Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 1:3 - ಪರಿಶುದ್ದ ಬೈಬಲ್‌

3 ಅತಿ ಕಷ್ಟಗಳನ್ನು ಅನುಭವಿಸಿದ ಮೇಲೆ ಯೆಹೂದ ಬಂಧನಕ್ಕೊಳಗಾಗಿದ್ದಾಳೆ. ಅತಿ ಶ್ರಮಪಟ್ಟ ಮೇಲೆಯೂ ಅವಳು ಸೆರೆ ಒಯ್ಯಲ್ಪಟ್ಟಿದ್ದಾಳೆ. ಯೆಹೂದ ಬೇರೆ ಜನಾಂಗಗಳ ಜೊತೆಯಲ್ಲಿ ವಾಸಿಸುತ್ತಾಳೆ. ಆದರೆ ಅವಳಿಗೆ ವಿಶ್ರಾಂತಿ ಸಿಕ್ಕಿಲ್ಲ. ಅವಳನ್ನು ಬೆನ್ನಟ್ಟಿದ ಜನರು ಆಕೆಯು ಬಳಲಿ ಹೋಗಿದ್ದಾಗಲೇ ಅವಳನ್ನು ಹಿಡಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೂದವೆಂಬಾಕೆಯು ಘೋರವಾದ ಸೇವೆ ಮತ್ತು ಶ್ರಮೆಗಳಿಂದ ತಪ್ಪಿಸಿಕೊಳ್ಳಬೇಕೆಂದು ವಲಸೆಹೋಗಿದ್ದಾಳೆ; ಮ್ಲೇಚ್ಛರ ಮಧ್ಯದಲ್ಲಿ ನೆಮ್ಮದಿಯಿಲ್ಲದೆ ವಾಸಮಾಡುತ್ತಿದ್ದಾಳೆ; ಆಕೆಯು ಇಕ್ಕಟ್ಟಿಗೆ ಸಿಕ್ಕಿಕೊಂಡಿರುವಾಗಲೇ ಆಕೆಯ ಹಿಂಸಕರೆಲ್ಲಾ ಆಕೆಯನ್ನು ಹಿಂದಟ್ಟಿ ಹಿಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಘೋರಸೇವೆ ಶ್ರಮೆಗಳಿಂದ ತಪ್ಪಿಸಿಕೊಳ್ಳಲಿಕೆ ವಲಸೆಹೋಗಿರುವಳಲ್ಲಾ ‘ಯೆಹೂದಿ’ ಎಂಬಾಕೆ ! ಮ್ಲೇಚ್ಛರ ಮಧ್ಯೆ ವಾಸಮಾಡುತ್ತಿರುವಳಲ್ಲಾ ನೆಮ್ಮದಿಯಿಲ್ಲದೆ ಹಿಮ್ಮೆಟ್ಟಿ ಹಿಡಿದರು ಹಿಂಸಕರೆಲ್ಲಾ ಆಕೆ ಇಕ್ಕಟ್ಟಿಗೆ ಸಿಕ್ಕಿರುವಾಗಲೆ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೂದವೆಂಬಾಕೆಯು ಘೋರ ಸೇವೆಶ್ರಮೆಗಳಿಂದ ತಪ್ಪಿಸಿಕೊಳ್ಳಬೇಕೆಂದು ವಲಸೆಹೋಗಿದ್ದಾಳೆ; ಮ್ಲೇಚ್ಫರ ಮಧ್ಯದಲ್ಲಿ ನೆಮ್ಮದಿಯಿಲ್ಲದೆ ವಾಸಮಾಡುತ್ತಾಳೆ; ಆಕೆಯು ಇಕ್ಕಟ್ಟಿಗೆ ಸಿಕ್ಕಿಕೊಂಡಿರುವಾಗಲೇ ಆಕೆಯ ಹಿಂಸಕರೆಲ್ಲಾ ಹಿಂದಟ್ಟಿ ಹಿಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೂದವೆಂಬಾಕೆಯು ಸಂಕಟದ ನಿಮಿತ್ತವೂ, ಘೋರವಾದ ದಾಸ್ಯದ ನಿಮಿತ್ತವೂ ಸೆರೆಯಾಗಿ ಹೋದಳು. ಆಕೆಯು ಬೇರೆ ಜನಾಂಗಗಳೊಳಗೆ ವಾಸಮಾಡುವವಳಾಗಿ, ವಿಶ್ರಾಂತಿಯನ್ನು ಕಾಣಳು. ಆಕೆಯು ಇಕ್ಕಟ್ಟಿಗೆ ಸಿಕ್ಕಿಕೊಂಡಿರುವಾಗಲೇ ಆಕೆಯ ಹಿಂಸಕರೆಲ್ಲಾ ಆಕೆಯನ್ನು ಹಿಂದಟ್ಟಿ ಹಿಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 1:3
22 ತಿಳಿವುಗಳ ಹೋಲಿಕೆ  

ಜೆರುಸಲೇಮಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತುಹೋಗಿವೆ. ಆತನು ಹೆಬ್ಬಾಗಿಲುಗಳ ಸರಳುಗಳನ್ನು ಮುರಿದು ಚೂರುಚೂರು ಮಾಡಿದ್ದಾನೆ. ಅವಳ ರಾಜನು ಮತ್ತು ರಾಜಕುಮಾರರು ಅನ್ಯಜನಾಂಗಗಳ ಮಧ್ಯದಲ್ಲಿದ್ದಾರೆ. ಆ ಜನರಿಗೆ ಉಪದೇಶ ಮಾಡಲು ಯಾರೂ ಇಲ್ಲ. ಪ್ರವಾದಿಗಳಿಗೆ ಯೆಹೋವನಿಂದ ಯಾವ ದರ್ಶನಗಳೂ ಇಲ್ಲ.


ನಿನ್ನ ಜನರಲ್ಲಿ ಮೂರನೆ ಒಂದು ಭಾಗ ಪಟ್ಟಣದೊಳಗೆ ರೋಗದಿಂದಲೂ ಹಸಿವಿನಿಂದಲೂ ಸಾಯುವರು. ಮೂರರಲ್ಲಿ ಇನ್ನೊಂದು ಭಾಗ ಪಟ್ಟಣದ ಹೊರಗೆ ರಣರಂಗದಲ್ಲಿ ಸಾಯುವರು. ಅನಂತರ ನಾನು ನನ್ನ ಖಡ್ಗವನ್ನು ಇರಿದು ಉಳಿದವರನ್ನು ಬಹುದೂರದ ದೇಶಕ್ಕೆ ಅಟ್ಟಿಬಿಡುವೆನು.


ಸೇನಾಧಿಪತಿಯಾದ ನೆಬೂಜರದಾನನು ಜೆರುಸಲೇಮಿನಲ್ಲಿ ಇನ್ನೂ ಉಳಿದುಕೊಂಡಿದ್ದ ಜನರನ್ನು ಬಂಧಿಗಳನ್ನಾಗಿ ಮಾಡಿಕೊಂಡನು. ಈ ಮುಂಚೆ ಬಾಬಿಲೋನಿನ ರಾಜನಿಗೆ ಶರಣಾಗತರಾದವರನ್ನು ಸಹ ಅವನು ತೆಗೆದುಕೊಂಡು ಹೋದನು. ಜೆರುಸಲೇಮಿನಲ್ಲಿ ಉಳಿದ ಕುಶಲಕರ್ಮಿಗಳನ್ನು ಸಹ ಅವನು ತೆಗೆದುಕೊಂಡು ಹೋದನು.


ಬಾಬಿಲೋನಿನ ಸೈನಿಕರು ರಾಜನಾದ ಚಿದ್ಕೀಯನನ್ನು ಬೆನ್ನಟ್ಟಿದರು. ಅವರು ಅವನನ್ನು ಜೆರಿಕೊವಿನ ಬಯಲಿನಲ್ಲಿ ಹಿಡಿದರು. ಚಿದ್ಕೀಯನ ಎಲ್ಲಾ ಸೈನಿಕರು ಓಡಿಹೋದರು.


ಬಾಬಿಲೋನಿನ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಜರದಾನನೆಂಬವನು ಜೆರುಸಲೇಮಿನಲ್ಲಿ ಉಳಿದ ಜನರನ್ನು ಹಿಡಿದು ಬಂಧಿಗಳನ್ನಾಗಿ ಮಾಡಿದ್ದನು. ಅವರನ್ನು ಅವನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಈ ಮೊದಲೆ ಅವನಿಗೆ ಶರಣಾಗತರಾದವರನ್ನೂ ಸಹ ನೆಬೂಜರದಾನನು ಬಂಧಿಗಳನ್ನಾಗಿ ಮಾಡಿದನು. ಅವನು ಜೆರುಸಲೇಮಿನ ಉಳಿದವರೆಲ್ಲರನ್ನು ಬಂಧಿಗಳನ್ನಾಗಿ ಮಾಡಿ ಬಾಬಿಲೋನಿಗೆ ತೆಗೆದುಕೊಂಡು ಹೋದನು.


ನಾನು ಆ ಜನರನ್ನು ದಂಡಿಸುವೆನು. ಆ ಶಿಕ್ಷೆಯು ಭೂಲೋಕದ ಎಲ್ಲಾ ಜನರಲ್ಲಿ ಭೀತಿಯನ್ನು ಉಂಟು ಮಾಡುವುದು. ಜನರು ಯೆಹೂದದ ಜನರನ್ನು ಗೇಲಿಮಾಡುವರು. ನಾನು ಅವರನ್ನು ತಳ್ಳಿದ ಎಲ್ಲಾ ದೇಶಗಳಲ್ಲಿ ಜನರು ಅವರ ಬಗ್ಗೆ ಪರಿಹಾಸ್ಯದ ಮಾತುಗಳನ್ನು ಆಡುವರು; ಅವರನ್ನು ಶಪಿಸುವರು.


ಯೆಹೋವನು, “ನಾನು ಅನೇಕ ಮೀನುಗಾರರನ್ನು ಈ ಪ್ರದೇಶಕ್ಕೆ ಕರೆಸುವೆನು. ಆ ಮೀನುಗಾರರು ಯೆಹೂದದ ಜನರನ್ನು ಬಂಧಿಸುವರು. ಇದಾದ ಮೇಲೆ ನಾನು ಹಲವಾರು ಜನ ಬೇಟೆಗಾರರನ್ನು ಈ ಪ್ರದೇಶಕ್ಕೆ ಕರೆಸುವೆನು. ಆ ಬೇಟೆಗಾರರು ಪ್ರತಿಯೊಂದು ಪರ್ವತ, ಬೆಟ್ಟ ಮತ್ತು ಬಂಡೆಗಳ ಸಂದುಗೊಂದುಗಳಲ್ಲಿ ಯೆಹೂದ್ಯರನ್ನು ಬೇಟೆಯಾಡುವರು.


ನೆಗೆವ್ ಮರುಭೂಮಿಯ ಎಲ್ಲಾ ನಗರಗಳಿಗೆ ಬೀಗ ಹಾಕಲಾಗಿದೆ. ಅವುಗಳನ್ನು ತೆರೆಯುವುದು ಯಾರಿಂದಲೂ ಸಾಧ್ಯವಿಲ್ಲ. ಯೆಹೂದದ ಎಲ್ಲಾ ಜನರು ಸೆರೆ ಒಯ್ಯಲ್ಪಟ್ಟಿದ್ದಾರೆ. ಅವರೆಲ್ಲರನ್ನು ಸೆರೆಯಾಳುಗಳಾಗಿ ತೆಗೆದುಕೊಂಡು ಹೋಗಲಾಗಿದೆ.


ಬಾಬಿಲೋನ್ ರಾಜನು ಹಮಾತ್ ದೇಶದ ರಿಬ್ಲದಲ್ಲಿ ಅವರನ್ನೆಲ್ಲ ಕೊಂದುಹಾಕಿದನು. ಹೀಗೆ ಯೆಹೂದದ ಜನರನ್ನೆಲ್ಲ ಅವರ ದೇಶದಿಂದ ಸೆರೆಯಾಳುಗಳನ್ನಾಗಿಸಿ ಹಿಡಿದೊಯ್ದರು.


ಆ ನಗರದಲ್ಲಿ ಉಳಿದಿದ್ದ ಜನರನ್ನೆಲ್ಲಾ ನೆಬೂಜರದಾನನು ಸೆರೆಹಿಡಿದನು. ರಾಜನಾದ ನೆಬೂಕದ್ನೆಚ್ಚರನಿಗೆ ವಿಧೇಯರಾಗಿರಲು ಕೆಲವು ಜನರು ಒಪ್ಪಿದರು. ಆದರೆ ನೆಬೂಜರದಾನನು ಆ ಜನರನ್ನೆಲ್ಲಾ ಸೆರೆಹಿಡಿದನು. ಅವನು ನಗರದಲ್ಲಿದ್ದ ಪ್ರತಿಯೊಬ್ಬರನ್ನೂ ಕರೆದೊಯ್ದನು.


ಆಗ ನೆಬೂಕದ್ನೆಚ್ಚರನ ಸೇನೆಯು ನಗರದ ಗೋಡೆಯಲ್ಲಿ ಒಂದು ರಂಧ್ರವನ್ನು ಕೊರೆದರು. ಅಂದಿನ ರಾತ್ರಿ ರಾಜನಾದ ಚಿದ್ಕೀಯ ಮತ್ತು ಅವನ ಸೈನಿಕರೆಲ್ಲರೂ ಓಡಿಹೋದರು. ಅವರು ರಾಜನ ತೋಟದ ಎರಡು ಗೋಡೆಗಳ ಮಧ್ಯಭಾಗದ ರಹಸ್ಯ ಬಾಗಿಲಿನ ಮೂಲಕ ಓಡಿಹೋದರು. ಬಾಬಿಲೋನ್ ಸೇನೆಯು ನಗರವನ್ನು ಸುತ್ತುವರಿದಿತ್ತು. ಆದರೆ ಚಿದ್ಕೀಯ ಮತ್ತು ಅವನ ಸೇನೆಯು ಮರುಭೂಮಿಯ ರಸ್ತೆಯಲ್ಲಿ ತಪ್ಪಿಸಿಕೊಂಡರು.


ಬಾಬಿಲೋನ್ ಸೇನೆಯು ರಾಜನಾದ ಚಿದ್ಕೀಯನನ್ನು ಅಟ್ಟಿಸಿಕೊಂಡು ಹೋಗಿ, ಅವನನ್ನು ಜೆರಿಕೊವಿನ ಸಮೀಪದಲ್ಲಿ ಹಿಡಿದರು.


ಆದ್ದರಿಂದ ಆತನು ನಿಮ್ಮ ವೈರಿಗಳನ್ನು ಕಳುಹಿಸಿ ಅವರ ಸೇವೆ ನೀವು ಮಾಡುವಂತೆ ಮಾಡುವನು. ನೀವು ಹಸಿವು ಬಾಯಾರಿಕೆಗಳಿಂದ ಬಳಲುವಿರಿ; ಬಟ್ಟೆಯಿಲ್ಲದೆ ಬಡವರಾಗಿ ಜೀವಿಸುವಿರಿ. ನಿಮ್ಮ ಯೆಹೋವನು ನಿಮ್ಮ ಮೇಲೆ ಭಾರವನ್ನು ಹೊರಿಸುವನು. ಆ ಭಾರವನ್ನು ನಿಮ್ಮಿಂದ ತೆಗೆಯಲಾಗುವುದಿಲ್ಲ; ನೀವು ನಾಶವಾಗುವಿರಿ.


“ತೊಲಗಿಹೋಗಿ! ತೊಲಗಿಹೋಗಿ! ನಮ್ಮನ್ನು ಮುಟ್ಟಬೇಡಿ” ಎಂದು ಜನರು ಕೂಗಿಕೊಂಡರು. ಆ ಜನರು ಅಲೆದಾಡುತ್ತಿದ್ದರು. ಅವರಿಗೆ ಸ್ಥಳವಿರಲಿಲ್ಲ. ಬೇರೆ ಜನಾಂಗಗಳ ಜನರು, “ಅವರು ನಮ್ಮೊಂದಿಗೆ ವಾಸಿಸುವುದು ನಮಗೆ ಬೇಕಿಲ್ಲ” ಎಂದು ಹೇಳಿದರು.


ಮರಣದವರೆಗೂ ನಾವು ಹಿಂದಟ್ಟಲ್ಪಟ್ಟಿದ್ದೇವೆ. ನಾವು ಬಳಲಿಹೋಗಿದ್ದೇವೆ; ನಾವು ವಿಶ್ರಾಂತಿಯನ್ನೇ ಪಡೆದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು