Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 4:6 - ಪರಿಶುದ್ದ ಬೈಬಲ್‌

6 ಇದಲ್ಲದೆ ಸಿಂಹಾಸನದ ಮುಂದೆ ಗಾಜಿನ ಸಮುದ್ರದಂತೆ ಕಾಣುವ ವಸ್ತುವೊಂದಿತ್ತು. ಅದು ಸ್ಫಟಿಕದಂತೆ ಸ್ಪಚ್ಛವಾಗಿತ್ತು. ಆ ಸಿಂಹಾಸನದ ಮುಂದೆ ಮತ್ತು ಅದರ ಪ್ರತಿಯೊಂದು ಮಗ್ಗುಲಿನಲ್ಲೂ ನಾಲ್ಕು ಜೀವಿಗಳಿದ್ದವು. ಈ ಜೀವಿಗಳ ಹಿಂಭಾಗದಲ್ಲೆಲ್ಲಾ ಮತ್ತು ಮುಂಭಾಗದಲ್ಲೆಲ್ಲಾ ಕಣ್ಣುಗಳು ತುಂಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ಕಾಣಿಸಿತು. ಸಿಂಹಾಸನದ ಮಧ್ಯದಲ್ಲಿ ಅದರ ನಾಲ್ಕು ಕಡೆಗಳಲ್ಲಿ ನಾಲ್ಕು ಜೀವಿಗಳಿದ್ದವು. ಅವುಗಳಿಗೆ ಹಿಂದೆಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇದಲ್ಲದೆ, ಸಿಂಹಾಸನದ ಮುಂದೆ ಸ್ಫಟಿಕದಂಥ ಗಾಜಿನ ಸಮುದ್ರವೊಂದು ಇದ್ದಂತೆ ಕಂಡುಬಂದಿತು. ಸಿಂಹಾಸನದ ಸುತ್ತಲೂ ಅದರ ನಾಲ್ಕು ಪಾರ್ಶ್ವಗಳಲ್ಲಿ ನಾಲ್ಕು ಜೀವಿಗಳು ಇದ್ದವು. ಅವುಗಳಿಗೆ ಮುಂದೆಯೂ ಹಿಂದೆಯೂ ಅನೇಕ ಕಣ್ಣುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ತೋಚಿತು. ಸಿಂಹಾಸನದ ಮಧ್ಯದಲ್ಲಿ ಅದರ ನಾಲ್ಕು ಕಡೆಗಳಲ್ಲಿ ನಾಲ್ಕು ಜೀವಿಗಳಿದ್ದವು; ಅವುಗಳಿಗೆ ಹಿಂದೆ ಮುಂದೆ ತುಂಬಾ ಕಣ್ಣುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇದಲ್ಲದೆ ಸಿಂಹಾಸನದ ಮುಂದೆ ಸ್ಪಟಿಕದಂಥ ಗಾಜಿನ ಸಮುದ್ರವೊಂದು ಇದ್ದಂತೆ ಕಾಣಿಸಿತು. ಸಿಂಹಾಸನದ ಮಧ್ಯದಲ್ಲಿ, ಅದರ ಸುತ್ತಲೂ ನಾಲ್ಕು ಜೀವಿಗಳಿದ್ದವು. ಅವುಗಳಿಗೆ ಹಿಂದೆಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಎವ್ಡೆಚ್ ನ್ಹಯ್ ಸಿವಾಸನಾಚ್ಯಾ ಇದ್ರಾಕ್ ಝಳ್‍ಝಳ್ತಲ್ಯಾ ಕಾಜೆಚೆ ಸಮುಂದರ್ ಅಸಲ್ಲ್ಯಾ ಸರ್ಕೆ ಹೊತ್ತೆ ತವ್ಡೆಚ್ ನ್ಹಯ್ ತೆಚ್ಯಾಫಿಡೆ ಸ್ಪಟಿಕ್ ಸಾರ್ಕೆ ಪವಿತ್ರ್ ಹೊತ್ತೆ. ಸಿವಾಸನಾಕ್ಡೆ ತೆಕಾ ಚಾರಿ ಬಾಜಿನಿ ಚಾರ್ ಸಾವ್ಜಾ ಹೊತ್ತಿ. ತೆಂಕಾ ಫಾಟಿಬಿ ಫಿಡೆಬಿ ಸಗ್ಳ್ಯಾಬರ್ ಡೊಳೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 4:6
25 ತಿಳಿವುಗಳ ಹೋಲಿಕೆ  

ಬೆಂಕಿಯನ್ನು ಬೆರಸಿದ ಗಾಜಿನ ಸಮುದ್ರದಂತೆ ಕಾಣಿಸುವ ಏನೋ ಒಂದು ನನಗೆ ಕಾಣಿಸಿತು. ಮೃಗವನ್ನು, ಅದರ ವಿಗ್ರಹವನ್ನು ಮತ್ತು ಅದರ ಹೆಸರಿನ ಸಂಖ್ಯೆಯನ್ನು ಸೋಲಿಸಿ ಜಯಗಳಿಸಿದವರೆಲ್ಲರೂ ಸಮುದ್ರ ತೀರದಲ್ಲಿ ನಿಂತಿದ್ದರು. ದೇವರು ಅವರಿಗೆ ನೀಡಿದ ತಂತಿವಾದ್ಯಗಳು ಅವರಲ್ಲಿದ್ದವು.


ನಂತರ ಸಿಂಹಾಸನದ ಮತ್ತು ನಾಲ್ಕು ಜೀವಿಗಳ ಮಧ್ಯೆ ಒಂದು ಕುರಿಮರಿಯನ್ನು ನಾನು ನೋಡಿದೆನು. ಹಿರಿಯರು ಸಹ ಆ ಕುರಿಮರಿಯ ಸುತ್ತಲೂ ಇದ್ದರು. ಆ ಕುರಿಮರಿಯು ಕೊಲ್ಲಲ್ಪಟ್ಟಂತಿತ್ತು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಇವು ಈ ಲೋಕಕ್ಕೆಲ್ಲಾ ಕಳುಹಿಸಲ್ಪಟ್ಟ ದೇವರ ಏಳು ಆತ್ಮಗಳಾಗಿದ್ದವು.


ಜನರು ಸಿಂಹಾಸನದ, ನಾಲ್ಕು ಜೀವಿಗಳ ಮತ್ತು ಹಿರಿಯರ ಸನ್ನಿಧಿಯಲ್ಲಿ ಹೊಸ ಹಾಡನ್ನು ಹಾಡಿದರು. ಈ ಲೋಕದಿಂದ ಬಿಡುಗಡೆ ಹೊಂದಿದ್ದ 1,44,000 ಜನರು ಮಾತ್ರ ಈ ಹಾಡನ್ನು ಕಲಿಯಲು ಶಕ್ತರಾಗಿದ್ದರು. ಈ ಹಾಡನ್ನು ಬೇರೆ ಯಾರೂ ಕಲಿಯಲಾಗುತ್ತಿರಲಿಲ್ಲ.


ನಂತರ ಇಪ್ಪತ್ತನಾಲ್ಕು ಮಂದಿ ಹಿರಿಯರು ಮತ್ತು ನಾಲ್ಕು ಜೀವಿಗಳು ಮೊಣಕಾಲೂರಿ ನಮಸ್ಕರಿಸಿದರು. ಸಿಂಹಾಸನದ ಮೇಲೆ ಕುಳಿತಿರುವ ದೇವರನ್ನು ಆರಾಧಿಸಿದರು. ಅವರು, “ಆಮೆನ್! ಹಲ್ಲೆಲೂಯಾ!” ಎಂದು ಹೇಳಿದರು.


ಆ ನಾಲ್ಕು ಜೀವಿಗಳು “ಆಮೆನ್!” ಎಂದು ಹೇಳಿದವು. ಹಿರಿಯರು ಮೊಣಕಾಲೂರಿ ಆರಾಧಿಸಿದರು.


ಪ್ರತೀ ಕೆರೂಬಿದೂತನಿಗೆ ನಾಲ್ಕು ಮುಖಗಳಿದ್ದವು. ಮೊದಲನೆಯ ಮುಖವು ಕೆರೂಬಿಯ ಮುಖ, ಎರಡನೆಯದು ಮನುಷ್ಯನ ಮುಖ, ಮೂರನೆಯ ಸಿಂಹದ ಮುಖ ಮತ್ತು ನಾಲ್ಕನೆಯ ಗರುಡನ ಮುಖ.


ಅವರ ಶರೀರದ ಮೇಲೆಲ್ಲಾ ಕಣ್ಣುಗಳಿದ್ದವು. ಅವರ ಬೆನ್ನಿನ ಮೇಲೆ, ಕೈಗಳ ಮೇಲೆ, ರೆಕ್ಕೆಗಳ ಮೇಲೆ, ಅವರ ಚಕ್ರಗಳ ಮೇಲೆ ಕಣ್ಣುಗಳಿದ್ದವು. ಹೌದು, ಅವರ ನಾಲ್ಕು ಚಕ್ರಗಳ ಮೇಲೂ ಕಣ್ಣುಗಳಿದ್ದವು.


ಹಿರಿಯರು ಅಲ್ಲಿದ್ದರು ಮತ್ತು ನಾಲ್ಕು ಜೀವಿಗಳು ಅಲ್ಲಿದ್ದವು. ಅವರ ಸುತ್ತಲೂ ಮತ್ತು ಸಿಂಹಾಸನದ ಸುತ್ತಲೂ ದೇವದೂತರೆಲ್ಲಾ ನಿಂತಿದ್ದರು. ದೇವದೂತರು ಸಿಂಹಾಸನದ ಮುಂದೆ ಮೊಣಕಾಲೂರಿ ದೇವರನ್ನು ಆರಾಧಿಸಿದರು.


ಆಗ ದೇವದೂತನು ನನಗೆ ಜೀವಜಲದ ನದಿಯನ್ನು ತೋರಿಸಿದನು. ಆ ನದಿಯು ಸ್ಫಟಿಕದಂತೆ ಪ್ರಕಾಶಮಾನವಾಗಿತ್ತು. ಆ ನದಿಯು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಆಗಮಿಸಿ,


ಆ ನಗರವು ದೇವರ ಪ್ರಭಾವದಿಂದ ಪ್ರಕಾಶಿಸುತ್ತಿತ್ತು. ಅದು ಬಹು ಬೆಲೆಬಾಳುವ ವಜ್ರದಂತೆ ಪ್ರಕಾಶಿಸುತ್ತಿತ್ತು. ಅಮೂಲ್ಯ ರತ್ನದಂತೆ ಹೊಳೆಯುತ್ತಿತ್ತು.


ನಾಲ್ಕು ಜೀವಿಗಳಲ್ಲಿ ಒಂದು ಜೀವಿ ಈ ಏಳು ದೇವದೂತರಿಗೆ ಏಳು ಚಿನ್ನದ ಪಾತ್ರೆಗಳನ್ನು ನೀಡಿತು. ಈ ಪಾತ್ರೆಗಳು ಯುಗಯುಗಾಂತರಗಳಲ್ಲಿಯೂ ಜೀವಿಸುವ ದೇವರ ಕೋಪದಿಂದ ತುಂಬಿದ್ದವು.


ಹನ್ನೆರಡು ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು. ಪ್ರತಿಯೊಂದು ಬಾಗಿಲು ಒಂದೊಂದು ಮುತ್ತಿನಿಂದ ಮಾಡಲ್ಪಟ್ಟಿತ್ತು. ನಗರದ ಬೀದಿಯು ಗಾಜಿನಂತೆ ಶುಭ್ರವಾಗಿದ್ದ ಅಪ್ಪಟ ಚಿನ್ನದಿಂದ ಮಾಡಲ್ಪಟ್ಟಿತ್ತು.


ಗೋಡೆಯನ್ನು ಸೂರ್ಯಕಾಂತ ಶಿಲೆಯಿಂದ ನಿರ್ಮಿಸಲಾಗಿತ್ತು. ನಗರವನ್ನು ಗಾಜಿನಷ್ಟು ಅಪ್ಪಟವಾದ ಚಿನ್ನದಿಂದ ನಿರ್ಮಿಸಲಾಗಿತ್ತು.


ಸಿಂಹಾಸನದ ಮಧ್ಯೆ ಇರುವ ಕುರಿಮರಿಯಾದಾತನು ಅವರ ಕುರುಬನಾಗಿರುತ್ತಾನೆ. ಆತನು ಅವರನ್ನು ಜೀವ ನೀಡುವ ನೀರಿನ ಬುಗ್ಗೆಗಳ ಬಳಿಗೆ ಕರೆದೊಯ್ಯುತ್ತಾನೆ. ಅವರ ಕಣ್ಣುಗಳಿಂದ ತೊಟ್ಟಿಕ್ಕುವ ಕಣ್ಣೀರನ್ನೆಲ್ಲ ದೇವರು ಒರಸಿಹಾಕುತ್ತಾನೆ” ಎಂದು ಹೇಳಿದನು.


ನಂತರ ಹೀರಾಮನು ವೃತ್ತಾಕಾರದ ಹಿತ್ತಾಳೆಯ ತೊಟ್ಟಿಯನ್ನು ಮಾಡಿದನು. ಅವರು ಈ ತೊಟ್ಟಿಯನ್ನು “ಸಮುದ್ರ”ವೆಂದು ಕರೆದರು. ಆ ತೊಟ್ಟಿಯ ಸುತ್ತಳತೆಯು ನಲವತ್ತೈದು ಅಡಿಗಳು. ಅದರ ಒಂದು ಅಂಚಿನಿಂದ ಮತ್ತೊಂದು ಅಂಚಿಗೆ ಹದಿನೈದು ಅಡಿಗಳು ಮತ್ತು ಆಳ ಏಳುವರೆ ಅಡಿಗಳು.


ಜ್ಞಾನವು ಬಂಗಾರಕ್ಕಿಂತಲೂ ಶ್ರೇಷ್ಠವಾದ ಗಾಜಿಗಿಂತಲೂ ಹೆಚ್ಚು ಬೆಲೆಬಾಳುತ್ತದೆ. ಬಂಗಾರದ ಆಭರಣಗಳು ಜ್ಞಾನವನ್ನು ಕೊಂಡುಕೊಳ್ಳಲಾರವು.


ಅವನು ತಾಮ್ರದಿಂದ ಗಂಗಾಳವನ್ನೂ ಅದರ ಪೀಠವನ್ನೂ ಮಾಡಿದನು. ದೇವದರ್ಶನಗುಡಾರದ ಬಾಗಿಲಲ್ಲಿ ಸೇವೆ ಮಾಡುತ್ತಿದ್ದ ಸ್ತ್ರೀಯರು ಕೊಟ್ಟ ತಾಮ್ರದ ದರ್ಪಣಗಳನ್ನು ಅದಕ್ಕೆ ಉಪಯೋಗಿಸಿದನು.


ಆ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತುಕೊಂಡಿದ್ದರು. ಅವರು ಬಿಳಿ ವಸ್ತ್ರಗಳನ್ನು ಧರಿಸಿದ್ದರು. ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು.


ಆಗ ನಾಲ್ಕು ಜೀವಿಗಳು ಮತ್ತು ಇಪ್ಪತ್ನಾಲ್ಕು ಮಂದಿ ಹಿರಿಯರು ಆ ಕುರಿಮರಿಯ ಮುಂದೆ ಮೊಣಕಾಲೂರಿ ನಮಸ್ಕರಿಸಿದರು. ಪ್ರತಿಯೊಬ್ಬರ ಕೈಯಲ್ಲೂ ಒಂದೊಂದು ತಂತಿವಾದ್ಯವಿತ್ತು. ಧೂಪವು ತುಂಬಿದ್ದ ಚಿನ್ನದ ಪಾತ್ರೆಗಳನ್ನು ಅವರು ಹಿಡಿದುಕೊಂಡಿದ್ದರು. ಪಾತ್ರೆಗಳು ದೇವರ ಪರಿಶುದ್ಧ ಜನರ ಪ್ರಾರ್ಥನೆಗಳಾಗಿದ್ದವು.


ನಂತರ ನಾನು ನೋಡಿದಾಗ, ಅನೇಕ ದೇವದೂತರ ಧ್ವನಿಗಳನ್ನು ಕೇಳಿದೆನು. ಈ ದೇವದೂತರು ಸಿಂಹಾಸನದ, ನಾಲ್ಕು ಜೀವಿಗಳ ಮತ್ತು ಹಿರಿಯರ ಸುತ್ತಲೂ ಇದ್ದರು. ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನು ಕೋಟಿಯಾಗಿಯೂ ಇತ್ತು.


ನಂತರ ಕುರಿಮರಿಯು ಏಳು ಮುದ್ರೆಗಳಲ್ಲಿ ಒಂದು ಮುದ್ರೆಯನ್ನು ಒಡೆಯುವಾಗ ನಾನು ಗಮನಿಸಿದೆನು. ಆ ನಾಲ್ಕು ಜೀವಿಗಳಲ್ಲಿ ಒಂದು ಜೀವಿಯು ಗುಡುಗಿನಂತೆ ಮಾತನಾಡುವುದನ್ನು ನಾನು ಕೇಳಿದೆನು. ಅದು “ಬಾ!” ಎಂದು ಹೇಳಿತು.


ಆಗ ಒಬ್ಬನ ಸ್ವರವೋ ಎಂಬಂತೆ ಒಂದು ಧ್ವನಿಯನ್ನು ಕೇಳಿದೆನು. ಆ ನಾಲ್ಕು ಜೀವಿಗಳಿದ್ದ ಸ್ಥಳದಿಂದ ಈ ಧ್ವನಿಯು ಹೊರ ಹೊಮ್ಮಿತು. ಆ ಧ್ವನಿಯು, “ಒಂದು ದಿನದ ಕೆಲಸಕ್ಕೆ ಒಂದು ಕಿಲೋಗ್ರಾಂ ಗೋಧಿ. ಒಂದು ದಿನದ ಕೆಲಸಕ್ಕೆ ಮೂರು ಕಿಲೋಗ್ರಾಂ ಬಾರ್ಲಿ. ಆದರೆ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಕೆಡಿಸಬೇಡಿ!” ಎಂದು ಹೇಳಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು