Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 7:10 - ಪರಿಶುದ್ದ ಬೈಬಲ್‌

10 ಅವರು ಗಟ್ಟಿಯಾದ ಧ್ವನಿಯಲ್ಲಿ, “ಸಿಂಹಾಸನದ ಮೇಲೆ ಕುಳಿತುಕೊಳ್ಳುವ ನಮ್ಮ ಪ್ರಭುವಿಗೆ ಮತ್ತು ಕುರಿಮರಿಯಾದಾತನಿಗೆ ಜಯವು ಲಭಿಸಿತು” ಎಂದು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರು, “ರಕ್ಷಣೆಯೆಂಬುದು ಸಿಂಹಾಸನಾರೂಢನಾದ ನಮ್ಮ ದೇವರ ಮತ್ತು ಯಜ್ಞದ ಕುರಿಮರಿಯಾದಾತನಿಗೆ ಸೇರಿದ್ದು” ಎಂದು ಮಹಾಧ್ವನಿಯಿಂದ ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವರು ಗಟ್ಟಿಯಾದ ಧ್ವನಿಯಿಂದ : “ಸಿಂಹಾಸನಾರೂಢರಾದ ದೇವರಿಂದ, ಬಲಿಯರ್ಪಿತರಾದ ಯಜ್ಞದ ಕುರಿಮರಿಯಿಂದ ಲಭಿಸುತ್ತದೆಮಗೆ ಜೀವೋದ್ಧಾರ,” ಎಂದು ಹಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವರು - ಸಿಂಹಾಸನಾಸೀನನಾಗಿರುವ ನಮ್ಮ ದೇವರಿಗೂ ಯಜ್ಞದ ಕುರಿಯಾದಾತನಿಗೂ ನಮಗೆ ರಕ್ಷಣೆಯುಂಟಾದದ್ದಕ್ಕಾಗಿ ಸ್ತೋತ್ರ ಎಂದು ಮಹಾ ಶಬ್ದದಿಂದ ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವರು ಮಹಾಧ್ವನಿಯಿಂದ ಹೀಗೆ ಕೂಗಿದರು: “ಸಿಂಹಾಸನದಲ್ಲಿ ಕೂತಿರುವ ನಮ್ಮ ದೇವರಿಗೂ, ಕುರಿಮರಿ ಆಗಿರುವವರಿಗೂ, ರಕ್ಷಣೆಯು ಸೇರತಕ್ಕದ್ದಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತೆನಿ,“ಸಿವಾಸನಾರ್ ಬಸಲ್ಲ್ಯಾ ಅಮ್ಚ್ಯಾ ದೆವಾಕ್ನಾ ಅನಿ ಬೊಕ್ಡಾಕ್ನಾ ಸುಟ್ಕಾ ಯೆತಾ!” ಮನುನ್ ಮೊಟ್ಯಾನ್ ಬೊಬ್ ಮಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 7:10
26 ತಿಳಿವುಗಳ ಹೋಲಿಕೆ  

ಇದಾದ ಬಳಿಕ, ಪರಲೋಕದಲ್ಲಿ ಅನೇಕಾನೇಕ ಜನರ ಮಹಾಶಬ್ದವೋ ಎಂಬಂತೆ ಇದ್ದ ಧ್ವನಿಯನ್ನು ಕೇಳಿದೆನು. ಆ ಜನರು ಹೀಗೆ ಹೇಳುತ್ತಿದ್ದರು: “ಹಲ್ಲೆಲೂಯಾ, (ದೇವರಿಗೆ ಸ್ತೋತ್ರ ಮಾಡಿರಿ) ಜಯವೂ ಪ್ರಭಾವವೂ ಅಧಿಕಾರವೂ ನಮ್ಮ ದೇವರಿಗೆ ಸೇರಿದ್ದಾಗಿವೆ.


ಯೆಹೋವನು ತನ್ನ ಜನರನ್ನು ರಕ್ಷಿಸಬಲ್ಲನು. ಯೆಹೋವನೇ, ದಯವಿಟ್ಟು ನಿನ್ನ ಜನರಿಗೆ ಒಳ್ಳೆಯದನ್ನು ಮಾಡು.


ಆಗ ಪರಲೋಕದಲ್ಲಾದ ಒಂದು ಮಹಾಶಬ್ದವನ್ನು ನಾನು ಕೇಳಿದೆನು: “ನಮ್ಮ ದೇವರ ಜಯವು, ಶಕ್ತಿಯು ಮತ್ತು ರಾಜ್ಯವು ಹಾಗೂ ಆತನವನಾಗಿರುವ ಕ್ರಿಸ್ತನ ಅಧಿಕಾರವು ಈಗ ಬಂದಿವೆ. ನಮ್ಮ ಸಹೋದರರ ಮೇಲೆ ದೂಷಣೆ ಮಾಡುವವನನ್ನು ಹೊರಕ್ಕೆ ಎಸೆದಿರುವುದರಿಂದ ಇವುಗಳೆಲ್ಲಾ ಬಂದಿವೆ. ನಮ್ಮ ದೇವರ ಮುಂದೆ ಹಗಲಿರುಳು ನಮ್ಮ ಸಹೋದರರ ಬಗ್ಗೆ ಅವನು ದೂರು ಹೇಳಿದನು.


ನನ್ನ ಬಳಿಗೆ ಬರಲು ಅವರಿಗೆ ಹೇಳು. ತಾವು ವಿಗ್ರಹಗಳನ್ನು ಯಾಕೆ ನಂಬುತ್ತಾರೆಂದು ನನ್ನೊಂದಿಗೆ ವಾದಿಸಲಿ.) “ಬಹಳ ಕಾಲದ ಹಿಂದೆ ನಡೆದ ಸಂಗತಿಗಳ ಬಗ್ಗೆ ನಿಮಗೆ ತಿಳಿಸಿದವರು ಯಾರು? ಬಹಳ ಕಾಲದಿಂದ ಈ ವಿಷಯಗಳನ್ನು ನಿಮಗೆ ತಿಳಿಸುತ್ತಾ ಬಂದವರು ಯಾರು? ನಾನೇ. ಯೆಹೋವನಾದ ನಾನೇ ನಿಮಗೆಲ್ಲವನ್ನು ತಿಳಿಸಿದೆನು. ನಾನೊಬ್ಬನೇ ದೇವರು. ನನ್ನಂಥ ದೇವರು ಬೇರೆ ಇದ್ದಾರೆಯೇ? ಕರುಣೆಯುಳ್ಳ ದೇವರು ಬೇರೆಲ್ಲಾದರೂ ಇರುವನೇ? ತನ್ನ ಜನರನ್ನು ವಿಮೋಚಿಸುವಂಥ ಬೇರೆ ದೇವರು ಇರುವನೇ? ಇಲ್ಲ! ಬೇರೆ ದೇವರು ಇಲ್ಲ!


ದೇವರಿಂದ ಶಾಪ ಹೊಂದಿದ ಯಾವುದೂ ಆ ಪಟ್ಟಣದಲ್ಲಿರುವುದಿಲ್ಲ. ದೇವರ ಮತ್ತು ಕುರಿಮರಿಯಾದಾತನ (ಯೇಸು) ಸಿಂಹಾಸನವು ಆ ನಗರದಲ್ಲಿರುತ್ತದೆ. ದೇವರ ಸೇವಕರು ಆತನನ್ನು ಆರಾಧಿಸುತ್ತಾರೆ.


ಆದ್ದರಿಂದ ನೀವು ನಂಬಿಕೆಯ ಮೂಲಕ ದೇವರ ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದ ಉಂಟಾದದ್ದಲ್ಲ, ಅದು ದೇವರ ವರ.


ಮರುದಿನ ಯೋಹಾನನು, ತನ್ನ ಬಳಿಗೆ ಬರುತ್ತಿದ್ದ ಯೇಸುವನ್ನು ಕಂಡು, “ಇಗೋ, ಯಜ್ಞಕ್ಕಾಗಿ ದೇವರು ನೇಮಿಸಿದ ಕುರಿಮರಿ. ಆತನು ಈ ಲೋಕದ ಪಾಪಗಳನ್ನು ಪರಿಹರಿಸುವನು.


ನಾನೇ, ನಾನೇ ಯೆಹೋವನು! ನನ್ನ ಹೊರತು ಬೇರೆ ರಕ್ಷಕನಿಲ್ಲ!


ಸಿಂಹಾಸನದ ಮೇಲೆ ಕುಳಿತಿದ್ದವನು, “ನೋಡು! ನಾನು ಎಲ್ಲವನ್ನೂ ಹೊಸದಾಗಿ ಸೃಷ್ಟಿಸುತ್ತೇನೆ!” ಎಂದು ಹೇಳಿದನು. ನಂತರ ಆತನು, “ಈ ವಾಕ್ಯಗಳು ಸತ್ಯವಾದುವುಗಳೂ ನಂಬತಕ್ಕವುಗಳೂ ಆಗಿರುವುದರಿಂದ ಇವುಗಳನ್ನು ಬರೆ” ಎಂದು ಹೇಳಿದನು.


ಪ್ರತಿಯೊಬ್ಬನೂ ದೇವರ ರಕ್ಷಣೆಯನ್ನು ಕಾಣುವನು!’ ಎಂಬುದಾಗಿ ಅಡವಿಯಲ್ಲಿ ಒಬ್ಬನು ಕೂಗುತ್ತಿದ್ದಾನೆ.”


ಬೆಟ್ಟದ ಮೇಲೆ ವಿಗ್ರಹಗಳ ಪೂಜೆ ಮಾಡಿದ್ದು ನಮ್ಮ ಮೂರ್ಖತನವಾಯಿತು. ಬೆಟ್ಟಗಳ ಮೇಲಿನ ಎಲ್ಲಾ ಉತ್ಸವಗಳು ಕೇವಲ ಸುಳ್ಳು. ಇಸ್ರೇಲಿನ ರಕ್ಷಣೆ ಖಚಿತವಾಗಿಯೂ ನಮ್ಮ ದೇವರಾದ ಯೆಹೋವನಿಂದ ಮಾತ್ರ ಸಾಧ್ಯ.


ಆ ಕುರಿಮರಿಯು ಬಂದು ಸಿಂಹಾಸನದ ಮೇಲೆ ಕುಳಿತಿರುವಾತನ ಬಲಗೈಯಿಂದ ಸುರುಳಿಯನ್ನು ತೆಗೆದುಕೊಂಡಿತು.


ಇದಲ್ಲದೆ ಸಿಂಹಾಸನದ ಮುಂದೆ ಗಾಜಿನ ಸಮುದ್ರದಂತೆ ಕಾಣುವ ವಸ್ತುವೊಂದಿತ್ತು. ಅದು ಸ್ಫಟಿಕದಂತೆ ಸ್ಪಚ್ಛವಾಗಿತ್ತು. ಆ ಸಿಂಹಾಸನದ ಮುಂದೆ ಮತ್ತು ಅದರ ಪ್ರತಿಯೊಂದು ಮಗ್ಗುಲಿನಲ್ಲೂ ನಾಲ್ಕು ಜೀವಿಗಳಿದ್ದವು. ಈ ಜೀವಿಗಳ ಹಿಂಭಾಗದಲ್ಲೆಲ್ಲಾ ಮತ್ತು ಮುಂಭಾಗದಲ್ಲೆಲ್ಲಾ ಕಣ್ಣುಗಳು ತುಂಬಿದ್ದವು.


ನೀವು ನಿಮಗೆ ತಿಳಿದಿಲ್ಲದ ಯಾವುದನ್ನೋ ಆರಾಧಿಸುತ್ತೀರಿ. ನಮಗಾದರೋ ನಾವು ಯಾರನ್ನು ಆರಾಧಿಸುತ್ತಿದ್ದೇವೆ ಎಂಬುದು ತಿಳಿದಿದೆ. ರಕ್ಷಣೆಯು ಯೆಹೂದ್ಯರಿಂದ ಬರುತ್ತದೆ.


ಸಮೀಪದಲ್ಲಿ ನಡೆದುಹೋಗುತ್ತಿದ್ದ ಯೇಸುವನ್ನು ಕಂಡು, “ಇಗೋ, ಯಜ್ಞಕ್ಕೆ ದೇವರು ನೇಮಿಸಿದ ಕುರಿಮರಿ!” ಎಂದು ಹೇಳಿದನು.


ಚೀಯೋನ್ ನಗರಿಯೇ, ಹರ್ಷಿಸು! ಜೆರುಸಲೇಮ್ ಜನರೇ, ಸಂತೋಷದಿಂದ ಆರ್ಭಟಿಸಿರಿ. ನಿಮ್ಮ ಅರಸನು ನಿಮ್ಮ ಬಳಿಗೆ ಬರುತ್ತಿದ್ದಾನೆ! ಆತನು ವಿಜಯಶಾಲಿಯಾದ ನೀತಿವಂತನಾಗಿದ್ದಾನೆ. ಆದರೆ ದೀನನಂತೆ ಕತ್ತೆಯ ಮೇಲೆ, ಹೌದು, ಕತ್ತೆಯ ಮರಿಯ ಮೇಲೆ ಸವಾರಿ ಮಾಡಿಕೊಂಡು ಬರುವನು.


ರಕ್ಷಣೆಯು ಯೆಹೋವನಿಂದಲೇ ಉಂಟಾಗುವದು. ಯೆಹೋವನೇ, ನಾನು ನಿನಗೆ ಯಜ್ಞವನ್ನರ್ಪಿಸುವೆನು. ನಾನು ನಿನ್ನನ್ನು ಕೊಂಡಾಡಿ ಸ್ತೋತ್ರಸಲ್ಲಿಸುವೆನು. ನಾನು ನಿನಗೆ ವಿಶೇಷವಾದ ಹರಕೆಗಳನ್ನು ಮಾಡುವೆನು. ನಾನು ಕೊಟ್ಟ ವಚನಗಳನ್ನು ಪಾಲಿಸುವೆನು.”


“ನೀವು ಈಜಿಪ್ಟಿನಲ್ಲಿದ್ದ ದಿವಸಗಳಿಂದ ನಾನೇ ನಿಮ್ಮ ಯೆಹೋವನಾಗಿದ್ದೇನೆ. ನನ್ನ ಹೊರತು ಬೇರೆ ಯಾವ ದೇವರನ್ನೂ ನೀವು ತಿಳಿದಿರಲಿಲ್ಲ. ನನ್ನ ಹೊರತು ಬೇರೆ ಯಾವ ರಕ್ಷಕನೂ ಇಲ್ಲ.


ದೇವರೇ, ಜನರು ನಿನ್ನನ್ನು ಕಾಣಲಾರರು. ನೀನೇ ಇಸ್ರೇಲರ ವಿಮೋಚಕನು.


ಯೆಹೋವನೇ, ಘನಮಾನಗಳು ನಮ್ಮವಲ್ಲ! ಅವು ನಿನ್ನವೇ. ನಿನ್ನ ಪ್ರೀತಿಯ ನಿಮಿತ್ತವಾಗಿಯೂ ನಂಬಿಗಸ್ತಿಕೆಯ ನಿಮಿತ್ತವಾಗಿಯೂ ಘನಮಾನಗಳು ನಿನಗೇ ಸಲ್ಲತಕ್ಕದ್ದು.


ಯೆಹೋವನು ನೀತಿವಂತರನ್ನು ಕಾಪಾಡುತ್ತಾನೆ. ಅವರು ಆಪತ್ತಿನಲ್ಲಿರುವಾಗ ಆತನೇ ಅವರಿಗೆ ಆಶ್ರಯಸ್ಥಾನವಾಗಿದ್ದಾನೆ.


ಉನ್ನತವಾದ ಶಿಖರವು ಜೆರುಬ್ಬಾಬೆಲನಿಗೆ ಸಮತಟ್ಟಾದ ನೆಲದಂತಿರುವುದು. ಅವನು ಆಲಯವನ್ನು ಕಟ್ಟುವನು. ಅದರ ಅತಿ ವಿಶೇಷವಾದ ಕಲ್ಲನ್ನಿಟ್ಟ ಬಳಿಕ ಜನರೆಲ್ಲರೂ, ‘ಬಹಳ ಚಂದ, ಬಹಳ ಚಂದ’ ಎಂದು ಆರ್ಭಟಿಸುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು