Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 7:4 - ಪರಿಶುದ್ದ ಬೈಬಲ್‌

4 ನಂತರ, ಮುದ್ರೆ ಒತ್ತಿಸಿಕೊಂಡವರ ಸಂಖ್ಯೆ ನನಗೆ ಕೇಳಿಬಂತು. ಅವರ ಒಟ್ಟು ಸಂಖ್ಯೆ 1,44,000 ಮಂದಿ. ಅವರು ಇಸ್ರೇಲರ ಹನ್ನೆರಡು ಕುಲಗಳಿಗೆ ಸೇರಿದವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮುದ್ರೆ ಒತ್ತಿಸಿಕೊಂಡವರ ಸಂಖ್ಯೆಯು ಪ್ರಸಿದ್ಧವಾದಾಗ ಅದನ್ನು ನಾನು ಕೇಳಿಸಿಕೊಂಡೆನು. ಇಸ್ರಾಯೇಲ್ಯರ ಪ್ರತಿಯೊಂದು ಕುಲಕ್ಕೆ ಸೇರಿದವರು ಮುದ್ರೆಯೊತ್ತಿಸಿಕೊಂಡವರ ಸಂಖ್ಯೆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮುದ್ರೆಯೊತ್ತಿಸಿಕೊಂಡವರ ಸಂಖ್ಯೆ ನನಗೆ ಕೇಳಿಬಂತು. ಇಸ್ರಯೇಲರು ಪ್ರತಿಯೊಂದು ಕುಲದಲ್ಲಿ ಮುದ್ರೆಯೊತ್ತಿಸಿಕೊಂಡವರು ಒಂದು ಲಕ್ಷದ ನಲವತ್ತ ನಾಲ್ಕು ಸಾವಿರ ಮಂದಿ. ಅವರ ಬಿಡಿ ಸಂಖ್ಯೆ ಹೀಗಿತ್ತು :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮುದ್ರೆ ಒತ್ತಿಸಿಕೊಂಡವರ ಸಂಖ್ಯೆಯು ಪ್ರಸಿದ್ಧವಾದಾಗ ನಾನು ಕೇಳಿದೆನು. ಇಸ್ರಾಯೇಲ್ಯರ ಪ್ರತಿಯೊಂದು ಕುಲಕ್ಕೆ ಸೇರಿದವರು ಒತ್ತಿಸಿಕೊಂಡರು. ಅವರ ಸಂಖ್ಯೆ ಒಂದು ಲಕ್ಷ ನಾಲ್ವತ್ತುನಾಲ್ಕು ಸಾವಿರ ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಮುದ್ರೆ ಹೊಂದಿರುವವರ ಸಂಖ್ಯೆಯು ನನಗೆ ಕೇಳಿಸಿತು. ಇಸ್ರಾಯೇಲಿನ ಎಲ್ಲಾ ಕುಲಗಳಿಂದ ಮುದ್ರೆಹಾಕಿಸಿಕೊಂಡವರು 1,44,000 ಜನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಕಪಾಳಾ ವೈನಿ ದೆವಾಚೊ ಛಪ್ಪೊ ಮಾರುನ್ ವಳಕ್ ಕರಲ್ಲಿ ಲೊಕಾ ಎಕ್ ಲಾಕ್ ಚಾಳಿಸಾರ್ ಚಾರ್ ಹಜಾರ್ ಲೊಕಾ ಮನುನ್ ಮಾಕಾ ಸಾಂಗಟ್ಲ್ಯಾನಿ. ತಿ ಲೊಕಾ ಇಸ್ರಾಯೆಲಾಚ್ಯಾ ಬಾರಾ ಘರಾನ್ಯಾನಿತ್ಲಿ ಲೊಕಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 7:4
17 ತಿಳಿವುಗಳ ಹೋಲಿಕೆ  

ನಂತರ ನಾನು ನೋಡಿದಾಗ, ನನ್ನ ಎದುರಿನಲ್ಲಿಯೇ ಕುರಿಮರಿಯಾದಾತನು ಇದ್ದನು. ಆತನು ಚೀಯೋನ್ ಪರ್ವತದ ಮೇಲೆ ನಿಂತಿದ್ದನು. ಆತನ ಜೊತೆಯಲ್ಲಿ 1,44,000 ಜನರಿದ್ದರು. ಅವರ ಹಣೆಗಳ ಮೇಲೆ ಆತನ ಹೆಸರನ್ನು ಮತ್ತು ಆತನ ತಂದೆಯ ಹೆಸರನ್ನು ಬರೆಯಲಾಗಿತ್ತು.


ಜನರು ಸಿಂಹಾಸನದ, ನಾಲ್ಕು ಜೀವಿಗಳ ಮತ್ತು ಹಿರಿಯರ ಸನ್ನಿಧಿಯಲ್ಲಿ ಹೊಸ ಹಾಡನ್ನು ಹಾಡಿದರು. ಈ ಲೋಕದಿಂದ ಬಿಡುಗಡೆ ಹೊಂದಿದ್ದ 1,44,000 ಜನರು ಮಾತ್ರ ಈ ಹಾಡನ್ನು ಕಲಿಯಲು ಶಕ್ತರಾಗಿದ್ದರು. ಈ ಹಾಡನ್ನು ಬೇರೆ ಯಾರೂ ಕಲಿಯಲಾಗುತ್ತಿರಲಿಲ್ಲ.


ನನ್ನ ರಾಜ್ಯದಲ್ಲಿ ನೀವು ನನ್ನ ಸಂಗಡ ಊಟಮಾಡುವಿರಿ ಮತ್ತು ಕುಡಿಯುವಿರಿ. ನೀವು ಸಿಂಹಾಸನಗಳಲ್ಲಿ ಕುಳಿತುಕೊಂಡು ಇಸ್ರೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


ಯೇಸು ಶಿಷ್ಯರಿಗೆ ಹೀಗೆಂದನು: “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಹೊಸ ಲೋಕವು ಸೃಷ್ಟಿಸಲ್ಪಟ್ಟಾಗ ಮನುಷ್ಯಕುಮಾರನು ತನ್ನ ಮಹಾಸಿಂಹಾಸನದ ಮೇಲೆ ಕುಳಿತುಕೊಳ್ಳುವನು. ನನ್ನನ್ನು ಹಿಂಬಾಲಿಸಿದ ನೀವೆಲ್ಲರೂ ಸಿಂಹಾಸನಗಳ ಮೇಲೆ ಕುಳಿತು ಇಸ್ರೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


ಈ ವಾಗ್ದಾನವು ಖಂಡಿತವಾಗಿ ನೆರವೇರುತ್ತದೆ ಎಂದು ಹನ್ನೆರಡು ಕುಲಗಳ ನಮ್ಮ ಜನರು ನಿರೀಕ್ಷಿಸಿಕೊಂಡಿದ್ದಾರೆ. ಯೆಹೂದ್ಯರು ಹಗಲಿರುಳು ದೇವರ ಸೇವೆ ಮಾಡುತ್ತಿರುವುದು ಈ ನಿರೀಕ್ಷೆಯಿಂದಲೇ. ನಾನು ಸಹ ಇದೇ ನಿರೀಕ್ಷೆಯನ್ನು ಹೊಂದಿರುವುದರಿಂದ ಇವರು ನನ್ನ ಮೇಲೆ ಆಪಾದನೆಗಳನ್ನು ಹೊರಿಸಿದ್ದಾರೆ!


ಅವರಲ್ಲಿದ್ದ ಅಶ್ವದಳದ ಸೈನಿಕರ ಸಂಖ್ಯೆ ಇಪ್ಪತ್ತುಕೋಟಿ ಎಂದು ನನಗೆ ಕೇಳಿಸಿತು.


ದೇವರ ಮತ್ತು ಪ್ರಭುವಾದ ಯೇಸು ಕ್ರಿಸ್ತನ ಸೇವಕನಾದ ಯಾಕೋಬನು ಲೋಕದಲ್ಲೆಲ್ಲಾ ಚದರಿಹೋಗಿರುವ (ಇಸ್ರೇಲಿನ) ಹನ್ನೆರಡು ಕುಲದವರಿಗೆ ಬರೆದ ಪತ್ರ. ನಿಮಗೆ ಶುಭವಾಗಲಿ.


ಇದಲ್ಲದೆ ಯೆಶಾಯನು ಇಸ್ರೇಲಿನ ಬಗ್ಗೆ ಕೂಗಿ ಹೇಳಿದ್ದಾನೆ: “ಸಮುದ್ರ ತೀರದ ಮರಳಿನಂತೆ ಇಸ್ರೇಲರು ಅಸಂಖ್ಯಾತವಾಗಿರುವರು. ಆದರೆ ಆ ಜನರಲ್ಲಿ ಕೆಲವರು ಮಾತ್ರ ರಕ್ಷಣೆ ಹೊಂದುವರು.


ಅದಕ್ಕೆ ಮೂರು ಬಾಗಿಲುಗಳು ಇರುವವು. ರೂಬೇನ್ ಬಾಗಿಲು, ಯೆಹೂದ ಬಾಗಿಲು ಮತ್ತು ಲೇವಿ ಬಾಗಿಲು.


ಯೆಹೋವನಿಂದ ಬಂದ ಸಂದೇಶ: ಹದ್ರಾಕ್ ದೇಶದ ಮತ್ತು ಅದರ ರಾಜಧಾನಿಯಾದ ದಮಸ್ಕ ನಗರದ ವಿರುದ್ಧವಾಗಿ ಯೆಹೋವನ ಸಂದೇಶ: “ಇಸ್ರೇಲ್ ಕುಲದವರು ಮಾತ್ರವೇ ದೇವರನ್ನು ತಿಳಿದವರಲ್ಲ. ಪ್ರತಿಯೊಬ್ಬರೂ ಸಹಾಯಕ್ಕಾಗಿ ಆತನಿಗೆ ಮೊರೆಯಿಡುವರು.


ನಗರದ ಕೆಲಸಗಾರರು ಈ ಜಾಗವನ್ನು ಉತ್ತು ಬೆಳೆ ಬೆಳೆಸುವರು. ಇವರು ಇಸ್ರೇಲರ ಎಲ್ಲಾ ಗೋತ್ರಕ್ಕೆ ಸೇರಿದವರಾಗಿರುತ್ತಾರೆ.


ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಇಸ್ರೇಲರ ಹನ್ನೆರಡು ಕುಲಗಳಿಗೆ ದೇಶವನ್ನು ವಿಂಗಡಿಸುವಾಗ ಅವುಗಳ ಮೇರೆ ಯಾವುವೆಂದರೆ, ಯೋಸೇಫನಿಗೆ ಎರಡು ಪಾಲು ಇರುವದು.


ನಂತರ ದೇವರು ಅಬ್ರಾಮನನ್ನು ಹೊರಗೆ ಕರೆದುಕೊಂಡು ಬಂದು ಅವನಿಗೆ, “ಆಕಾಶದ ಕಡೆಗೆ ಕಣ್ಣೆತ್ತಿ ನಕ್ಷತ್ರಗಳನ್ನು ನೋಡು. ನೀನು ಲೆಕ್ಕ ಮಾಡಲಾರದಷ್ಟು ನಕ್ಷತ್ರಗಳಿವೆ. ಮುಂದಿನ ಕಾಲದಲ್ಲಿ ನಿನ್ನ ಕುಟುಂಬವು ಅದೇ ರೀತಿಯಲ್ಲಿರುವುದು” ಎಂದು ಹೇಳಿದನು.


ಇಸ್ರೇಲನ ಗಂಡುಮಕ್ಕಳಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ರತ್ನದಂತೆ ದೈವನಿರ್ಣಯ ಪದಕದಲ್ಲಿ ಹನ್ನೆರಡು ರತ್ನಗಳಿರಬೇಕು. ಪ್ರತಿಯೊಂದು ಕಲ್ಲುಗಳಲ್ಲಿ ಇಸ್ರೇಲನ ಗಂಡುಮಕ್ಕಳ ಒಬ್ಬೊಬ್ಬರ ಹೆಸರನ್ನು ಬರೆಸಬೇಕು. ಒಬ್ಬ ಕೆಲಸಗಾರನು ಮುದ್ರೆಯನ್ನು ಕೆತ್ತುವಂತೆ ಈ ಹೆಸರುಗಳನ್ನು ಪ್ರತಿ ರತ್ನದ ಮೇಲೆ ಕೆತ್ತಿಸಬೇಕು.


ಯೂದನ ಕುಲದಿಂದ 12,000 ರೂಬೇನನ ಕುಲದಿಂದ 12,000 ಗಾದನ ಕುಲದಿಂದ 12,000


“ತರುವಾಯ ಆ ಸೇವಕನು ಬಂದು, ‘ಸ್ವಾಮೀ, ನೀನು ಹೇಳಿದಂತೆಯೇ ಮಾಡಿದೆನು. ಆದರೆ ನಮ್ಮಲ್ಲಿ ಇನ್ನೂ ಹೆಚ್ಚು ಜನರಿಗೆ ಸ್ಥಳವಿದೆ.’ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು