ಪ್ರಕಟನೆ 8:3 - ಪರಿಶುದ್ದ ಬೈಬಲ್3 ಮತ್ತೊಬ್ಬ ದೇವದೂತನು ಬಂದು, ಯಜ್ಞವೇದಿಕೆಯ ಬಳಿ ನಿಂತನು. ಈ ದೇವದೂತನು ಧೂಪವಿದ್ದ ಬಂಗಾರದ ಪಾತ್ರೆಯನ್ನು ಹಿಡಿದುಕೊಂಡಿದ್ದನು. ದೇವರ ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಅರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವನ್ನು ಕೊಡಲಾಯಿತು. ಈ ದೇವದೂತನು ಸಿಂಹಾಸನದ ಎದುರಿನಲ್ಲಿರುವ ಚಿನ್ನದ ಯಜ್ಞವೇದಿಕೆಯ ಮೇಲೆ ಈ ಧೂಪವನ್ನು ಇಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅನಂತರ ಮತ್ತೊಬ್ಬ ದೇವದೂತನು ಬಂದನು, ಅವನು ಚಿನ್ನದ ಧೂಪಾರತಿ ಹಿಡಿದುಕೊಂಡು ಯಜ್ಞವೇದಿಯ ಬಳಿಯಲ್ಲಿ ನಿಂತನು. ಸಿಂಹಾಸನದ ಮುಂದಣ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳೊಂದಿಗೆ ಸಮರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವು ಕೊಡಲ್ಪಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅನಂತರ ಮತ್ತೊಬ್ಬ ದೇವದೂತನು ಬಂದು ಬಲಿಪೀಠದ ಬಳಿ ನಿಂತನು. ಅವನ ಕೈಯಲ್ಲಿ ಚಿನ್ನದ ಧೂಪಾರತಿ ಇತ್ತು. ಸಿಂಹಾಸನದ ಸಮ್ಮುಖದಲ್ಲಿರುವ ಚಿನ್ನದ ಬಲಿಪೀಠದ ಮೇಲೆ ದೇವಜನರೆಲ್ಲರ ಪ್ರಾರ್ಥನೆಯೊಡನೆ ಸಮರ್ಪಿಸಲು ಅವನಿಗೆ ಬಹಳಷ್ಟು ಧೂಪವನ್ನು ಕೊಡಲಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಮೇಲೆ ಮತ್ತೊಬ್ಬ ದೇವದೂತನು ಬಂದು ಯಜ್ಞವೇದಿಯ ಬಳಿಯಲ್ಲಿ ನಿಂತನು; ಅವನ ಕೈಯಲ್ಲಿ ಚಿನ್ನದ ಧೂಪಾರತಿ ಇತ್ತು. ಸಿಂಹಾಸನದ ಮುಂದಣ ಚಿನ್ನದ ಧೂಪವೇದಿಯ ಮೇಲೆ ದೇವಜನರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಚಿನ್ನದ ಧೂಪಾರತಿಯಿದ್ದ ಮತ್ತೊಬ್ಬ ದೇವದೂತನು ಬಂದು ಬಲಿಪೀಠದ ಬಳಿ ನಿಂತನು. ಸಿಂಹಾಸನದ ಮುಂದಿನ ಚಿನ್ನದ ಧೂಪವೇದಿಯ ಮೇಲೆ ದೇವಜನರೆಲ್ಲರ ಪ್ರಾರ್ಥನೆಗಳೊಂದಿಗೆ ಅರ್ಪಿಸಲು ಅವನಿಗೆ ಬಹಳ ಧೂಪವು ಕೊಡಲಾಗಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಸೊನ್ಯಾಚೆ ಧುಪ್ ಜಾಳ್ವುತಲೆ ಆಯ್ದಾನ್ ಧರಲ್ಲೊ ಅನಿಎಕ್ ದೆವಾಚೊ ದುತ್ ಯೆಲೊ ಅನಿ ಆಲ್ತಾರಿಕ್ಡೆ ಇಬೆ ರ್ಹಾಲೊ. ಸಿವಾಸನಾಚ್ಯಾ ಇದ್ರಾಕ್ ಹೊತ್ತ್ಯಾ ಸೊನ್ಯಾಚ್ಯಾ ಆಲ್ತಾರಿ ವರ್ತಿ ದೆವಾಚಿ ಸಗ್ಳಿ ಲೊಕಾ ಮಾಗ್ನಿಯಾಂಚ್ಯಾ ವಾಂಗ್ಡಾ ಭೆಟ್ವುಸಾಟ್ನಿ ಮನುನ್ ಲೈ ದುಪ್ ತೆಚೆಕ್ಡೆ ದಿಲ್ಲೆ ಹೊತ್ತೆ. ಅಧ್ಯಾಯವನ್ನು ನೋಡಿ |
ಮಹಾ ಪವಿತ್ರಸ್ಥಳದಲ್ಲಿ ಧೂಪವನ್ನು ಸುಡುವುದಕ್ಕಾಗಿ ಬಂಗಾರದ ಯಜ್ಞವೇದಿಕೆಯಿತ್ತು. ಅಲ್ಲದೆ ಮೊದಲನೆ ಒಡಂಬಡಿಕೆಯನ್ನು ಇಡಲಾಗಿದ್ದ ಪವಿತ್ರ ಪೆಟ್ಟಿಗೆಯಿತ್ತು. ಅದಕ್ಕೆ ಚಿನ್ನದ ತಗಡನ್ನು ಹೊದಿಸಲಾಗಿತ್ತು. ಅದರ ಒಳಗಡೆ ಚಿನ್ನದ ಪಾತ್ರೆಯಲ್ಲಿಟ್ಟಿದ್ದ ಮನ್ನಾ ಮತ್ತು ಒಂದಾನೊಂದು ಕಾಲದಲ್ಲಿ ಚಿಗುರಿ ಎಲೆಗಳನ್ನು ಬಿಟ್ಟಿದ್ದ ಆರೋನನ ಕೋಲು ಇದ್ದವು. ಅಲ್ಲದೆ ಆ ಮೊದಲನೆ ಒಡಂಬಡಿಕೆಯ ಹತ್ತು ಆಜ್ಞೆಗಳನ್ನು ಬರೆಯಲಾಗಿದ್ದ ಕಲ್ಲಿನ ಹಲಗೆಗಳನ್ನು ಅದರಲ್ಲಿ ಇಡಲಾಗಿತ್ತು.
ಯಜ್ಞವೇದಿಕೆಯ ಬಳಿಯಲ್ಲಿ ನನ್ನ ಒಡೆಯನು ನಿಂತಿರುವುದನ್ನು ಕಂಡೆನು. ಆತನು ಹೇಳಿದ್ದೇನೆಂದರೆ, “ಸ್ತಂಭಗಳ ಮೇಲೆ ಹೊಡೆಯಿರಿ, ಆಗ ಕಟ್ಟಡವು ಹೊಸ್ತಿಲಿನ ತನಕ ಕಂಪಿಸುವದು. ಸ್ತಂಭಗಳು ಜನರ ತಲೆಗಳ ಮೇಲೆ ಕುಸಿದುಬೀಳುವಂತೆ ಮಾಡಿರಿ. ಅದರಿಂದ ಸಾಯದೆ ಉಳಿಯುವವರನ್ನು ನಾನು ಖಡ್ಗದಿಂದ ಸಾಯಿಸುವೆನು. ಅದರಿಂದ ತಪ್ಪಿಸಿಕೊಂಡು ಓಡಿಹೋಗಲು ಒಬ್ಬನು ಪ್ರಯತ್ನಿಸಿದರೂ ಸಾಧ್ಯವಾಗುವುದಿಲ್ಲ. ಒಬ್ಬನಾದರೂ ತಪ್ಪಿಸಿಕೊಳ್ಳುವುದಿಲ್ಲ.
ನಂತರ ಬೇರೊಬ್ಬ ದೇವದೂತನು ಪೂರ್ವದಿಕ್ಕಿನ ಕಡೆಯಿಂದ ಬರುತ್ತಿರುವುದನ್ನು ನಾನು ನೋಡಿದೆನು. ಜೀವಸ್ವರೂಪನಾದ ದೇವರ ಮುದ್ರೆಯು ಈ ದೇವದೂತನ ಬಳಿಯಿತ್ತು. ಈ ದೇವದೂತನು ನಾಲ್ಕುಮಂದಿ ದೇವದೂತರನ್ನು ಗಟ್ಟಿಯಾದ ಧ್ವನಿಯಲ್ಲಿ ಕರೆದನು. ಭೂಮಿಗೆ ಮತ್ತು ಸಮುದ್ರಕ್ಕೆ ತೊಂದರೆ ಮಾಡುವುದಕ್ಕೆ ಅಧಿಕಾರವನ್ನು ದೇವರು ಈ ನಾಲ್ವರು ದೇವದೂತರಿಗೆ ನೀಡಿದ್ದನು. ಆ ದೇವದೂತನು ಈ ನಾಲ್ವರು ದೇವದೂತರಿಗೆ,