Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 2:21 - ಪರಿಶುದ್ದ ಬೈಬಲ್‌

21 ಬೀದಿಗಳಲ್ಲಿ ತರುಣರು ಮತ್ತು ವೃದ್ಧರು ನೆಲದ ಮೇಲೆ ಬಿದ್ದಿದ್ದಾರೆ. ನನ್ನ ಯುವತಿಯರು ಮತ್ತು ಯುವಕರು ಖಡ್ಗದಿಂದ ಹತರಾಗಿದ್ದಾರೆ. ಯೆಹೋವನೇ, ನಿನಗೆ ಕೋಪಬಂದ ದಿನ ಅವರನ್ನು ಕೊಂದುಬಿಟ್ಟೆ; ಕರುಣೆ ತೋರದೆ ಅವರನ್ನು ಸಂಹರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯುವಕರು ಮತ್ತು ವೃದ್ಧರು ಬೀದಿಗಳಲ್ಲಿ ನೆಲದ ಮೇಲೆ ಬಿದ್ದಿರುತ್ತಾರೆ, ನನ್ನ ತರುಣಿಯರು ಹಾಗು ತರುಣರು ಖಡ್ಗದಿಂದ ಹತರಾಗಿದ್ದಾರೆ; ನೀನು ಕೋಪತೀರಿಸಿಕೊಳ್ಳುವ ದಿನದಲ್ಲಿ ಅವರನ್ನು ಕೊಂದುಹಾಕಿದಿ, ಕನಿಕರಿಸದೆ ಸಂಹರಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ವಯಸ್ಕರೂ ವೃದ್ಧರೂ ಬಿದ್ದಿದ್ದಾರೆ ಬೀದಿಗಳಲ್ಲೆ ತರುಣತರುಣಿಯರು ತುತ್ತಾಗಿದ್ದಾರೆ ಖಡ್ಗಗಳಿಗೆ. ನಿನ್ನ ಪ್ರಕೋಪದ ದಿನದಂದು ಹತಮಾಡಿದೆಯಲ್ಲಾ ಅವರನ್ನು ಕನಿಕರಿಸದೆ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯುವಕವೃದ್ಧರು ಬೀದಿಗಳಲ್ಲಿ ನೆಲದ ಮೇಲೆ ಬಿದ್ದಿರುತ್ತಾರೆ, ನನ್ನ ತರುಣೀ ತರುಣರು ಖಡ್ಗದಿಂದ ಹತರಾಗಿದ್ದಾರೆ; ನೀನು ಕೋಪತೀರಿಸಿಕೊಳ್ಳುವ ದಿನದಲ್ಲಿ ಅವರನ್ನು ಕೊಂದುಹಾಕಿದಿ, ಕನಿಕರಿಸದೆ ಹತಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯುವಕರು ಮತ್ತು ವೃದ್ಧರು ಬೀದಿಗಳ ನೆಲದ ಮೇಲೆ ಮಲಗಿದ್ದಾರೆ. ನನ್ನ ಯುವಕರು, ಯುವತಿಯರು ಖಡ್ಗದಿಂದ ಹತರಾಗಿದ್ದಾರೆ. ನಿನ್ನ ಕೋಪದ ದಿನದಲ್ಲಿ ನೀನು ಅವರನ್ನು ಸಾಯಿಸಿರುವಿರಿ, ಕೊಂದುಹಾಕಿದಿರಿ, ಕನಿಕರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 2:21
33 ತಿಳಿವುಗಳ ಹೋಲಿಕೆ  

ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ನಾಶಮಾಡಲು ಬಾಬಿಲೋನಿನ ಅರಸನನ್ನು ಕಳುಹಿಸಿದನು. ಬಾಬಿಲೋನಿನ ಅರಸನು ದೇವಾಲಯದೊಳಗಿದ್ದ ಯುವಜನರನ್ನು ಕೊಂದುಹಾಕಿದನು. ಅವನಿಗೆ ಯೆಹೂದದ ಮತ್ತು ಜೆರುಸಲೇಮಿನ ಜನರ ಮೇಲೆ ಕರುಣೆಯೇ ಇರಲಿಲ್ಲ. ಅವನು ಚಿಕ್ಕವರನ್ನೂ ದೊಡ್ಡವರನ್ನೂ ಗಂಡಸರನ್ನೂ ಹೆಂಗಸರನ್ನೂ ಬಿಡದೆ ಸಂಹರಿಸಿದನು. ರೋಗಿಗಳನ್ನೂ ಆರೋಗ್ಯವಂತರನ್ನೂ ಸಂಹರಿಸಿದನು; ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ಶಿಕ್ಷಿಸಲು ದೇವರು ನೆಬೂಕದ್ನೆಚ್ಚರನನ್ನು ಉಪಯೋಗಿಸಿದನು.


ಈ ದೇಶದಲ್ಲಿ ವಾಸಿಸುವ ಜನರ ಬಗ್ಗೆ ನಾನು ದುಃಖಿಸುವುದಿಲ್ಲ.” ಇದು ಯೆಹೋವನ ನುಡಿ. “ನೋಡಿರಿ, ಪ್ರತಿಯೊಬ್ಬನೂ ತನ್ನ ಅರಸನಿಂದಲೂ ನೆರೆಯವರಿಂದಲೂ ಹಾಳುಮಾಡಲ್ಪಡುವಂತೆ ನಾನು ಮಾಡುವೆನು. ಅವರ ದೇಶವನ್ನು ಹಾಳುಮಾಡುವಂತೆ ಅವರನ್ನು ಬಿಡುವೆನು. ಅವರನ್ನು ನಿಲ್ಲಿಸುವುದಿಲ್ಲ.”


ನೀನು ನಮಗೆ ನಿನ್ನ ಕೋಪವನ್ನು ಹೊದಿಸಿ ನಮ್ಮನ್ನು ಓಡಿಸಿಬಿಟ್ಟೆ. ನೀನು ನಮ್ಮನ್ನು ನಿಷ್ಕರುಣೆಯಿಂದ ಕೊಂದುಹಾಕಿದೆ!


ಯೆಹೂದದ ಜನರು ಎಡವಿ, ಒಬ್ಬರಮೇಲೊಬ್ಬರು ಬೀಳುವಂತೆ ನಾನು ಮಾಡುವೆನು. ತಂದೆ ಮತ್ತು ಮಕ್ಕಳು ಒಬ್ಬರಮೇಲೊಬ್ಬರು ಬೀಳುವರು.’” ಇದು ಯೆಹೋವನ ನುಡಿ. “‘ನಾನು ಅವರಿಗಾಗಿ ಕನಿಕರಪಡುವದಿಲ್ಲ ಅಥವಾ ಕರುಣೆ ತೋರಿಸುವದಿಲ್ಲ. ಯೆಹೂದದ ಜನರ ವಿನಾಶವನ್ನು ಕರುಣೆಯು ತಡೆಯದಂತೆ ನೋಡಿಕೊಳ್ಳುತ್ತೇನೆ.’”


ಯೆಹೋವನು ತಾನು ನಿಯೋಜಿಸಿದಂತೆ ಮಾಡಿದನು. ತಾನು ಮಾಡುತ್ತೇನೆಂದು ಹೇಳಿದ್ದನ್ನು ಆತನು ಮಾಡಿದ್ದಾನೆ. ಪುರಾತನ ಕಾಲದಿಂದ ತಾನು ವಿಧಿಸಿದ್ದನ್ನು ಆತನು ಮಾಡಿದ್ದಾನೆ. ಆತನು ನಿಷ್ಕರುಣೆಯಿಂದ ನಾಶಮಾಡಿದ್ದಾನೆ. ನಿನಗೆ ಸಂಭವಿಸಿದವುಗಳ ಮೂಲಕವಾಗಿ ಆತನು ನಿನ್ನ ವೈರಿಗಳನ್ನು ಸಂತೋಷಪಡಿಸಿದ್ದಾನೆ. ಆತನು ನಿನ್ನ ವೈರಿಗಳ ಸಾಮರ್ಥ್ಯವನ್ನು ಹೆಚ್ಚಿಸಿದ್ದಾನೆ.


ಯೆಹೋವನು ಯಾಕೋಬನ ಮನೆಗಳನ್ನು ನಾಶಪಡಿಸಿದನು. ಆತನು ಕನಿಕರವಿಲ್ಲದೆ ಅವುಗಳನ್ನು ನುಂಗಿಬಿಟ್ಟನು. ತನ್ನ ಕೋಪದಲ್ಲಿ ಆತನು ಯೆಹೂದದ ಮಗಳ ಕೋಟೆಗಳನ್ನು ನಾಶಪಡಿಸಿದನು. ಯೆಹೋವನು ಯೆಹೂದ ರಾಜ್ಯವನ್ನೂ ಮತ್ತು ಅದರ ಅಧಿಪತಿಗಳನ್ನೂ ನೆಲಕ್ಕೆ ಅಪ್ಪಳಿಸಿದನು. ಆತನು ಯೆಹೂದ ರಾಜ್ಯಕ್ಕೆ ಅವಮಾನ ಮಾಡಿದ್ದಾನೆ.


ನನ್ನ ಶೂರ ಸೈನಿಕರನ್ನೆಲ್ಲಾ ಯೆಹೋವನು ತಿರಸ್ಕರಿಸಿದ್ದಾನೆ. ಆ ಸೈನಿಕರು ನಗರದ ಒಳಭಾಗದಲ್ಲಿದ್ದರು. ಆಗ ಯೆಹೋವನು ನನ್ನ ವಿರುದ್ಧ ಒಂದು ಜನರ ಗುಂಪನ್ನು ತಂದನು. ಆತನು ನನ್ನ ತರುಣ ಸೈನಿಕರನ್ನು ಕೊಲ್ಲುವ ಸಲುವಾಗಿ ಆ ಜನರನ್ನು ತಂದನು. ಯೆಹೋವನು ದ್ರಾಕ್ಷಿಯನ್ನು ಆಲೆಯಲ್ಲಿ ತುಳಿದಿದ್ದಾನೆ. ಆ ದ್ರಾಕ್ಷಿಆಲೆಯು ಜೆರುಸಲೇಮ್ ಕನ್ನಿಕೆಗೆ ಸೇರಿದ್ದು.


ಆದ್ದರಿಂದ ಈಗ ಅವರ ಮಕ್ಕಳು ಕ್ಷಾಮಪೀಡಿತರಾಗಿ ಉಪವಾಸಬೀಳುವಂತೆ ಮಾಡು. ಅವರ ಶತ್ರುಗಳು ಅವರನ್ನು ಖಡ್ಗದಿಂದ ಸೋಲಿಸುವಂತೆ ಮಾಡು. ಅವರ ಹೆಂಡತಿಯರು ಮಕ್ಕಳನ್ನು ಕಳೆದುಕೊಳ್ಳಲಿ ಮತ್ತು ವಿಧವೆಯರಾಗಲಿ. ಅವರ ಯೌವನಸ್ಥರು ಯುದ್ಧದಲ್ಲಿ ಖಡ್ಗದಿಂದ ಹತರಾಗಲಿ.


“ನಾನು ಈಜಿಪ್ಟಿಗೆ ವ್ಯಾಧಿಗಳನ್ನು ಹೇಗೆ ಬರಮಾಡಿದೆನೋ ಹಾಗೆಯೇ ನಿಮಗೂ ಮಾಡಿದೆನು. ನಿಮ್ಮ ಯೌವನಸ್ಥರನ್ನು ಕತ್ತಿಯಿಂದ ಕೊಂದೆನು. ನಿಮ್ಮ ಕುದುರೆಗಳನ್ನು ತೆಗೆದುಕೊಂಡೆನು. ಹೆಣಗಳ ರಾಶಿಯಿಂದ ನಿಮ್ಮ ಸ್ಥಳವು ದುರ್ವಾಸನೆಯಿಂದ ತುಂಬುವಂತೆ ಮಾಡಿದೆನು. ಆದಾಗ್ಯೂ ನೀವು ಸಹಾಯಕ್ಕಾಗಿ ನನ್ನ ಬಳಿಗೆ ಬರಲಿಲ್ಲ.” ಇದು ಯೆಹೋವನ ನುಡಿ.


ಅವರಿಗೆ ನಾನು ಕನಿಕರ ತೋರಿಸುವುದಿಲ್ಲ. ಅವರಿಗಾಗಿ ನಾನು ದುಃಖಿಸುವುದಿಲ್ಲ. ಅವರು ತಾವೇ ಇದನ್ನು ತಮ್ಮ ಮೇಲೆ ಬರಮಾಡಿಕೊಂಡರು. ಅವರು ಹೊಂದಲು ಯೋಗ್ಯವಾದ ಶಿಕ್ಷೆಯನ್ನೇ ನಾನು ಕೊಡುತ್ತಿರುವುದು.”


ಅವರಿಗೆ ನಾನು ನನ್ನ ರೌದ್ರವನ್ನು ತೋರಿಸುವೆನು. ಅವರಿಗೆ ನಾನು ಕರುಣೆಯನ್ನು ಎಂದಿಗೂ ತೋರಿಸುವುದಿಲ್ಲ. ಅವರಿಗಾಗಿ ನಾನು ದುಃಖಿಸುವುದೂ ಇಲ್ಲ. ಅವರು ನನ್ನನ್ನು ಕೂಗುವರು, ಆದರೆ ನಾನು ಅವರಿಗೆ ಕಿವಿಗೊಡುವುದಿಲ್ಲ.”


ನಾನು ನಿಮಗೆ ಕರುಣೆ ತೋರಿಸೆನು. ನಿಮಗಾಗಿ ನಾನು ದುಃಖಿಸುವದಿಲ್ಲ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ನಿಮ್ಮನ್ನು ಶಿಕ್ಷಿಸುವೆನು. ಅಂಥಾ ಭಯಂಕರವಾದ ಕೃತ್ಯಗಳನ್ನು ನೀವು ಮಾಡಿದ್ದೀರಿ. ನಿಮ್ಮನ್ನು ದಂಡಿಸಿದಾತನು ಯೆಹೋವನಾದ ನಾನೇ ಎಂಬುದು ಆಗ ನಿಮಗೆ ತಿಳಿಯುವುದು.


ನಿನಗೆ ನಾನು ಇನ್ನು ಕರುಣೆಯನ್ನು ತೋರಿಸೆನು. ನಿನ್ನ ವಿಷಯದಲ್ಲಿ ನಾನು ದುಃಖಿಸುವದಿಲ್ಲ. ನೀನು ಮಾಡಿದ ಕೆಟ್ಟಕಾರ್ಯಗಳಿಗಾಗಿ ನಿನ್ನನ್ನು ಶಿಕ್ಷಿಸುವೆನು. ನೀನು ಅಂಥಾ ಭಯಂಕರ ಕೃತ್ಯಗಳನ್ನು ಮಾಡಿದ್ದೀ. ಈಗ ನಾನೇ ಯೆಹೋವನೆಂದು ನೀನು ತಿಳಿಯುವಿ.”


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಜೆರುಸಲೇಮೇ, ನನ್ನ ಜೀವದಾಣೆ! ನಾನು ನಿನ್ನನ್ನು ಶಿಕ್ಷಿಸುವೆನು. ಯಾಕೆಂದರೆ ನೀನು ನನ್ನ ಪವಿತ್ರ ಸ್ಥಳಕ್ಕೆ ಮಹತ್ವವನ್ನು ಕೊಡಲಿಲ್ಲ. ಅಸಹ್ಯವಾದ ಮತ್ತು ಗಾಬರಿಗೊಳಿಸುವ ನಿನ್ನ ಎಲ್ಲಾ ಕಾರ್ಯಗಳಿಂದ ನೀನು ಅದನ್ನು ಅಶುದ್ಧಗೊಳಿಸಿರುವೆ. ನಾನು ನಿನಗೆ ಕನಿಕರತೋರಿಸದೆ ಶಿಕ್ಷಿಸುವೆನು. ನಿನ್ನ ಮೇಲೆ ನನಗೆ ದಯೆಯಿರದು.


ಅವಳು ಹೇಳಿದಳು, “ಯೆಹೋವನು ಮಾಡಿದ್ದು ನ್ಯಾಯವಾಗಿಯೇ ಇದೆ. ಏಕೆಂದರೆ ನಾನು ಆತನ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಎಲ್ಲಾ ಜನಗಳೇ, ನನ್ನ ಮಾತುಗಳನ್ನು ಕೇಳಿರಿ. ನನ್ನ ವ್ಯಥೆಯನ್ನು ನೋಡಿರಿ. ನನ್ನ ತರುಣತರುಣಿಯರು ಸೆರೆ ಒಯ್ಯಲ್ಪಟ್ಟಿದ್ದಾರೆ.


ಗಂಡಸರನ್ನೂ ಹೆಂಗಸರನ್ನೂ ಸಂಹರಿಸುವದಕ್ಕಾಗಿ ನಾನು ನಿನ್ನನ್ನು ಬಳಸುತ್ತೇನೆ. ವೃದ್ಧರನ್ನೂ ತರುಣರನ್ನೂ ನಾಶಪಡಿಸಲು ನಾನು ನಿನ್ನನ್ನು ಬಳಸುತ್ತೇನೆ. ತರುಣರನ್ನೂ ತರುಣಿಯರನ್ನೂ ಧ್ವಂಸ ಮಾಡಲು ನಾನು ನಿನ್ನನ್ನು ಬಳಸುತ್ತೇನೆ.


“‘ಇದಾದ ಮೇಲೆ ನಾನು ಯೆಹೂದದ ರಾಜನಾದ ಚಿದ್ಕೀಯನನ್ನು ಮತ್ತು ಅಧಿಪತಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುತ್ತೇನೆ. ಜೆರುಸಲೇಮಿನ ಕೆಲವು ಜನರು ಭಯಂಕರವಾದ ರೋಗದಿಂದ ಸಾಯುವುದಿಲ್ಲ; ಕೆಲವು ಜನರು ಖಡ್ಗಗಳಿಗೆ ಆಹುತಿಯಾಗುವದಿಲ್ಲ; ಕೆಲವರು ಹಸಿವಿನಿಂದ ಸಾಯುವುದಿಲ್ಲ. ಅಂಥವರನ್ನು ನಾನು ನೆಬೂಕದ್ನೆಚ್ಚರನಿಗೆ ಕೊಡುತ್ತೇನೆ. ಯೆಹೂದದ ವೈರಿಯು ಗೆಲ್ಲುವಂತೆ ನಾನು ಮಾಡುತ್ತೇನೆ. ನೆಬೂಕದ್ನೆಚ್ಚರನ ಸೈನಿಕರು ಯೆಹೂದ್ಯರನ್ನು ಕೊಲ್ಲಬಯಸುತ್ತಾರೆ. ಆದ್ದರಿಂದ ಯೆಹೂದ ಮತ್ತು ಜೆರುಸಲೇಮಿನ ಜನರು ಖಡ್ಗಗಳಿಗೆ ಬಲಿಯಾಗುವರು. ನೆಬೂಕದ್ನೆಚ್ಚರನು ಸ್ವಲ್ಪವೂ ದಯೆ ತೋರುವದಿಲ್ಲ. ಆ ಜನರ ಸಲುವಾಗಿ ಅವನು ಮರುಗುವದಿಲ್ಲ.’


ಸರ್ವಶಕ್ತನಾದ ಯೆಹೋವನು, “ನಾನು ಕೂಡಲೇ ಅನಾತೋತಿನ ಜನರನ್ನು ದಂಡಿಸುವೆನು. ಅವರ ಯುವಕರೆಲ್ಲ ಯುದ್ಧದಲ್ಲಿ ಮಡಿದು ಹೋಗುವರು. ಅವರ ಗಂಡುಮಕ್ಕಳು ಮತ್ತು ಹೆಣ್ಣುಮಕ್ಕಳು ಹಸಿವಿನಿಂದ ಸತ್ತುಹೋಗುವರು.


ಮೃತ್ಯುವು ಬಂದು ನಮ್ಮ ಕಿಟಕಿಗಳಿಂದ ಇಳಿದಿದೆ. ಮೃತ್ಯುವು ನಮ್ಮ ಅರಮನೆಗಳಲ್ಲಿ ಪ್ರವೇಶ ಮಾಡಿದೆ. ಬೀದಿಯಲ್ಲಿ ಆಡುವ ನಮ್ಮ ಮಕ್ಕಳಿಗೆ ಮೃತ್ಯುವು ಹಿಡಿದುಕೊಂಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಸೇರುವ ನಮ್ಮ ಯುವಕರಿಗೆ ಮೃತ್ಯುವು ಹಿಡಿದುಕೊಂಡಿದೆ.”


ಯೆಹೋವನ ರೋಷವು ನನ್ನಲ್ಲಿ ತುಂಬಿತುಳುಕುತ್ತಿದೆ, ತಡೆದುತಡೆದು ನನಗೆ ಸಾಕಾಗಿದೆ. “ಬೀದಿಯಲ್ಲಾಡುವ ಮಕ್ಕಳ ಮೇಲೆ ಅದನ್ನು ಹೊಯ್ದುಬಿಡಬೇಕು. ಒಂದೆಡೆ ಸೇರುವ ತರುಣರ ಮೇಲೆ ಅದನ್ನು ಹೊಯ್ದುಬಿಡಬೇಕು. ಗಂಡಹೆಂಡತಿಯರಿಬ್ಬರನ್ನು ಅಪಹರಿಸಲಾಗುವುದು. ಮುದುಕರನ್ನೂ ಮುಪ್ಪಿನ ಮುದುಕರನ್ನೂ ಅಪಹರಿಸಲಾಗುವುದು.


ದ್ರಾಕ್ಷಿಬಳ್ಳಿ ಒಣಗಿಹೋಗುವದು. ಅದರ ಕೊಂಬೆಗಳು ಮುರಿದುಬೀಳುವವು. ಹೆಂಗಸರು ಆ ಕೊಂಬೆಗಳನ್ನು ಸೌದೆಯಾಗಿ ಉಪಯೋಗಿಸುವರು. ಜನರು ತಿಳಿದುಕೊಳ್ಳುವದಕ್ಕೆ ಮನಸ್ಸು ಕೊಡುವದಿಲ್ಲ. ಆದ್ದರಿಂದ ಅವರ ನಿರ್ಮಾಣಿಕನಾದ ದೇವರು ಅವರನ್ನು ಸಂತೈಸುವದಿಲ್ಲ. ಅವರ ನಿರ್ಮಾಣಿಕನು ಅವರಿಗೆ ದಯೆ ತೋರುವದಿಲ್ಲ.


ರಾಜಾಜ್ಞೆಯನ್ನು ಹೊತ್ತ ಸಂದೇಶವಾಹಕರು ದೇಶದ ಎಲ್ಲಾ ಕಡೆಗಳಲ್ಲಿ ಹೊತ್ತುಕೊಂಡು ಬಂದರು. ಆ ಪತ್ರದಲ್ಲಿ ಹನ್ನೆರಡನೇ ತಿಂಗಳಿನ ಹದಿಮೂರನೇ ದಿವಸದಂದು ಆಯಾ ಪ್ರಾಂತ್ಯಗಳಲ್ಲಿರುವ ಎಲ್ಲಾ ಯೆಹೂದ್ಯರನ್ನು ಚಿಕ್ಕವರು ದೊಡ್ಡವರು ಎನ್ನದೆ ಕೊಂದು ಅವರ ವಸ್ತುಗಳನ್ನೆಲ್ಲ ಸೂರೆ ಮಾಡಬೇಕೆಂಬದಾಗಿ ಬರೆದಿತ್ತು.


ಈಗ, ನೀನು ಹೋಗಿ ಅಮಾಲೇಕ್ಯರ ವಿರುದ್ಧ ಹೋರಾಡು. ನೀನು ಅಮಾಲೇಕ್ಯರನ್ನೂ ಮತ್ತು ಅವರಿಗೆ ಸೇರಿದ ಎಲ್ಲವನ್ನೂ ನಾಶಗೊಳಿಸಬೇಕು. ಯಾರನ್ನೂ ಜೀವದಿಂದ ಉಳಿಸಬೇಡ, ನೀನು ಎಲ್ಲ ಗಂಡಸರನ್ನು ಮತ್ತು ಹೆಂಗಸರನ್ನು ಕೊಲ್ಲಬೇಕು. ನೀನು ಎಲ್ಲ ಮಕ್ಕಳನ್ನೂ ಎಳೆಕೂಸುಗಳನ್ನೂ ಕೊಲ್ಲಬೇಕು. ನೀನು ಅವರಿಗೆ ಸೇರಿದ ಎಲ್ಲ ಹಸುಗಳನ್ನೂ ಕುರಿಗಳನ್ನೂ ಒಂಟೆಗಳನ್ನೂ ಕತ್ತೆಗಳನ್ನೂ ಕೊಂದುಹಾಕಬೇಕು’” ಎಂದು ಹೇಳಿದನು.


ಅವರು ನಗರದಲ್ಲಿದ್ದ ಎಲ್ಲವನ್ನು ನಾಶಪಡಿಸಿದರು; ಅಲ್ಲಿದ್ದ ತರುಣರನ್ನು, ವೃದ್ಧರನ್ನು, ತರುಣಿಯರನ್ನು, ವೃದ್ಧೆಯರನ್ನು, ದನಕರುಗಳನ್ನು, ಕುರಿಗಳನ್ನು ಮತ್ತು ಕತ್ತೆಗಳನ್ನು ಕೊಂದುಹಾಕಿದರು.


ಅವರು ಮಹಾಕ್ರೂರಿಗಳು. ಅವರು ನಿಮ್ಮಲ್ಲಿರುವ ಮುದುಕರಿಗೆ ಅಥವಾ ಎಳೆಗೂಸುಗಳಿಗೆ ಕರುಣೆ ತೋರಿಸರು.


ರಸ್ತೆಗಳಲ್ಲಿ ಸಿಪಾಯಿಗಳು ಅವರನ್ನು ಕೊಲ್ಲುವರು. ಅವರ ಮನೆಗಳಲ್ಲಿ ಭಯಂಕರ ಸಂಗತಿಗಳು ನಡೆಯುವವು. ಯುವಕಯುವತಿಯರನ್ನೂ ಸಿಪಾಯಿಗಳು ಕೊಲ್ಲುವರು, ಮುದುಕರನ್ನೂ ಎಳೆಗೂಸುಗಳನ್ನೂ ಸಂಹರಿಸುವರು.


ಚೀಯೋನಿಗೆ ಹೋಗುವ ದಾರಿಗಳು ದುಃಖಿಸುತ್ತಿವೆ. ಅವುಗಳು ದುಃಖಿಸುತ್ತಿವೆ; ಏಕೆಂದರೆ ಯಾರೂ ಈಗ ಉತ್ಸವಗಳಿಗಾಗಿ ಚೀಯೋನಿಗೆ ಬರುವದಿಲ್ಲ. ಚೀಯೋನಿನ ಎಲ್ಲ ಹೆಬ್ಬಾಗಿಲುಗಳು ನಿರ್ಜನವಾಗಿವೆ. ಚೀಯೋನಿನ ಎಲ್ಲ ಯಾಜಕರು ನರಳಾಡುತ್ತಿದ್ದಾರೆ. ಚೀಯೋನಿನ ತರುಣಿಯರನ್ನು ತೆಗೆದುಕೊಂಡು ಹೋಗಲಾಗಿದೆ. ಇದೆಲ್ಲ ಚೀಯೋನಿಗೆ ಅತಿ ದುಃಖವನ್ನುಂಟುಮಾಡಿದೆ.


ಆ ಸಮಯದಲ್ಲಿ ಸುಂದರವಾದ ತರುಣತರುಣಿಯರು ದಾಹದಿಂದ ಬಳಲುವರು.


ಮೊದಲನೆ ಹೆರಿಗೆಯ ಸಮಯದಲ್ಲಿ ವೇದನೆಪಡುವ ಹೆಂಗಸಿನ ಸ್ವರದಂತಿರುವ ಒಂದು ಧ್ವನಿಯನ್ನು ನಾನು ಕೇಳಿದೆ, ಇದು ಚೀಯೋನ್ ನಗರಿಯ ಮಗಳ ಕೂಗಾಟ. ಅವಳು ತನ್ನ ಎರಡೂ ಕೈಗಳನ್ನು ಮೇಲಕ್ಕೆ ಎತ್ತಿ ಪ್ರಾರ್ಥಿಸುತ್ತಾ, “ಅಯ್ಯೋ, ನಾನು ಮೂರ್ಛೆ, ಹೋಗುವುದರಲ್ಲಿದ್ದೇನೆ, ನನ್ನ ಸುತ್ತಲೆಲ್ಲ ಕೊಲೆಗಡುಕರಿದ್ದಾರೆ” ಎಂದು ಹೇಳುತ್ತಿದ್ದಾಳೆ.


ಯೆಹೂದದ ಸ್ತ್ರೀಯರೇ, ಯೆಹೋವನ ಸಂದೇಶವನ್ನು ಕೇಳಿರಿ. ಯೆಹೋವನ ಬಾಯಿಂದ ಬರುವ ಮಾತುಗಳನ್ನು ಕೇಳಲು ನಿಮ್ಮ ಕಿವಿಗಳನ್ನು ತೆರೆಯಿರಿ. ಯೆಹೋವನು ಹೇಳುತ್ತಾನೆ, “ಹೇಗೆ ದೊಡ್ಡ ಧ್ವನಿಯಲ್ಲಿ ಅಳಬೇಕೆಂಬುದನ್ನು ನಿಮ್ಮ ಹೆಣ್ಣುಮಕ್ಕಳಿಗೆ ಕಲಿಸಿಕೊಡಿ. ಪ್ರತಿಯೊಬ್ಬ ಸ್ತ್ರೀಯು ಈ ಶೋಕಗೀತೆಯನ್ನು ಹಾಡಲು ಕಲಿಯಬೇಕು.


ಆತನು ಹೇಳಿದ್ದೇನೆಂದರೆ: ಇಸ್ರೇಲ್ ಜನರಿಗೆ ಹೇಳು: ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ‘ಇಗೋ, ನನ್ನ ಪವಿತ್ರಾಲಯವನ್ನು ಹಾಳುಮಾಡುವೆನು. ನೀವು ಆ ಸ್ಥಳದ ಬಗ್ಗೆ ಹೆಮ್ಮೆಯುಳ್ಳವರಾಗಿದ್ದು ಸ್ತುತಿಗೀತೆಗಳನ್ನು ಹಾಡುತ್ತೀರಿ. ಅದು ಶಕ್ತಿ ದೊರಕುವ ಸ್ಥಳ. ನೀವು ಆ ಆಲಯವನ್ನು ನೋಡುತ್ತಾ ಆನಂದಿಸುತ್ತೀರಿ; ಅದನ್ನು ಬಹಳವಾಗಿ ಪ್ರೀತಿಸುತ್ತೀರಿ. ಆದರೆ ನಾನು ಅದನ್ನು ಕೆಡವಿಬಿಡುವೆನು. ನೀವು ಬಿಟ್ಟುಹೋಗುವ ನಿಮ್ಮ ಮಕ್ಕಳು ಯುದ್ಧದಲ್ಲಿ ಸಾಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು