Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 3:18 - ಪರಿಶುದ್ದ ಬೈಬಲ್‌

18 ಬೆಂಕಿಯಲ್ಲಿ ಪುಟಹಾಕಿದ ಅಪ್ಪಟ ಚಿನ್ನವನ್ನು ನೀನು ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ಸಲಹೆ ನೀಡುತ್ತೇನೆ. ಆಗ ನೀನು ನಿಜವಾಗಿಯೂ ಶ್ರೀಮಂತನಾಗಲು ಸಾಧ್ಯ. ನಾನು ನಿನಗೆ ಹೇಳುವುದೇನೆಂದರೆ: ಬಿಳಿವಸ್ತ್ರಗಳನ್ನು ಕೊಂಡುಕೊ. ಆಗ ನೀನು ನಾಚಿಕೆಕರವಾದ ನಿನ್ನ ಬೆತ್ತಲೆಯನ್ನು ಮುಚ್ಚಿಕೊಳ್ಳಲು ಸಾಧ್ಯವಾಗುವುದು. ನೀನು ನಿನ್ನ ಕಣ್ಣುಗಳಿಗೆ ಹಚ್ಚಲು ಔಷಧಿಯನ್ನು ಕೊಂಡುಕೊಳ್ಳಬೇಕೆಂತಲೂ ನಾನು ನಿನಗೆ ಹೇಳುತ್ತೇನೆ. ಆಗ ನಿನಗೆ ನಿಜವಾಗಿಯೂ ದೃಷ್ಟಿ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನೀನು ಐಶ್ವರ್ಯವಂತನಾಗಲು ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ, ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿ ಬಿಳೀವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಈಗ ನನ್ನ ಬುದ್ಧಿಮಾತುಗಳನ್ನು ಕೇಳು. ನೀನು ಐಶ್ವರ್ಯವಂತನಾಗುವಂತೆ ಬೆಂಕಿಯಲ್ಲಿ ಪುಟವಿಟ್ಟ ಚಿನ್ನವನ್ನು ನನ್ನಿಂದ ಕೊಂಡುಕೋ. ಲಜ್ಜಾಸ್ಪದವಾದ ನಿನ್ನ ಬೆತ್ತಲೆಯನ್ನು ಮುಚ್ಚಿಕೊಳ್ಳಲು ಶ್ವೇತವಸ್ತ್ರಗಳನ್ನು ನನ್ನಿಂದ ಕ್ರಯಕ್ಕೆ ಕೊಂಡುಕೊಂಡು ಅವುಗಳನ್ನು ಧರಿಸಿಕೋ. ನಿನಗೆ ಕಣ್ಣು ಕಾಣಿಸುವಂತೆ ಲೇಪನವನ್ನು ನನ್ನಿಂದ ಬೆಲೆಗೆ ತೆಗೆದುಕೊಂಡು ನಿನ್ನ ಕಣ್ಣುಗಳಿಗೆ ಹಚ್ಚಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನೀನು ಐಶ್ವರ್ಯವಂತನಾಗುವಂತೆ ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ, ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಹೊದ್ದುಕೊಳ್ಳುವದಕ್ಕಾಗಿ ಬಿಳೀವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಿನಗೆ ಬುದ್ಧಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನೀನು ಸಿರಿವಂತನಾಗುವಂತೆ ಬೆಂಕಿಯಲ್ಲಿ ಪುಟಕ್ಕೆ ಹಾಕಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿ ಬಿಳಿ ವಸ್ತ್ರಗಳನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಮುಲಾಮನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತೆಚೆಸಾಟ್ನಿ ಮಿಯಾ ತುಕಾ ಸಾಂಗ್ತಾ, ತಿಯಾ ಸಾವ್ಕಾರ್ ಹೊವ್ಕ್ ಮನುನ್ ಸೊನೆ, ಬರ್‍ಯಾತ್ಲೆ ಬರೆ ಸೊನೆ ಮಾಜೆಕ್ನಾ ಇಕಾತ್ ಘೆ, ಅನಿ ತುಜಿ ಮರ್ಯಾದ್ ಧಾಪುನ್ ಘೆವ್ಕ್ ತುಜ್ಯಾ ಆಂಗಾರ್ ನೆಸುಕ್ ಫಾಂಡ್ರೆ ಕಪ್ಡೆಬಿ ಮಾಜೆಕ್ನಾ ಇಕಾತ್ ಘೆ. ತುಜ್ಯಾ ಡೊಳ್ಯಾಕ್ನಿ ದಿಸಿ ಸರ್ಕೆ ಹೊತಲೆ ಉಲ್ಲೆಸೆ ವೊಕಾತ್‍ಬಿ ತಿಯಾ ಮಾಜೆಕ್ನಾ ಇಕಾತ್ ಘೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 3:18
34 ತಿಳಿವುಗಳ ಹೋಲಿಕೆ  

“ಕೇಳಿರಿ! ನಾನು ಕಳ್ಳನಂತೆ ಬರುತ್ತೇನೆ. ಎಚ್ಚರವಾಗಿದ್ದು ತನ್ನ ಬಟ್ಟೆಗಳನ್ನು ಕಾಪಾಡಿಕೊಳ್ಳುವವನು ಭಾಗ್ಯವಂತನಾಗಿದ್ದಾನೆ. ಆಗ ಅವನು ಬಟ್ಟೆಯಿಲ್ಲದೆ ಹೊರಗೆ ಹೋಗಿ ತನ್ನನ್ನು ನಾಚಿಕೆಗೆ ಗುರಿಪಡಿಸಿಕೊಳ್ಳುವ ಅಗತ್ಯತೆವಿರುವುದಿಲ್ಲ.”


ನಿಮ್ಮ ನಂಬಿಕೆಯು ಪರಿಶುದ್ಧವಾಗಿದೆ ಎಂಬುದನ್ನು ಪ್ರಕಟಿಸಲು ಈ ತೊಂದರೆಗಳು ಸಂಭವಿಸುತ್ತವೆ. ನಿಮ್ಮ ನಂಬಿಕೆಯ ಪರಿಶುದ್ಧತೆಯು ಬಂಗಾರದ ಮೌಲ್ಯಕ್ಕಿಂತಲೂ ಹೆಚ್ಚಿನದಾಗಿದೆ. ಬಂಗಾರವು ನಶಿಸಿಹೋಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟ ಹಾಕಿ ಅದರ ಪರಿಶುದ್ಧತೆಯನ್ನು ಶೋಧಿಸುವರು. ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ, ನಿಮ್ಮ ನಂಬಿಕೆಯ ಪರಿಶುದ್ಧತೆಯು ನಿಮಗೆ ಕೀರ್ತಿ, ಪ್ರಭಾವ ಮತ್ತು ಗೌರವಗಳನ್ನು ತರುತ್ತದೆ.


“ಎಲೈ ಬಾಯಾರಿದ ಜನರೆಲ್ಲರೇ, ಬಂದು ನೀರನ್ನು ಕುಡಿಯಿರಿ. ನಿಮ್ಮಲ್ಲಿ ಹಣವಿಲ್ಲವೆಂದು ಚಿಂತೆಮಾಡಬೇಡಿರಿ. ಬಂದು ಹೊಟ್ಟೆತುಂಬಾ ತಿಂದು ಕುಡಿಯಿರಿ. ನೀವು ಹಣ ಕೊಡಬೇಕಿಲ್ಲ. ಹೊಟ್ಟೆತುಂಬಾ ತಿಂದು ಕುಡಿಯಿರಿ ಹಾಲಿಗೂ ದ್ರಾಕ್ಷಾರಸಕ್ಕೂ ಕ್ರಯವಿಲ್ಲ.


ನಯವಾದ ನಾರುಮಡಿಯನ್ನು ವಧುವಿಗೆ ಧರಿಸಲು ನೀಡಲಾಗಿತ್ತು. ಆ ನಾರುಮಡಿಯು ಪ್ರಕಾಶಮಾನವಾಗಿತ್ತು ಹಾಗೂ ಶುಭ್ರವಾಗಿತ್ತು.” (ನಯವಾದ ನಾರುಮಡಿಯೆಂದರೆ ದೇವರ ಪರಿಶುದ್ಧ ಜನರು ಮಾಡಿದ ಒಳ್ಳೆಯ ಕಾರ್ಯಗಳು ಎಂದರ್ಥ.)


ಆತನು ಲೇವಿಯರನ್ನು ಶುದ್ಧಮಾಡುವನು. ಅವರನ್ನು ಬೆಂಕಿಯಿಂದ ಪರಿಶುದ್ಧ ಮಾಡುವನು. ಶುದ್ಧ ಬೆಳ್ಳಿ ಚಿನ್ನದಂತೆ ಆತನು ಅವರನ್ನು ಶುದ್ಧಿಮಾಡುವನು. ಆಗ ಅವರು ಯೆಹೋವನಿಗೆ ಕಾಣಿಕೆಗಳನ್ನು ತರುವರು; ಸರಿಯಾದ ರೀತಿಯಲ್ಲಿ ಕಾಣಿಕೆಗಳನ್ನು ಅರ್ಪಿಸುವರು.


ಆಗ ಹಿರಿಯರಲ್ಲೊಬ್ಬನು, “ಬಿಳಿ ನಿಲುವಂಗಿಗಳನ್ನು ಧರಿಸಿಕೊಂಡಿರುವ ಈ ಜನರು ಯಾರು! ಅವರು ಎಲ್ಲಿಂದ ಬಂದವರು?” ಎಂದು ನನ್ನನ್ನು ಕೇಳಿದನು.


“ಪರಲೋಕರಾಜ್ಯವು ಹೊಲದಲ್ಲಿ ಹೂಳಿಟ್ಟ ನಿಧಿಗೆ ಹೋಲಿಕೆಯಾಗಿದೆ. ಒಂದು ದಿನ ಒಬ್ಬನು ಆ ನಿಧಿಯನ್ನು ಕಂಡು ಬಹಳ ಸಂತೋಷದಿಂದ ಅದನ್ನು ಹೊಲದಲ್ಲಿ ಅಡಗಿಸಿಟ್ಟನು. ಬಳಿಕ ಅವನು ತನ್ನ ಆಸ್ತಿಯನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು.


ಮರಣಹೊಂದಿದ, ಸಮಾಧಿಗಳಲ್ಲಿ ದೀರ್ಘನಿದ್ರೆ ಮಾಡುತ್ತಿದ್ದವರಲ್ಲಿ ಅನೇಕರು ಎಚ್ಚೆತ್ತುಕೊಳ್ಳುವರು. ಕೆಲವರು ಎಚ್ಚೆತ್ತು ನಿತ್ಯಜೀವವನ್ನು ಅನುಭವಿಸುವರು. ಕೆಲವರು ಎಚ್ಚೆತ್ತು ನಿತ್ಯನಿಂದನೆಗಳನ್ನೂ ತಿರಸ್ಕಾರಗಳನ್ನೂ ಅನುಭವಿಸುವರು.


ಯೆಹೋವನು ಹೀಗೆನ್ನುತ್ತಾನೆ: “ನಿನಗೆ ಜೀವಮಾರ್ಗವನ್ನು ಉಪದೇಶಿಸಿ ಮಾರ್ಗದರ್ಶನ ನೀಡುವೆನು; ನಿನ್ನನ್ನು ಕಾಪಾಡಿ ನಿನಗೆ ಮಾರ್ಗದರ್ಶಿಯಾಗಿರುವೆನು.


ನನ್ನ ಪ್ರಿಯ ಸಹೋದರ ಸಹೋದರಿಯರೇ, ಕೇಳಿರಿ! ಈ ಲೋಕದಲ್ಲಿ ಬಡವರು ನಂಬಿಕೆಯಲ್ಲಿ ಶ್ರೀಮಂತರಾಗಿರಲೆಂದು ದೇವರು ಅವರನ್ನು ಆರಿಸಿಕೊಂಡಿದ್ದಾನೆ. ತನ್ನನ್ನು ಪ್ರೀತಿಸುವ ಜನರಿಗೆ ದೇವರು ವಾಗ್ದಾನಮಾಡಿದ ರಾಜ್ಯವನ್ನು ಹೊಂದಿಕೊಳ್ಳಲು ಆತನು ಅವರನ್ನು ಆರಿಸಿಕೊಂಡಿದ್ದಾನೆ.


ಶಾಫೀರ್‌ನಲ್ಲಿ ವಾಸಿಸುವವರೇ, ಬೆತ್ತಲೆಯಾಗಿ ನಾಚಿಕೆಯಿಂದ ನಡೆಯಿರಿ. ಚಾನಾನ್‌ನಲ್ಲಿ ವಾಸಿಸುವವರು ಹೊರಗೆ ಬರುವದಿಲ್ಲ. ಬೇತೇಚೆಲಿನ ಜನರು ಅಳುವರು, ನಿಮಗೆ ಅವರು ನೀಡುತ್ತಿದ್ದ ಬೆಂಬಲವನ್ನು ಹಿಂತೆಗೆದುಕೊಳ್ಳುವರು.


ನನಗೆ ಉಪದೇಶಿಸುತ್ತಾ ನನ್ನನ್ನು ಮುನ್ನಡೆಸು. ಬಳಿಕ ನಿನ್ನ ಮಹಿಮೆಗೆ ನನ್ನನ್ನು ಸೇರಿಸಿಕೊ.


ನೀನು ನಿನ್ನನ್ನು ಐಶ್ವರ್ಯವಂತನೆಂದು ಹೇಳಿಕೊಳ್ಳುತ್ತಿರುವೆ. ನೀನು ಐಶ್ವರ್ಯವಂತನಾಗಿರುವುದರಿಂದ ನಿನಗೇನೂ ಕೊರತೆ ಇಲ್ಲವೆಂದು ನೀನು ಯೋಚಿಸಿಕೊಂಡಿರುವೆ. ಆದರೆ ನಿಜವಾಗಿಯೂ ನೀನು ದುರವಸ್ಥೆಗೆ ಒಳಗಾದವನಾಗಿರುವೆ, ದೌರ್ಭಾಗ್ಯನಾಗಿರುವೆ, ದರಿದ್ರನಾಗಿರುವೆ, ಕುರುಡನಾಗಿರುವೆ ಮತ್ತು ಬೆತ್ತಲಾಗಿರುವೆ. ಆದರೂ ಇದು ನಿನಗೆ ತಿಳಿದೇ ಇಲ್ಲ.


“ನಿನ್ನ ಸಂಕಟಗಳನ್ನು ನಾನು ಬಲ್ಲೆನು. ನೀನು ಬಡವನೆಂಬುದೂ ನನಗೆ ತಿಳಿದಿದೆ. ಆದರೆ ನೀನು ನಿಜವಾಗಿಯೂ ಶ್ರೀಮಂತ. ನಿನ್ನ ಬಗ್ಗೆ ಕೆಲವು ಜನರು ಹೇಳುವ ಕೆಟ್ಟ ಸಂಗತಿಗಳು ನನಗೆ ತಿಳಿದಿವೆ. ಆ ಜನರು ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುತ್ತಾರೆ. ಆದರೆ ಅವರು ನಿಜವಾದ ಯೆಹೂದ್ಯರಲ್ಲ. ಅವರು ಸೈತಾನನ ಸಮಾಜದವರಾಗಿದ್ದಾರೆ.


ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಿದೆ. ಕ್ರಿಸ್ತನು ದೇವರೊಂದಿಗೆ ಶ್ರೀಮಂತಿಕೆಯಲ್ಲಿದ್ದರೂ ನಿಮಗೋಸ್ಕರವಾಗಿ ಬಡವನಾದದ್ದು ನಿಮಗೆ ಗೊತ್ತಿದೆ. ನೀವು ಶ್ರೀಮಂತರಾಗಬೇಕೆಂದು ಕ್ರಿಸ್ತನು ಬಡವನಾದನು.


ಪುರುಷರು ನಿನ್ನ ಶರೀರವನ್ನು ನೋಡಿ ನಿನ್ನೊಂದಿಗೆ ಸಂಭೋಗಿಸುವರು. ನೀನು ಮಾಡಿದ ಕೆಟ್ಟಕಾರ್ಯಗಳಿಗಾಗಿ ನೀನು ಶಿಕ್ಷಿಸಲ್ಪಡುವೆ. ಯಾರೂ ನಿನಗೆ ಸಹಾಯಮಾಡಲು ಬರುವದಿಲ್ಲ.


ಸತ್ಯವನ್ನು ಕೊಂಡುಕೊ; ಅದನ್ನು ಮಾರಬೇಡ. ಜ್ಞಾನ, ಸುಶಿಕ್ಷೆ ಮತ್ತು ವಿವೇಕವನ್ನು ಕೊಂಡುಕೊ. ಇವು ಖರೀದಿಗೆ ಯೋಗ್ಯವಾದವುಗಳೂ ಮಾರಲಾಗದಷ್ಟು ಅಮೂಲ್ಯವಾದವುಗಳೂ ಆಗಿವೆ.


ನಾವು ಅದನ್ನು ಧರಿಸಿಕೊಂಡಾಗ ಬೆತ್ತಲೆಯಾಗಿರುವುದಿಲ್ಲ.


“ತನಗೋಸ್ಕರ ಮಾತ್ರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳುವವನ ಗತಿ ಇದೇ. ದೇವರ ದೃಷ್ಟಿಯಲ್ಲಿ ಅವನು ಐಶ್ವರ್ಯವಂತನಲ್ಲ.”


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: “ನಿನೆವೆಯೇ, ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ಮೇಲಂಗಿಯನ್ನು ನಿನ್ನ ಮುಖದ ತನಕ ಎತ್ತುವೆನು. ಜನಾಂಗಗಳು ನಿನ್ನ ಬೆತ್ತಲೆತನವನ್ನು ನೋಡಲಿ. ನಿನ್ನ ನಾಚಿಕೆಯನ್ನು ಅವರು ನೋಡಲಿ.


“ಬುದ್ಧಿವಂತೆಯರು, ‘ಇಲ್ಲ! ನಮ್ಮಲ್ಲಿರುವ ಎಣ್ಣೆ ನಮಗೇ ಸಾಕಾಗದಿರಬಹುದು. ಅಂಗಡಿಗೆ ಹೋಗಿ ಕೊಂಡುಕೊಳ್ಳಿರಿ’ ಎಂದು ಉತ್ತರಕೊಟ್ಟರು.


ಜೆರುಸಲೇಮ್ ನಗರವೇ, ನಾನು ನಿನ್ನ ಲಂಗವನ್ನು ನಿನ್ನ ಮುಖದವರೆಗೆ ಎತ್ತಿಬಿಡುತ್ತೇನೆ. ಎಲ್ಲರೂ ನಿನ್ನನ್ನು ನೋಡುತ್ತಾರೆ. ನಿನಗೆ ನಾಚಿಕೆಯಾಗುತ್ತದೆ.


ನೀವು ದೇವರ ಮೇಲೆ ಆಣೆಯಿಟ್ಟಿರುವುದರಿಂದ ರಾಜನ ಆಜ್ಞೆಗೆ ವಿಧೇಯರಾಗಿರಬೇಕು.


ಉಪದೇಶಕ್ಕೆ ಕಿವಿಗೊಟ್ಟು ಸರಿಪಡಿಸಿಕೊ. ಆಗ ನೀನು ಜ್ಞಾನಿಯಾಗುವೆ.


ನೀವು ನನ್ನ ಗದರಿಕೆಯ ಮಾತುಗಳನ್ನು ತಿರಸ್ಕರಿಸಿದಿರಿ. ನಾನು ನಿಮಗೆ ಸರಿಯಾದ ದಾರಿಯನ್ನು ತೋರಿಸಿದಾಗ ನೀವು ನನಗೆ ಕಿವಿಗೊಡಲಿಲ್ಲ.


ನೀವು ನನಗೆ ಮುಖ ತಿರುವಿಕೊಂಡಿರಿ; ನನ್ನ ಸಲಹೆಗಳನ್ನೆಲ್ಲ ಕಡೆಗಣಿಸಿದಿರಿ; ನನ್ನ ತಿದ್ದುಪಾಟನ್ನು ತಿರಸ್ಕರಿಸಿದಿರಿ.


ಯಾಕೆಂದರೆ ಅವರು ಯೆಹೋವನ ಆಜ್ಞೆಗಳಿಗೆ ವಿರೋಧವಾಗಿ ದಂಗೆ ಎದ್ದರು. ಮಹೋನ್ನತನಾದ ದೇವರ ಉಪದೇಶವನ್ನು ತಿರಸ್ಕರಿಸಿದರು.


ನನ್ನ ಆಲೋಚನಾಕರ್ತನಾದ ಯೆಹೋವನನ್ನು ಕೊಂಡಾಡುವೆನು; ರಾತ್ರಿಯಲ್ಲಿಯೂ, ಆತನು ತನ್ನ ಆಲೋಚನೆಗಳನ್ನು ನನ್ನ ಅಂತರಾತ್ಮದಲ್ಲಿ ಬೇರೂರಿಸುವನು.


ಒಳ್ಳೆಯ ಕಾರ್ಯಗಳನ್ನು ಮಾಡಬೇಕೆಂದು ಶ್ರೀಮಂತರಿಗೆ ತಿಳಿಸು. ಸತ್ಕಾರ್ಯಗಳನ್ನು ಮಾಡುವುದರಲ್ಲೇ ಶ್ರೀಮಂತರಾಗಿರಬೇಕೆಂದು ಅವರಿಗೆ ತಿಳಿಸು. ಪರೋಪಕಾರದಲ್ಲೂ ಹಂಚಿಕೊಳ್ಳುವುದರಲ್ಲೂ ಸಂತಸಪಡಲು ಅವರಿಗೆ ತಿಳಿಸು.


ಆ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತುಕೊಂಡಿದ್ದರು. ಅವರು ಬಿಳಿ ವಸ್ತ್ರಗಳನ್ನು ಧರಿಸಿದ್ದರು. ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು