Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 1:15 - ಪರಿಶುದ್ದ ಬೈಬಲ್‌

15 ನನ್ನ ಶೂರ ಸೈನಿಕರನ್ನೆಲ್ಲಾ ಯೆಹೋವನು ತಿರಸ್ಕರಿಸಿದ್ದಾನೆ. ಆ ಸೈನಿಕರು ನಗರದ ಒಳಭಾಗದಲ್ಲಿದ್ದರು. ಆಗ ಯೆಹೋವನು ನನ್ನ ವಿರುದ್ಧ ಒಂದು ಜನರ ಗುಂಪನ್ನು ತಂದನು. ಆತನು ನನ್ನ ತರುಣ ಸೈನಿಕರನ್ನು ಕೊಲ್ಲುವ ಸಲುವಾಗಿ ಆ ಜನರನ್ನು ತಂದನು. ಯೆಹೋವನು ದ್ರಾಕ್ಷಿಯನ್ನು ಆಲೆಯಲ್ಲಿ ತುಳಿದಿದ್ದಾನೆ. ಆ ದ್ರಾಕ್ಷಿಆಲೆಯು ಜೆರುಸಲೇಮ್ ಕನ್ನಿಕೆಗೆ ಸೇರಿದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಕರ್ತನು ನನ್ನ ಶೂರರನ್ನೆಲ್ಲಾ ನನ್ನ ಕಣ್ಣೆದುರಿಗೆ ಹೊರಳಾಡಿಸಿದ್ದಾನೆ; ನನ್ನ ಯುವಕರನ್ನು ಸದೆಬಡಿದಿದ್ದಾನೆ. ನನ್ನ ಕೇಡಿಗಾಗಿಯೇ ಮಹೋತ್ಸವವನ್ನು ಏರ್ಪಡಿಸಿದ್ದಾನೆ; ಕರ್ತನು ಯೆಹೂದವೆಂಬ ಕನ್ಯೆಯನ್ನು ತೊಟ್ಟಿಯಲ್ಲಿನ ದ್ರಾಕ್ಷಿಯ ಹಾಗೆ ತುಳಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ಸ್ವಾಮಿ ತೃಣೀಕರಿಸಿದನು ನನ್ನ ಶೂರರನ್ನೆಲ್ಲಾ ನನ್ನ ಕಣ್ಮುಂದೆಯೇ. ಸೈನ್ಯಸಮೂಹವನ್ನೆ ಬರಮಾಡಿದನು ನನ್ನ ಯುವಕರನ್ನು ಸದೆಬಡಿಯಲೆಂದೇ. ಯೆಹೂದಿಯೆಂಬ ಯುವತಿಯನ್ನು ತುಳಿಸಿದನು ತೊಟ್ಟಿಯಲ್ಲಿ ದ್ರಾಕ್ಷಿ ತುಳಿವಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಕರ್ತನು ನನ್ನ ಶೂರರನ್ನೆಲ್ಲಾ ನನ್ನ ಕಣ್ಣೆದುರಿಗೆ ತೃಣೀಕರಿಸಿದ್ದಾನೆ; ನನ್ನ ಯುವಕರನ್ನು ಭಂಗಪಡಿಸಬೇಕೆಂದು ನನ್ನ ಕೇಡಿಗಾಗಿಯೇ ಮಹೋತ್ಸವವನ್ನು ಏರ್ಪಡಿಸಿದ್ದಾನೆ; ಕರ್ತನು ಯೆಹೂದವೆಂಬ ಯುವತಿಯನ್ನು ತೊಟ್ಟಿಯಲ್ಲಿನ ದ್ರಾಕ್ಷೆಯ ಹಾಗೆ ತುಳಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಕರ್ತದೇವರು ನನ್ನ ಶೂರರನ್ನೆಲ್ಲಾ ತಿರಸ್ಕರಿಸಿದ್ದಾರೆ. ಅವರು ನನಗೆ ವಿರುದ್ಧ ಸೈನ್ಯವನ್ನು ಬರಮಾಡಿ, ನನ್ನ ಯುವಕರನ್ನು ಜಜ್ಜಿದ್ದಾರೆ. ಕರ್ತದೇವರು ಯೆಹೂದದ ಕನ್ಯೆಯನ್ನು ದ್ರಾಕ್ಷಿಯ ತೊಟ್ಟಿಯಂತೆ ತುಳಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 1:15
27 ತಿಳಿವುಗಳ ಹೋಲಿಕೆ  

ಆಗ ನೀವು ದುಷ್ಟಜನರ ಮೇಲೆ ನಡೆದುಕೊಂಡು ಹೋಗುವಿರಿ; ಅವರು ನಿಮ್ಮ ಕಾಲುಗಳ ಕೆಳಗೆ ಬೂದಿಯಂತಿರುವರು. ನ್ಯಾಯತೀರ್ಪಿನ ಸಮಯದಲ್ಲಿ ನಾನು ಹಾಗೆ ಮಾಡುವೆನು.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಅವನ ಉತ್ತರ: “ದ್ರಾಕ್ಷಿತೊಟ್ಟಿಯಲ್ಲಿ ನಾನೊಬ್ಬನೇ ತುಳಿದೆನು. ಯಾರೂ ನನಗೆ ಸಹಾಯ ಮಾಡಲಿಲ್ಲ. ನಾನು ಕೋಪಗೊಂಡು ದ್ರಾಕ್ಷಿಹಣ್ಣಿನ ಮೇಲೆ ತುಳಿದೆನು. ಅದರ ರಸ ನನ್ನ ಬಟ್ಟೆಯ ಮೇಲೆ ಹಾರಿತು. ಆದ್ದರಿಂದ ನನ್ನ ಬಟ್ಟೆಗಳು ಮಲಿನವಾದವು.


ಮರಣದೊಂದಿಗೆ ನೀವು ಮಾಡಿದ ಒಪ್ಪಂದವು ಮುರಿಯಲ್ಪಡುವದು. ಪಾತಾಳದೊಂದಿಗೆ ನೀವು ಮಾಡಿದ ಒಪ್ಪಂದವು ನಿಮ್ಮ ಸಹಾಯಕ್ಕೆ ಬಾರದು. “ನಿಮ್ಮನ್ನು ಶಿಕ್ಷಿಸಲು ಒಬ್ಬನು ಬರುವನು. ಆತನು ನೀವು ಧೂಳೋ ಎಂಬಂತೆ ನಿಮ್ಮ ಮೇಲೆ ತುಳಿದಾಡುವನು.


ಕುದುರೆಯ ಮೇಲೆ ಕುಳಿತಿದ್ದಾತನ ಬಾಯಿಂದ ಹರಿತವಾದ ಕತ್ತಿಯೊಂದು ಹೊರಗೆ ಬರುತ್ತಿತ್ತು. ಆತನು ಜನಾಂಗಗಳನ್ನು ಸೋಲಿಸಲು ಈ ಕತ್ತಿಯನ್ನು ಬಳಸುತ್ತಾನೆ. ಆತನು ಕಬ್ಬಿಣದ ಕೋಲಿನಿಂದ ಜನಾಂಗಗಳನ್ನು ಆಳುತ್ತಾನೆ. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ದ್ರಾಕ್ಷಿಯನ್ನು ಕಿವುಚಿ ಹಾಕುತ್ತಾನೆ.


ಹೀಗಿರಲು ದೇವರ ಮಗನನ್ನು ದ್ವೇಷಿಸುವ ಒಬ್ಬ ವ್ಯಕ್ತಿಯನ್ನು ಏನು ಮಾಡಬೇಕೆಂದು ನೀವು ಆಲೋಚಿಸುವಿರಿ? ನಿಜವಾಗಿಯೂ ಆ ವ್ಯಕ್ತಿಗೆ ಇದಕ್ಕಿಂತಲೂ ತೀವ್ರವಾದ ದಂಡನೆಯನ್ನು ವಿಧಿಸಬೇಕಲ್ಲವೇ? ಹೌದು, ಹೊಸ ಒಡಂಬಡಿಕೆಯ ರಕ್ತಕ್ಕೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ಕ್ರೂರವಾದ ದಂಡನೆಯಾಗಬೇಕು. ಆ ರಕ್ತವು ಅವನನ್ನು ಪವಿತ್ರನನ್ನಾಗಿಸಿತು. ದೇವರಾತ್ಮನ ಕೃಪೆಗೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ತೀವ್ರವಾದ ದಂಡನೆಯಾಗಬೇಕು.


ಇವರಲ್ಲಿ ಕೆಲವರು ಸೈನಿಕರಿಂದ ಕೊಲ್ಲಲ್ಪಡುವರು. ಇನ್ನು ಕೆಲವರು ಬಂಧಿತರಾಗಿ ಪರದೇಶಕ್ಕೆ ಒಯ್ಯಲ್ಪಡುವರು. ಅನ್ಯದೇಶೀಯರು ತಮ್ಮ ಕಾಲ ಮುಗಿಯುವ ತನಕ ಪರಿಶುದ್ಧ ಪಟ್ಟಣವಾದ ಜೆರುಸಲೇಮಿನಲ್ಲಿ ನಡೆದಾಡುವರು.


“ನಿನ್ನ ದೇವರಾದ ಯೆಹೋವನು ಎಲ್ಲಿ?” ಎಂದು ಕೇಳಿದ ವೈರಿಗಳು ಇದನ್ನು ನೋಡಿ, ನಾಚಿಕೆಗೊಳ್ಳುವರು. ಆಗ ನಾನು ಅವರ ವಿಷಯವಾಗಿ ನಗಾಡುವೆನು; ರಸ್ತೆಯ ಮಣ್ಣಿನ ಮೇಲೆ ನಡೆಯುವಂತೆ ಜನರು ಅವರ ಮೇಲೆ ನಡೆಯುವರು.


ನೆಬೂಕದ್ನೆಚ್ಚರನಿಗೆ ಬಹಳ ಕೋಪ ಬಂತು. ಅವನು ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳನ್ನು ಕರೆಸಿದನು. ಅವರನ್ನು ಅರಸನ ಬಳಿಗೆ ಕರೆದುತರಲಾಯಿತು.


ಈ ಸಂಗತಿಗಳನ್ನು ಇಷ್ಟಪಡುವುದಿಲ್ಲ. ಯಾರೋ ಒಬ್ಬನು ಈ ಲೋಕದ ಕೈದಿಗಳನ್ನೆಲ್ಲಾ ತನ್ನ ಪಾದದ ಕೆಳಗೆ ಹಾಕಿ ತುಳಿಯುವುದನ್ನು ಆತನು ಇಷ್ಟಪಡುವುದಿಲ್ಲ.


“ಹಿಂದಿನ ಕಾಲದಲ್ಲಿ, ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ನಮ್ಮನ್ನು ಹಾಳುಮಾಡಿದನು; ನಮ್ಮನ್ನು ಹಿಂಸಿಸಿದನು; ನಮ್ಮ ಜನರನ್ನು ಸೆರೆ ಒಯ್ದನು. ಆಗ ನಾವು ಒಂದು ಬರಿದಾದ ಪಾತ್ರೆಯಂತಾದೆವು. ಅವನು ನಮ್ಮ ಎಲ್ಲಾ ಉತ್ತಮ ವಸ್ತುಗಳನ್ನು ತೆಗೆದುಕೊಂಡು ಹೋದನು. ತನಗೆ ತೃಪ್ತಿಯಾಗುವವರೆಗೆ ಎಲ್ಲವನ್ನು ತಿಂದು ತೇಗಿದ ರಾಕ್ಷಸನಂತಿದ್ದನು. ಅವನು ನಮ್ಮೆಲ್ಲ ಉತ್ಕೃಷ್ಠ ವಸ್ತುಗಳನ್ನು ಕಿತ್ತುಕೊಂಡು ನಮ್ಮನ್ನು ದೂರ ಎಸೆದನು.


“ಅತಿ ದೂರದಿಂದ ಬಾಬಿಲೋನಿನ ಮೇಲೆ ಬೀಳಲು ಬನ್ನಿ. ಅದರ ಧಾನ್ಯದ ಕಣಜಗಳನ್ನು ತೆರೆಯಿರಿ. ಬಾಬಿಲೋನನ್ನು ಸಂಪೂರ್ಣವಾಗಿ ನಾಶಮಾಡಿರಿ; ಯಾರನ್ನೂ ಜೀವಂತ ಉಳಿಸಬೇಡಿ. ಧಾನ್ಯಗಳ ಗುಡ್ಡೆಗಳ ಹಾಗೆ ಶವಗಳ ದೊಡ್ಡದೊಡ್ಡ ಗುಡ್ಡೆಗಳನ್ನು ಹಾಕಿರಿ.


ಜೆರುಸಲೇಮಿನ ಜನರೇ, ನಿಮ್ಮ ಮೇಲೆ ಧಾಳಿ ಮಾಡುವ ಬಾಬಿಲೋನಿನ ಎಲ್ಲಾ ಸೈನಿಕರನ್ನು ನೀವು ಸೋಲಿಸಿದರೂ ಅವರ ಗುಡಾರದಲ್ಲಿ ಕೆಲವು ಜನ ಗಾಯಗೊಂಡವರು ಉಳಿದಿರುತ್ತಾರೆ. ಆ ಗಾಯಾಳುಗಳೇ ತಮ್ಮ ಗುಡಾರದಿಂದ ಹೊರಬಂದು ಜೆರುಸಲೇಮನ್ನು ಸುಟ್ಟುಹಾಕುವರು.’”


ಆದ್ದರಿಂದ ಈಗ ಅವರ ಮಕ್ಕಳು ಕ್ಷಾಮಪೀಡಿತರಾಗಿ ಉಪವಾಸಬೀಳುವಂತೆ ಮಾಡು. ಅವರ ಶತ್ರುಗಳು ಅವರನ್ನು ಖಡ್ಗದಿಂದ ಸೋಲಿಸುವಂತೆ ಮಾಡು. ಅವರ ಹೆಂಡತಿಯರು ಮಕ್ಕಳನ್ನು ಕಳೆದುಕೊಳ್ಳಲಿ ಮತ್ತು ವಿಧವೆಯರಾಗಲಿ. ಅವರ ಯೌವನಸ್ಥರು ಯುದ್ಧದಲ್ಲಿ ಖಡ್ಗದಿಂದ ಹತರಾಗಲಿ.


“ಯೆರೆಮೀಯನೇ, ಯೆಹೂದದ ಜನರಿಗೆ ಈ ಸಂದೇಶವನ್ನು ಹೇಳು: ‘ನನ್ನ ಕಣ್ಣುಗಳಲ್ಲಿ ಕಣ್ಣೀರು ತುಂಬಿಕೊಂಡಿದೆ. ನಾನು ನಿರಂತರವಾಗಿ ಹಗಲಿರುಳು ಅಳುವೆನು. ನಾನು ನನ್ನ ಕನ್ಯೆಯಾದ ಮಗಳಿಗಾಗಿ ಅಳುವೆನು. ನಾನು ನನ್ನ ಜನರಿಗಾಗಿ ಅಳುವೆನು. ಏಕೆಂದರೆ ಯಾರೋ ಒಬ್ಬರು ಅವರನ್ನು ಹೊಡೆದು ಸದೆಬಡಿದಿದ್ದಾರೆ, ಅವರಿಗೆ ಬಹಳ ಗಾಯಗಳಾಗಿವೆ.


ಈ ಪ್ರಶ್ನೆಗಳಿಗೆ ಉತ್ತರಿಸಿರಿ: ಪೂರ್ವದಿಕ್ಕಿನಿಂದ ಬರುವ ಮನುಷ್ಯನನ್ನು ಎಚ್ಚರಿಸಿದವರು ಯಾರು? ಅವನು ಒಳ್ಳೆಯತನವನ್ನು ತನ್ನೊಂದಿಗಿರಲು ಕೇಳುತ್ತಾನೆ. ತನ್ನ ಖಡ್ಗವನ್ನು ಉಪಯೋಗಿಸಿ ಜನಾಂಗಗಳನ್ನು ಸೋಲಿಸುವನು. ಅವರನ್ನು ಧೂಳಿನಂತೆ ಮಾಡುವನು. ತನ್ನ ಬಿಲ್ಲನ್ನು ಉಪಯೋಗಿಸಿ ರಾಜರನ್ನು ವಶಪಡಿಸಿಕೊಳ್ಳುತ್ತಾನೆ. ಅವರು ಗಾಳಿಯಲ್ಲಿ ತೂರಾಡುವ ಹುಲ್ಲಿನಂತೆ ಓಡಿಹೋಗುವರು.


“ನಾನೀಗ ನನ್ನ ದ್ರಾಕ್ಷಿತೋಟಕ್ಕೆ ಏನು ಮಾಡುವೆನೆಂದು ತಿಳಿಸುವೆನು: ಅದರ ಸುತ್ತಲೂ ರಕ್ಷಣೆಗಾಗಿ ಹಾಕಿದ್ದ ಮುಳ್ಳಿನ ಬೇಲಿಯನ್ನು ಕಿತ್ತು ಸುಟ್ಟುಬಿಡುವೆನು. ಅದರ ಕಲ್ಲಿನ ಗೋಡೆಯನ್ನು ಕೆಡವಿ ತುಳಿದಾಟಕ್ಕೆ ಈಡುಮಾಡುವೆನು.


ನಿನ್ನ ಕಟ್ಟಳೆಗಳನ್ನು ಅನುಸರಿಸದವರನ್ನು ನೀನು ತಳ್ಳಿಬಿಡುವೆ. ಯಾಕೆಂದರೆ, ಅವರು ನಿನಗೆ ದ್ರೋಹ ಮಾಡಿದರು.


ಯೇಹುವು “ಈಜೆಬೆಲಳನ್ನು ಹೊರಕ್ಕೆ ಎಸೆಯಿರಿ!” ಎಂದು ಅವರಿಗೆ ಹೇಳಿದನು. ಆಗ ಕಂಚುಕಿಗಳು ಈಜೆಬೆಲಳನ್ನು ಕೆಳಕ್ಕೆ ಎಸೆದರು. ಈಜೆಬೆಲಳ ರಕ್ತವು ಗೋಡೆಗಳ ಮೇಲೆ ಮತ್ತು ಕುದುರೆಗಳ ಮೇಲೆ ಚಿಮ್ಮಿತು. ಕುದುರೆಗಳು ಈಜೆಬೆಲಳ ದೇಹದ ಮೇಲೆ ತುಳಿದಾಡಿದವು.


ಅದೇ ವರ್ಷ ಅವರು ಜೋರ್ಡನ್ ನದಿಯ ಪೂರ್ವಕ್ಕಿರುವ ಗಿಲ್ಯಾದಿನಲ್ಲಿದ್ದ ಇಸ್ರೇಲರನ್ನು ನಾಶಮಾಡಿದರು. ಅದು ಮೊದಲು ಅಮೋರಿಯರ ಪ್ರದೇಶವಾಗಿತ್ತು. ಇಸ್ರೇಲರು ಹದಿನೆಂಟು ವರ್ಷಗಳವರೆಗೆ ಕಷ್ಟವನ್ನು ಅನುಭವಿಸಿದರು.


“ನೀವು ಅರಿಯದಿರುವ ದೇಶದವರು ಬಂದು ನಿಮ್ಮ ಪೈರನ್ನು ಕೊಯ್ದುಕೊಂಡು ಹೋಗುವರು; ನೀವು ದುಡಿದು ಸಂಪಾದಿಸಿದವುಗಳನ್ನು ಎತ್ತಿಕೊಂಡು ಹೋಗುವರು. ಜನರು ನಿಮ್ಮನ್ನು ಕುಗ್ಗಿಸಿ ಬಲಹೀನರನ್ನಾಗಿ ಮಾಡುವರು.


ಯೆಹೋವನ ರೋಷವು ನನ್ನಲ್ಲಿ ತುಂಬಿತುಳುಕುತ್ತಿದೆ, ತಡೆದುತಡೆದು ನನಗೆ ಸಾಕಾಗಿದೆ. “ಬೀದಿಯಲ್ಲಾಡುವ ಮಕ್ಕಳ ಮೇಲೆ ಅದನ್ನು ಹೊಯ್ದುಬಿಡಬೇಕು. ಒಂದೆಡೆ ಸೇರುವ ತರುಣರ ಮೇಲೆ ಅದನ್ನು ಹೊಯ್ದುಬಿಡಬೇಕು. ಗಂಡಹೆಂಡತಿಯರಿಬ್ಬರನ್ನು ಅಪಹರಿಸಲಾಗುವುದು. ಮುದುಕರನ್ನೂ ಮುಪ್ಪಿನ ಮುದುಕರನ್ನೂ ಅಪಹರಿಸಲಾಗುವುದು.


“ನಾನು ನಿಮಗೆ ನಿಮ್ಮ ಮನೆಗಳನ್ನು ಬಿಟ್ಟು ಓಡಿಹೋಗುವಂತೆ ಒತ್ತಾಯ ಮಾಡುತ್ತೇನೆ. ನೀವು ಎಲ್ಲಾ ದಿಕ್ಕುಗಳಲ್ಲಿಯೂ ಓಡಿಹೋಗುವಿರಿ. ನೀವು ಮರುಭೂಮಿಯ ಗಾಳಿಯಿಂದ ಹಾರಿಹೋಗುವ ಹೊಟ್ಟಿನಂತಾಗುವಿರಿ.


ಬೆಳೆಯು ಪಕ್ವವಾಗಿದೆ; ಕುಡುಗೋಲನ್ನು ತನ್ನಿರಿ. ಬನ್ನಿ, ದ್ರಾಕ್ಷಿಯನ್ನು ಆಲೆಯಲ್ಲಿ ತುಳಿಯಿರಿ, ಯಾಕೆಂದರೆ ಆಲೆಯು ತುಂಬಿಹೋಗಿದೆ. ಪಿಪಾಯಿಗಳು ತುಂಬಿತುಳುಕುತ್ತಿವೆ, ಯಾಕೆಂದರೆ ಅವರ ದುಷ್ಟತ್ವವು ವಿಪರೀತವಾಗಿದೆ!


ಬೀದಿಗಳಲ್ಲಿ ತರುಣರು ಮತ್ತು ವೃದ್ಧರು ನೆಲದ ಮೇಲೆ ಬಿದ್ದಿದ್ದಾರೆ. ನನ್ನ ಯುವತಿಯರು ಮತ್ತು ಯುವಕರು ಖಡ್ಗದಿಂದ ಹತರಾಗಿದ್ದಾರೆ. ಯೆಹೋವನೇ, ನಿನಗೆ ಕೋಪಬಂದ ದಿನ ಅವರನ್ನು ಕೊಂದುಬಿಟ್ಟೆ; ಕರುಣೆ ತೋರದೆ ಅವರನ್ನು ಸಂಹರಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು