Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 8:7 - ಪರಿಶುದ್ದ ಬೈಬಲ್‌

7 ಮೊದಲನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ರಕ್ತದಲ್ಲಿ ಕಲಸಿದ್ದ ಆಲಿಕಲ್ಲುಗಳ ಮತ್ತು ಬೆಂಕಿಯ ಮಳೆಯು ಭೂಮಿಯ ಮೇಲೆ ಸುರಿಯಿತು. ಭೂಮಿಯ ಮೂರನೆಯ ಒಂದು ಭಾಗ ಮತ್ತು ಹಸಿರು ಹುಲ್ಲೆಲ್ಲಾ ಸುಟ್ಟುಹೋದವು; ಮತ್ತು ಮರಗಳಲ್ಲಿ ಮೂರನೆಯ ಒಂದು ಭಾಗ ಸುಟ್ಟುಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮೊದಲನೆಯ ದೇವದೂತನು ತನ್ನ ತುತ್ತೂರಿಯನ್ನೂದಲು ರಕ್ತ ಮಿಶ್ರಿತವಾದ ಆಲಿಕಲ್ಲಿನ ಮಳೆಯೂ ಬೆಂಕಿಯೂ ಭೂಮಿಯ ಮೇಲೆ ಸುರಿಯಿತು. ಭೂಮಿಯ ಮೂರರಲ್ಲಿ ಒಂದು ಭಾಗವು ಸುಟ್ಟು ಹೋಯಿತು. ಮರಗಳಲ್ಲಿ ಮೂರರಲ್ಲೊಂದು ಭಾಗ ಸುಟ್ಟು ಹೋದವು. ಹಸಿರು ಹುಲ್ಲೆಲ್ಲಾ ಸುಟ್ಟು ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಮೊದಲನೆಯ ದೇವದೂತನು ತುತೂರಿಯನ್ನು ಊದಿದನು. ಭೂಮಿಯ ಮೇಲೆ ರಕ್ತಮಿಶ್ರಿತವಾದ ಆಲಿಕಲ್ಲಿನ ಮತ್ತು ಬೆಂಕಿಯ ಸುರಿಮಳೆಯಾಯಿತು. ಪರಿಣಾಮವಾಗಿ, ಭೂಮಿಯ ಮೂರನೆಯ ಒಂದು ಭಾಗ ಸುಟ್ಟುಹೋಯಿತು. ಮರಗಳಲ್ಲಿ ಮೂರನೆಯ ಒಂದು ಭಾಗ ಭಸ್ಮವಾಯಿತು. ಹಸಿರು ಹುಲ್ಲೆಲ್ಲಾ ಉರಿದುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಮೊದಲನೆಯ ದೇವದೂತನು ತುತೂರಿಯನ್ನೂದಿದಾಗ ರಕ್ತದಲ್ಲಿ ಕಲಸಿದ್ದ ಆನೆಕಲ್ಲಿನ ಮಳೆಯೂ ಬೆಂಕಿಯೂ ಭೂವಿುಗೆ ಸುರಿಸಲ್ಪಟ್ಟವು; ಭೂವಿುಯೊಳಗೆ ಮೂರರಲ್ಲಿ ಒಂದು ಭಾಗ ಸುಟ್ಟುಹೋಯಿತು; ಮರಗಳೊಳಗೆ ಮೂರರಲ್ಲಿ ಒಂದು ಭಾಗ ಸುಟ್ಟುಹೋಯಿತು; ಹಸುರು ಹುಲ್ಲೆಲ್ಲಾ ಸುಟ್ಟುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಮೊದಲನೆಯ ದೇವದೂತನು ತನ್ನ ತುತೂರಿಯನ್ನು ಊದಲು, ರಕ್ತದೊಂದಿಗೆ ಮಿಶ್ರಿತವಾದ ಆಲಿಕಲ್ಲಿನ ಮಳೆಯೂ ಬೆಂಕಿಯೂ ಭೂಮಿಯ ಮೇಲೆ ಸುರಿದವು. ಭೂಮಿಯ ಮೂರರಲ್ಲಿ ಒಂದು ಭಾಗವು ಸುಟ್ಟುಹೋಯಿತು. ಮರಗಳಲ್ಲಿ ಮೂರನೆಯ ಒಂದು ಭಾಗ ಭಸ್ಮವಾಯಿತು ಮತ್ತು ಹಸಿರು ಹುಲ್ಲೆಲ್ಲಾ ಸುಟ್ಟುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಪಯ್ಲೆಚ್ಯಾ ದೆವಾಚ್ಯಾ ದುತಾನ್ ಅಪ್ನಾಚೊ ಪಂವೊ ವಾಜ್ವುಲ್ಯಾನ್ ತನ್ನಾ ಆಗ್ ಅನಿ ರಗಾತ್ ಮಿಸಳ್ ಹೊಲ್ಲೊ ಘಾರ್‍ಬಿಯಾಂಚೊ ಪಾವ್ಸ್ ಜಿಮ್ನಿ ವರ್ತಿ ಗಳುಕ್‍ ಲಾಗ್ಲೊ. ಜಿಮ್ನಿಚೊ ತಿನಾತ್ಲೊ ಎಕ್ ಭಾಗ್ ಜಳುನ್ ಗೆಲೊ. ಝಾಡಾನಿತ್ಲೊ ತಿನಾತ್ಲೊ ಎಕ್ ಭಾಗ್, ಅನಿ ಹಿರ್ವ್ಯಾ ಗವ್ತಾಚ್ಯಾ ಹರಿಎಕ್ ಪಾಲ್ವಿಯಾ ಝಳುನ್ ಗೆಲ್ಯಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 8:7
29 ತಿಳಿವುಗಳ ಹೋಲಿಕೆ  

ಭೂಮಿಯ ಮೇಲಿನ ಹುಲ್ಲಿಗಾಗಲಿ ಸಸ್ಯಕ್ಕಾಗಲಿ ಮರಕ್ಕಾಗಲಿ ಹಾನಿ ಮಾಡದಂತೆ ಆ ಮಿಡತೆಗಳಿಗೆ ತಿಳಿಸಲಾಯಿತು. ತಮ್ಮ ಹಣೆಗಳ ಮೇಲೆ ದೇವರ ಮುದ್ರೆಯಿಲ್ಲದ ಜನರನ್ನು ಹಿಂಸಿಸಲು ಅವುಗಳಿಗೆ ತಿಳಿಸಲಾಯಿತು.


ನಾನು ಗೋಗನನ್ನು ರೋಗಮರಣಗಳಿಂದ ಶಿಕ್ಷಿಸುವೆನು. ಅವನ ಮೇಲೆಯೂ ಅವನೊಂದಿಗೆ ಬಂದ ಬಹುದೇಶದ ಸೈನಿಕರ ಮೇಲೆಯೂ ಆಲಿಕಲ್ಲು, ಬೆಂಕಿ, ಗಂಧಕದ ಮಳೆಯಿಂದ ಶಿಕ್ಷಿಸುವೆನು.


ಭೂಮಿಯ ಮೇಲಿನ ಜನರಲ್ಲಿ ಮೂರನೆಯ ಒಂದು ಭಾಗವು ಕುದುರೆಗಳ ಬಾಯಿಂದ ಹೊರಬಂದ ಬೆಂಕಿ, ಹೊಗೆ ಮತ್ತು ಗಂಧಕಗಳ ಉಪದ್ರವಗಳಿಂದ ಕೊಲ್ಲಲ್ಪಟ್ಟಿತು.


ಈ ನಾಲ್ಕು ಮಂದಿ ದೇವದೂತರನ್ನು ಇದೇ ವರ್ಷ, ಇದೇ ತಿಂಗಳು, ಇದೇ ದಿನ, ಇದೇ ತಾಸಿಗಾಗಿ ಸಿದ್ಧಪಡಿಸಲಾಗಿತ್ತು. ಭೂಮಿಯ ಮೇಲಿರುವ ಜನರಲ್ಲಿ ಮೂರನೆಯ ಒಂದು ಭಾಗವನ್ನು ಸಂಹರಿಸಲು ಇವರನ್ನು ಬಿಡುಗಡೆ ಮಾಡಲಾಯಿತು.


ಇಗೋ, ನನ್ನ ಒಡೆಯನಿಗೆ ಬಲಿಷ್ಠನೂ ಧೈರ್ಯವಂತನೂ ಆಗಿರುವ ಒಬ್ಬನಿದ್ದಾನೆ. ಅವನು ದೇಶದೊಳಗೆ ಆಲಿಕಲ್ಲಿನ ಮಳೆಯಿಂದ ಕೂಡಿದ ಬಿರುಗಾಳಿಯಂತೆಯೂ ನದಿಯ ಬಲವಾದ ಪ್ರವಾಹವು ದೇಶದೊಳಗೆ ನುಗ್ಗಿಬರುವಂತೆಯೂ ಅವನು ಬರುವನು. ಆ ಕಿರೀಟವನ್ನು (ಸಮಾರ್ಯ) ನೆಲದ ಮೇಲೆ ಬಿಸಾಡುವನು.


ಆತನು ಮಳೆಯನ್ನು ಕಲ್ಮಳೆಯನ್ನಾಗಿ ಪರಿವರ್ತಿಸಿದನು. ಅವರ ದೇಶದಲ್ಲಿ ಸಿಡಿಲುಗಳು ಹೊಡೆದವು.


ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಆಲಿಕಲ್ಲುಗಳು ಬಿದ್ದವು. ಆ ಆಲಿಕಲ್ಲುಗಳು ನೂರು ಪೌಂಡುಗಳಷ್ಟು ಭಾರವಾಗಿದ್ದವು. ಈ ಉಪದ್ರವದ ಕಾಟದಿಂದ ಜನರು ದೇವರನ್ನು ದೂಷಿಸಿದರು. ಈ ಉಪದ್ರವವು ಬಹಳ ಭೀಕರವಾಗಿತ್ತು.


ಇವು ಸಂಭವಿಸುವ ಮೊದಲು ಅರಣ್ಯವು ಆಲಿಕಲ್ಲುಗಳಿಂದ ನಾಶವಾಗಬೇಕು. ಪಟ್ಟಣವು ನೆಲಸಮವಾಗಬೇಕು.


ಯೆಹೋವನು ತನ್ನ ಮಹಾಸ್ವರವನ್ನು ಜನರು ಕೇಳುವಂತೆ ಮಾಡುವನು. ತನ್ನ ಸಾಮರ್ಥ್ಯದ ಬಾಹುವು ಕೋಪದಿಂದ ನಡುಗುವದನ್ನು ಜನರು ನೋಡುವಂತೆ ಮಾಡುವನು. ಆ ಬಾಹುವು ಎಲ್ಲವನ್ನು ಸುಡುವ ದೊಡ್ಡ ಅಗ್ನಿಯಂತಿರುವದು. ಯೆಹೋವನ ಶಕ್ತಿಯು ಆಲಿಕಲ್ಲಿನಿಂದಲೂ ಮಳೆಯಿಂದಲೂ ಕೂಡಿರುವ ಬಿರುಗಾಳಿಯಂತಿರುವುದು.


ಸರ್ವಶಕ್ತನಾದ ಯೆಹೋವನು ನಿಮ್ಮನ್ನು ಗುಡುಗು, ಮಹಾಶಬ್ದ, ಬಿರುಗಾಳಿ, ಚಂಡಮಾರುತ, ದಹಿಸುವ ಅಗ್ನಿಜ್ವಾಲೆ ಇವುಗಳಿಂದ ಶಿಕ್ಷಿಸಿದನು.


ಬೇತ್‌ಹೋರೋನ್ ಇಳಿಜಾರಿನಿಂದ ಅಜೇಕದವರೆಗೆ ಅವರನ್ನು ಕೊಂದರು. ಅವರು ಶತ್ರುಗಳನ್ನು ಬೆನ್ನಟ್ಟುತ್ತಿದ್ದಾಗ ಯೆಹೋವನು ಆಕಾಶದಿಂದ ಆಲಿಕಲ್ಲು ಮಳೆ ಸುರಿಯುವಂತೆ ಮಾಡಿದನು. ಬಹಳಷ್ಟು ಮಂದಿ ಶತ್ರುಗಳು ಈ ದೊಡ್ಡ ಆಲಿಕಲ್ಲುಗಳಿಂದಲೇ ಮೃತಪಟ್ಟರು. ಇಸ್ರೇಲರು ತಮ್ಮ ಖಡ್ಗಗಳಿಂದ ಕೊಂದ ಜನರಿಗಿಂತ ಹೆಚ್ಚು ಜನರು ಈ ಆಲಿಕಲ್ಲಿನ ಮಳೆಯಿಂದ ಸತ್ತರು.


ಮೊದಲನೆಯ ದೇವದೂತನು ಹೊರಟನು. ಅವನು ತನ್ನ ಪಾತ್ರೆಯಲ್ಲಿದ್ದುದನ್ನು ಭೂಮಿಯ ಮೇಲೆ ಸುರಿದನು. ಆಗ ಮೃಗದ ಗುರುತನ್ನು ಹೊಂದಿದ್ದ ಮತ್ತು ಅದರ ವಿಗ್ರಹವನ್ನು ಆರಾಧಿಸುತ್ತಿದ್ದ ಜನರೆಲ್ಲರಿಗೂ ಅಸಹ್ಯವಾದ ಹಾಗೂ ನೋವಿನಿಂದ ಕೂಡಿದ ಹುಣ್ಣುಗಳಾದವು.


ಆ ಸರ್ಪದ ಬಾಲವು ಆಕಾಶದ ನಕ್ಷತ್ರಗಳಲ್ಲಿ ಮೂರನೆಯ ಒಂದು ಭಾಗವನ್ನು ಸೆಳೆದೆಳೆದು ಭೂಮಿಯ ಮೇಲೆ ಎಸೆಯಿತು. ಆ ಘಟಸರ್ಪವು ಪ್ರಸವ ವೇದನೆಪಡುತ್ತಿದ್ದ ಸ್ತ್ರೀಯ ಎದುರಿನಲ್ಲಿ ನಿಂತುಕೊಂಡಿತು. ಆ ಸ್ತ್ರೀಯು ಹೆರುವ ಮಗುವನ್ನು ನುಂಗಿಹಾಕಲು ಆ ಸರ್ಪವು ಕಾದುಕೊಂಡಿತ್ತು.


ನಾನು ನೋಡಿದಾಗ, ನನ್ನ ಮುಂದೆ ಒಂದು ಬೂದುಬಣ್ಣದ ಕುದುರೆಯಿರುವುದು ನನಗೆ ಕಾಣಿಸಿತು. ಆ ಕುದುರೆಯ ಮೇಲೆ ಕುಳಿತಿದ್ದ ಸವಾರನೇ ಮೃತ್ಯು. ಅವನ ಹಿಂದೆ ಪಾತಾಳ ಎಂಬುವನು ಬಂದನು. ಅವರಿಗೆ ಭೂಮಿಯ ಕಾಲುಭಾಗದ ಮೇಲೆ ಅಧಿಕಾರವನ್ನು ನೀಡಲಾಯಿತು. ಕತ್ತಿಯಿಂದಲೂ ಬರಗಾಲದಿಂದಲೂ ರೋಗಗಳಿಂದಲೂ ಮತ್ತು ಲೋಕದ ಮೇಲಿರುವ ಕಾಡುಮೃಗಗಳಿಂದಲೂ ಜನರನ್ನು ಕೊಲ್ಲುವ ಅಧಿಕಾರವನ್ನು ಅವರಿಗೆ ನೀಡಲಾಯಿತು.


ಪವಿತ್ರ ಗ್ರಂಥವು ಹೇಳುವುದೇನೆಂದರೆ, “ಜನರೆಲ್ಲರೂ ಹುಲ್ಲಿನಂತಿದ್ದಾರೆ. ಅವರ ವೈಭವವೆಲ್ಲವೂ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿಹೋಗುವುದು, ಹೂವು ಉದುರಿಹೋಗುವುದು,


ಸೂರ್ಯನು ಮೇಲೇರಿದಂತೆ ಬಿಸಿಲು ಹೆಚ್ಚಾಗುವುದು. ಸೂರ್ಯನ ತಾಪದಿಂದ ಗಿಡಗಳು ಒಣಗಿಹೋಗುವವು; ಹೂವುಗಳು ಉದುರಿ ಹೋಗುವವು. ಹೂವು ಸುಂದರವಾಗಿತ್ತು, ಆದರೆ ಈಗ ಅದು ಒಣಗಿಹೋಯಿತು. ಐಶ್ವರ್ಯವಂತನಿಗೂ ಇದೇ ರೀತಿಯಾಗುವುದು. ಅವನು ತನ್ನ ವ್ಯಾಪಾರದ ಬಗ್ಗೆ ಯೋಜನೆಗಳನ್ನು ಮಾಡುತ್ತಿರುವಾಗಲೇ ಸತ್ತುಹೋಗುವನು.


ಭೂಮ್ಯಾಕಾಶಗಳಲ್ಲಿ ವಿಚಿತ್ರ ಸಂಗತಿಗಳನ್ನು ನಾನು ತೋರಿಸುವೆನು. ಅಲ್ಲಿ ರಕ್ತ, ಬೆಂಕಿ ಮತ್ತು ದಟ್ಟವಾದ ಹೊಗೆಯು ಇರುವುದು.


ಮೋಶೆಯು ಫರೋಹನ ಬಳಿಯಿಂದ ಹೊರಟು ಪಟ್ಟಣದಾಚೆಗೆ ಹೋದಾಗ ಕೈಯೆತ್ತಿ ಯೆಹೋವನಲ್ಲಿ ಪ್ರಾರ್ಥಿಸಿದನು. ಆಗ ಗುಡುಗೂ ಆಲಿಕಲ್ಲಿನ ಮಳೆಯೂ ನಿಂತುಹೋದವು; ಮಳೆಯೂ ನಿಂತುಹೋಯಿತು.


ಇದಾದ ಮೇಲೆ ನಾಲ್ಕು ಮಂದಿ ದೇವದೂತರು ಭೂಮಿಯ ನಾಲ್ಕು ಮೂಲೆಗಳಲ್ಲಿ ನಿಂತಿರುವುದನ್ನು ನಾನು ನೋಡಿದೆನು. ಗಾಳಿಯು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಮರದ ಮೇಲಾಗಲಿ ಬೀಸದಂತೆ ಅವರು ಭೂಮಿಯ ನಾಲ್ಕು ದಿಕ್ಕುಗಳ ಗಾಳಿಯನ್ನು ತಡೆಹಿಡಿದಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು