Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 3:11 - ಪರಿಶುದ್ದ ಬೈಬಲ್‌

11 “ನಾನು ಬೇಗನೆ ಬರುತ್ತೇನೆ. ಈಗ ನೀನಿರುವಂತೆಯೇ ಇರು. ಆಗ ಯಾರೂ ನಿನ್ನ ಕಿರೀಟವನ್ನು ಕಸಿದುಕೊಳ್ಳಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾನು ಬೇಗನೇ ಬರುತ್ತೇನೆ, ನಿನ್ನ ಕಿರೀಟವನ್ನು ಯಾರೂ ಕಸಿದುಕೊಳ್ಳದಂತೆ ನೀನು ಅವಲಂಬಿಸಿರುವುದನ್ನೇ ಆಶ್ರಯಿಸಿಕೊಂಡಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನಾನು ಬೇಗನೆ ಬರುತ್ತೇನೆ. ನಿನ್ನ ಜಯಮಾಲೆಯನ್ನು ಯಾರೂ ಕಸಿದುಕೊಳ್ಳದಂತೆ ನೀನು ಅವಲಂಬಿಸಿರುವುದನ್ನೇ ಆಶ್ರಯಿಸಿಕೊಂಡಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಬೇಗನೆ ಬರುತ್ತೇನೆ; ನಿನಗಿರುವದನ್ನು ಹಿಡಿದುಕೊಂಡಿರು; ನಿನ್ನ ಜಯಮಾಲೆಯನ್ನು ಯಾರೂ ಅಪಹರಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಾನು ಬೇಗ ಬರುತ್ತೇನೆ. ನಿನ್ನ ಕಿರೀಟವನ್ನು ಯಾರೂ ಅಪಹರಿಸದಂತೆ ನಿನಗಿರುವುದನ್ನು ಹಿಡಿದುಕೊಂಡಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಮಿಯಾ ಲಗ್ಗುನಾಚ್ ಯೆವ್ಲಾಲಾ. ಜೆ ಕಾಯ್ ತುಮ್ಚ್ಯಾಕ್ಡೆ ಹಾಯ್ ತೆ ಬರೆ ಕರುನ್ ಸಂಬಾಳುನ್ ಘೆವ್ನ್ ರ್‍ಹಾವಾ, ಅಸೆ ರ್‍ಹಾಲ್ಯಾರ್ ತುಮ್ಕಾ ನಾಹೊಲ್ಯಾರ್ ತುಮಿ ಜಿಕಲ್ಲ್ಯಾ ಭೊಮಾನಾ ಕೊನಾಕ್‍ಬಿ ಚೊರುನ್ ಘೆವ್ಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 3:11
19 ತಿಳಿವುಗಳ ಹೋಲಿಕೆ  

ಶೋಧನೆಯನ್ನು ಎದುರಿಸುತ್ತಿದ್ದರೂ ದೃಢವಾಗಿರುವವನೇ ಧನ್ಯನು. ಏಕೆಂದರೆ ಅವನು ತನ್ನ ನಂಬಿಕೆಯನ್ನು ನಿರೂಪಿಸಿದಾಗ, ಜೀವವೆಂಬ ಜಯಮಾಲೆಯನ್ನು ಹೊಂದುವನು. ದೇವರು ತನ್ನನ್ನು ಪ್ರೀತಿಸುವ ಜನರಿಗೆಲ್ಲರಿಗೂ ಇದನ್ನು ವಾಗ್ದಾನ ಮಾಡಿದ್ದಾನೆ.


“ಕೇಳು! ನಾನು ಬೇಗನೆ ಬರುತ್ತೇನೆ! ನನ್ನೊಂದಿಗೆ ಪ್ರತಿಫಲವನ್ನು ತರುತ್ತೇನೆ. ಪ್ರತಿಯೊಬ್ಬ ವ್ಯಕ್ತಿಗೂ ಅವನು ಮಾಡಿದುದಕ್ಕೆ ತಕ್ಕ ಪ್ರತಿಫಲವನ್ನು ಕೊಡುತ್ತೇನೆ.


ನಿನಗೆ ಸಂಭವಿಸುವ ಸಂಗತಿಗಳ ವಿಷಯದಲ್ಲಿ ಭಯಪಡಬೇಡ. ನಾನು ನಿನಗೆ ಹೇಳುವುದೇನೆಂದರೆ, ಸೈತಾನನು ನಿಮ್ಮಲ್ಲಿ ಕೆಲವರನ್ನು ಪರೀಕ್ಷಿಸುವುದಕ್ಕಾಗಿ ಸೆರೆಮನೆಗೆ ಹಾಕಿಸುತ್ತಾನೆ. ನೀವು ಹತ್ತು ದಿನಗಳ ಕಾಲ ಸಂಕಟವನ್ನು ಅನುಭವಿಸುವಿರಿ. ನೀನು ಸಾಯಬೇಕಾದರೂ ನಂಬಿಗಸ್ತನಾಗಿದ್ದರೆ, ನಾನು ನಿನಗೆ ಜೀವವೆಂಬ ಕಿರೀಟವನ್ನು ದಯಪಾಲಿಸುವೆನು.


ನಾನು ಬರುವ ತನಕ ಈಗ ನೀವಿರುವಂತೆಯೇ ಇರಿ.


ನೀತಿವಂತರಿಗೆ ದೊರೆಯುವ ಜಯಮಾಲೆಯು ಈಗ ನನಗೆ ಸಿದ್ಧವಾಗಿದೆ. ನೀತಿಯುಳ್ಳ ನ್ಯಾಯಾಧಿಪತಿಯಾಗಿರುವ ಪ್ರಭುವೇ ನನಗೆ ಅದನ್ನು ಆ ದಿನದಂದು ಕೊಡುವನು. ನನಗೆ ಮಾತ್ರವಲ್ಲದೆ ಆತನ ಬರುವಿಕೆಯನ್ನು ಅಪೇಕ್ಷಿಸಿ ಅದಕ್ಕಾಗಿ ಕಾಯುತ್ತಿದ್ದವರಿಗೆಲ್ಲ ಆತನು ಆ ಜಯಮಾಲೆಯನ್ನು ದಯಪಾಲಿಸುವನು.


ಓಟದ ಸ್ಪರ್ಧೆಯಲ್ಲಿ ಗೆಲ್ಲಬೇಕಾದರೆ, ಓಟಗಾರನು ಎಲ್ಲಾ ನಿಯಮಗಳನ್ನು ಪಾಲಿಸಬೇಕು.


ಇವುಗಳೆಲ್ಲಾ ನಿಜವೆಂದು ಹೇಳುವಾತನು ಯೇಸುವೇ. ಈಗ ಆತನು, “ಹೌದು, ನಾನು ಬೇಗನೆ ಬರುತ್ತೇನೆ” ಎಂದು ಹೇಳುತ್ತಾನೆ. ಆಮೆನ್! ಪ್ರಭು ಯೇಸುವೇ, ಬಾ!


ದೇವರಿಂದ ಬಂದ ಈ ಸಂದೇಶದ ವಾಕ್ಯಗಳನ್ನು ಓದುವವರೂ ಈ ಸಂದೇಶವನ್ನು ಕೇಳಿ ಅದನ್ನು ಕೈಕೊಂಡು ನಡೆಯುವವರೂ ಭಾಗ್ಯವಂತರಾಗಿದ್ದಾರೆ. ಏಕೆಂದರೆ ನೆರವೇರುವ ಕಾಲವು ಸಮೀಪವಾಗಿದೆ.


ಇಪ್ಪತ್ತನಾಲ್ಕು ಮಂದಿ ಹಿರಿಯರು ತಮ್ಮ ಕಿರೀಟಗಳನ್ನು ತೆಗೆದು ಬದಿಗಿಟ್ಟು, ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಮೊಣಕಾಲೂರಿ ನಮಸ್ಕರಿಸಿ, ಯುಗಯುಗಾಂತರಗಳಲ್ಲಿಯೂ ಜೀವಿಸುವ ಆತನನ್ನು ಆರಾಧಿಸುತ್ತಾ ಇಂತೆಂದರು:


ಪಂದ್ಯಗಳಲ್ಲಿ ಸ್ಪರ್ಧಿಸುವ ಕ್ರೀಡಾಪಟುಗಳು ಪದಕಗಳಿಸಲು ಕಟ್ಟುನಿಟ್ಟಾದ ತರಬೇತಿಯಲ್ಲಿರುತ್ತಾರೆ. ಆದರೆ ಈ ಲೋಕದ ಆ ಪದಕವು ಸ್ವಲ್ಪಕಾಲ ಮಾತ್ರ ಇರುತ್ತದೆ. ಆದರೆ ನಮ್ಮ ಪದಕವು ಶಾಶ್ವತವಾದದ್ದು.


ಆದ್ದರಿಂದ ನೀನು ಸ್ವೀಕರಿಸಿಕೊಂಡ ಮತ್ತು ಕೇಳಿದ ಉಪದೇಶವನ್ನು ಮರೆಯದೆ ಅದಕ್ಕೆ ವಿಧೇಯನಾಗಿರು. ನಿನ್ನ ಹೃದಯವನ್ನೂ ಜೀವಿತವನ್ನೂ ಪರಿವರ್ತಿಸಿಕೊ! ಎಚ್ಚರಗೊಳ್ಳು! ಇಲ್ಲವಾದರೆ, ನಾನು ಕಳ್ಳನಂತೆ ನಿನ್ನ ಬಳಿಗೆ ಬಂದು ಆಶ್ಚರ್ಯಗೊಳಿಸುತ್ತೇನೆ. ನಾನು ಯಾವಾಗ ಬರುತ್ತೇನೆ ಎಂಬುದು ನಿನಗೆ ಗೊತ್ತಿರುವುದಿಲ್ಲ.


ಆ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತುಕೊಂಡಿದ್ದರು. ಅವರು ಬಿಳಿ ವಸ್ತ್ರಗಳನ್ನು ಧರಿಸಿದ್ದರು. ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು.


“ನೀನು ಎಲ್ಲಿ ವಾಸಮಾಡುತ್ತಿರುವೆ ಎಂಬುದು ನನಗೆ ತಿಳಿದಿದೆ. ಸೈತಾನನ ಸಿಂಹಾಸನ ವಿರುವ ಕಡೆಯಲ್ಲಿ ನೀನು ವಾಸಿಸುತ್ತಿರುವೆ. ಆದರೆ ನೀನು ನನಗೆ ನಂಬಿಗಸ್ತನಾಗಿರುವೆ. ಅಂತಿಪನ ಕಾಲದಲ್ಲಿಯೂ ನೀನು ನನ್ನಲ್ಲಿಟ್ಟಿರುವ ನಂಬಿಕೆಯನ್ನು ತಿಳಿಸಲು ನಿರಾಕರಿಸಲಿಲ್ಲ. ನಿನ್ನ ಪಟ್ಟಣದಲ್ಲಿ ಕೊಲ್ಲಲ್ಪಟ್ಟ ಅಂತಿಪನು ನನ್ನ ನಂಬಿಗಸ್ತ ಸಾಕ್ಷಿಯಾಗಿದ್ದನು. ನಿನ್ನ ನಗರ ಸೈತಾನನು ವಾಸಿಸುವ ನಗರವಾಗಿದೆ.


‘ಕೇಳಿರಿ, ನಾನು ಬೇಗನೆ ಬರುತ್ತೇನೆ! ಈ ಪುಸ್ತಕದಲ್ಲಿರುವ ಪ್ರವಾದನೆಯ ವಾಕ್ಯಗಳಿಗೆ ವಿಧೇಯತೆಯಿಂದಿರುವವನು ಧನ್ಯನಾಗುತ್ತಾನೆ’” ಎಂದು ಹೇಳಿದನು.


ಯೆಹೋವನ ನ್ಯಾಯತೀರ್ಪಿನ ದಿನವು ಬೇಗನೇ ಬರುತ್ತದೆ; ಅತ್ಯಂತ ವೇಗವಾಗಿ ಬರುತ್ತಿದೆ. ಆ ದಿನದಂದು ಜನರು ಬಹಳವಾಗಿ ದುಃಖಿಸುವರು. ಧೈರ್ಯಶಾಲಿಗಳಾದ ಸೈನಿಕರೂ ಅಳುವರು.


ಸಹೋದರ ಸಹೋದರಿಯರೇ, ಒಬ್ಬರ ಮೇಲೊಬ್ಬರು ದೂರದಿರಿ. ನೀವು ದೂರುವುದನ್ನು ನಿಲ್ಲಿಸದಿದ್ದರೆ ದೋಷಿಗಳೆಂದು ನಿಮಗೆ ತೀರ್ಪು ನೀಡಲಾಗುವುದು. ನ್ಯಾಯಧಿಪತಿಯು ಬರಲು ಸಿದ್ಧನಾಗಿದ್ದಾನೆ!


ನಿಮ್ಮ ಮೃದುಸ್ವಭಾವವನ್ನೂ ಕರುಣೆಯನ್ನೂ ಜನರೆಲ್ಲರೂ ನೋಡುವಂತಾಗಲಿ. ಪ್ರಭುವು ಬೇಗನೆ ಬರುತ್ತಾನೆ.


“ಕೇಳಿರಿ! ನಾನು ಕಳ್ಳನಂತೆ ಬರುತ್ತೇನೆ. ಎಚ್ಚರವಾಗಿದ್ದು ತನ್ನ ಬಟ್ಟೆಗಳನ್ನು ಕಾಪಾಡಿಕೊಳ್ಳುವವನು ಭಾಗ್ಯವಂತನಾಗಿದ್ದಾನೆ. ಆಗ ಅವನು ಬಟ್ಟೆಯಿಲ್ಲದೆ ಹೊರಗೆ ಹೋಗಿ ತನ್ನನ್ನು ನಾಚಿಕೆಗೆ ಗುರಿಪಡಿಸಿಕೊಳ್ಳುವ ಅಗತ್ಯತೆವಿರುವುದಿಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು