Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 7:17 - ಪರಿಶುದ್ದ ಬೈಬಲ್‌

17 ಸಿಂಹಾಸನದ ಮಧ್ಯೆ ಇರುವ ಕುರಿಮರಿಯಾದಾತನು ಅವರ ಕುರುಬನಾಗಿರುತ್ತಾನೆ. ಆತನು ಅವರನ್ನು ಜೀವ ನೀಡುವ ನೀರಿನ ಬುಗ್ಗೆಗಳ ಬಳಿಗೆ ಕರೆದೊಯ್ಯುತ್ತಾನೆ. ಅವರ ಕಣ್ಣುಗಳಿಂದ ತೊಟ್ಟಿಕ್ಕುವ ಕಣ್ಣೀರನ್ನೆಲ್ಲ ದೇವರು ಒರಸಿಹಾಕುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಏಕೆಂದರೆ ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಮರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ಅವರನ್ನು ನಡಿಸುತ್ತಾನೆ. ದೇವರು ಅವರ ಕಣ್ಣಿನಿಂದ ಕಣ್ಣೀರನ್ನೆಲ್ಲಾ ಒರೆಸಿಬಿಡುವನು.” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಿಂತಿಹನು ಕುರಿಮರಿಯಾದಾತನು ಸಿಂಹಾಸನದ ನಡುವೆ ಕಾಯುವನು ಅವರುಗಳನು ಕುರುಬನಂತೆ ನಡೆಸುವನು ಅವರನು ಜೀವಜಲದ ಒರತೆಗಳ ಬಳಿಗೆ ದೇವನೊರಸುವನು ಅವರ ಕಂಬನಿಗಳನು ಬಿಡದೆ', “ ಎಂದು ನನಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ನಡಿಸುತ್ತಾನೆ. ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಏಕೆಂದರೆ, ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿ ಆಗಿರುವವರು ಇವರನ್ನು ಮೇಯಿಸಿ; ‘ಜೀವಜಲದ ಒರತೆಗಳ ಬಳಿ ನಡೆಸುವರು.’ ‘ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವರು,’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಕಶ್ಯಾಕ್ ಮಟ್ಲ್ಯಾರ್ ಸಿವಾಸನಾಚ್ಯಾ ಮದ್ದಿ ಬಸಲ್ಲೆ ಬೊಕ್ಡು ತೆಂಚೊ ಕುರ್ಬುರ್ ಹೊತಾ, ಅನಿ ತೆಂಕಾ ಜಿವ್ ದಿತಲೆ ಪಾನಿ ಅಸಲ್ಲ್ಯಾ ಝರ್‍ಯಾನಿಕ್ಡೆ ಘೆವ್ನ್ ಜಾತಾ. ಅನಿ ದೆವ್ ತೆಂಚ್ಯಾ ಡೊಳ್ಯಾನಿತ್ಲಿ ಹರಿ ಎಕ್ ದುಕ್ಕಾ ಪುಸುನ್ ಕಾಡ್ತಾ”. ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 7:17
42 ತಿಳಿವುಗಳ ಹೋಲಿಕೆ  

ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ದಾಹವಾಗುವುದೇ ಇಲ್ಲ. ನಾನು ಅವನಿಗೆ ಕೊಡುವ ನೀರು ಅವನೊಳಗೆ ಉಕ್ಕಿಹರಿಯುವ ನೀರಿನ ಬುಗ್ಗೆಯಾಗುವುದು. ಆ ನೀರು ಅವನಿಗೆ ನಿತ್ಯಜೀವವನ್ನು ತರುತ್ತದೆ” ಎಂದು ಉತ್ತರಕೊಟ್ಟನು.


ಆ ಸ್ತ್ರೀಯು, “ಅಯ್ಯಾ, ಆ ಜೀವಜಲ ನಿನಗೆಲ್ಲಿ ಸಿಕ್ಕುವುದು? ಬಾವಿಯು ಬಹು ಆಳವಾಗಿದೆ ಮತ್ತು ನೀರು ಸೇದುವುದಕ್ಕೆ ನಿನ್ನಲ್ಲಿ ಏನೂ ಇಲ್ಲ.


ಆಗ ದೇವದೂತನು ನನಗೆ ಜೀವಜಲದ ನದಿಯನ್ನು ತೋರಿಸಿದನು. ಆ ನದಿಯು ಸ್ಫಟಿಕದಂತೆ ಪ್ರಕಾಶಮಾನವಾಗಿತ್ತು. ಆ ನದಿಯು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಆಗಮಿಸಿ,


ದೇವರು ಅವರ ಕಣ್ಣೀರನ್ನೆಲ್ಲ ಒರಸಿ ಬಿಡುವನು. ಅಲ್ಲಿ ಇನ್ನು ಮರಣವಿರುವುದಿಲ್ಲ, ದುಃಖವಿರುವುದಿಲ್ಲ, ಗೋಳಾಟವಿರುವುದಿಲ್ಲ ಮತ್ತು ನೋವಿರುವುದಿಲ್ಲ. ಹಳೆಯ ಮಾರ್ಗಗಳೆಲ್ಲ ಹೋಗಿಬಿಟ್ಟವು” ಎಂದು ಹೇಳಿತು.


ವೈರಿಗಳ ಎದುರಿನಲ್ಲಿ ನೀನು ನನಗೆ ಔತಣವನ್ನು ಸಿದ್ಧಪಡಿಸಿರುವೆ; ನನ್ನ ತಲೆಗೆ ಎಣ್ಣೆಯನ್ನು ಹಚ್ಚಿರುವೆ. ನನ್ನ ಪಾತ್ರೆಯು ತುಂಬಿ ಹೊರಸೂಸುತ್ತಿದೆ.


ಸಿಂಹಾಸನದ ಮೇಲೆ ಕುಳಿತಿದ್ದಾತನು ನನಗೆ ಹೀಗೆ ಹೇಳಿದನು: “ಎಲ್ಲವೂ ನೆರವೇರಿತು! ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ನಾನೇ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ. ಬಾಯಾರಿದವರಿಗೆ ನಾನು ಜೀವಜಲದ ಬುಗ್ಗೆಯಿಂದ ನೀರನ್ನು ಉಚಿತವಾಗಿ ಕೊಡುತ್ತೇನೆ.


“ನಾನೇ ಒಳ್ಳೆಯ ಕುರುಬ. ಒಳ್ಳೆಯ ಕುರುಬನು ಕುರಿಗಳಿಗಾಗಿ ತನ್ನ ಪ್ರಾಣವನ್ನು ಕೊಡುತ್ತಾನೆ.


ಆದರೆ ಮರಣವು ಎಂದೆಂದಿಗೂ ನಾಶಮಾಡಲ್ಪಡುವದು. ನನ್ನ ಒಡೆಯನಾಗಿರುವ ಯೆಹೋವನು ಪ್ರತೀ ಮುಖದಲ್ಲಿರುವ ಕಣ್ಣೀರನ್ನು ಒರೆಸುವನು. ಹಿಂದೆ ಆತನ ಜನರೆಲ್ಲಾ ದುಃಖಕ್ಕೆ ಒಳಗಾಗಿದ್ದರು. ಆದರೆ ದೇವರು ಆ ದುಃಖವನ್ನು ಈ ಭೂಮಿಯಿಂದಲೇ ತೆಗೆದುಹಾಕುವನು. ಇವೆಲ್ಲಾ ಯೆಹೋವನು ಹೇಳಿದಂತೆಯೇ ಸಂಭವಿಸುವದು.


“ನಾನು ಕುರಿಗಳಿಗಾಗಿ (ಜನರಿಗಾಗಿ) ಚಿಂತಿಸುವ ಕುರುಬನಾಗಿದ್ದೇನೆ. ನನ್ನ ತಂದೆಯು ನನ್ನನ್ನು ತಿಳಿದಿರುವಂತೆ ನನ್ನ ಕುರಿಗಳನ್ನು ನಾನು ತಿಳಿದಿದ್ದೇನೆ. ಮತ್ತು ನಾನು ನನ್ನ ತಂದೆಯನ್ನು ತಿಳಿದಿರುವಂತೆ ನನ್ನ ಕುರಿಗಳು ನನ್ನನ್ನು ತಿಳಿದಿವೆ. ಈ ಕುರಿಗಳಿಗೋಸ್ಕರ ನನ್ನ ಜೀವವನ್ನೇ ಕೊಡುತ್ತೇನೆ.


“ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ. ಅವರು ನನ್ನಿಂದ ಮುಖ ತಿರುವಿದ್ದಾರೆ. ನಾನು ಜೀವಜಲದ ಬುಗ್ಗೆಯಾಗಿದ್ದೇನೆ. ಅವರು ತಮ್ಮದೇ ಆದ ನೀರಿನ ತೊಟ್ಟಿಗಳನ್ನು ನಿರ್ಮಿಸಿಕೊಂಡಿದ್ದಾರೆ. ಅವರು ಇತರ ದೇವರುಗಳ ಕಡೆಗೆ ತಿರುಗಿಕೊಂಡಿದ್ದಾರೆ. ಅವರ ತೊಟ್ಟಿಗಳು ಒಡೆದಿವೆ. ಅವುಗಳಲ್ಲಿ ನೀರು ತುಂಬಿಡಲು ಸಾಧ್ಯವಿಲ್ಲ.


ಆಮೇಲೆ ನಾನು ಅವರಿಗೆ ಒಬ್ಬ ಕುರುಬನನ್ನು ನೇಮಿಸುವೆನು. ಅವನು ನನ್ನ ಸೇವಕನಾದ ದಾವೀದನು; ಅವನು ಅವರನ್ನು ಮೇಯಿಸುವನು ಮತ್ತು ಅವರಿಗೆ ಕುರುಬನಾಗುವನು.


ನಂತರ ಸಿಂಹಾಸನದ ಮತ್ತು ನಾಲ್ಕು ಜೀವಿಗಳ ಮಧ್ಯೆ ಒಂದು ಕುರಿಮರಿಯನ್ನು ನಾನು ನೋಡಿದೆನು. ಹಿರಿಯರು ಸಹ ಆ ಕುರಿಮರಿಯ ಸುತ್ತಲೂ ಇದ್ದರು. ಆ ಕುರಿಮರಿಯು ಕೊಲ್ಲಲ್ಪಟ್ಟಂತಿತ್ತು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಇವು ಈ ಲೋಕಕ್ಕೆಲ್ಲಾ ಕಳುಹಿಸಲ್ಪಟ್ಟ ದೇವರ ಏಳು ಆತ್ಮಗಳಾಗಿದ್ದವು.


‘ಯೆಹೂದ ಪ್ರಾಂತ್ಯದಲ್ಲಿರುವ ಬೆತ್ಲೆಹೇಮೇ, ಯೆಹೂದವನ್ನು ಆಳುವವರಲ್ಲಿ ನೀನು ಪ್ರಾಮುಖ್ಯವಾಗಿರುವೆ. ಹೌದು, ಅಧಿಪತಿಯೊಬ್ಬನು ನಿನ್ನೊಳಗಿಂದ ಬರುವನು. ನನ್ನ ಜನರಾದ ಇಸ್ರೇಲರನ್ನು ಆತನೇ ಮುನ್ನಡೆಸುವನು’” ಎಂದು ಉತ್ತರಕೊಟ್ಟರು.’”


ರಕ್ಷಣೆಯೆಂಬ ಬುಗ್ಗೆಯಿಂದ ನೀರನ್ನು ತೆಗೆದುಕೊ. ಆಗ ನೀನು ಸಂತೋಷಗೊಳ್ಳುವೆ.


ಯೆಹೋವನೇ, ನಿನ್ನ ಜನರನ್ನು ರಕ್ಷಿಸು, ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು! ಅವರಿಗೆ ಕುರುಬನಾಗಿದ್ದು ಸದಾಕಾಲ ಅವರನ್ನು ಪರಿಪಾಲಿಸು.


ಆಗ ಇಸ್ರೇಲರನ್ನು ಆಳುವಾತನು ಯೆಹೋವನ ಶಕ್ತಿಯಲ್ಲಿಯೂ ತನ್ನ ದೇವರಾದ ಯೆಹೋವನ ಹೆಸರಿನಲ್ಲಿಯೂ ನಿಂತು ತನ್ನ ಮಂದೆಗೆ ಆಹಾರವನ್ನೀಯುವನು. ಆತನ ಮಹತ್ತು ಭೂಮಿಯ ಕಟ್ಟಕಡೆಗೆ ಪ್ರಸರಿಸುವದರಿಂದ ಅವರು ಸಮಾಧಾನದಿಂದ ವಾಸಿಸುವರು.


ನಿನ್ನ ಸೂರ್ಯನು ಮತ್ತೆ ಅಸ್ತಮಾನವಾಗುವದಿಲ್ಲ. ನಿನ್ನ ಚಂದ್ರನು ಮತ್ತೆಂದಿಗೂ ಕಪ್ಪಾಗುವದಿಲ್ಲ. ಯಾಕೆಂದರೆ ಯೆಹೋವನು ನಿನ್ನ ನಿರಂತರದ ಬೆಳಕಾಗಿರುವನು. ನಿನ್ನ ದುಃಖದ ಕಾಲವು ಅಂತ್ಯವಾಗುವದು.


ಸೆರೆಮನೆಯಲ್ಲಿರುವವರಿಗೆ ನೀವು, ‘ಸೆರೆಮನೆಯಿಂದ ಹೊರಗೆ ಬನ್ನಿರಿ’ ಎಂದು ಹೇಳುವಿರಿ. ಅಂಧಕಾರದಲ್ಲಿರುವವರಿಗೆ, ‘ಕತ್ತಲೆಯಿಂದ ಹೊರಗೆ ಬನ್ನಿರಿ’ ಎಂದು ಹೇಳುವಿರಿ. ಪ್ರಯಾಣದಲ್ಲಿರುವವರು ತಿನ್ನುತ್ತಾ ಹೋಗುವರು. ಬೋಳುಬೆಟ್ಟಗಳಲ್ಲೂ ನಿಮಗೆ ಆಹಾರ ದೊರೆಯುವದು.


ಯೆಹೋವನು ತನ್ನ ಜನರನ್ನು ಸ್ವತಂತ್ರರನ್ನಾಗಿ ಮಾಡುತ್ತಾನೆ. ಆ ಜನರು ಆತನ ಬಳಿಗೆ ಹಿಂದಿರುಗಿ ಬರುವರು. ಚೀಯೋನಿಗೆ ಜನರು ಬರುವಾಗ ಅವರು ಸಂತೋಷಭರಿತರಾಗುವರು. ಅವರು ನಿತ್ಯವೂ ಸಂತೋಷವಾಗಿರುವರು. ತಲೆಯ ಮೇಲಿನ ಕಿರೀಟದಂತೆ ಅವರ ಸಂತೋಷವಿರುವದು. ಅವರಲ್ಲಿ ಹರ್ಷವೂ ಸಂತಸವೂ ಸಂಪೂರ್ಣವಾಗಿ ತುಂಬಿರುವವು. ದುಃಖವೂ ಚಿಂತೆಯೂ ಬಹು ದೂರವಾಗಿರುವವು.


ಚೀಯೋನ್ ಪರ್ವತದಲ್ಲಿರುವ ಜೆರುಸಲೇಮಿನಲ್ಲಿ ಯೆಹೋವನ ಜನರು ವಾಸಿಸುವರು. ನೀವು ಇನ್ನು ಮೇಲೆ ಅಳುವದಿಲ್ಲ. ಯೆಹೋವನು ನಿಮ್ಮ ಅಳುವಿಕೆಯನ್ನು ನೋಡಿ ನಿಮ್ಮನ್ನು ಆದರಿಸುವನು. ಆತನು ನಿಮ್ಮ ಮೊರೆಯನ್ನು ಕೇಳಿ ನಿಮಗೆ ಸಹಾಯಿಸುವನು.


ಆ ಸಮಯದಲ್ಲಿ, ಸರ್ವಶಕ್ತನಾದ ಯೆಹೋವನು ಎಲ್ಲಾ ಜನರಿಗಾಗಿ ಈ ಪರ್ವತದ ಮೇಲೆ ಔತಣವನ್ನು ಏರ್ಪಡಿಸುವನು. ಅದು ಉತ್ಕೃಷ್ಟವಾದ ದ್ರಾಕ್ಷಾರಸದಿಂದಲೂ ಮೃಷ್ಠಾನ್ನದಿಂದಲೂ ಕೂಡಿರುವದು.


“ನಮ್ಮ ಪ್ರಭುವೇ, ನಮ್ಮ ದೇವರೇ! ನೀನು ಪ್ರಭಾವ, ಗೌರವ, ಅಧಿಕಾರಗಳನ್ನು ಪಡೆಯಲು ಯೋಗ್ಯನಾಗಿರುವೆ. ಎಲ್ಲವನ್ನೂ ನಿರ್ಮಿಸಿದಾತನು ನೀನೇ. ನಿನ್ನ ಚಿತ್ತದಂತೆಯೇ ಎಲ್ಲವೂ ಇದ್ದವು; ಎಲ್ಲವೂ ಸೃಷ್ಟಿಗೊಂಡವು.”


ನೀವು ಜವಾಬ್ದಾರಿ ವಹಿಸಿಕೊಂಡಿರುವ ಸಭೆಯನ್ನು ಪರಿಪಾಲಿಸಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಅವರು ದೇವರ ಮಂದೆ. ನೀವು ಆ ಮಂದೆಯನ್ನು ಕಾಯಿರಿ, ಏಕೆಂದರೆ ಅದು ನಿಮ್ಮ ಬಯಕೆಯಾಗಿದೆ; ಅದು ಬಲವಂತದಿಂದ ಹೊರಿಸಿದ ಹೊರೆಯಲ್ಲ. ದೇವರು ಅದನ್ನೇ ಇಷ್ಟಪಡುತ್ತಾನೆ. ನೀವು ಆ ಮಂದೆಯನ್ನು ಕಾಯುವುದು ಹಣದ ನಿಮಿತ್ತವಲ್ಲ, ದೇವರ ಸೇವೆ ಮಾಡಲು ನಿಮಗಿರುವ ಸಂತಸದ ನಿಮಿತ್ತವಾಗಿಯೇ.


ಆದ್ದರಿಂದ ನಿಮ್ಮ ವಿಷಯದಲ್ಲಿಯೂ ಪವಿತ್ರಾತ್ಮನು ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿಯೂ ಎಚ್ಚರಿಕೆಯಿಂದಿರಿ. ದೇವರು ತನ್ನ ಸ್ವಂತ ರಕ್ತದಿಂದ ಕೊಂಡುಕೊಂಡಿರುವ ಸಭೆಗೆ ನೀವು ಕುರುಬರಾಗಿದ್ದೀರಿ.


ಆದ್ದರಿಂದ ನಿನ್ನ ಜನರನ್ನು ಕಬ್ಬಿಣದ ಕೋಲಿನಿಂದ ಆಳು, ನಿನಗೆ ಸೇರಿದ ಜನರ ಹಿಂಡುಗಳನ್ನು ಆಳು. ಆ ಗುಂಪು ಅಡವಿಯಲ್ಲಿ ತಾನಾಗಿಯೇ ವಾಸಿಸುತ್ತದೆ; ಕರ್ಮೆಲ್ ಬೆಟ್ಟದಲ್ಲಿಯೂ ವಾಸಿಸುತ್ತದೆ. ಹಿಂದಿನ ಕಾಲದಲ್ಲಿ ಮಾಡಿದಂತೆ ಆ ಗುಂಪು ಬಾಷಾನ್ ಮತ್ತು ಗಿಲ್ಯಾದ್ ಪ್ರಾಂತ್ಯದಲ್ಲಿ ವಾಸಿಸುತ್ತದೆ.


ಆ ಜನರು ಹಿಂತಿರುಗಿ ಬರುವಾಗ ಅಳುತ್ತಿರುವರು. ಆದರೆ ನಾನು ಅವರಿಗೆ ದಾರಿತೋರಿಸುವೆನು, ಸಮಾಧಾನಪಡಿಸುವೆನು. ನಾನು ಅವರನ್ನು ನದಿ ದಾಟಿಸಿಕೊಂಡು ಬರುವೆನು. ಅವರು ಎಡವದಂತೆ ಸಮವಾದ ಮಾರ್ಗದಲ್ಲಿ ನಡೆಸಿಕೊಂಡು ಬರುವೆನು. ನಾನು ಇಸ್ರೇಲಿನ ತಂದೆ; ಎಫ್ರಾಯೀಮ್ ನನ್ನ ಚೊಚ್ಚಲ ಮಗ. ಆದ್ದರಿಂದಲೇ ನಾನು ಅವರನ್ನು ನಡೆಸಿಕೊಂಡು ಬರುವೆನು.


ಯೆಹೋವನು ತನ್ನ ಜನರನ್ನು ನಡಿಸುತ್ತಾನೆ. ಕುರಿಗಳನ್ನು ನಡಿಸುವ ಕುರುಬನಂತೆ ಯೆಹೋವನು ತನ್ನ ಭುಜಬಲದಿಂದ ತನ್ನ ಕುರಿಗಳನ್ನು ಒಟ್ಟುಗೂಡಿಸುವನು. ಯೆಹೋವನು ಕುರಿಮರಿಗಳನ್ನು ಎತ್ತಿಕೊಂಡು ಅಪ್ಪಿಕೊಳ್ಳುವನು. ಅದರ ತಾಯಿ ಆತನ ಪಕ್ಕದಲ್ಲೇ ನಡೆಯುವವು.


ಬಡವರು ತಿಂದು ತೃಪ್ತರಾಗುವರು. ಯೆಹೋವನಿಗಾಗಿ ಹುಡುಕುತ್ತಾ ಬಂದವರೇ, ಆತನಿಗೆ ಸ್ತೋತ್ರಮಾಡಿರಿ! ನಿಮ್ಮ ಹೃದಯವು ಯಾವಾಗಲೂ ಸಂತೋಷವಾಗಿರಲಿ.


ಪ್ರತಿಯೊಂದು ಬೆಟ್ಟದಲ್ಲಿಯೂ ಪರ್ವತದಲ್ಲಿಯೂ ಹರಿಯುವ ನೀರಿನ ತೊರೆಗಳಿರುವವು. ಇವೆಲ್ಲಾ ಅನೇಕ ಜನರು ಕೊಲ್ಲಲ್ಪಟ್ಟ ನಂತರವೂ ಬುರುಜುಗಳು ಕೆಡವಲ್ಪಟ್ಟ ನಂತರವೂ ಸಂಭವಿಸುವವು.


ಯೆಹೋವನು ತನ್ನ ಜನರನ್ನು ರಕ್ಷಿಸುತ್ತಾನೆ. ಅವರು ಚೀಯೋನಿಗೆ ಸಂತೋಷದಿಂದ ಮರಳಿ ಬರುತ್ತಾರೆ. ಅವರು ಬಹಳ ಸಂತೋಷಪಡುವರು. ಅವರ ಹರ್ಷವು ಅವರ ತಲೆಯ ಮೇಲೆ ಕಿರೀಟದಂತೆ ನಿತ್ಯಕಾಲಕ್ಕೂ ಇರುವುದು. ಅವರು ಹರ್ಷದಿಂದ ಹಾಡುವರು. ಅವರ ದುಃಖವೆಲ್ಲಾ ಬಹುದೂರವಾಗುವುದು.


“ಆಗ ನಾನು ಜೆರುಸಲೇಮಿನ ವಿಷಯದಲ್ಲಿ ಸಂತೋಷದಿಂದಿರುವೆನು. ನನ್ನ ಜನರ ವಿಷಯದಲ್ಲಿಯೂ ಸಂತೋಷದಿಂದಿರುವೆನು. ಆ ಪಟ್ಟಣದಲ್ಲಿ ಮತ್ತೆಂದಿಗೂ ರೋಧನವಿರದು, ದುಃಖವಿರದು.


ಈಗ ದು:ಖದಿಂದಿರುವವರು ಧನ್ಯರು. ದೇವರು ಅವರನ್ನು ಸಂತೈಸುವನು.


ಯೇಸು ಆಕೆಗೆ, “ದೇವರು ಏನು ಕೊಡುತ್ತಾನೆಂಬುದು ನಿನಗೆ ಗೊತ್ತಿಲ್ಲ ಮತ್ತು ಕುಡಿಯಲು ನೀರನ್ನು ಕೇಳಿದ ನಾನು ಯಾರೆಂಬುದೂ ನಿನಗೆ ಗೊತ್ತಿಲ್ಲ. ನಿನಗೆ ಈ ಸಂಗತಿಗಳು ಗೊತ್ತಿದ್ದರೆ, ನೀನು ನನ್ನನ್ನು ಕೇಳಿಕೊಳ್ಳುತ್ತಿದ್ದೆ, ಮತ್ತು ನಾನು ನಿನಗೆ ಜೀವಜಲವನ್ನು ಕೊಡುತ್ತಿದ್ದೆ” ಎಂದನು.


ಇವರು ಸ್ತ್ರೀ ಸಹವಾಸದಿಂದ ಮಲಿನರಾಗದೆ ಕನ್ನಿಕೆಯರಂತೆ ಉಳಿದಿದ್ದರು. ಕುರಿಮರಿಯಾದಾತನು ಹೋದಕಡೆಯಲ್ಲೆಲ್ಲಾ ಅವರು ಆತನನ್ನು ಹಿಂಬಾಲಿಸುತ್ತಾರೆ. ಭೂಲೋಕದ ಜನರ ಮಧ್ಯದಿಂದ ಬಿಡುಗಡೆ ಹೊಂದಿದವರೇ 1,44,000 ಮಂದಿ. ದೇವರಿಗೂ ಕುರಿಮರಿಯಾದಾತನಿಗೂ ಅರ್ಪಿತರಾದವರಲ್ಲಿ ಇವರೇ ಮೊದಲಿಗರಾಗಿದ್ದರು.


ನಾನು ನಗರದಲ್ಲಿ ಒಂದು ಆಲಯವನ್ನೂ ನೋಡಲಿಲ್ಲ. ಸರ್ವಶಕ್ತನಾದ ದೇವರಾದ ಪ್ರಭು ಮತ್ತು ಕುರಿಮರಿಯಾದಾತನು (ಯೇಸು) ನಗರದ ಆಲಯವಾಗಿದ್ದಾರೆ.


ನಗರದ ಮೇಲೆ ಸೂರ್ಯನಾಗಲಿ ಚಂದ್ರನಾಗಲಿ ಪ್ರಕಾಶಿಸುವ ಅಗತ್ಯವಿರಲಿಲ್ಲ. ದೇವರ ಪ್ರಭಾವವೇ ಆ ನಗರಕ್ಕೆ ಬೆಳಕನ್ನು ನೀಡುತ್ತಿತ್ತು. ಕುರಿಮರಿಯಾದಾತನು ನಗರಕ್ಕೆ ದೀಪವಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು