Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 4:4 - ಪರಿಶುದ್ದ ಬೈಬಲ್‌

4 ಆ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತುಕೊಂಡಿದ್ದರು. ಅವರು ಬಿಳಿ ವಸ್ತ್ರಗಳನ್ನು ಧರಿಸಿದ್ದರು. ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇದಲ್ಲದೆ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಸಿಂಹಾಸನಗಳಿದ್ದವು. ಆ ಸಿಂಹಾಸನಗಳ ಮೇಲೆ ಶುಭ್ರವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತಿದ್ದರು. ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಈ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಪೀಠಗಳು ಇದ್ದವು. ಶ್ವೇತವಸ್ತ್ರಧಾರಿಗಳಾದ ಇಪ್ಪತ್ನಾಲ್ಕುಮಂದಿ ಸಭಾಪ್ರಮುಖರು ಆ ಪೀಠಗಳಲ್ಲಿ ಕುಳಿತಿದ್ದರು. ಅವರು ತಮ್ಮ ತಲೆಗಳ ಮೇಲೆ ಚಿನ್ನದ ಕಿರೀಟಗಳನ್ನು ಧರಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇದಲ್ಲದೆ ಸಿಂಹಾಸನದ ಸುತ್ತಲು ಇಪ್ಪತ್ತುನಾಲ್ಕು ಸಿಂಹಾಸನಗಳಿದ್ದವು; ಆ ಸಿಂಹಾಸನಗಳ ಮೇಲೆ ಶುಭ್ರವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ತುನಾಲ್ಕು ಮಂದಿ ಹಿರಿಯರು ಕೂತಿದ್ದರು; ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇದಲ್ಲದೆ ಸಿಂಹಾಸನದ ಸುತ್ತ ಇತರ ಇಪ್ಪತ್ನಾಲ್ಕು ಸಿಂಹಾಸನಗಳಿದ್ದವು. ಆ ಸಿಂಹಾಸನಗಳ ಮೇಲೆ ಬಿಳಿವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತಿದ್ದರು. ಅವರ ತಲೆಗಳ ಮೇಲೆ ಬಂಗಾರದ ಕಿರೀಟಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಸಿವಾಸನಾಚ್ಯಾ ಭೊತ್ಯಾನಿ ಅನಿ ಇಸಾರ್-ಚಾರ್ ಸಿವಾಸನಾ ಹೊತ್ತಿ. ತ್ಯಾ ಸಿವಾಸನಾಂಚ್ಯಾ ವೈನಿ ಇಸಾರ್-ಚಾರ್ ಜಾನ್ತಿ ಲೊಕಾ ಫಾಂಡ್ರೆ ಕಪ್ಡೆ ನೆಸುನ್ ಟಕ್ಲ್ಯಾ ವೈನಿ ಸೊನ್ಯಾಚಿ ಮುಕುಟ್ ಘಾಲುನ್ ಘೆವ್ನ್ ಬಸಲ್ಲಿ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 4:4
24 ತಿಳಿವುಗಳ ಹೋಲಿಕೆ  

ನಂತರ ಇಪ್ಪತ್ನಾಲ್ಕು ಮಂದಿ ಹಿರಿಯರು ಮೊಣಕಾಲೂರಿ ದೇವರನ್ನು ಆರಾಧಿಸಿದರು. ದೇವರ ಸನ್ನಿಧಿಯಲ್ಲಿ ತಮ್ಮ ಸಿಂಹಾಸನಗಳ ಮೇಲೆ ಕುಳಿತಿರುವ ಹಿರಿಯರೇ ಇವರು.


ಯೇಸು ಶಿಷ್ಯರಿಗೆ ಹೀಗೆಂದನು: “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಹೊಸ ಲೋಕವು ಸೃಷ್ಟಿಸಲ್ಪಟ್ಟಾಗ ಮನುಷ್ಯಕುಮಾರನು ತನ್ನ ಮಹಾಸಿಂಹಾಸನದ ಮೇಲೆ ಕುಳಿತುಕೊಳ್ಳುವನು. ನನ್ನನ್ನು ಹಿಂಬಾಲಿಸಿದ ನೀವೆಲ್ಲರೂ ಸಿಂಹಾಸನಗಳ ಮೇಲೆ ಕುಳಿತು ಇಸ್ರೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


ಇಪ್ಪತ್ತನಾಲ್ಕು ಮಂದಿ ಹಿರಿಯರು ತಮ್ಮ ಕಿರೀಟಗಳನ್ನು ತೆಗೆದು ಬದಿಗಿಟ್ಟು, ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಮೊಣಕಾಲೂರಿ ನಮಸ್ಕರಿಸಿ, ಯುಗಯುಗಾಂತರಗಳಲ್ಲಿಯೂ ಜೀವಿಸುವ ಆತನನ್ನು ಆರಾಧಿಸುತ್ತಾ ಇಂತೆಂದರು:


ಹಿರಿಯರು ಅಲ್ಲಿದ್ದರು ಮತ್ತು ನಾಲ್ಕು ಜೀವಿಗಳು ಅಲ್ಲಿದ್ದವು. ಅವರ ಸುತ್ತಲೂ ಮತ್ತು ಸಿಂಹಾಸನದ ಸುತ್ತಲೂ ದೇವದೂತರೆಲ್ಲಾ ನಿಂತಿದ್ದರು. ದೇವದೂತರು ಸಿಂಹಾಸನದ ಮುಂದೆ ಮೊಣಕಾಲೂರಿ ದೇವರನ್ನು ಆರಾಧಿಸಿದರು.


ನಂತರ ನಾನು ಕೆಲವು ಸಿಂಹಾಸನಗಳನ್ನು ಮತ್ತು ಅವುಗಳ ಮೇಲೆ ಜನರು ಕುಳಿತಿರುವುದನ್ನು ನೋಡಿದೆನು. ಈ ಜನರು ತೀರ್ಪು ನೀಡುವ ಅಧಿಕಾರವನ್ನು ಹೊಂದಿದ್ದರು. ಯೇಸುವಿನ ಸತ್ಯಕ್ಕೆ ಮತ್ತು ದೇವರ ಸಂದೇಶಕ್ಕೆ ನಂಬಿಗಸ್ತರಾಗಿದ್ದರ ನಿಮಿತ್ತವಾಗಿ ಕೊಲ್ಲಲ್ಪಟ್ಟವರ ಜೀವಾತ್ಮಗಳನ್ನು ನಾನು ನೋಡಿದೆನು. ಆ ಜನರು ಮೃಗವನ್ನಾಗಲಿ ಅದರ ವಿಗ್ರಹವನ್ನಾಗಲಿ ಆರಾಧಿಸಿರಲಿಲ್ಲ. ಅವರು ತಮ್ಮ ಹಣೆಯ ಮೇಲಾಗಲಿ ಕೈಗಳ ಮೇಲಾಗಲಿ ಮೃಗದ ಗುರುತನ್ನು ಹಾಕಿಸಿಕೊಂಡಿರಲಿಲ್ಲ. ಆ ಜನರು ಮತ್ತೆ ಜೀವವನ್ನು ಪಡೆದು ಕ್ರಿಸ್ತನೊಂದಿಗೆ ಒಂದುಸಾವಿರ ವರ್ಷ ಆಳಿದರು.


ಆ ನಾಲ್ಕು ಜೀವಿಗಳು “ಆಮೆನ್!” ಎಂದು ಹೇಳಿದವು. ಹಿರಿಯರು ಮೊಣಕಾಲೂರಿ ಆರಾಧಿಸಿದರು.


ಆಗ ನಾಲ್ಕು ಜೀವಿಗಳು ಮತ್ತು ಇಪ್ಪತ್ನಾಲ್ಕು ಮಂದಿ ಹಿರಿಯರು ಆ ಕುರಿಮರಿಯ ಮುಂದೆ ಮೊಣಕಾಲೂರಿ ನಮಸ್ಕರಿಸಿದರು. ಪ್ರತಿಯೊಬ್ಬರ ಕೈಯಲ್ಲೂ ಒಂದೊಂದು ತಂತಿವಾದ್ಯವಿತ್ತು. ಧೂಪವು ತುಂಬಿದ್ದ ಚಿನ್ನದ ಪಾತ್ರೆಗಳನ್ನು ಅವರು ಹಿಡಿದುಕೊಂಡಿದ್ದರು. ಪಾತ್ರೆಗಳು ದೇವರ ಪರಿಶುದ್ಧ ಜನರ ಪ್ರಾರ್ಥನೆಗಳಾಗಿದ್ದವು.


ನನ್ನ ರಾಜ್ಯದಲ್ಲಿ ನೀವು ನನ್ನ ಸಂಗಡ ಊಟಮಾಡುವಿರಿ ಮತ್ತು ಕುಡಿಯುವಿರಿ. ನೀವು ಸಿಂಹಾಸನಗಳಲ್ಲಿ ಕುಳಿತುಕೊಂಡು ಇಸ್ರೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


ನೀತಿವಂತರಿಗೆ ದೊರೆಯುವ ಜಯಮಾಲೆಯು ಈಗ ನನಗೆ ಸಿದ್ಧವಾಗಿದೆ. ನೀತಿಯುಳ್ಳ ನ್ಯಾಯಾಧಿಪತಿಯಾಗಿರುವ ಪ್ರಭುವೇ ನನಗೆ ಅದನ್ನು ಆ ದಿನದಂದು ಕೊಡುವನು. ನನಗೆ ಮಾತ್ರವಲ್ಲದೆ ಆತನ ಬರುವಿಕೆಯನ್ನು ಅಪೇಕ್ಷಿಸಿ ಅದಕ್ಕಾಗಿ ಕಾಯುತ್ತಿದ್ದವರಿಗೆಲ್ಲ ಆತನು ಆ ಜಯಮಾಲೆಯನ್ನು ದಯಪಾಲಿಸುವನು.


ನಂತರ ಇಪ್ಪತ್ತನಾಲ್ಕು ಮಂದಿ ಹಿರಿಯರು ಮತ್ತು ನಾಲ್ಕು ಜೀವಿಗಳು ಮೊಣಕಾಲೂರಿ ನಮಸ್ಕರಿಸಿದರು. ಸಿಂಹಾಸನದ ಮೇಲೆ ಕುಳಿತಿರುವ ದೇವರನ್ನು ಆರಾಧಿಸಿದರು. ಅವರು, “ಆಮೆನ್! ಹಲ್ಲೆಲೂಯಾ!” ಎಂದು ಹೇಳಿದರು.


ಬಳಿಕ ನಾನು ನೋಡಿದಾಗ, ಜನರ ಮಹಾಸಮೂಹವನ್ನು ಕಂಡೆನು. ಅವರು ಎಣಿಸಲಾಗದಷ್ಟು ಅಸಂಖ್ಯಾತರಾಗಿದ್ದರು. ಅವರಲ್ಲಿ ಸಕಲ ಜನಾಂಗ, ಕುಲ, ಪ್ರಜೆಗಳವರೂ ಲೋಕದ ಸಕಲ ಭಾಷೆಗಳನ್ನಾಡುವವರೂ ಇದ್ದರು. ಈ ಜನರು ಸಿಂಹಾಸನದ ಮುಂದೆ ಮತ್ತು ಕುರಿಮರಿಯ (ಯೇಸು) ಮುಂದೆ ನಿಂತಿದ್ದರು. ಅವರೆಲ್ಲರೂ ಬಿಳಿ ನಿಲುವಂಗಿಗಳನ್ನು ಧರಿಸಿಕೊಂಡು ಖರ್ಜೂರದ ಗರಿಗಳನ್ನು ತಮ್ಮ ಕೈಗಳಲ್ಲಿ ಹಿಡಿದಿದ್ದರು.


ನೀನು ರಾಜನನ್ನು ಬಹಳವಾಗಿ ಆಶೀರ್ವದಿಸಿರುವೆ. ಅವನ ತಲೆಗೆ ಬಂಗಾರದ ಕಿರೀಟವನ್ನು ತೊಡಿಸಿರುವೆ.


ಪರಲೋಕದ ಸೈನ್ಯಗಳು ಬಿಳಿ ಕುದುರೆಗಳ ಮೇಲೆ ಆತನನ್ನು ಹಿಂಬಾಲಿಸುತ್ತಿದ್ದವು. ಅವರು ಬಿಳುಪಾಗಿಯೂ ಶುಭ್ರವಾಗಿಯೂ ಇದ್ದ ನಯವಾದ ನಾರಮಡಿಯನ್ನು ಧರಿಸಿದ್ದರು.


ಆ ಆತ್ಮಗಳಲ್ಲಿ ಪ್ರತಿಯೊಂದಕ್ಕೂ ಒಂದೊಂದು ಬಿಳಿ ನಿಲುವಂಗಿಯನ್ನು ಕೊಡಲಾಯಿತು. ಇನ್ನೂ ಸ್ವಲ್ಪಕಾಲ ಕಾಯುವಂತೆ ಅವುಗಳಿಗೆ ತಿಳಿಸಲಾಯಿತು. ಅವರ ಸಹೋದರರಲ್ಲಿ ಕೆಲವರು ಇನ್ನೂ ಕ್ರಿಸ್ತನ ಸೇವೆಯಲ್ಲಿದ್ದಾರೆ. ಅವರೂ ಕೊಲ್ಲಲ್ಪಡಬೇಕು. ಈ ಕೊಲೆಗಳೆಲ್ಲಾ ಮುಗಿಯುವ ತನಕ ಕಾಯಬೇಕೆಂದು ಆ ಆತ್ಮಗಳಿಗೆ ಹೇಳಲಾಯಿತು.


ಮಿಡತೆಗಳು ಯುದ್ಧಕ್ಕೆ ಸಿದ್ಧಪಡಿಸಿದ ಕುದುರೆಗಳಂತೆ ಕಾಣುತ್ತಿದ್ದವು. ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳಂತೆ ಎನೋ ಇದ್ದವು; ಅವುಗಳ ಮುಖಗಳು ಮಾನವರ ಮುಖಗಳಂತಿದ್ದವು.


ನಿನಗೆ ಸಂಭವಿಸುವ ಸಂಗತಿಗಳ ವಿಷಯದಲ್ಲಿ ಭಯಪಡಬೇಡ. ನಾನು ನಿನಗೆ ಹೇಳುವುದೇನೆಂದರೆ, ಸೈತಾನನು ನಿಮ್ಮಲ್ಲಿ ಕೆಲವರನ್ನು ಪರೀಕ್ಷಿಸುವುದಕ್ಕಾಗಿ ಸೆರೆಮನೆಗೆ ಹಾಕಿಸುತ್ತಾನೆ. ನೀವು ಹತ್ತು ದಿನಗಳ ಕಾಲ ಸಂಕಟವನ್ನು ಅನುಭವಿಸುವಿರಿ. ನೀನು ಸಾಯಬೇಕಾದರೂ ನಂಬಿಗಸ್ತನಾಗಿದ್ದರೆ, ನಾನು ನಿನಗೆ ಜೀವವೆಂಬ ಕಿರೀಟವನ್ನು ದಯಪಾಲಿಸುವೆನು.


ರಾಜಸನ್ನಿಧಿಯಿಂದ ಮೊರ್ದೆಕೈ ಹೊರಟಾಗ, ಅರಸನು ಕೊಟ್ಟ ವಿಶೇಷ ವಸ್ತ್ರಗಳನ್ನು ಮೊರ್ದೆಕೈಯು ಧರಿಸಿದ್ದನು. ಅದು ನೀಲಿ ಮತ್ತು ಬಿಳಿ ಬಣ್ಣದಾಗಿತ್ತು. ತಲೆಗೆ ಬಂಗಾರದ ಕಿರೀಟವನ್ನು ತೊಟ್ಟಿದ್ದನು. ಅಲ್ಲದೆ ನೇರಳೇ ಬಣ್ಣದ ವಸ್ತ್ರವೂ ಕೂಡಾ ಅವನಲ್ಲಿದ್ದವು. ರಾಜಧಾನಿಯಾದ ಶೂಷನ್ ನಗರದಲ್ಲಿ ವಿಶೇಷ ಸಮಾರಂಭವಿತ್ತು. ಜನರು ಸಂತೋಷದಿಂದ ನಲಿದಾಡಿದರು.


ಬೆಂಕಿಯಲ್ಲಿ ಪುಟಹಾಕಿದ ಅಪ್ಪಟ ಚಿನ್ನವನ್ನು ನೀನು ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ಸಲಹೆ ನೀಡುತ್ತೇನೆ. ಆಗ ನೀನು ನಿಜವಾಗಿಯೂ ಶ್ರೀಮಂತನಾಗಲು ಸಾಧ್ಯ. ನಾನು ನಿನಗೆ ಹೇಳುವುದೇನೆಂದರೆ: ಬಿಳಿವಸ್ತ್ರಗಳನ್ನು ಕೊಂಡುಕೊ. ಆಗ ನೀನು ನಾಚಿಕೆಕರವಾದ ನಿನ್ನ ಬೆತ್ತಲೆಯನ್ನು ಮುಚ್ಚಿಕೊಳ್ಳಲು ಸಾಧ್ಯವಾಗುವುದು. ನೀನು ನಿನ್ನ ಕಣ್ಣುಗಳಿಗೆ ಹಚ್ಚಲು ಔಷಧಿಯನ್ನು ಕೊಂಡುಕೊಳ್ಳಬೇಕೆಂತಲೂ ನಾನು ನಿನಗೆ ಹೇಳುತ್ತೇನೆ. ಆಗ ನಿನಗೆ ನಿಜವಾಗಿಯೂ ದೃಷ್ಟಿ ಬರುವುದು.


ಇದಲ್ಲದೆ ಸಿಂಹಾಸನದ ಮುಂದೆ ಗಾಜಿನ ಸಮುದ್ರದಂತೆ ಕಾಣುವ ವಸ್ತುವೊಂದಿತ್ತು. ಅದು ಸ್ಫಟಿಕದಂತೆ ಸ್ಪಚ್ಛವಾಗಿತ್ತು. ಆ ಸಿಂಹಾಸನದ ಮುಂದೆ ಮತ್ತು ಅದರ ಪ್ರತಿಯೊಂದು ಮಗ್ಗುಲಿನಲ್ಲೂ ನಾಲ್ಕು ಜೀವಿಗಳಿದ್ದವು. ಈ ಜೀವಿಗಳ ಹಿಂಭಾಗದಲ್ಲೆಲ್ಲಾ ಮತ್ತು ಮುಂಭಾಗದಲ್ಲೆಲ್ಲಾ ಕಣ್ಣುಗಳು ತುಂಬಿದ್ದವು.


ನಂತರ ಸಿಂಹಾಸನದ ಮತ್ತು ನಾಲ್ಕು ಜೀವಿಗಳ ಮಧ್ಯೆ ಒಂದು ಕುರಿಮರಿಯನ್ನು ನಾನು ನೋಡಿದೆನು. ಹಿರಿಯರು ಸಹ ಆ ಕುರಿಮರಿಯ ಸುತ್ತಲೂ ಇದ್ದರು. ಆ ಕುರಿಮರಿಯು ಕೊಲ್ಲಲ್ಪಟ್ಟಂತಿತ್ತು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಇವು ಈ ಲೋಕಕ್ಕೆಲ್ಲಾ ಕಳುಹಿಸಲ್ಪಟ್ಟ ದೇವರ ಏಳು ಆತ್ಮಗಳಾಗಿದ್ದವು.


ನಂತರ ನಾನು ನೋಡಿದಾಗ, ಅನೇಕ ದೇವದೂತರ ಧ್ವನಿಗಳನ್ನು ಕೇಳಿದೆನು. ಈ ದೇವದೂತರು ಸಿಂಹಾಸನದ, ನಾಲ್ಕು ಜೀವಿಗಳ ಮತ್ತು ಹಿರಿಯರ ಸುತ್ತಲೂ ಇದ್ದರು. ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನು ಕೋಟಿಯಾಗಿಯೂ ಇತ್ತು.


ಜನರು ಸಿಂಹಾಸನದ, ನಾಲ್ಕು ಜೀವಿಗಳ ಮತ್ತು ಹಿರಿಯರ ಸನ್ನಿಧಿಯಲ್ಲಿ ಹೊಸ ಹಾಡನ್ನು ಹಾಡಿದರು. ಈ ಲೋಕದಿಂದ ಬಿಡುಗಡೆ ಹೊಂದಿದ್ದ 1,44,000 ಜನರು ಮಾತ್ರ ಈ ಹಾಡನ್ನು ಕಲಿಯಲು ಶಕ್ತರಾಗಿದ್ದರು. ಈ ಹಾಡನ್ನು ಬೇರೆ ಯಾರೂ ಕಲಿಯಲಾಗುತ್ತಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು