Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 2:7 - ಪರಿಶುದ್ದ ಬೈಬಲ್‌

7 ಯೆಹೋವನು ತನ್ನ ಯಜ್ಞವೇದಿಕೆಯನ್ನು ತಿರಸ್ಕರಿಸಿದ್ದಾನೆ. ಆತನು ತನ್ನ ಪವಿತ್ರಾಲಯವನ್ನು ತಿರಸ್ಕರಿಸಿದ್ದಾನೆ. ಆತನು ಜೆರುಸಲೇಮಿನ ಅರಮನೆಗಳ ಗೋಡೆಗಳನ್ನು ಶತ್ರುಗಳ ವಶಮಾಡಿದ್ದಾನೆ. ವೈರಿಗಳು ಯೆಹೋವನ ಪವಿತ್ರ ಆಲಯದಲ್ಲಿ ಗದ್ದಲವನ್ನು ಮಾಡಿದರು. ಅವರು ಉತ್ಸವದ ದಿನದಂತೆ ಗದ್ದಲವನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಕರ್ತನು ತನ್ನ ಯಜ್ಞವೇದಿಯನ್ನು ತಿರಸ್ಕರಿಸಿ, ತನ್ನ ಪವಿತ್ರಾಲಯಕ್ಕೆ ಅಸಹ್ಯಪಟ್ಟು, ಚೀಯೋನಿನ ಅರಮನೆಗಳ ಗೋಡೆಗಳನ್ನು ಶತ್ರು ವಶಮಾಡಿದ್ದಾನೆ; ಉತ್ಸವದಿನದಲ್ಲಿ ಘೋಷಿಸುವಂತೆ ಶತ್ರುಗಳು ಯೆಹೋವನ ಮಂದಿರದಲ್ಲಿ ಜಯಘೋಷವೆತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸ್ವಾಮಿ ತಿರಸ್ಕರಿಸಿಬಿಟ್ಟಿದ್ದಾನೆ ತನ್ನ ಬಲಿಪೀಠವನ್ನೇ ಅಸಹ್ಯಗೊಂಡು ತೊರೆದುಬಿಟ್ಟಿದ್ದಾನೆ ತನ್ನ ಪವಿತ್ರಸ್ಥಾನವನ್ನೇ ಸಿಯೋನ್ ಅರಮನೆಯ ಗೋಡೆಗಳನ್ನು ಕೆಡವಲು ಬಿಟ್ಟಿದ್ದಾನೆ ಹಗೆಗಳನ್ನೇ. ಹಬ್ಬಹರಿದಿನಗಳ ಜಯಘೋಷವೋ ಎಂಬಂತೆ ಘೋಷಣೆ ಹಾಕುತ್ತಿದ್ದಾರಲ್ಲಾ ಶತ್ರುಗಳು ಸರ್ವೇಶ್ವರನ ಮಂದಿರದಲ್ಲೆ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಕರ್ತನು ತನ್ನ ಯಜ್ಞವೇದಿಯನ್ನು ತಿರಸ್ಕರಿಸಿ ತನ್ನ ಪವಿತ್ರಾಲಯಕ್ಕೆ ಅಸಹ್ಯಪಟ್ಟು ಚೀಯೋನಿನ ಅರಮನೆಗಳ ಗೋಡೆಗಳನ್ನು ಶತ್ರು ವಶಮಾಡಿದ್ದಾನೆ; ಉತ್ಸವದಿನದಲ್ಲಿ ಘೋಷಿಸುವಂತೆ ಶತ್ರುಗಳು ಯೆಹೋವನ ಮಂದಿರದಲ್ಲಿ ಜಯಘೋಷವೆತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಕರ್ತದೇವರು ತನ್ನ ಬಲಿಪೀಠವನ್ನು ತಳ್ಳಿಬಿಟ್ಟಿದ್ದಾರೆ. ತನ್ನ ಪರಿಶುದ್ಧ ಸ್ಥಳವನ್ನು ಅಸಹ್ಯ ಪಡಿಸಿದ್ದಾನೆ. ಆತನು ಅವಳ ಅರಮನೆಗಳ ಗೋಡೆಗಳನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ. ಪರಿಶುದ್ಧ ಹಬ್ಬದ ದಿನದಲ್ಲಿ ಮಾಡಿದ ಹಾಗೆ, ಅವರು ಯೆಹೋವ ದೇವರು ಆಲಯದಲ್ಲಿ ಶಬ್ದ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 2:7
31 ತಿಳಿವುಗಳ ಹೋಲಿಕೆ  

ಆತನು ಹೇಳಿದ್ದೇನೆಂದರೆ: ಇಸ್ರೇಲ್ ಜನರಿಗೆ ಹೇಳು: ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ‘ಇಗೋ, ನನ್ನ ಪವಿತ್ರಾಲಯವನ್ನು ಹಾಳುಮಾಡುವೆನು. ನೀವು ಆ ಸ್ಥಳದ ಬಗ್ಗೆ ಹೆಮ್ಮೆಯುಳ್ಳವರಾಗಿದ್ದು ಸ್ತುತಿಗೀತೆಗಳನ್ನು ಹಾಡುತ್ತೀರಿ. ಅದು ಶಕ್ತಿ ದೊರಕುವ ಸ್ಥಳ. ನೀವು ಆ ಆಲಯವನ್ನು ನೋಡುತ್ತಾ ಆನಂದಿಸುತ್ತೀರಿ; ಅದನ್ನು ಬಹಳವಾಗಿ ಪ್ರೀತಿಸುತ್ತೀರಿ. ಆದರೆ ನಾನು ಅದನ್ನು ಕೆಡವಿಬಿಡುವೆನು. ನೀವು ಬಿಟ್ಟುಹೋಗುವ ನಿಮ್ಮ ಮಕ್ಕಳು ಯುದ್ಧದಲ್ಲಿ ಸಾಯುವರು.


ಆದ್ದರಿಂದ ನಾನು ಯೆಹೂದದಲ್ಲಿ ಬೆಂಕಿಯನ್ನು ಹಚ್ಚುವೆನು; ಆ ಬೆಂಕಿಯು ಜೆರುಸಲೇಮಿನ ಉನ್ನತ ಬುರುಜುಗಳನ್ನು ನಾಶಮಾಡುವದು.”


ನೆಬೂಜರದಾನನು ಯೆಹೋವನ ಆಲಯವನ್ನು ಸುಟ್ಟನು. ಅವನು ಜೆರುಸಲೇಮಿನಲ್ಲಿದ್ದ ಅರಮನೆಯನ್ನು ಮತ್ತು ಉಳಿದೆಲ್ಲ ಮನೆಗಳನ್ನು ಸುಟ್ಟುಬಿಟ್ಟನು. ಅವನು ಜೆರುಸಲೇಮಿನ ಎಲ್ಲಾ ಮುಖ್ಯ ಕಟ್ಟಡಗಳನ್ನು ಸುಟ್ಟುಹಾಕಿದನು.


ಆಗ ಯೇಸು “ಈ ಕಟ್ಟಡಗಳನ್ನೆಲ್ಲ ನೋಡುತ್ತಿದ್ದೀರಾ? ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಇವುಗಳೆಲ್ಲಾ ನಾಶವಾಗುತ್ತವೆ. ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದಂತೆ ಎಲ್ಲಾ ಕಲ್ಲುಗಳು ಕೆಡವಲ್ಪಡುತ್ತವೆ” ಎಂದು ಹೇಳಿದನು.


ನಾಯಕರೇ, ನಿಮ್ಮಿಂದಾಗಿ ಚೀಯೋನ್ ನಾಶವಾಗುವದು. ನೇಗಿಲಿನಿಂದ ಉತ್ತಲ್ಪಟ್ಟ ಹೊಲದಂತೆ ಅದು ಇರುವದು. ಜೆರುಸಲೇಮ್ ಕಲ್ಲಿನ ರಾಶಿಯಾಗುವದು. ಆಲಯದ ಗುಡ್ಡವು ಬರಿದಾದ ಬೆಟ್ಟವಾಗುವುದು. ಅದರ ಮೇಲೆ ಪೊದೆಗಳು ಹುಲುಸಾಗಿ ಬೆಳೆದುಕೊಳ್ಳುವವು.


ಇಸ್ರೇಲ್ ಜನರ ಮನೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಅತೀ ದುಷ್ಟ ಜನಾಂಗಗಳನ್ನು ಬರಮಾಡುವೆನು. ನಾನು ಗರ್ವಿಷ್ಠರ ಸೊಕ್ಕನ್ನು ಮುರಿಯುವೆನು; ಅವರ ಆರಾಧನೆಯ ಸ್ಥಳಗಳು ಅಪರಿಶುದ್ಧಗೊಳ್ಳುವವು.


ಆತನು ಒಬ್ಬ ಶತ್ರುವಿನಂತಾಗಿದ್ದಾನೆ. ಆತನು ಇಸ್ರೇಲನ್ನು ನಾಶಮಾಡಿದನು. ಆತನು ಅವಳ ಎಲ್ಲ ಅರಮನೆಗಳನ್ನು ನುಂಗಿಬಿಟ್ಟನು. ಆತನು ಅವಳ ಎಲ್ಲ ಕೋಟೆಗಳನ್ನು ನುಂಗಿಬಿಟ್ಟನು. ಯೆಹೂದ ಜನಾಂಗದಲ್ಲಿ ಆತನು ಹೆಚ್ಚಿನ ದುಃಖವನ್ನು ಉಂಟುಮಾಡಿ ಶೋಕವನ್ನು ಹರಡಿದ್ದಾನೆ.


ಕೋಪೋದ್ರಿಕ್ತನಾದ ಯೆಹೋವನು ಚೀಯೋನಿನ ಮಗಳ ಮೇಲೆ ಹೇಗೆ ಕಾರ್ಮೋಡಗಳು ಕವಿಯುವಂತೆ ಮಾಡಿದ್ದಾನೆ ನೋಡಿರಿ. ಆತನು ಇಸ್ರೇಲಿನ ವೈಭವವನ್ನು ಆಕಾಶದಿಂದ ಭೂಮಿಗೆ ಎಸೆದಿದ್ದಾನೆ. ಯೆಹೋವನಿಗೆ ಕೋಪ ಬಂದಾಗ ಆತನು ಇಸ್ರೇಲ್ ತನ್ನ ಪಾದಪೀಠವೆಂಬುದನ್ನು ಗಮನಕ್ಕೆ ತಂದುಕೊಳ್ಳಲಿಲ್ಲ.


ಬಾಬಿಲೋನಿನ ಸೈನಿಕರು ಅರಮನೆಗೂ ಮತ್ತು ಜೆರುಸಲೇಮಿನ ಉಳಿದ ನಿವಾಸಿಗಳ ಮನೆಗಳಿಗೂ ಬೆಂಕಿಯಿಟ್ಟರು. ಜೆರುಸಲೇಮಿನ ಗೋಡೆಗಳನ್ನು ಕೆಡವಿದರು.


ಬಾಬಿಲೋನಿನ ಸೈನ್ಯವು ಈಗಾಗಲೇ ಜೆರುಸಲೇಮ್ ನಗರದ ಮೇಲೆ ಧಾಳಿ ಮಾಡುತ್ತಿದೆ. ಸೈನಿಕರು ಬೇಗನೆ ನಗರವನ್ನು ಪ್ರವೇಶಿಸಿ ಅದಕ್ಕೆ ಬೆಂಕಿಹಚ್ಚಿ ಸುಟ್ಟುಹಾಕುವರು. ಜೆರುಸಲೇಮಿನ ಜನರು ತಮ್ಮ ಮನೆಯ ಮಾಳಿಗೆಯ ಮೇಲೆ ಸುಳ್ಳುದೇವರಾದ ಬಾಳನಿಗೆ ನೈವೇದ್ಯವನ್ನು ಅರ್ಪಿಸಿ ನಾನು ಕೋಪಿಸಿಕೊಳ್ಳುವಂತೆ ಮಾಡಿದ ಕೆಲವು ಮನೆಗಳು ಈ ನಗರದಲ್ಲಿವೆ. ಅದಲ್ಲದೆ ಕೆಲವು ಜನರು ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸಿರುವರು. ಬಾಬಿಲೋನಿನ ಸೈನ್ಯವು ಆ ಮನೆಗಳನ್ನು ಸುಟ್ಟುಹಾಕುವುದು.


ಹೀಗೆ ಹೇಳಿದರು, “ಪ್ರವಾದಿಯಾದ ಮೀಕಾಯನು ಮೋರೆಷೆತ್ ನಗರದವನಾಗಿದ್ದನು. ಹಿಜ್ಕೀಯನು ಯೆಹೂದದ ರಾಜನಾಗಿದ್ದ ಕಾಲದಲ್ಲಿ ಮೀಕಾಯನು ಪ್ರವಾದಿಯಾಗಿದ್ದನು. ಯೆಹೂದದ ಸಮಸ್ತ ಜನರಿಗೆ ಮೀಕಾಯನು ಹೀಗೆ ಹೇಳಿದನು: ‘ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ‘ಚೀಯೋನ್ ನಗರವು ನೇಗಿಲುಹೊಡೆದ ಹೊಲವಾಗುವುದು. ಜೆರುಸಲೇಮ್ ನಗರವು ಕಲ್ಲಿನ ದಿಬ್ಬವಾಗುವುದು. ಪವಿತ್ರ ಆಲಯವಿದ್ದ ಪರ್ವತವು ಮರಗಿಡಗಳಿಂದ ಮುಚ್ಚಿಹೋಗುವುದು.’


ನೀವು ನನ್ನ ಆಜ್ಞಾಪಾಲನೆ ಮಾಡದಿದ್ದರೆ ಜೆರುಸಲೇಮಿನ ನನ್ನ ಈ ಆಲಯಕ್ಕೆ ಶಿಲೋವಿನ ನನ್ನ ಪವಿತ್ರವಾದ ಗುಡಾರದ ಗತಿಯನ್ನು ತರುತ್ತೇನೆ. ಜಗತ್ತಿನ ಜನರು ಬೇರೆ ನಗರಗಳಿಗೆ ದುರ್ಗತಿ ಬರಲಿ ಎಂದು ಕೇಳಿಕೊಳ್ಳುವಾಗ ಜೆರುಸಲೇಮನ್ನು ಜ್ಞಾಪಿಸಿಕೊಳ್ಳುವರು.’”


ನೆಬೂಕದ್ನೆಚ್ಚರನು ಮತ್ತು ಅವನ ಸೈನಿಕರು ದೇವಾಲಯವನ್ನು ಸುಟ್ಟುಹಾಕಿದರು; ಜೆರುಸಲೇಮ್ ಪಟ್ಟಣದ ಪೌಳಿಗೋಡೆಯನ್ನು ಕೆಡವಿಹಾಕಿದರು; ಅರಸನ ಮತ್ತು ಅವನ ಪರಿವಾರದವರ ಮನೆಗಳನ್ನೆಲ್ಲಾ ಸುಟ್ಟುಹಾಕಿದರು. ಜೆರುಸಲೇಮಿನಲ್ಲಿದ್ದ ಬೆಲೆಬಾಳುವ ವಸ್ತುಗಳನ್ನೆಲ್ಲಾ ದೋಚಿದರು ಮತ್ತು ಸುಟ್ಟುಹಾಕಿದರು;


ಅವರು ನಿಜವಾಗಿ ಪಾಪಮಾಡಿದ್ದರೂ ಸಹಾಯಕ್ಕಾಗಿ ಅವರು ನನ್ನ ಬಳಿಗೆ ಬಂದರೆ ನಾನು ಅವರಿಗೆ ವಿಮುಖನಾಗುವುದಿಲ್ಲ. ಅವರು ತಮ್ಮ ಶತ್ರುಗಳ ದೇಶದಲ್ಲಿದ್ದರೂ ನಾನು ಅವರಿಗೆ ಕಿವಿಗೊಡುವೆನು. ಅವರನ್ನು ಸಂಪೂರ್ಣವಾಗಿ ನಾಶಮಾಡುವುದಿಲ್ಲ. ಅವರೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಮರೆಯುವುದಿಲ್ಲ. ಯಾಕೆಂದರೆ ನಾನೇ ಅವರ ದೇವರಾದ ಯೆಹೋವನು!


ನಾನು ನಿಮ್ಮ ಪಟ್ಟಣಗಳನ್ನು ನಾಶಮಾಡುವೆ. ನಿಮ್ಮ ಪವಿತ್ರಸ್ಥಳಗಳನ್ನು ಬರಿದುಮಾಡುವೆ. ನಿಮ್ಮ ಯಜ್ಞಗಳ ಸುವಾಸನೆಯನ್ನು ನಾನು ಮೂಸಿ ನೋಡುವುದಿಲ್ಲ.


ನೀನು ನಿನ್ನ ಒಡಂಬಡಿಕೆಯನ್ನು ತಿರಸ್ಕರಿಸಿ ಅವನ ಕಿರೀಟವನ್ನು ನೆಲದ ಮೇಲೆ ಎಸೆದುಬಿಟ್ಟೆ.


ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, ‘ನಿಮ್ಮ ಕೈಯಲ್ಲಿ ಯುದ್ಧದ ಆಯುಧಗಳಿವೆ. ಆ ಆಯುಧಗಳನ್ನು ನೀವು ನಿಮ್ಮ ರಕ್ಷಣೆಗಾಗಿಯೂ ಬಾಬಿಲೋನಿನ ರಾಜನ ವಿರುದ್ಧವಾಗಿಯೂ ಮತ್ತು ಬಾಬಿಲೋನಿನ ಜನರ ವಿರುದ್ಧವಾಗಿಯೂ ಬಳಸುತ್ತಿದ್ದೀರಿ. ಆದರೆ ನಾನು ಆ ಆಯುಧಗಳನ್ನು ವಿಫಲಗೊಳಿಸುತ್ತೇನೆ. “‘ಬಾಬಿಲೋನಿನ ಸೈನ್ಯವು ನಗರದ ಸುತ್ತಲಿನ ಪೌಳಿಗೋಡೆಯ ಬಳಿಯಿದೆ. ತಕ್ಷಣವೇ ನಾನು ಆ ಸೈನ್ಯವನ್ನು ಜೆರುಸಲೇಮಿನ ಒಳಗಡೆ ತರುತ್ತೇನೆ.


ಬಾಬಿಲೋನಿನ ಜನರು ಓಡಿಹೋಗುತ್ತಿದ್ದಾರೆ. ಅವರು ಆ ದೇಶದಿಂದ ತಪ್ಪಿಸಿಕೊಂಡು ಓಡಿಹೋಗುತ್ತಿದ್ದಾರೆ. ಆ ಜನರು ಚೀಯೋನಿಗೆ ಬಂದು ಬಾಬಿಲೋನಿನಲ್ಲಿ ಯೆಹೋವನು ಮಾಡುತ್ತಿದ್ದ ವಿನಾಶದ ಬಗ್ಗೆ ಎಲ್ಲರಿಗೂ ಹೇಳುತ್ತಿದ್ದಾರೆ. ಯೆಹೋವನು ಬಾಬಿಲೋನಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಿರುವದರ ಬಗ್ಗೆ ಹೇಳುತ್ತಿದ್ದಾರೆ. ಬಾಬಿಲೋನ್ ಯೆಹೋವನ ಆಲಯವನ್ನು ನಾಶಮಾಡಿತು. ಆದ್ದರಿಂದ ಈಗ ಯೆಹೋವನು ಬಾಬಿಲೋನನ್ನು ನಾಶಮಾಡುತ್ತಿದ್ದಾನೆ ಎಂದು ಹೇಳುತ್ತಿದ್ದಾರೆ.


ಚೀಯೋನಿಗೆ ಹೋಗುವ ದಾರಿಗಳು ದುಃಖಿಸುತ್ತಿವೆ. ಅವುಗಳು ದುಃಖಿಸುತ್ತಿವೆ; ಏಕೆಂದರೆ ಯಾರೂ ಈಗ ಉತ್ಸವಗಳಿಗಾಗಿ ಚೀಯೋನಿಗೆ ಬರುವದಿಲ್ಲ. ಚೀಯೋನಿನ ಎಲ್ಲ ಹೆಬ್ಬಾಗಿಲುಗಳು ನಿರ್ಜನವಾಗಿವೆ. ಚೀಯೋನಿನ ಎಲ್ಲ ಯಾಜಕರು ನರಳಾಡುತ್ತಿದ್ದಾರೆ. ಚೀಯೋನಿನ ತರುಣಿಯರನ್ನು ತೆಗೆದುಕೊಂಡು ಹೋಗಲಾಗಿದೆ. ಇದೆಲ್ಲ ಚೀಯೋನಿಗೆ ಅತಿ ದುಃಖವನ್ನುಂಟುಮಾಡಿದೆ.


ನೆಬೂಜರದಾನನು ದೇವಾಲಯವನ್ನೂ ರಾಜನ ಅರಮನೆಯನ್ನೂ ಜೆರುಸಲೇಮಿನಲ್ಲಿದ್ದ ಮನೆಗಳನ್ನೆಲ್ಲಾ ಸುಟ್ಟುಹಾಕಿದನು. ಅವನು ಮಹಾಸೌಧಗಳನ್ನು ನಾಶಗೊಳಿಸಿದನು.


ಯೆಹೋವನೇ, ನಮ್ಮ ಮೇಲೆ ಸಿಟ್ಟಿನಿಂದಲೇ ಇರಬೇಡ. ನಮ್ಮ ಪಾಪಗಳನ್ನು ನಿನ್ನ ನೆನಪಿನಲ್ಲಿಟ್ಟುಕೊಂಡೇ ಇರಬೇಡ. ದಯಮಾಡಿ ನಮ್ಮ ಕಡೆಗೆ ನೋಡು. ನಾವು ನಿನ್ನ ಜನರೇ.


ನಾನು ನೋಡಿದಾಗ ಫಲವತ್ತಾದ ಭೂಮಿಯು ಮರಳುಗಾಡಾಗಿತ್ತು. ಆ ಪ್ರದೇಶದ ಎಲ್ಲಾ ನಗರಗಳು ಹಾಳಾಗಿ ಹೋಗಿದ್ದವು. ಯೆಹೋವನು ತನ್ನ ಭಯಂಕರವಾದ ಕೋಪದಿಂದ ಇದನ್ನು ಮಾಡಿದನು.


ಯೆಹೋವನು ಹೀಗೆ ಹೇಳುತ್ತಾನೆ: “ಇಡೀ ದೇಶವು ಹಾಳಾಗುವುದು. ಆದರೆ ನಾನು ಭೂಮಿಯನ್ನು ಸಂಪೂರ್ಣವಾಗಿ ನಾಶಮಾಡುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು