Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 3:21 - ಪರಿಶುದ್ದ ಬೈಬಲ್‌

21 “ನಾನು ಜಯಗಳಿಸಿ ನನ್ನ ತಂದೆಯೊಡನೆ ಆತನ ಸಿಂಹಾಸನದ ಮೇಲೆ ಕುಳಿತುಕೊಂಡೆನು. ಅಂತೆಯೇ ಜಯಗಳಿಸುವ ಪ್ರತಿಯೊಬ್ಬನೂ ನನ್ನ ಸಂಗಡ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆಯೇ ಜಯಶಾಲಿಯಾದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನಾನು ಜಯಗಳಿಸಿ ನನ್ನ ತಂದೆಯೊಡನೆ ಅವರ ಸಿಂಹಾಸನದಲ್ಲಿ ಕುಳಿತುಕೊಂಡಿದ್ದೇನೆ. ಅದೇ ಪ್ರಕಾರ ಜಯಹೊಂದಿದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕೂತುಕೊಂಡೆನು; ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ಸಿಂಹಾಸನದಲ್ಲಿ ಕೂತುಕೊಳ್ಳುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಾನು ಜಯಹೊಂದಿ, ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆ, ಜಯಶಾಲಿಯಾದವನನ್ನು ನನ್ನೊಡನೆ ಸಿಂಹಾಸನದಲ್ಲಿ ಕೂತುಕೊಳ್ಳುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಜೆ ಕೊನ್ ಜಿಕುನ್ ಜಯ್ ಹೊವ್ನ್ ಯೆತಾ, ತೆಂಕಾ ಕಸೆ ಮಿಯಾ ಜಿಕುನ್ ಜಯ್ ಹೊವ್ನ್ ಯೆವ್ನ್ ಬಾಬಾಚ್ಯಾ ಸಿವಾಸನಾ ವರ್ತಿ ಬಸ್ಲಾ, ತಸೆಚ್ ಮಾಜ್ಯಾ ಬಾಜುಕ್ ಮಾಜ್ಯಾ ಸಿವಾಸನಾಚ್ಯಾ ವರ್ತಿ ಬಸ್ತಲೊ ಹಕ್ಕ್ ಮಿಯಾ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 3:21
24 ತಿಳಿವುಗಳ ಹೋಲಿಕೆ  

ನಾವು ಸಂಕಟವನ್ನು ಸ್ವೀಕರಿಸಿಕೊಂಡರೆ, ಆತನೊಡನೆ ಆಳುವೆವು. ನಾವು ಆತನನ್ನು ಸ್ವೀಕರಿಸಿಕೊಳ್ಳದಿದ್ದರೆ, ಆತನೂ ನಮ್ಮನ್ನು ಸ್ವೀಕರಿಸಿಕೊಳ್ಳುವುದಿಲ್ಲ.


ಯೇಸು ಶಿಷ್ಯರಿಗೆ ಹೀಗೆಂದನು: “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಹೊಸ ಲೋಕವು ಸೃಷ್ಟಿಸಲ್ಪಟ್ಟಾಗ ಮನುಷ್ಯಕುಮಾರನು ತನ್ನ ಮಹಾಸಿಂಹಾಸನದ ಮೇಲೆ ಕುಳಿತುಕೊಳ್ಳುವನು. ನನ್ನನ್ನು ಹಿಂಬಾಲಿಸಿದ ನೀವೆಲ್ಲರೂ ಸಿಂಹಾಸನಗಳ ಮೇಲೆ ಕುಳಿತು ಇಸ್ರೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


“ನೀವು ನನ್ನಲ್ಲಿ ಶಾಂತಿಯನ್ನು ಹೊಂದಿದವರಾಗಿರಬೇಕೆಂದು ನಾನು ನಿಮಗೆ ಈ ಸಂಗತಿಗಳನ್ನೆಲ್ಲಾ ಹೇಳಿದ್ದೇನೆ. ಈ ಲೋಕದಲ್ಲಿ ನಿಮಗೆ ಸಂಕಟವಿದೆ. ಆದರೆ ಧೈರ್ಯದಿಂದಿರಿ! ನಾನು ಈ ಲೋಕವನ್ನು ಸೋಲಿಸಿದ್ದೇನೆ!” ಎಂದು ಹೇಳಿದನು.


“ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. ಯಾವನು ಜಯಗಳಿಸುತ್ತಾನೋ ಅವನಿಗೆ ತಿನ್ನಲು ಜೀವದಾಯಕ ಮರದ ಹಣ್ಣನ್ನು ಕೊಡುತ್ತೇನೆ. ಈ ಮರವು ದೇವರ ತೋಟದಲ್ಲಿದೆ.


ಆದ್ದರಿಂದ ಯೇಸು ಅವರ ಬಳಿಗೆ ಬಂದು, “ಪರಲೋಕದ ಮತ್ತು ಈ ಲೋಕದ ಅಧಿಕಾರವೆಲ್ಲವನ್ನು ನನಗೆ ಕೊಡಲಾಗಿದೆ.


ನನ್ನ ರಾಜ್ಯದಲ್ಲಿ ನೀವು ನನ್ನ ಸಂಗಡ ಊಟಮಾಡುವಿರಿ ಮತ್ತು ಕುಡಿಯುವಿರಿ. ನೀವು ಸಿಂಹಾಸನಗಳಲ್ಲಿ ಕುಳಿತುಕೊಂಡು ಇಸ್ರೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


ನಂತರ ನಾನು ಕೆಲವು ಸಿಂಹಾಸನಗಳನ್ನು ಮತ್ತು ಅವುಗಳ ಮೇಲೆ ಜನರು ಕುಳಿತಿರುವುದನ್ನು ನೋಡಿದೆನು. ಈ ಜನರು ತೀರ್ಪು ನೀಡುವ ಅಧಿಕಾರವನ್ನು ಹೊಂದಿದ್ದರು. ಯೇಸುವಿನ ಸತ್ಯಕ್ಕೆ ಮತ್ತು ದೇವರ ಸಂದೇಶಕ್ಕೆ ನಂಬಿಗಸ್ತರಾಗಿದ್ದರ ನಿಮಿತ್ತವಾಗಿ ಕೊಲ್ಲಲ್ಪಟ್ಟವರ ಜೀವಾತ್ಮಗಳನ್ನು ನಾನು ನೋಡಿದೆನು. ಆ ಜನರು ಮೃಗವನ್ನಾಗಲಿ ಅದರ ವಿಗ್ರಹವನ್ನಾಗಲಿ ಆರಾಧಿಸಿರಲಿಲ್ಲ. ಅವರು ತಮ್ಮ ಹಣೆಯ ಮೇಲಾಗಲಿ ಕೈಗಳ ಮೇಲಾಗಲಿ ಮೃಗದ ಗುರುತನ್ನು ಹಾಕಿಸಿಕೊಂಡಿರಲಿಲ್ಲ. ಆ ಜನರು ಮತ್ತೆ ಜೀವವನ್ನು ಪಡೆದು ಕ್ರಿಸ್ತನೊಂದಿಗೆ ಒಂದುಸಾವಿರ ವರ್ಷ ಆಳಿದರು.


ನಮ್ಮನ್ನು ಒಂದು ರಾಜ್ಯವನ್ನಾಗಿ ಮಾಡಿ ನಮ್ಮನ್ನು ತನ್ನ ತಂದೆಯಾದ ದೇವರ ಸೇವೆ ಮಾಡುವ ಯಾಜಕರನ್ನಾಗಿ ಮಾಡಿದನು. ಯೇಸುವಿಗೆ ಎಂದೆಂದಿಗೂ ಮಹಿಮೆ ಪ್ರಭಾವಗಳಿರಲಿ! ಆಮೆನ್.


ನಮ್ಮ ಸಹೋದರರು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ವಾಕ್ಯದ ಬಲದಿಂದಲೂ ಅವನನ್ನು ಸೋಲಿಸಿದರು. ಅವರು ತಮ್ಮ ಜೀವಗಳನ್ನು ಪ್ರೀತಿಸಲಿಲ್ಲ. ಅವರು ಮರಣಕ್ಕೆ ಭಯಪಡಲಿಲ್ಲ.


ಅವರು ಕುರಿಮರಿಯಾದಾತನ ವಿರುದ್ಧ ಯುದ್ಧಗಳನ್ನು ಮಾಡುತ್ತಾರೆ. ಆದರೆ ಕುರಿಮರಿಯಾದಾತನು ಪ್ರಭುಗಳ ಪ್ರಭುವಾದ್ದರಿಂದ ಮತ್ತು ರಾಜಾಧಿರಾಜನಾದ್ದರಿಂದ ಅವರನ್ನು ಸೋಲಿಸುತ್ತಾನೆ. ಆತನೊಂದಿಗೆ, ತಾನು ಕರೆದಿರುವ ಜನರು, ಆಯ್ಕೆಮಾಡಿಕೊಂಡಿರುವ ಜನರು ಮತ್ತು ತನ್ನ ನಂಬಿಗಸ್ತ ಹಿಂಬಾಲಕರು ಇದ್ದರು” ಎಂದನು.


ಸಿಂಹಾಸನದ ಮಧ್ಯೆ ಇರುವ ಕುರಿಮರಿಯಾದಾತನು ಅವರ ಕುರುಬನಾಗಿರುತ್ತಾನೆ. ಆತನು ಅವರನ್ನು ಜೀವ ನೀಡುವ ನೀರಿನ ಬುಗ್ಗೆಗಳ ಬಳಿಗೆ ಕರೆದೊಯ್ಯುತ್ತಾನೆ. ಅವರ ಕಣ್ಣುಗಳಿಂದ ತೊಟ್ಟಿಕ್ಕುವ ಕಣ್ಣೀರನ್ನೆಲ್ಲ ದೇವರು ಒರಸಿಹಾಕುತ್ತಾನೆ” ಎಂದು ಹೇಳಿದನು.


ನಾನು ನೋಡಿದಾಗ ನನ್ನ ಮುಂದೆ ಒಂದು ಬಿಳಿ ಕುದುರೆಯಿರುವುದು ನನಗೆ ಕಾಣಿಸಿತು. ಕುದುರೆಯ ಮೇಲಿದ್ದ ಸವಾರನ ಕೈಯಲ್ಲಿ ಒಂದು ಬಿಲ್ಲು ಇತ್ತು. ಆ ಸವಾರನಿಗೆ ಒಂದು ಕಿರೀಟವನ್ನು ಕೊಡಲಾಯಿತು. ಅವನು ಶತ್ರುವನ್ನು ಸೋಲಿಸುತ್ತಾ ಜಯಗಳಿಸುವುದಕ್ಕಾಗಿ ಹೊರಟನು.


“ಯಜಮಾನನು, ‘ನೀನು ನಂಬಿಗಸ್ತನಾದ ಒಳ್ಳೆಯ ಸೇವಕ. ಆ ಸ್ವಲ್ಪ ಹಣವನ್ನು ಒಳ್ಳೆಯ ರೀತಿಯಲ್ಲಿ ಉಪಯೋಗಿಸಿದೆ. ಆದ್ದರಿಂದ ನಾನು ನಿನಗೆ ಇದಕ್ಕಿಂತಲೂ ದೊಡ್ಡ ಕೆಲಸವನ್ನು ಕೊಡುತ್ತೇನೆ. ಬಂದು ನನ್ನ ಸೌಭಾಗ್ಯದಲ್ಲಿ ಸೇರು’ ಎಂದು ಉತ್ತರಕೊಟ್ಟನು.


ಅವರನ್ನು ಒಂದು ರಾಜ್ಯವನ್ನಾಗಿ ಮಾಡಿದೆ; ನಮ್ಮ ದೇವರಿಗೋಸ್ಕರ ಯಾಜಕರನ್ನಾಗಿ ಮಾಡಿದೆ; ಅವರು ಲೋಕದಲ್ಲಿ ಆಳುವರು.”


ಪ್ರಥಮ ಪುನರುತ್ಥಾನದಲ್ಲಿ ಸೇರಿರುವವರು ಪವಿತ್ರರೂ ಧನ್ಯರೂ ಆಗಿದ್ದಾರೆ. ಈ ಜನರ ಮೇಲೆ ಎರಡನೆ ಮರಣಕ್ಕೆ ಅಧಿಕಾರವಿಲ್ಲ. ಆ ಜನರು ದೇವರಿಗೆ ಮತ್ತು ಕ್ರಿಸ್ತನಿಗೆ ಯಾಜಕರಾಗಿರುತ್ತಾರೆ. ಅವರು ಆತನೊಂದಿಗೆ ಒಂದು ಸಾವಿರ ವರ್ಷ ಆಳುತ್ತಾರೆ.


ಆತನ ಮೂಲಕವಾಗಿ ದೇವರಿಗೆ ಮಹಿಮೆಯಾಗುವುದರಿಂದ ತಕ್ಷಣವೇ ದೇವರ ಮೂಲಕವಾಗಿಯೂ ಆತನಿಗೆ ಮಹಿಮೆಯಾಗುವುದು” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು