಹ್ಯಕೃತ್ಯ ಮಾಡುವವರಿಗೆ, ಕೊಲೆಗಾರರಿಗೆ, ಲೈಂಗಿಕ ಪಾಪಮಾಡುವವರಿಗೆ, ಮಾಟಮಂತ್ರಗಾರರಿಗೆ, ವಿಗ್ರಹಾರಾಧಕರಿಗೆ, ಸುಳ್ಳುಗಾರರಿಗೆ ಸಿಕ್ಕುವ ಸ್ಥಳ ಬೆಂಕಿಗಂಧಕಗಳು ಉರಿಯುವ ಕೆರೆಯೇ. ಇದು ಎರಡನೆಯ ಮರಣವಾಗಿರುತ್ತದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ ಹೇಡಿಗಳು, ನಂಬದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ, ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು!” ಎಂದು ನನಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಖರೆ ಭಿವ್‍ಕುರ್‍ಯಾಕ್ನಿ, ವಿಶ್ವಾಸಾನ್‍ ನಸಲ್ಲ್ಯಾಕ್ನಿ, ನಶ್ಟ್ಯಾಕ್ನಿ, ಜಿವ್ ಕಾಡ್ತಲ್ಯಾಕ್ನಿ, ವ್ಯೆಭಿಚಾರ್ ಕರ್ತಲ್ಯಾಕ್ನಿ, ಜಾದುವಾ ನಾಹೊಲ್ಯಾರ್ ಮುರ್ತಿ ಪುಜ್ಯಾ ಕರ್ತಲ್ಯಾಕ್ನಿ ಅನಿ ಝುಟೆ ಬೊಲ್ತಲ್ಯಾಕ್ನಿ ಸಗ್ಳ್ಯಾಕ್ನಿ ಗಾವ್ತಲೊ ಜಾಗೊ ಗಂಧಕಾಚಿ ಆಗ್ ಪೆಟ್ತಲೆ ನರ್ಕಾತ್. ಹೆಚ್ ದೊನ್ವೆಚೆ ಮರಾನ್”, ಮಟ್ಲ್ಯಾನ್‍.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 21:8
39 ತಿಳಿವುಗಳ ಹೋಲಿಕೆ  

“ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ.


ನಗರದ ಹೊರಭಾಗದಲ್ಲಿ ನಾಯಿಗಳಿವೆ (ಕೆಟ್ಟಜನರು), ಕೆಟ್ಟ ಮಾಟವನ್ನು ಮಾಡುವ ಜನರಿದ್ದಾರೆ, ಲೈಂಗಿಕ ಪಾಪಗಳನ್ನು ಮಾಡುವ ಜನರಿದ್ದಾರೆ, ಕೊಲೆಗಾರರಿದ್ದಾರೆ, ವಿಗ್ರಹಗಳನ್ನು ಆರಾಧಿಸುವ ಜನರಿದ್ದಾರೆ ಮತ್ತು ಸುಳ್ಳನ್ನು ಪ್ರೀತಿಸುವ ಮತ್ತು ಹೇಳುವ ಜನರಿದ್ದಾರೆ.


ಸುಳ್ಳುಸಾಕ್ಷಿಯು ದಂಡಿಸಲ್ಪಡುವನು; ಸುಳ್ಳುಗಾರನು ನಾಶವಾಗುವನು.


ತನ್ನ ಸಹೋದರನನ್ನು ದ್ವೇಷಿಸುವ ಪ್ರತಿಯೊಬ್ಬನೂ ಕೊಲೆಗಾರನಾಗಿದ್ದಾನೆ. ಯಾವ ಕೊಲೆಗಾರನಲ್ಲಿಯೂ ನಿತ್ಯಜೀವ ಇರುವುದಿಲ್ಲವೆಂಬುದು ನಿಮಗೆ ತಿಳಿದಿದೆ.


ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.


ಮದುವೆಯನ್ನು ಜನರೆಲ್ಲರೂ ಗೌರವಿಸಬೇಕು. ಗಂಡ ಹೆಂಡತಿಯರ ಸಂಬಂಧ ಪರಿಶುದ್ಧವಾಗಿರಬೇಕು. ಲೈಂಗಿಕ ಪಾಪಗಳನ್ನು ಮಾಡುವವರು ಮತ್ತು ವ್ಯಭಿಚಾರವನ್ನು ಮಾಡುವವರು ದೇವರ ತೀರ್ಪಿಗೆ ಒಳಗಾಗಿದ್ದಾರೆ.


ಆ ಬೋಧನೆಗಳು ಸುಳ್ಳು ಹೇಳುವ ಮತ್ತು ವಂಚಿಸುವ ಜನರ ಮೂಲಕ ಬರುತ್ತವೆ. ಅವರು ಸರಿತಪ್ಪುಗಳ ಭೇದವನ್ನು ಗುರುತಿಸುವುದಿಲ್ಲ. ಕಾದ ಕಬ್ಬಿಣದಿಂದ ಸುಟ್ಟು ಬೂದಿಯಾಗುವಂತೆ ಅವರ ವಿವೇಕವು ನಾಶಗೊಂಡಿದೆ.


ಯೇಸು, “ನೀವು ಭಯಪಡುವುದೇಕೆ? ನಿಮ್ಮಲ್ಲಿ ಸಾಕಷ್ಟು ನಂಬಿಕೆಯಿಲ್ಲ” ಎಂದು ಉತ್ತರಿಸಿ ಎದ್ದುನಿಂತುಕೊಂಡು ಆ ದೊಡ್ಡ ಬಿರುಗಾಳಿಗೂ ಅಲೆಗಳಿಗೂ ಆಜ್ಞಾಪಿಸಿದನು. ಆ ಕೂಡಲೇ ಬಿರುಗಾಳಿ ನಿಂತುಹೋಯಿತು. ಸರೋವರ ಪ್ರಶಾಂತವಾಯಿತು.


ಈ ಜನರು ತಮ್ಮ ಹೃದಯಗಳನ್ನು ಮತ್ತು ಜೀವಿತಗಳನ್ನು ಪರಿವರ್ತಿಸಿಕೊಳ್ಳಲಿಲ್ಲ ಮತ್ತು ಇತರರನ್ನು ಕೊಲ್ಲುವುದನ್ನು ಬಿಟ್ಟುಬಿಡಲಿಲ್ಲ. ಅವರು ತಾವು ನಡೆಸುತ್ತಿದ್ದ ಮಾಟಮಂತ್ರಗಳನ್ನು, ಲೈಂಗಿಕ ಪಾಪಗಳನ್ನು ಮತ್ತು ಕಳ್ಳತನವನ್ನು ತೊರೆದುಬಿಡಲಿಲ್ಲ.


ಸೈತಾನನೇ ನಿಮ್ಮ ತಂದೆ. ನೀವು ಅವನಿಗೆ ಹುಟ್ಟಿದವರಾಗಿದ್ದೀರಿ. ಅವನ ದುರಿಚ್ಛೆಗಳನ್ನು ಮಾಡಬಯಸುತ್ತೀರಿ. ಅವನು ಆರಂಭದಿಂದಲೂ ಕೊಲೆಗಾರನಾಗಿದ್ದು ಸತ್ಯಕ್ಕೆ ವಿರೋಧವಾಗಿದ್ದನು. ಅವನಲ್ಲಿ ಸತ್ಯವು ಇಲ್ಲವೇ ಇಲ್ಲ. ಅವನು ಸ್ವಭಾವಾನುಸಾರವಾಗಿ ಸುಳ್ಳಾಡುತ್ತಾನೆ. ಅವನು ಸುಳ್ಳುಗಾರನೂ ಸುಳ್ಳಿಗೆ ತಂದೆಯೂ ಆಗಿದ್ದಾನೆ.


“ಜನರಿಗೆ ಹೆದರಬೇಡಿ. ಅವರು ಶರೀರವನ್ನು ಮಾತ್ರ ಕೊಲ್ಲಬಹುದು. ಆತ್ಮವನ್ನು ಅವರು ಕೊಲ್ಲಲಾರರು. ಶರೀರವನ್ನೂ ಆತ್ಮವನ್ನೂ ನರಕಕ್ಕೆ ಹಾಕಬಲ್ಲ ದೇವರಿಗೆ ಭಯಪಡಿರಿ.


ಮತ್ತೊಬ್ಬನ ಮೇಲೆ ಸುಳ್ಳುಹೇಳುವವನು ದಂಡಿಸಲ್ಪಡುವನು. ಸುಳ್ಳುಸಾಕ್ಷಿಗೆ ಸುರಕ್ಷತೆಯಿಲ್ಲ.


“ಆ ಲೇವಿಯ ಅಧಿಕಾರಿಗಳು ಹೇಳಬೇಕಾದದ್ದೇನೆಂದರೆ: ‘ನಿಮ್ಮಲ್ಲಿ ಯಾರಾದರೂ ತಮ್ಮ ಧೈರ್ಯವನ್ನು ಕಳೆದುಕೊಂಡಿದ್ದರೆ ಅವನು ತನ್ನ ಮನೆಗೆ ಹೋಗಲಿ. ಅವನಿಂದಾಗಿ ಇತರ ಸೈನಿಕರೂ ತಮ್ಮ ಧೈರ್ಯವನ್ನು ಕಳೆದುಕೊಳ್ಳಬಹುದು.’


ಆದ್ದರಿಂದ ಸುಳ್ಳು ಹೇಳುವವನು ಯಾರು? ಯೇಸುವನ್ನು ಕ್ರಿಸ್ತನಲ್ಲವೆಂದು ಹೇಳುವವನೇ ಸುಳ್ಳುಗಾರ. ಅವನು ಕ್ರಿಸ್ತನ ವೈರಿಯಾಗಿದ್ದಾನೆ. ಅವನು ತಂದೆಯನ್ನಾಗಲಿ (ದೇವರು), ಆತನ ಮಗನನ್ನಾಗಲಿ (ಕ್ರಿಸ್ತನು) ನಂಬುವುದಿಲ್ಲ.


ತಲೆ ಅಂದರೆ ಹಿರಿಯರು ಮತ್ತು ಪ್ರಮುಖರು. ಬಾಲವೆಂದರೆ ಸುಳ್ಳುಪ್ರವಾದಿಗಳು.


ದೇವರ ಮಗನನ್ನು ನಂಬುವವನು ದೇವರಿಂದ ಸಾಕ್ಷೀಕರಿಸಲ್ಪಟ್ಟ ಸತ್ಯವನ್ನು ಹೊಂದಿರುತ್ತಾನೆ. ದೇವರನ್ನು ನಂಬದೆ ಇರುವವನು, ದೇವರನ್ನು ಸುಳ್ಳುಗಾರನನ್ನಾಗಿ ಮಾಡುತ್ತಾನೆ. ಏಕೆಂದರೆ ದೇವರು ತನ್ನ ಮಗನ ಬಗ್ಗೆ ನಮಗೆ ಹೇಳಿದುದನ್ನು ಅವನು ನಂಬುವುದಿಲ್ಲ.


ನೀವು ನನ್ನನ್ನು ಜ್ಞಾಪಕ ಮಾಡಿಕೊಳ್ಳಲಿಲ್ಲ. ನನ್ನನ್ನು ಗಮನಕ್ಕೇ ತರಲಿಲ್ಲ. ಹೀಗಿರಲು ನೀವು ಯಾರ ಬಗ್ಗೆ ಚಿಂತಿಸುತ್ತಿದ್ದಿರಿ? ನೀವು ಯಾರಿಗೆ ಭಯಪಡುತ್ತಿದ್ದಿರಿ? ನೀವು ಸುಳ್ಳಾಡಿದ್ದು ಯಾಕೆ? ನೋಡಿ, ನಾನು ಬಹಳ ಸಮಯದಿಂದ ಸುಮ್ಮನಿದ್ದೆನು. ಆದರೆ ನೀವು ನನ್ನನ್ನು ಗೌರವಿಸಲಿಲ್ಲ.


ಅದಕ್ಕಾಗಿ ಈಗ, ‘ಭಯಪಡುವವರೆಲ್ಲರು ಗಿಲ್ಯಾದ್ ಬೆಟ್ಟವನ್ನು ಬಿಟ್ಟುಹೋಗಬಹುದು’ ಎಂದು ಪ್ರಕಟಿಸು” ಎಂದು ಹೇಳಿದನು. ಆ ಸಮಯದಲ್ಲಿ ಇಪ್ಪತ್ತೆರಡು ಸಾವಿರ ಜನರು ಗಿದ್ಯೋನನನ್ನು ಬಿಟ್ಟು ಮನೆಗೆ ಹಿಂದಿರುಗಿದರು. ಆದರೆ ಇನ್ನೂ ಹತ್ತು ಸಾವಿರ ಜನರು ಉಳಿದುಕೊಂಡರು.


“ನೀನು ಮಾಡುತ್ತಿರುವುದು ನನಗೆ ತಿಳಿದಿದೆ. ನೀನು ಕಷ್ಟಪಟ್ಟು ಕೆಲಸಮಾಡುತ್ತಾ ತಾಳ್ಮೆಯಿಂದಿರುವೆ. ನೀನು ಕೆಟ್ಟ ಜನರನ್ನು ಸಹಿಸಿಕೊಳ್ಳುವುದಿಲ್ಲ ಎಂಬುದು ನನಗೆ ತಿಳಿದಿದೆ. ಅಪೊಸ್ತಲರಾಗಿಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ, ಅವರು ಸುಳ್ಳುಗಾರರೆಂಬುದನ್ನು ಕಂಡುಹಿಡಿದಿರುವೆ.


ಯೆಹೋವನು ಹೇಳುವುದೇನೆಂದರೆ, “ನಿನ್ನನ್ನು ಸಂತೈಸುವಾತನು ನಾನೇ. ಆದ್ದರಿಂದ ನೀನು ಜನರಿಗೆ ಯಾಕೆ ಹೆದರಬೇಕು. ಅವರು ಹುಟ್ಟಿ ಸಾಯುವ ನರರಾಗಿದ್ದಾರೆ. ಅವರು ಹುಲ್ಲಿನಂತೆ ಸಾಯುವ ಕೇವಲ ಮಾನವರಾಗಿದ್ದಾರೆ.”


ಆ ಅಧರ್ಮಸ್ವರೂಪನು ಸೈತಾನನ ಮಹಾಶಕ್ತಿಯಿಂದ ಕೂಡಿದವನಾಗಿರುತ್ತಾನೆ. ಅವನು ಅನೇಕ ಮೋಸದ ಪವಾಡಗಳನ್ನು, ಸೂಚಕಕಾರ್ಯಗಳನ್ನು, ಅದ್ಭುತಕಾರ್ಯಗಳನ್ನು ಮಾಡುತ್ತಾನೆ.


ದೇವರಿಂದ ಹೊಸ ಒಡಂಬಡಿಕೆಯನ್ನು ತಂದಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಉತ್ತಮ ಸಂಗತಿಗಳನ್ನು ನಮಗೆ ತಿಳಿಸುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.


ದೇವರ ಬಗ್ಗೆ ತಮಗೆ ತಿಳಿದಿದೆಯೆಂದು ಅವರು ಹೇಳಿದರೂ ಅವರು ದೇವರನ್ನು ತಿಳಿದಿಲ್ಲವೆಂದು ಅವರ ಕೆಟ್ಟಕಾರ್ಯಗಳೇ ಸ್ಪಷ್ಟಪಡಿಸುತ್ತವೆ. ಅವರು ಭಯಂಕರವಾದ ಜನರು ಮತ್ತು ಅವಿಧೇಯರು. ಯಾವ ಸತ್ಕಾರ್ಯಗಳನ್ನು ಮಾಡುವುದಕ್ಕೂ ಅವರು ಯೋಗ್ಯರಲ್ಲ.


ನಾನು ದರ್ಶನದಲ್ಲಿ ಕುದುರೆಗಳನ್ನೂ ಕುದುರೆಗಳ ಮೇಲಿದ್ದ ಸವಾರರನ್ನೂ ನೋಡಿದೆನು. ಅವರು ಹೀಗೆ ಕಾಣುತ್ತಿದ್ದರು: ಅವರು ಬೆಂಕಿಯಂತೆ ಕೆಂಪಾದ, ಕಪ್ಪಾದ, ನೀಲಿಯ ಮತ್ತು ಗಂಧಕದಂತೆ ಹಳದಿಯಾದ ಕವಚಗಳನ್ನು ಹೊಂದಿದ್ದರು. ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತೆ ಕಾಣುತ್ತಿದ್ದವು. ಕುದುರೆಗಳ ಬಾಯಿಂದ ಬೆಂಕಿ, ಹೊಗೆ ಮತ್ತು ಗಂಧಕಗಳು ಬರುತ್ತಿದ್ದವು.


ಅವನು ದೇವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಯುತ್ತಾನೆ. ದೇವರ ಕೋಪವೆಂಬ ಬಟ್ಟಲಿನಲ್ಲಿ ಈ ದ್ರಾಕ್ಷಾರಸವನ್ನು ಅದರ ಪೂರ್ಣಶಕ್ತಿಯ ಸಮೇತವಾಗಿ ತಯಾರಿಸಲಾಗಿದೆ. ಅವನನ್ನು ಪರಿಶುದ್ಧ ದೇವದೂತರ ಮತ್ತು ಕುರಿಮರಿಯಾದಾತನ ಮುಂದೆ ಉರಿಯುವ ಗಂಧಕದಿಂದ ಯಾತನೆಪಡಿಸಲಾಗುವುದು.


ಪರಿಶುದ್ಧವಾಗಿಲ್ಲದ ಯಾವುದೂ ನಗರವನ್ನು ಪ್ರವೇಶಿಸುವುದೇ ಇಲ್ಲ. ಅವಮಾನಕರವಾದ ಕಾರ್ಯಗಳನ್ನು ಮಾಡುವವನಾಗಲಿ ಸುಳ್ಳು ಹೇಳುವವನಾಗಲಿ ನಗರವನ್ನು ಎಂದಿಗೂ ಪ್ರವೇಶಿಸುವುದಿಲ್ಲ. ಕುರಿಮರಿಯಾದಾತನು ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿರುವನೋ ಅವರು ಮಾತ್ರ ಆ ನಗರವನ್ನು ಪ್ರವೇಶಿಸುವರು.


ಆದ್ದರಿಂದ ನಾನು ಹೆದರಿಕೊಂಡು ನಿನ್ನ ಹಣವನ್ನು ಭೂಮಿಯಲ್ಲಿ ಅಡಗಿಸಿಟ್ಟೆನು. ನೀನು ನನಗೆ ಕೊಟ್ಟ ಹಣ ಇಲ್ಲಿದೆ, ತೆಗೆದುಕೊ’ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು