Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 1:17 - ಪರಿಶುದ್ದ ಬೈಬಲ್‌

17 ಚೀಯೋನು ತನ್ನ ಕೈಗಳನ್ನು ಚಾಚಿದಳು. ಅವಳನ್ನು ಸಂತೈಸುವವರೇ ಇರಲಿಲ್ಲ. ಯಾಕೋಬನಿಗೆ ವೈರಿಗಳಾಗಬೇಕೆಂದು ಅವನ ನೆರೆಹೊರೆಯವರಿಗೆ ಯೆಹೋವನು ಆಜ್ಞಾಪಿಸಿದ್ದನು. ಜೆರುಸಲೇಮ್ ಒಂದು ಹೊಲಸು ವಸ್ತುವಾಗಿದ್ದಾಳೆ. ಆ ವೈರಿಗಳ ಮಧ್ಯದಲ್ಲಿ ಅವಳು ಒಂದು ಹೊಲಸು ವಸ್ತುವಾಗಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಚೀಯೋನ್ ನಗರಿಯು ಕೈಚಾಚಿ ಅಂಗಲಾಚಿದರೂ ಯಾರೂ ಸಂತೈಸರು; ಯಾಕೋಬಿನ ನೆರೆಹೊರೆಯವರು ಅದಕ್ಕೆ ವಿರೋಧಿಗಳಾಗಿರಲಿ ಎಂದು ಯೆಹೋವನು ತೀರ್ಮಾನಿಸಿದ್ದಾನೆ; ಯೆರೂಸಲೇಮು ಅವರ ನಡುವೆ ಹೊಲೆಯಾಗಿ ಬಿದ್ದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸಿಯೋನ್ ನಗರಿ ಕೈಚಾಚಿ ಕೂಗಿಕೊಂಡರೂ ಸಂತೈಸುವವರಾರೂ ಇಲ್ಲ. ನೆರೆಹೊರೆಯವರೇ ಆಕೆಯ ವಿರೋಧಿಗಳಾಗಲೆಂದು ಸರ್ವೇಶ್ವರ ತೀರ್ಮಾನಿಸಿದ್ದಾನಲ್ಲಾ ! ಅವರ ನಡುವೆ ಹೊಲೆಯಾದ ಹೆಣ್ಣಿನಂತೆ ಜೆರುಸಲೇಮ್ ಬಿದ್ದಿದ್ದಾಳಲ್ಲಾ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಚೀಯೋನ್ ನಗರಿಯು ಕೈಚಾಚಿ ಅಂಗಲಾಚಿದರೂ ಯಾರೂ ಸಂತೈಸರು; ಯಾಕೋಬಿನ ನೆರೆಹೊರೆಯವರು ಅದಕ್ಕೆ ವಿರೋಧಿಗಳಾಗಿರಲಿ ಎಂದು ಯೆಹೋವನು ತೀರ್ಮಾನಿಸಿದ್ದಾನೆ; ಯೆರೂಸಲೇಮು ಅವರ ನಡುವೆ ಹೊಲೆಯಾಗಿ ಬಿದ್ದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಚೀಯೋನ್ ತನ್ನ ಕೈಗಳನ್ನು ಚಾಚುತ್ತಾಳೆ. ಅವಳನ್ನು ಆದರಿಸುವವನು ಒಬ್ಬನೂ ಇಲ್ಲ. ಯಾಕೋಬಿಗೆ ಸಂಬಂಧಿಸಿದ ಅವನ ವೈರಿಗಳು ಅವನ ಸುತ್ತಲೂ ಇರಬೇಕೆಂದು ಯೆಹೋವ ದೇವರು ಆಜ್ಞಾಪಿಸಿದ್ದಾರೆ. ಯೆರೂಸಲೇಮ್ ಅವರ ಮಧ್ಯದಲ್ಲಿ ಅಶುದ್ಧ ವಸ್ತುವಿನಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 1:17
29 ತಿಳಿವುಗಳ ಹೋಲಿಕೆ  

ಮೊದಲನೆ ಹೆರಿಗೆಯ ಸಮಯದಲ್ಲಿ ವೇದನೆಪಡುವ ಹೆಂಗಸಿನ ಸ್ವರದಂತಿರುವ ಒಂದು ಧ್ವನಿಯನ್ನು ನಾನು ಕೇಳಿದೆ, ಇದು ಚೀಯೋನ್ ನಗರಿಯ ಮಗಳ ಕೂಗಾಟ. ಅವಳು ತನ್ನ ಎರಡೂ ಕೈಗಳನ್ನು ಮೇಲಕ್ಕೆ ಎತ್ತಿ ಪ್ರಾರ್ಥಿಸುತ್ತಾ, “ಅಯ್ಯೋ, ನಾನು ಮೂರ್ಛೆ, ಹೋಗುವುದರಲ್ಲಿದ್ದೇನೆ, ನನ್ನ ಸುತ್ತಲೆಲ್ಲ ಕೊಲೆಗಡುಕರಿದ್ದಾರೆ” ಎಂದು ಹೇಳುತ್ತಿದ್ದಾಳೆ.


“ನೀವು ನನಗೆ ಪ್ರಾರ್ಥಿಸುವಾಗ ನಿಮ್ಮ ಕೈಗಳನ್ನೆತ್ತುವಿರಿ, ಆದರೆ ನಾನು ನಿಮ್ಮ ಕಡೆಗೆ ನೋಡುವುದಿಲ್ಲ. ನೀವು ಹೆಚ್ಚೆಚ್ಚಾಗಿ ಪ್ರಾರ್ಥಿಸುವಿರಿ, ಆದರೂ ನಾನು ನಿಮಗೆ ಕಿವಿಗೊಡುವುದಿಲ್ಲ. ಯಾಕೆಂದರೆ ನಿಮ್ಮ ಕೈಗಳು ರಕ್ತದಿಂದ ತುಂಬಿವೆ.


ಜೆರುಸಲೇಮಿನ ಲಂಗಗಳು ಮಲಿನವಾಗಿದ್ದವು. ಅವಳಿಗೆ ಮುಂದೆ ಏನಾಗುವದೆಂಬುದರ ಬಗ್ಗೆ ಅವಳು ಯೋಚಿಸಲಿಲ್ಲ. ಅವಳ ಪತನ ವಿಸ್ಮಯಕಾರಿಯಾಗಿತ್ತು. ಅವಳನ್ನು ಸಂತೈಸಲು ಯಾರೂ ಇರಲಿಲ್ಲ. “ಅಯ್ಯೋ, ಯೆಹೋವನೇ, ನನಗೆಷ್ಟು ನೋವಾಗಿದೆ. ನೋಡು! ನನ್ನ ಶತ್ರು ತನ್ನನ್ನು ಎಷ್ಟು ದೊಡ್ಡವನೆಂದು ಭಾವಿಸಿಕೊಂಡಿದ್ದಾನೆ.” ಎಂದು ಆಕೆ ಹೇಳುತ್ತಾಳೆ.


ನಾನು ನನ್ನ ಪ್ರಿಯತಮರನ್ನು ಕೂಗಿ ಕರೆದೆ. ಆದರೆ ಅವರು ನನಗೆ ಮೋಸ ಮಾಡಿದರು. ನನ್ನ ಯಾಜಕರು ಮತ್ತು ಹಿರಿಯರು ನಗರದಲ್ಲಿ ಸತ್ತುಹೋದರು. ಅವರು ತಮಗಾಗಿ ಆಹಾರವನ್ನು ಹುಡುಕುತ್ತಿದ್ದರು. ಅವರು ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳ ಬಯಸಿದರು.


“ನಾನು ಈ ಎಲ್ಲ ವಿಪತ್ತುಗಳಿಗಾಗಿ ಅಳುತ್ತೇನೆ. ನನ್ನ ಕಣ್ಣುಗಳಿಂದ ಧಾರಾಕಾರವಾಗಿ ನೀರು ಸುರಿಯುತ್ತಿದೆ. ನನ್ನನ್ನು ಸಂತೈಸುವವರು ಯಾರೂ ಸಮೀಪದಲ್ಲಿ ಇಲ್ಲ; ನನ್ನನ್ನು ಪ್ರೋತ್ಸಾಹಿಸುವವರು ಯಾರೂ ಇಲ್ಲ. ನನ್ನ ಮಕ್ಕಳು ಹಾಳುಬಿದ್ದ ಭೂಮಿಯಂತಿದ್ದಾರೆ. ಶತ್ರುವು ಜಯಶಾಲಿಯಾದ ಕಾರಣ ಅವರು ಹಾಗಾಗಿದ್ದಾರೆ.”


ಆದ್ದರಿಂದ ಬಾಬಿಲೋನ್ ರಾಜನಾದ ನೆಬೂಕದ್ನೆಚ್ಚರನು ಜೆರುಸಲೇಮಿನ ವಿರುದ್ಧ ಯುದ್ಧಮಾಡಲು ತನ್ನ ಎಲ್ಲಾ ಸೇನೆಯೊಡನೆ ಬಂದನು. ನೆಬೂಕದ್ನೆಚ್ಚರನು ಜೆರುಸಲೇಮಿನ ಸುತ್ತಲೂ ಪಾಳೆಯ ಮಾಡಿಕೊಂಡು ಮಣ್ಣಿನ ದಿಬ್ಬವನ್ನು ನಿರ್ಮಿಸಿದನು. ಅವನು ನಗರದೊಳಕ್ಕೆ ಹೋಗುವ ಮತ್ತು ನಗರದಿಂದ ಬರುವ ಜನರನ್ನು ತಡೆಯಲು ಹೀಗೆ ಮಾಡಿದನು. ಇದು ನೆಬೂಕದ್ನೆಚ್ಚರನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನದಂದು ಸಂಭವಿಸಿತು.


“ಇಸ್ರೇಲ್ ನಾಶವಾಯಿತು. ಅವರು ಯಾರಿಗೂ ಬೇಡವಾದ ಪಾತ್ರೆಯನ್ನು ಬಿಸಾಡಿದಂತೆ ಜನಾಂಗಗಳ ಮಧ್ಯದಲ್ಲಿ ಚದರಿಸಲ್ಪಟ್ಟರು.


“ನರಪುತ್ರನೇ, ಇಸ್ರೇಲ್ ಜನಾಂಗವು ತನ್ನ ಸ್ವದೇಶದಲ್ಲಿ ವಾಸಿಸಿತು. ಆದರೆ ಅವರು ನಡೆಸಿದ ದುಷ್ಟತನದಿಂದ ದೇಶವನ್ನು ಮುಟ್ಟಾದ ಸ್ತ್ರೀಯಂತೆ ಅಶುದ್ಧಗೊಳಿಸಿದರು.


“ತೊಲಗಿಹೋಗಿ! ತೊಲಗಿಹೋಗಿ! ನಮ್ಮನ್ನು ಮುಟ್ಟಬೇಡಿ” ಎಂದು ಜನರು ಕೂಗಿಕೊಂಡರು. ಆ ಜನರು ಅಲೆದಾಡುತ್ತಿದ್ದರು. ಅವರಿಗೆ ಸ್ಥಳವಿರಲಿಲ್ಲ. ಬೇರೆ ಜನಾಂಗಗಳ ಜನರು, “ಅವರು ನಮ್ಮೊಂದಿಗೆ ವಾಸಿಸುವುದು ನಮಗೆ ಬೇಕಿಲ್ಲ” ಎಂದು ಹೇಳಿದರು.


“ನಾನು ನರಳಾಡುತ್ತಿದ್ದೇನೆ. ಅದಕ್ಕಾಗಿ ನನ್ನ ಮಾತುಗಳಿಗೆ ಕಿವಿಗೊಡು; ನನ್ನನ್ನು ಸಂತೈಸುವವರು ಯಾರೂ ಇಲ್ಲ. ನನ್ನ ಎಲ್ಲ ವೈರಿಗಳು ನನ್ನ ಕಷ್ಟಗಳ ಬಗ್ಗೆ ಕೇಳಿದ್ದಾರೆ. ಅವರು ಸಂತೋಷಪಡುತ್ತಿದ್ದಾರೆ. ನೀನು ನನಗೆ ಈ ಸ್ಥಿತಿಯನ್ನು ತಂದದ್ದಕ್ಕಾಗಿ ಅವರು ಸಂತೋಷಪಡುತ್ತಲಿದ್ದಾರೆ. ನೀನು ಪ್ರಕಟಿಸಿದ ಆ ದಿನವನ್ನು ಬರಮಾಡು. ಆ ದಿನ ನನ್ನ ಶತ್ರುಗಳ ಸ್ಥಿತಿ ನನ್ನ ಇಂದಿನ ಸ್ಥಿತಿಯಂತೆ ಆಗಲಿ.


ರಾತ್ರಿಯಲ್ಲಿ ಅವಳು ಬಿಕ್ಕಿಬಿಕ್ಕಿ ಅಳುತ್ತಾಳೆ. ಅವಳ ಕೆನ್ನೆಗಳ ಮೇಲೆ ಕಣ್ಣೀರು ಹರಿಯುತ್ತಿದೆ. ಅವಳನ್ನು ಸಂತೈಸುವವರು ಯಾರೂ ಇಲ್ಲ. ಅವಳ ಮಿತ್ರ ರಾಷ್ಟ್ರಗಳಲ್ಲಿ ಒಂದೂ ಕೂಡ ಅವಳನ್ನು ಸಂತೈಸುವುದಿಲ್ಲ. ಅವಳ ಸ್ನೇಹಿತರೆಲ್ಲಾ ಅವಳಿಗೆ ದ್ರೋಹ ಮಾಡಿದರು. ಅವಳ ಸ್ನೇಹಿತರೆಲ್ಲಾ ಅವಳಿಗೆ ದ್ರೋಹ ಮಾಡಿದರು. ಅವಳ ಸ್ನೇಹಿತರೆಲ್ಲಾ ಅವಳಿಗೆ ಶತ್ರುಗಳಾದರು.


ಬಾಬಿಲೋನಿನ ಸೈನ್ಯವು ಜೆರುಸಲೇಮಿಗೆ ಬರಬೇಕೆಂದು ನಾನು ಆಜ್ಞಾಪಿಸುತ್ತೇನೆ.’ ಇದು ಯೆಹೋವನ ನುಡಿ. ‘ಆ ಸೈನ್ಯವು ಜೆರುಸಲೇಮಿನ ವಿರುದ್ಧ ಹೋರಾಡುವುದು. ಅವರು ಅದನ್ನು ಸ್ವಾಧೀನಪಡಿಸಿಕೊಳ್ಳುವರು ಮತ್ತು ಅದಕ್ಕೆ ಬೆಂಕಿಯಿಟ್ಟು ಸುಟ್ಟುಬಿಡುವರು. ನಾನು ಯೆಹೂದ ಪ್ರದೇಶದ ನಗರಗಳನ್ನು ನಾಶಮಾಡುವೆನು. ಆ ನಗರಗಳು ಬರಿದಾದ ಮರುಭೂಮಿಗಳಾಗುವವು. ಅಲ್ಲಿ ಯಾರೂ ವಾಸಮಾಡಲಾರರು.’”


“ಯೆಹೂದದ ಪ್ರಮುಖರು ಮತ್ತು ಜನಸಾಮಾನ್ಯರು ಸತ್ತುಹೋಗುವರು. ಯಾರೂ ಅವರನ್ನು ಹೂಳುವದಿಲ್ಲ. ಅವರಿಗೋಸ್ಕರ ಗೋಳಾಡುವದಿಲ್ಲ. ಅವರ ಬಗ್ಗೆ ದುಃಖ ಸೂಚಿಸಲು ಯಾರೂ ತಮಗೆ ಗಾಯಗಳನ್ನು ಮಾಡಿಕೊಳ್ಳುವದಿಲ್ಲ; ತಮ್ಮ ತಲೆಗಳನ್ನು ಬೋಳಿಸಿಕೊಳ್ಳುವದಿಲ್ಲ.


ಕುರುಬರು ಜೆರುಸಲೇಮಿಗೆ ಬರುತ್ತಾರೆ. ಮತ್ತು ಕುರಿಮಂದೆಗಳನ್ನು ತರುತ್ತಾರೆ. ಅದರ ಸುತ್ತಲೂ ತಮ್ಮ ಗುಡಾರಗಳನ್ನು ಹಾಕಿಕೊಳ್ಳುತ್ತಾರೆ. ಪ್ರತಿಯೊಬ್ಬ ಕುರುಬನು ತನ್ನ ಕುರಿಹಿಂಡನ್ನು ನೋಡಿಕೊಳ್ಳುತ್ತಾನೆ.


ಈ ಕಾರ್ಯಗಳಲ್ಲಿ ಯಾವುದಾದರೊಂದು ಸಂಭವಿಸಿದಾಗ, ಒಬ್ಬ ಮನುಷ್ಯನು ಮಾತ್ರ ತನ್ನ ಪಾಪಕ್ಕಾಗಿ ಕ್ಷಮೆಯನ್ನು ಯಾಚಿಸಿ ಈ ಆಲಯದ ಕಡೆಗೆ ಕೈಗಳನ್ನೆತ್ತಿ ಪ್ರಾರ್ಥಿಸಿದರೆ,


ಬಳಿಕ ಸೊಲೊಮೋನನು ಯೆಹೋವನ ಯಜ್ಞವೇದಿಕೆಯ ಎದುರಿನಲ್ಲಿ ನಿಂತುಕೊಂಡನು. ಜನರೆಲ್ಲರೂ ಅವನ ಎದುರಿನಲ್ಲಿ ನಿಂತುಕೊಂಡಿದ್ದರು. ರಾಜನಾದ ಸೊಲೊಮೋನನು ತನ್ನ ಕೈಗಳನ್ನು ಚಾಚಿ, ಆಕಾಶದ ಕಡೆಗೆ ದೃಷ್ಟಿಸಿ,


ದೇವರೇ, ನಾನು ದುಃಖಿತನಾಗಿದ್ದೇನೆ, ಭಯಭೀತನಾಗಿದ್ದೇನೆ.


ನನ್ನ ‘ಸ್ವಾಸ್ತ್ಯವಾದ ಜನರು’ ಹದ್ದುಗಳಿಂದ ಸುತ್ತುವರಿಯಲ್ಪಟ್ಟು ಸಾಯುತ್ತಿರುವ ಪ್ರಾಣಿಯಂತಾಗಿದ್ದಾರೆ. ಆ ಪಕ್ಷಿಗಳು ಅವರ ಸುತ್ತಲೂ ಹಾರಾಡುತ್ತವೆ. ಕಾಡುಪ್ರಾಣಿಗಳೇ, ಬನ್ನಿ, ಬನ್ನಿ, ಬಂದು ನಿಮ್ಮ ಆಹಾರವನ್ನು ತೆಗೆದುಕೊಳ್ಳಿ.


ಜೆರುಸಲೇಮ್ ಮಹಾಪಾಪ ಮಾಡಿತು. ಜೆರುಸಲೇಮ್ ಭಯಂಕರ ಪಾಪ ಮಾಡಿದ್ದಕ್ಕಾಗಿ ಅವಳು ಹಾಳುಬಿದ್ದ ನಗರವಾದಳು. ಜನರು ಅವಳನ್ನು ಹೀನೈಸುವಂತಾಗಿದೆ. ಮೊದಲು ಅವಳನ್ನು ಗೌರವಿಸುತ್ತಿದ್ದ ಎಲ್ಲ ಜನ ಈಗ ಅವಳನ್ನು ತಿರಸ್ಕರಿಸುತ್ತಾರೆ. ಏಕೆಂದರೆ ಅವರು ಅವಳ ಬೆತ್ತಲೆ ದೇಹವನ್ನು ನೋಡಿದರು. ಜೆರುಸಲೇಮ್ ನರಳಾಡುತ್ತಿದ್ದಾಳೆ. ಅವಳು ನಾಚಿಕೆಯಿಂದ ತನ್ನ ಮುಖವನ್ನು ತಗ್ಗಿಸಿಕೊಂಡಿದ್ದಾಳೆ.


ನಾನು ದೃಷ್ಟಿಸಿ ನೋಡಿದಾಗ, ಅನೇಕ ಜನರು ಹಿಂಸೆಗೆ ಒಳಗಾಗಿರುವುದನ್ನು ಕಂಡೆನು. ಅವರ ಕಣ್ಣೀರನ್ನೂ ನೋಡಿದೆನು. ದುಃಖದಲ್ಲಿದ್ದ ಅವರನ್ನು ಸಂತೈಸಲು ಒಬ್ಬರೂ ಇರಲಿಲ್ಲ. ಹಿಂಸಕರು ಎಲ್ಲಾ ಅಧಿಕಾರವನ್ನು ಹೊಂದಿದ್ದರು; ಅವರಿಂದ ಹಿಂಸೆಗೆ ಒಳಗಾದವರನ್ನು ಸಂತೈಸಲು ಯಾರೂ ಇರಲಿಲ್ಲ.


“ಬಡನಗರಿಯೇ, ನಿನ್ನ ವೈರಿಗಳು ನಿನಗೆ ವಿರೋಧವಾಗಿ ಬಿರುಗಾಳಿಯಂತೆ ಬಂದಾಗ ಯಾರೂ ನಿನ್ನನ್ನು ಸಂತೈಸಲಿಲ್ಲ. ಆದರೆ ನಾನು ಮತ್ತೆ ನಿನ್ನನ್ನು ನಿರ್ಮಿಸುವೆನು. ನಿನ್ನ ಗೋಡೆಗಳ ಕಲ್ಲುಗಳನ್ನು ಕಟ್ಟಲು ಸುಂದರವಾದ ಗಾರೆಯನ್ನು ಉಪಯೋಗಿಸುವೆನು. ನಾನು ಅಡಿಪಾಯ ಹಾಕುವಾಗ ಮಾಣಿಕ್ಯಗಳನ್ನು ಹಾಕುವೆನು.


“ಜೆರುಸಲೇಮ್ ನಗರವೇ, ನಿನಗಾಗಿ ಯಾರೂ ವ್ಯಥೆಪಡುವದಿಲ್ಲ. ನಿನಗಾಗಿ ದುಃಖಪಡುವುದಿಲ್ಲ ಮತ್ತು ಆಳುವುದಿಲ್ಲ. ಯಾರೂ ತಮ್ಮ ದಿನನಿತ್ಯದ ಕೆಲಸಕಾರ್ಯಗಳನ್ನು ಬಿಟ್ಟು ನಿನ್ನ ಯೋಗಕ್ಷೇಮವನ್ನು ವಿಚಾರಿಸಲು ಬರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು