Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 5:12 - ಪರಿಶುದ್ದ ಬೈಬಲ್‌

12 ಈ ದೇವದೂತರು ಗಟ್ಟಿಯಾದ ಧ್ವನಿಯಿಂದ ಇಂತೆಂದರು: “ವಧಿತನಾದ ಕುರಿಮರಿಯು ಅಧಿಕಾರವನ್ನು, ಸಂಪತ್ತನ್ನು, ಜ್ಞಾನವನ್ನು, ಬಲವನ್ನು, ಗೌರವವನ್ನು, ಪ್ರಭಾವವನ್ನು, ಸ್ತೋತ್ರವನ್ನು ಪಡೆಯಲು ಯೋಗ್ಯನಾಗಿದ್ದಾನೆ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವರು “ವಧಿಸಲ್ಪಟ್ಟ ಕುರಿಮರಿಯು ಬಲ, ಐಶ್ವರ್ಯ, ಜ್ಞಾನ, ಸಾಮರ್ಥ್ಯ, ಘನತೆ, ಮಹಿಮೆ ಸ್ತೋತ್ರಗಳನ್ನು ಹೊಂದುವುದಕ್ಕೆ ಯೋಗ್ಯನು” ಎಂದು ಮಹಾಧ್ವನಿಯಿಂದ ಹಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವರೆಲ್ಲರೂ ಉಚ್ಚಕಂಠದಿಂದ : “ವಧಿತ ಕುರಿಮರಿಯಾದಾತನು ಶಕ್ತಿಯನು, ಸಿರಿತನವನು ಗೌರವವನು, ಘನಮಾನವನು ಸ್ತುತಿಯನು, ಸುಜ್ಞಾನವನು ಹೊಂದಲು ಯೋಗ್ಯನು,” ಎಂದು ಹಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವರ ಸ್ವರವು ನನಗೆ ಕೇಳಿಸಿತು; ಅವರು ಮಹಾ ಶಬ್ದದಿಂದ - ವಧಿತನಾದ ಕುರಿಯಾದಾತನು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನ ಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವರು, ಮಹಾಧ್ವನಿಯಿಂದ: “ವಧಿತರಾದ ಕುರಿಮರಿ ಆಗಿರುವವರು ಶಕ್ತಿ, ಐಶ್ವರ್ಯ, ಜ್ಞಾನ, ಸಾಮರ್ಥ್ಯ, ಗೌರವ, ಮಹಿಮೆ, ಸ್ತೋತ್ರಗಳನ್ನು ಹೊಂದುವುದಕ್ಕೆ ಯೋಗ್ಯರು!” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಮಿಳುನ್ ಮೊಟ್ಯಾನ್ ಎಕ್ ಗಿತ್ ಗಾವ್ಲ್ಯಾನಿ; ಅದ್ದಿ ಎಗ್ದಾ ಜಿವಾನಿ ಮಾರಲ್ಲೆ ಬೊಕ್ಡು, ಅದಿಕಾರ್, ಆಸ್ತಿ, ಜ್ಞಾನ್, ಅನಿ ತಾಕತ್, ಮಾನ್, ಮಹಿಮಾ ಅನಿ ಸುತ್ತಿ ಗಾವುಕ್ ಯೊಗ್ಯ್ ಹಾಯ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 5:12
19 ತಿಳಿವುಗಳ ಹೋಲಿಕೆ  

ಅವರೆಲ್ಲರೂ ಕುರಿಮರಿಗೋಸ್ಕರ ಒಂದು ಹೊಸ ಹಾಡನ್ನು ಹಾಡಿದರು: “ನೀನು ಕೊಲ್ಲಲ್ಪಟ್ಟವನಾದ್ದರಿಂದ, ಸುರುಳಿಯನ್ನು ತೆಗೆದುಕೊಂಡು, ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯನಾಗಿರುವೆ. ನೀನು ನಿನ್ನ ರಕ್ತದಿಂದ (ಮರಣದಿಂದ) ಸಕಲ ಕುಲ, ಭಾಷೆ, ಜನಾಂಗಗಳಿಂದ ಜನರನ್ನು ದೇವರಿಗಾಗಿ ಕೊಂಡುಕೊಂಡಿರುವೆ.


ಇದಾದ ಬಳಿಕ, ಪರಲೋಕದಲ್ಲಿ ಅನೇಕಾನೇಕ ಜನರ ಮಹಾಶಬ್ದವೋ ಎಂಬಂತೆ ಇದ್ದ ಧ್ವನಿಯನ್ನು ಕೇಳಿದೆನು. ಆ ಜನರು ಹೀಗೆ ಹೇಳುತ್ತಿದ್ದರು: “ಹಲ್ಲೆಲೂಯಾ, (ದೇವರಿಗೆ ಸ್ತೋತ್ರ ಮಾಡಿರಿ) ಜಯವೂ ಪ್ರಭಾವವೂ ಅಧಿಕಾರವೂ ನಮ್ಮ ದೇವರಿಗೆ ಸೇರಿದ್ದಾಗಿವೆ.


“ನಮ್ಮ ಪ್ರಭುವೇ, ನಮ್ಮ ದೇವರೇ! ನೀನು ಪ್ರಭಾವ, ಗೌರವ, ಅಧಿಕಾರಗಳನ್ನು ಪಡೆಯಲು ಯೋಗ್ಯನಾಗಿರುವೆ. ಎಲ್ಲವನ್ನೂ ನಿರ್ಮಿಸಿದಾತನು ನೀನೇ. ನಿನ್ನ ಚಿತ್ತದಂತೆಯೇ ಎಲ್ಲವೂ ಇದ್ದವು; ಎಲ್ಲವೂ ಸೃಷ್ಟಿಗೊಂಡವು.”


ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಿದೆ. ಕ್ರಿಸ್ತನು ದೇವರೊಂದಿಗೆ ಶ್ರೀಮಂತಿಕೆಯಲ್ಲಿದ್ದರೂ ನಿಮಗೋಸ್ಕರವಾಗಿ ಬಡವನಾದದ್ದು ನಿಮಗೆ ಗೊತ್ತಿದೆ. ನೀವು ಶ್ರೀಮಂತರಾಗಬೇಕೆಂದು ಕ್ರಿಸ್ತನು ಬಡವನಾದನು.


ಅವರು, “ಆಮೆನ್! ನಮ್ಮ ದೇವರಿಗೆ ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸುತ್ತಿಯೂ ಗೌರವವೂ ಅಧಿಕಾರವೂ ಮತ್ತು ಬಲವೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್!” ಎಂದರು.


ನೀನು ಮಗನಿಗೆ ಯಾರ್ಯಾರನ್ನು ಕೊಟ್ಟೆಯೋ ಅವರೆಲ್ಲರಿಗೂ ಮಗನು ನಿತ್ಯಜೀವವನ್ನು ಕೊಡಬೇಕೆಂದು ನೀನು ಮಗನಿಗೆ ಅಧಿಕಾರವನ್ನು ಕೊಟ್ಟಿರುವೆ.


ಆದ್ದರಿಂದ ಯೇಸು ಅವರ ಬಳಿಗೆ ಬಂದು, “ಪರಲೋಕದ ಮತ್ತು ಈ ಲೋಕದ ಅಧಿಕಾರವೆಲ್ಲವನ್ನು ನನಗೆ ಕೊಡಲಾಗಿದೆ.


ನಂತರ ಸಿಂಹಾಸನದ ಮತ್ತು ನಾಲ್ಕು ಜೀವಿಗಳ ಮಧ್ಯೆ ಒಂದು ಕುರಿಮರಿಯನ್ನು ನಾನು ನೋಡಿದೆನು. ಹಿರಿಯರು ಸಹ ಆ ಕುರಿಮರಿಯ ಸುತ್ತಲೂ ಇದ್ದರು. ಆ ಕುರಿಮರಿಯು ಕೊಲ್ಲಲ್ಪಟ್ಟಂತಿತ್ತು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಇವು ಈ ಲೋಕಕ್ಕೆಲ್ಲಾ ಕಳುಹಿಸಲ್ಪಟ್ಟ ದೇವರ ಏಳು ಆತ್ಮಗಳಾಗಿದ್ದವು.


ಮರುದಿನ ಯೋಹಾನನು, ತನ್ನ ಬಳಿಗೆ ಬರುತ್ತಿದ್ದ ಯೇಸುವನ್ನು ಕಂಡು, “ಇಗೋ, ಯಜ್ಞಕ್ಕಾಗಿ ದೇವರು ನೇಮಿಸಿದ ಕುರಿಮರಿ. ಆತನು ಈ ಲೋಕದ ಪಾಪಗಳನ್ನು ಪರಿಹರಿಸುವನು.


ಲೋಕದಲ್ಲಿ ವಾಸಿಸುವ ಜನರೆಲ್ಲರೂ ಆ ಮೃಗವನ್ನು ಆರಾಧಿಸುತ್ತಾರೆ. ಲೋಕವು ಆರಂಭಗೊಂಡಂದಿನಿಂದಲೂ ಕೊಲ್ಲಲ್ಪಟ್ಟ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿಲ್ಲವೋ ಅವರೇ ಈ ಜನರು.


ಇದಲ್ಲದೆ ಆಕಾಶದಲ್ಲಿಯೂ ಭೂಮಿಯಲ್ಲಿಯೂ ಭೂಮಿಯ ಕೆಳಭಾಗದಲ್ಲೂ ಸಮುದ್ರದಲ್ಲೂ ಇರುವ ಪ್ರತಿಯೊಂದು ಜೀವಿಗಳು ಹೀಗೆ ಹೇಳುವುದನ್ನು ಕೇಳಿದೆನು: “ಸಿಂಹಾಸನದ ಮೇಲೆ ಕುಳಿತಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರ, ಗೌರವ, ಪ್ರಭಾವ, ಅಧಿಕಾರಗಳು ಯುಗಯುಗಾಂತರಗಳಲ್ಲಿಯೂ ಇರಲಿ!”


ಸದಾಕಾಲ ಆಳುವ ಅರಸನಿಗೆ ಗೌರವವೂ ಮಹಿಮೆಯೂ ಇರಲಿ. ಆತನಿಗೆ ಲಯವೆಂಬುದೇ ಇಲ್ಲ. ಆತನು ಅದೃಶ್ಯನಾಗಿರುವನು. ಒಬ್ಬನೇ ದೇವರಾದ ಆತನಿಗೆ ಗೌರವವೂ ಮಹಿಮೆಯೂ ಉಂಟಾಗಲಿ. ಆಮೆನ್.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: “ಖಡ್ಗವೇ, ಕುರುಬನನ್ನು ಹೊಡೆ. ನನ್ನ ಸ್ನೇಹಿತನಿಗೆ ಹೊಡೆ. ಕುರುಬನನ್ನು ಹೊಡೆ. ಆಗ ಕುರಿಗಳು ಚದರಿಹೋಗುವವು. ಮತ್ತು ನಾನು ಆ ಚಿಕ್ಕವುಗಳನ್ನು ಶಿಕ್ಷಿಸುವೆನು.


ನಮ್ಮನ್ನು ಒಂದು ರಾಜ್ಯವನ್ನಾಗಿ ಮಾಡಿ ನಮ್ಮನ್ನು ತನ್ನ ತಂದೆಯಾದ ದೇವರ ಸೇವೆ ಮಾಡುವ ಯಾಜಕರನ್ನಾಗಿ ಮಾಡಿದನು. ಯೇಸುವಿಗೆ ಎಂದೆಂದಿಗೂ ಮಹಿಮೆ ಪ್ರಭಾವಗಳಿರಲಿ! ಆಮೆನ್.


ಆಗ ನಾಲ್ಕು ಜೀವಿಗಳು ಮತ್ತು ಇಪ್ಪತ್ನಾಲ್ಕು ಮಂದಿ ಹಿರಿಯರು ಆ ಕುರಿಮರಿಯ ಮುಂದೆ ಮೊಣಕಾಲೂರಿ ನಮಸ್ಕರಿಸಿದರು. ಪ್ರತಿಯೊಬ್ಬರ ಕೈಯಲ್ಲೂ ಒಂದೊಂದು ತಂತಿವಾದ್ಯವಿತ್ತು. ಧೂಪವು ತುಂಬಿದ್ದ ಚಿನ್ನದ ಪಾತ್ರೆಗಳನ್ನು ಅವರು ಹಿಡಿದುಕೊಂಡಿದ್ದರು. ಪಾತ್ರೆಗಳು ದೇವರ ಪರಿಶುದ್ಧ ಜನರ ಪ್ರಾರ್ಥನೆಗಳಾಗಿದ್ದವು.


ನಂತರ ಕುರಿಮರಿಯು ಏಳು ಮುದ್ರೆಗಳಲ್ಲಿ ಒಂದು ಮುದ್ರೆಯನ್ನು ಒಡೆಯುವಾಗ ನಾನು ಗಮನಿಸಿದೆನು. ಆ ನಾಲ್ಕು ಜೀವಿಗಳಲ್ಲಿ ಒಂದು ಜೀವಿಯು ಗುಡುಗಿನಂತೆ ಮಾತನಾಡುವುದನ್ನು ನಾನು ಕೇಳಿದೆನು. ಅದು “ಬಾ!” ಎಂದು ಹೇಳಿತು.


ಅವರು ದೇವರ ಸೇವಕನಾದ ಮೋಶೆಯ ಗೀತೆಯನ್ನು ಮತ್ತು ಕುರಿಮರಿಯಾದಾತನ ಗೀತೆಯನ್ನು ಹಾಡಿದರು: “ಪ್ರಭುವೇ, ಸರ್ವಶಕ್ತನಾದ ದೇವರೇ, ನೀನು ಮಹತ್ತಾದ ಕಾರ್ಯಗಳನ್ನೂ ಆಶ್ಚರ್ಯಕರವಾದ ಕಾರ್ಯಗಳನ್ನೂ ಮಾಡುವೆ. ಸರ್ವಜನಾಂಗಗಳ ರಾಜನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು