ಪ್ರಕಟನೆ 7:9 - ಪರಿಶುದ್ದ ಬೈಬಲ್9 ಬಳಿಕ ನಾನು ನೋಡಿದಾಗ, ಜನರ ಮಹಾಸಮೂಹವನ್ನು ಕಂಡೆನು. ಅವರು ಎಣಿಸಲಾಗದಷ್ಟು ಅಸಂಖ್ಯಾತರಾಗಿದ್ದರು. ಅವರಲ್ಲಿ ಸಕಲ ಜನಾಂಗ, ಕುಲ, ಪ್ರಜೆಗಳವರೂ ಲೋಕದ ಸಕಲ ಭಾಷೆಗಳನ್ನಾಡುವವರೂ ಇದ್ದರು. ಈ ಜನರು ಸಿಂಹಾಸನದ ಮುಂದೆ ಮತ್ತು ಕುರಿಮರಿಯ (ಯೇಸು) ಮುಂದೆ ನಿಂತಿದ್ದರು. ಅವರೆಲ್ಲರೂ ಬಿಳಿ ನಿಲುವಂಗಿಗಳನ್ನು ಧರಿಸಿಕೊಂಡು ಖರ್ಜೂರದ ಗರಿಗಳನ್ನು ತಮ್ಮ ಕೈಗಳಲ್ಲಿ ಹಿಡಿದಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇದಾದ ನಂತರ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಜನಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ನಿಂತಿರುವುದನ್ನು ಕಂಡೆನು. ಅವರು ಸಕಲ ಜನಾಂಗ, ಕುಲ, ಜಾತಿಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಇದಾದ ಬಳಿಕ ನಾನು ಇನ್ನೊಂದು ದಿವ್ಯದರ್ಶನವನ್ನು ಕಂಡೆ; ಯಾರಿಂದಲೂ ಎಣಿಸಲಾಗದಷ್ಟು ಒಂದು ದೊಡ್ಡ ಜನಸಮೂಹವು ನೆರೆದಿತ್ತು. ಅವರು ಎಲ್ಲಾ ದೇಶ, ಭಾಷೆ, ಕುಲಗೋತ್ರಗಳಿಂದ ಬಂದವರಾಗಿದ್ದರು. ಶ್ವೇತಾಂಬರರಾಗಿ ಸಿಂಹಾಸನದ ಮತ್ತು ಯಜ್ಞದ ಕುರಿಮರಿಯಾದಾತನ ಸಾನ್ನಿಧ್ಯದಲ್ಲಿ ನಿಂತಿದ್ದರು. ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಇವುಗಳಾದ ಮೇಲೆ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಯಾದಾತನ ಮುಂದೆಯೂ ನಿಂತಿರುವದನ್ನು ಕಂಡೆನು. ಅವರು ಸಕಲ ಜನಾಂಗಕುಲ ಪ್ರಜೆಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಇದಾದನಂತರ ಯಾರೂ ಎಣಿಸಲಾಗದಂಥ ಮಹಾ ಜನಸಮೂಹವನ್ನು ಕಂಡೆನು. ಅವರು ಪ್ರತಿ ರಾಷ್ಟ್ರ, ಕುಲ, ಜನ ಮತ್ತು ಭಾಷೆಯವರಾಗಿದ್ದು, ಯಜ್ಞದ ಕುರಿಮರಿ ಆಗಿರುವವರ ಮುಂದೆಯೂ ಸಿಂಹಾಸನದ ಮುಂದೆಯೂ ನಿಂತಿದ್ದರು. ಅವರು ಬಿಳಿ ನಿಲುವಂಗಿಗಳನ್ನು ಧರಿಸಿದ್ದವರಾಗಿ, ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಹೆಚ್ಯಾ ಮಾನಾ ಕೊನಾಚ್ಯಾನ್ಬಿ ಮೆಜುಕ್ ಹೊಯ್ನಾ ತವ್ಡೊ ಮೊಟೊ ಲೊಕಾಂಚೊ ತಾಂಡೊ ಮಿಯಾ ಬಗಟ್ಲೊ! ತಿ ಲೊಕಾ ಸಗ್ಳ್ಯಾ ದೆಶಾ, ಕುಳಿಯಾ, ಘರಾನೆ, ಅನಿ ಬಾಶಾಂಚಿ ಲೊಕಾ ತ್ಯಾತುರ್ ಹೊತ್ತಿ, ಅನಿ ತಿ ಸಗ್ಳಿ ಲೊಕಾ ಖಜುರಾಚಿ ಪಾನಾ ಹಾತಾತ್ನಿ ಧರುನ್ ಫಾಂಡ್ರೆ ಝಗೆ ನೆಸುನ್ ಬೊಕ್ಡಾಚ್ಯಾ ಸಿವಾಸನಾಚ್ಯಾ ಇದ್ರಾಕ್ ಇಬೆ ಹೊತ್ತಿ. ಅಧ್ಯಾಯವನ್ನು ನೋಡಿ |
ಬೆಂಕಿಯಲ್ಲಿ ಪುಟಹಾಕಿದ ಅಪ್ಪಟ ಚಿನ್ನವನ್ನು ನೀನು ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ಸಲಹೆ ನೀಡುತ್ತೇನೆ. ಆಗ ನೀನು ನಿಜವಾಗಿಯೂ ಶ್ರೀಮಂತನಾಗಲು ಸಾಧ್ಯ. ನಾನು ನಿನಗೆ ಹೇಳುವುದೇನೆಂದರೆ: ಬಿಳಿವಸ್ತ್ರಗಳನ್ನು ಕೊಂಡುಕೊ. ಆಗ ನೀನು ನಾಚಿಕೆಕರವಾದ ನಿನ್ನ ಬೆತ್ತಲೆಯನ್ನು ಮುಚ್ಚಿಕೊಳ್ಳಲು ಸಾಧ್ಯವಾಗುವುದು. ನೀನು ನಿನ್ನ ಕಣ್ಣುಗಳಿಗೆ ಹಚ್ಚಲು ಔಷಧಿಯನ್ನು ಕೊಂಡುಕೊಳ್ಳಬೇಕೆಂತಲೂ ನಾನು ನಿನಗೆ ಹೇಳುತ್ತೇನೆ. ಆಗ ನಿನಗೆ ನಿಜವಾಗಿಯೂ ದೃಷ್ಟಿ ಬರುವುದು.
ಯೆಹೋವನೇ, ನೀನೇ ನನ್ನ ಬಲವಾಗಿರುವೆ. ನನ್ನ ರಕ್ಷಕನಾಗಿರುವೆ. ಕಷ್ಟ ಬಂದಾಗ ಓಡಿಬಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನ್ನಲ್ಲಿಗೆ ಬರುವರು. ಅವರು, “ನಮ್ಮ ಪೂರ್ವಿಕರು ಸುಳ್ಳುದೇವರುಗಳನ್ನಿಟ್ಟುಕೊಂಡಿದ್ದರು. ಅವರು ಆ ನಿರರ್ಥಕವಾದ ವಿಗ್ರಹಗಳನ್ನು ಪೂಜಿಸಿದರು. ಆದರೆ ಆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ” ಎಂದು ಹೇಳುವರು.