Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 9:21 - ಪರಿಶುದ್ದ ಬೈಬಲ್‌

21 ಈ ಜನರು ತಮ್ಮ ಹೃದಯಗಳನ್ನು ಮತ್ತು ಜೀವಿತಗಳನ್ನು ಪರಿವರ್ತಿಸಿಕೊಳ್ಳಲಿಲ್ಲ ಮತ್ತು ಇತರರನ್ನು ಕೊಲ್ಲುವುದನ್ನು ಬಿಟ್ಟುಬಿಡಲಿಲ್ಲ. ಅವರು ತಾವು ನಡೆಸುತ್ತಿದ್ದ ಮಾಟಮಂತ್ರಗಳನ್ನು, ಲೈಂಗಿಕ ಪಾಪಗಳನ್ನು ಮತ್ತು ಕಳ್ಳತನವನ್ನು ತೊರೆದುಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇದಲ್ಲದೆ ತಾವು ನಡೆಸುತ್ತಿದ್ದ ಕೊಲೆ, ಮಾಟ, ಜಾರತ್ವ, ಕಳ್ಳತನ ಇವುಗಳೊಳಗೆ ಒಂದನ್ನೂ ಬಿಡದೆ ಮಾನಸಾಂತರಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಇಷ್ಟೇ ಅಲ್ಲದೆ ತಮ್ಮ ಕೊಲೆಗಡುಕತನ, ಮಾಟಮಂತ್ರ, ಹಾದರ ಮತ್ತು ಕಳ್ಳತನಗಳನ್ನು ತೊರೆದು ಮನಸ್ಸಾಂತರಗೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇದಲ್ಲದೆ ತಾವು ನಡಿಸುತ್ತಿದ್ದ ಕೊಲೆ ಮಾಟ ಜಾರತ್ವ ಕಳ್ಳತನ ಇವುಗಳೊಳಗೆ ಒಂದನ್ನೂ ಬಿಟ್ಟು ಮಾನಸಾಂತರ ಮಾಡಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಇದಲ್ಲದೆ ಅವರು ಕೊಲೆ, ಮಾಟ, ಜಾರತ್ವ ಮತ್ತು ಕಳ್ಳತನಗಳಿಗಾಗಿಯೂ ಪಶ್ಚಾತ್ತಾಪ ಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತೆನಿ ಲೊಕಾಕ್ನಿ ಜಿವಾನಿ ಮಾರ್‍ತಲ್ಯಾತ್ನಾ ಹೊಂವ್ದಿ, ಜಾದು ಕರ್‍ತಲ್ಯಾತ್ನಾ ಹೊಂವ್ದಿತ್, ತೆಂಚ್ಯಾ ಬುರ್ಶ್ಯಾ ಆಂಗಾಚ್ಯಾ ಸಮಂದಾತ್ನಾ ಹೊಂವ್ದಿ, ನಾಹೊಲ್ಯಾರ್ ಚೊರ್ತಲ್ಯಾತ್ನಾ ಮನ್ ಬದ್ಲುಕ್ ನತ್ತ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 9:21
24 ತಿಳಿವುಗಳ ಹೋಲಿಕೆ  

ಆದರೆ ಹೇಡಿಗಳಿಗೆ, ನಂಬಿಕೆಯಿಲ್ಲದವರಿಗೆ, ಅಸಹ್ಯಕೃತ್ಯ ಮಾಡುವವರಿಗೆ, ಕೊಲೆಗಾರರಿಗೆ, ಲೈಂಗಿಕ ಪಾಪಮಾಡುವವರಿಗೆ, ಮಾಟಮಂತ್ರಗಾರರಿಗೆ, ವಿಗ್ರಹಾರಾಧಕರಿಗೆ, ಸುಳ್ಳುಗಾರರಿಗೆ ಸಿಕ್ಕುವ ಸ್ಥಳ ಬೆಂಕಿಗಂಧಕಗಳು ಉರಿಯುವ ಕೆರೆಯೇ. ಇದು ಎರಡನೆಯ ಮರಣವಾಗಿರುತ್ತದೆ.”


ನಗರದ ಹೊರಭಾಗದಲ್ಲಿ ನಾಯಿಗಳಿವೆ (ಕೆಟ್ಟಜನರು), ಕೆಟ್ಟ ಮಾಟವನ್ನು ಮಾಡುವ ಜನರಿದ್ದಾರೆ, ಲೈಂಗಿಕ ಪಾಪಗಳನ್ನು ಮಾಡುವ ಜನರಿದ್ದಾರೆ, ಕೊಲೆಗಾರರಿದ್ದಾರೆ, ವಿಗ್ರಹಗಳನ್ನು ಆರಾಧಿಸುವ ಜನರಿದ್ದಾರೆ ಮತ್ತು ಸುಳ್ಳನ್ನು ಪ್ರೀತಿಸುವ ಮತ್ತು ಹೇಳುವ ಜನರಿದ್ದಾರೆ.


ಅವಳ ಹಣೆಯ ಮೇಲೆ ಒಂದು ಬರಹವನ್ನು ಬರೆದಿತ್ತು. ಆ ಬರಹಕ್ಕೆ ಗೂಢಾರ್ಥವಿತ್ತು. ಅಲ್ಲಿ ಬರೆದಿದ್ದುದು ಹೀಗಿತ್ತು: ಬಾಬಿಲೋನ್ ಎಂಬ ಮಹಾನಗರಿಯು ಭೂಮಿಯಲ್ಲಿರುವ ಕೆಟ್ಟಕಾರ್ಯಗಳಿಗೆ ಮತ್ತು ಜಾರಸ್ತ್ರೀಯರಿಗೆ ತಾಯಿ.


ನಾನು ನಿಮ್ಮ ಬಳಿಗೆ ಮತ್ತೆ ಬಂದಾಗ ನನ್ನ ದೇವರು ನನ್ನನ್ನು ನಿಮ್ಮ ಮುಂದೆ ದೀನನನ್ನಾಗಿ ಮಾಡಬಹುದೆಂಬ ಭಯವಿದೆ. ನಿಮ್ಮಲ್ಲಿ ಪಾಪಕ್ಕೆ ಒಳಗಾಗಿರುವ ಅನೇಕರಿಂದ ನಾನು ದುಃಖಿತನಾಗಬಹುದು. ಏಕೆಂದರೆ, ಆ ಜನರು ತಮ್ಮ ದುಷ್ಟಜೀವಿತದ ಬಗ್ಗೆ, ತಮ್ಮ ಲೈಂಗಿಕ ಪಾಪಗಳ ಬಗ್ಗೆ ಮತ್ತು ನಾಚಿಕೆಕರವಾದ ಕಾರ್ಯಗಳ ಬಗ್ಗೆ ದುಃಖಪಟ್ಟಿಲ್ಲ ಮತ್ತು ತಮ್ಮ ಹೃದಯಗಳನ್ನು ಮಾರ್ಪಾಟು ಮಾಡಿಕೊಂಡಿಲ್ಲ.


ಲೋಕದ ರಾಜರುಗಳು ಅವಳೊಂದಿಗೆ ಲೈಂಗಿಕ ಪಾಪ ಮಾಡಿದರು. ಲೋಕದ ಜನರು ಅವಳ ಲೈಂಗಿಕ ಪಾಪವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು” ಎಂದು ಹೇಳಿದನು.


ದೇವರ ಕೋಪವೆಂಬ ಮತ್ತು ಅವಳ ಲೈಂಗಿಕ ಪಾಪವೆಂಬ ದ್ರಾಕ್ಷಾರಸವನ್ನು ಲೋಕದ ಜನರೆಲ್ಲರೂ ಕುಡಿದು ಮತ್ತರಾದರು. ಭೂಲೋಕದ ರಾಜರುಗಳೆಲ್ಲ ಅವಳೊಂದಿಗೆ ಲೈಂಗಿಕ ಪಾಪ ಮಾಡಿದರು. ಭೂಲೋಕದ ವರ್ತಕರು ಅವಳ ಅತಿಯಾದ ಸುಖದಿಂದ ಶ್ರೀಮಂತರಾದರು.


ಒಂದೇ ದಿನದೊಳಗೆ, ಒಂದೇ ಕ್ಷಣದಲ್ಲಿ ನಿನಗೆ ಎರಡು ಸಂಗತಿಗಳು ಸಂಭವಿಸುತ್ತವೆ. ನೀನು ನಿನ್ನ ಮಕ್ಕಳನ್ನು ಕಳೆದುಕೊಳ್ಳುವೆ, ಆ ಬಳಿಕ ನೀನು ನಿನ್ನ ಗಂಡನನ್ನು ಕಳಕೊಳ್ಳುವೆ. ಹೌದು, ಈ ವಿಷಯಗಳು ನಿನಗೆ ಖಂಡಿತವಾಗಿ ಸಂಭವಿಸುವವು. ನಿನ್ನಲ್ಲಿರುವ ಎಲ್ಲಾ ಮಾಟಮಂತ್ರಗಳು ನಿನ್ನನ್ನು ಕಾಪಾಡಲಾರವು.


ಆ ಜನರು ನಿನ್ನ ಪರಿಶುದ್ಧ ಜನರ ಮತ್ತು ನಿನ್ನ ಪ್ರವಾದಿಗಳ ರಕ್ತವನ್ನು ಸುರಿಸಿದರು. ಈಗ ನೀನು ಅವರಿಗೆ ಕುಡಿಯಲು ರಕ್ತವನ್ನೇ ನೀಡಿರುವೆ. ಅವರು ಇದಕ್ಕೆ ಪಾತ್ರರಾಗಿದ್ದಾರೆ.”


ನಂತರ ಎರಡನೆಯ ದೇವದೂತನು ಮೊದಲನೆಯ ದೇವದೂತನನ್ನು ಹಿಂಬಾಲಿಸುತ್ತಾ, “ಅವಳು ನಾಶವಾದಳು! ಬಾಬಿಲೋನ್ ಎಂಬ ನಗರಿಯು ನಾಶವಾದಳು! ಆಕೆಯು ಸಕಲ ಜನಾಂಗಗಳಿಗೆ ತನ್ನ ಜಾರತ್ವವೆಂಬ ಮತ್ತು ದೇವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಸಿದಳು” ಎಂದು ಹೇಳಿದನು.


ಸುಳ್ಳುದೇವರುಗಳ ಆರಾಧನೆ, ಮಾಟಮಂತ್ರ, ದ್ವೇಷ, ಜಗಳ, ಹೊಟ್ಟೆಕಿಚ್ಚು, ಕಡುಕೋಪ, ಸ್ವಾರ್ಥ, ಸಿಟ್ಟು, ಕಕ್ಷಭೇದ,


ಮನುಷ್ಯನ ಮನಸ್ಸಿನಲ್ಲಿ ದುರಾಲೋಚನೆ, ಕೊಲೆ, ವ್ಯಭಿಚಾರ, ಸೂಳೆಗಾರಿಕೆ, ಕಳ್ಳತನ, ಸುಳ್ಳುಸಾಕ್ಷಿ ಮತ್ತು ಬೈಗಳು ಹೊರಟುಬರುತ್ತವೆ.


“ಮಾಟಗಾರ್ತಿಯ ಮಕ್ಕಳೇ, ಇಲ್ಲಿಗೆ ಬನ್ನಿರಿ. ನಿಮ್ಮ ತಂದೆಯು ವ್ಯಭಿಚಾರದ ಅಪರಾಧವೆಸಗಿದ್ದಾನೆ. ನಿಮ್ಮ ತಾಯಿಯು ಸೂಳೆಯಾಗಿ ತನ್ನ ದೇಹವನ್ನು ಮಾರುತ್ತಿದ್ದಾಳೆ.


ಮಾಟಮಂತ್ರಗಳನ್ನು ಕಲಿತುಕೊಳ್ಳುವುದರಲ್ಲೇ ನಿನ್ನ ಜೀವಮಾನವನ್ನು ಕಳೆದಿರುವೆ. ಸರಿ, ತಂತ್ರಮಂತ್ರಗಳನ್ನು ಮಾಡಲು ಪ್ರಾರಂಭಿಸು. ಒಂದುವೇಳೆ ಅವು ನಿನಗೆ ಸಹಾಯ ಮಾಡಬಹುದು. ಒಂದುವೇಳೆ ಕೆಲವರನ್ನು ನೀನು ಭಯಪಡಿಸಬಹುದು.


ಆತನ ತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ. ನಮ್ಮ ದೇವರು ವೇಶ್ಯೆಯನ್ನು ದಂಡಿಸಿದನು. ಅವಳ ಲೈಂಗಿಕ ಪಾಪದಿಂದಲೇ ಲೋಕವು ಕೆಟ್ಟುಹೋಯಿತು. ಆತನು ತನ್ನ ಸೇವಕರ ರಕ್ತಕ್ಕೆ ಪ್ರತಿಯಾಗಿ ಆ ವೇಶ್ಯೆಯನ್ನು ದಂಡಿಸಿದನು.”


ಮೊದಲನೆಯ ಮೃಗದ ವಿಗ್ರಹಕ್ಕೆ ಜೀವ ಬರುವಂತೆ ಮಾಡುವ ಶಕ್ತಿಯನ್ನು ಎರಡನೆಯ ಮೃಗಕ್ಕೆ ಕೊಡಲಾಯಿತು. ಆಗ ಆ ವಿಗ್ರಹಕ್ಕೆ ಮಾತಾಡುವ ಶಕ್ತಿ ಬಂದಿತು. ಅದು ತನ್ನನ್ನು ಪೂಜಿಸದವರನ್ನೆಲ್ಲಾ ಕೊಲ್ಲುವುದಾಗಿ ಆಜ್ಞೆ ಹೊರಡಿಸಿತು.


ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.


“ಜ್ಞಾನಿಗಳಾದ ಯೆಹೂದ್ಯರು ಏನು ನಡೆದಿದೆ ಎಂಬುದನ್ನು ತಿಳಿದುಕೊಳ್ಳಲು ಜನರಿಗೆ ಸಹಾಯ ಮಾಡುವರು. ಜ್ಞಾನಿಗಳಾದವರು ಸಹ ಅನೇಕ ಹಿಂಸೆಗಳಿಗೆ ತುತ್ತಾಗುವರು. ಕೆಲವು ಜನ ಜ್ಞಾನಿಗಳು ಕತ್ತಿಯಿಂದ ಕೊಲ್ಲಲ್ಪಡುವರು, ಕೆಲವರನ್ನು ಬೆಂಕಿಯಲ್ಲಿ ಹಾಕಲಾಗುವದು ಅಥವಾ ಬಂಧಿಸಲಾಗುವುದು. ಕೆಲವು ಯೆಹೂದ್ಯರ ಮನೆಯನ್ನು, ಆಸ್ತಿಪಾಸ್ತಿಯನ್ನು ಕಿತ್ತುಕೊಳ್ಳಲಾಗುವದು.


ಈ ಎರಡನೆಯ ಮೃಗವು ಮಹಾ ಅದ್ಭುತಗಳನ್ನು ಮಾಡುತ್ತದೆ. ಅದು ಜನರ ಕಣ್ಣೆದುರಿನಲ್ಲಿಯೇ ಬೆಂಕಿಯನ್ನು ಆಕಾಶದಿಂದ ಭೂಮಿಗೆ ಸುರಿಸುತ್ತದೆ.


ದೇವರ ಪರಿಶುದ್ಧ ಜನರ ವಿರುದ್ಧ ಯುದ್ಧಮಾಡಿ, ಅವರನ್ನು ಸೋಲಿಸುವ ಶಕ್ತಿಯನ್ನು ಮೃಗಕ್ಕೆ ನೀಡಲಾಯಿತು. ಸಕಲ ಕುಲ, ಪ್ರಜೆ, ಭಾಷೆ ಮತ್ತು ಜನಾಂಗಗಳ ಮೇಲಿನ ಅಧಿಕಾರವನ್ನು ಆ ಮೃಗಕ್ಕೆ ಕೊಡಲಾಯಿತು.


ಈ ಉಪದ್ರವಗಳಿಂದ ಸಾಯದೆ ಉಳಿದ ಜನರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಲಿಲ್ಲ. ತಮ್ಮ ಸ್ವಂತ ಕೈಗಳಿಂದ ನಿರ್ಮಿಸಿದ ವಿಗ್ರಹಗಳನ್ನು ತೊರೆದುಬಿಡಲಿಲ್ಲ. ಅವರು ದೆವ್ವಗಳ ಆರಾಧನೆಯನ್ನು ನಿಲ್ಲಿಸಲಿಲ್ಲ. ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳಿಂದ ಮಾಡಲ್ಪಟ್ಟು, ನಡೆಯಲಾರದ, ನೋಡಲಾರದ ಮತ್ತು ಕೇಳಲಾರದ ವಿಗ್ರಹಗಳನ್ನು ಪೂಜಿಸುವುದನ್ನು ಅವರು ನಿಲ್ಲಿಸಲಿಲ್ಲ.


ಆ ಸ್ತ್ರೀಯು ಧೂಮ್ರ ವರ್ಣದ ಮತ್ತು ಕೆಂಪು ಬಣ್ಣದ ಬಟ್ಟೆಗಳನ್ನು ಧರಿಸಿದ್ದಳು. ಅವಳು ತಾನು ತೊಟ್ಟಿದ್ದ ಚಿನ್ನ, ರತ್ನ, ಮುತ್ತು, ಮುಂತಾದವುಗಳಿಂದ ಪ್ರಕಾಶಿಸುತ್ತಿದ್ದಳು. ಅವಳು ತನ್ನ ಕೈಯಲ್ಲಿ ಚಿನ್ನದ ಬಟ್ಟಲನ್ನು ಹಿಡಿದಿದ್ದಳು. ಆ ಬಟ್ಟಲು ಅಸಹ್ಯವಾದವುಗಳಿಂದ ಮತ್ತು ಅವಳ ಲೈಂಗಿಕ ಪಾಪಗಳ ಅಶುದ್ಧತೆಯಿಂದ ತುಂಬಿಹೋಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು