Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 2:8 - ಪರಿಶುದ್ದ ಬೈಬಲ್‌

8 ಯೆಹೋವನು ಚೀಯೋನ್ ಕುಮಾರಿಯ ಪೌಳಿಗೋಡೆಯನ್ನು ನಾಶಮಾಡಬೇಕೆಂದು ಯೋಚಿಸಿದ್ದಾನೆ. ಆತನು ಅಳತೆದಾರದಿಂದ ಒಡೆಯಬೇಕಾದ ಗೋಡೆಗೆ ಗುರುತು ಮಾಡಿದ್ದಾನೆ. ಆತನು ತಾನು ಮಾಡುತ್ತಿದ್ದ ನಾಶನವನ್ನು ನಿಲ್ಲಿಸಲಿಲ್ಲ. ಪೌಳಿಗೋಡೆಗಳು ಮತ್ತು ಗೋಪುರಗಳು ದುಃಖದಿಂದ ಗೋಳಾಡುವಂತೆ ಆತನು ಮಾಡಿದ್ದಾನೆ. ಅವೆರಡೂ ಕುಸಿದುಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನು ಚೀಯೋನ್ ನಗರಿಯ ಕೋಟೆಯನ್ನು ನಾಶಪಡಿಸಬೇಕೆಂದು ನೂಲನ್ನು ಎಳೆದಿದ್ದಾನೆ; ಹಾಳು ಮಾಡುತ್ತಿರುವ ತನ್ನ ಕೈಯನ್ನು ಹಿಂದೆಗೆಯದೆ ಪೌಳಿಗೋಡೆಯೂ ಮತ್ತು ಕೋಟೆಯೂ ಮೊರೆಯುವಂತೆ ಮಾಡಿದ್ದಾನೆ; ಅವೆರಡೂ ಕುಸಿದುಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸಿಯೋನ್ ನಗರಿಯ ಕೋಟೆಯನ್ನು ನಾಶಪಡಿಸಲೆಂದು ಎಳೆದಿರುವನಲ್ಲಾ ಸರ್ವೇಶ್ವರ ಅಳತೆನೂಲನ್ನು ! ಹಾಳುಮಾಡುವ ತನ್ನ ಕೈಯನ್ನು ಹಿಂದೆಗೆಯದೆ ಬಿರುಕುಗೊಳಿಸಿದ್ದಾನೆ ಪೌಳಿಗೋಡೆಯನ್ನೇ, ಕೋಟೆಯನ್ನೇ, ಅವುಗಳೆರಡೂ, ಕುಸಿದು ಬಿದ್ದುಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನು ಚೀಯೋನ್ ನಗರಿಯ ಕೋಟೆಯನ್ನು ನಾಶಪಡಿಸಬೇಕೆಂದು ನೂಲನ್ನು ಎಳೆದಿದ್ದಾನೆ; ಹಾಳುಮಾಡುತ್ತಿರುವ ತನ್ನ ಕೈಯನ್ನು ಹಿಂದೆಗೆಯದೆ ಪೌಳಿಗೋಡೆಯೂ ಕೋಟೆಯೂ ಮೊರೆಯುವಂತೆ ಮಾಡಿದ್ದಾನೆ; ಅವೆರಡೂ ಕುಸಿದುಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರು ಚೀಯೋನಿನ ಗೋಡೆಯನ್ನು ನಾಶಮಾಡಬೇಕೆಂದು ಉದ್ದೇಶಿಸಿದ್ದಾರೆ. ಅಳತೆಯ ಗೆರೆಯನ್ನು ಎಳೆದಿದ್ದಾರೆ. ತನ್ನ ಕೈಯನ್ನು ಕೆಡಿಸುವುದರಿಂದ ಹಿಂದೆಗೆಯಲಿಲ್ಲ. ಆದ್ದರಿಂದ ಕಲ್ಲಿನ ಪ್ರಾಕಾರವನ್ನು ಮತ್ತು ಗೋಡೆಯನ್ನು ಗೋಳಾಡುವಂತೆ ಆತನು ಮಾಡಿದ್ದಾನೆ. ಅವೆರಡೂ ಜೊತೆಯಾಗಿ ಕುಸಿದು ಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 2:8
17 ತಿಳಿವುಗಳ ಹೋಲಿಕೆ  

ನಾನು ಸಮಾರ್ಯದ ಮೇಲೆ ಚಾಚಿದ ಮಟ್ಟಗೋಲನ್ನೂ ಅಹಾಬನ ಕುಟುಂಬದ ಮೇಲಿಟ್ಟ ತೂಕದ ಗುಂಡನ್ನೂ ಜೆರುಸಲೇಮಿನ ಮೇಲೆ ಚಾಚುತ್ತೇನೆ. ಒಬ್ಬನು ಒಂದು ಪಾತ್ರೆಯನ್ನು ಒರೆಸಿ, ಅದನ್ನು ಕೆಳಮುಖವಾಗಿ ತಿರುಗಿಸುವಂತೆ ನಾನು ಜೆರುಸಲೇಮಿಗೆ ಮಾಡುತ್ತೇನೆ.


“ಯೆಹೂದ ಜನಾಂಗವು ಸತ್ತುಹೋದವರಿಗಾಗಿ ಗೋಳಾಡುವುದು. ಯೆಹೂದದ ನಗರಗಳಲ್ಲಿದ್ದ ಜನರು ದಿನೇದಿನೇ ನಿಬರ್ಲರಾಗುತ್ತಾರೆ. ಆ ಜನರು ನೆಲದ ಮೇಲೆ ಬಿದ್ದು ಬಿಡುತ್ತಾರೆ. ಜೆರುಸಲೇಮ್ ನಗರದಿಂದ ಜನರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಡುತ್ತಾರೆ.


ಪಕ್ಷಿಗಳು ಮತ್ತು ಚಿಕ್ಕಪ್ರಾಣಿಗಳೂ ಅದರಲ್ಲಿ ವಾಸಿಸುವವು. ಗೂಬೆಗಳೂ ಕಾಗೆಗಳೂ ಅಲ್ಲಿ ವಾಸಿಸುವವು. ಅದು “ಬೆಂಗಾಡಿನ ಮರುಭೂಮಿ” ಎಂದು ಕರೆಯಲ್ಪಡುವದು.


ನಗರದ ಹೆಬ್ಬಾಗಿಲ ಬಳಿಯಲ್ಲಿ ಜನರು ಸೇರಿ ಬರುವಾಗ ರೋಧನವೂ ಶೋಕವೂ ಇರುತ್ತವೆ. ಇದ್ದುದನ್ನೆಲ್ಲಾ ಕಳೆದುಕೊಂಡ ಸ್ತ್ರೀಯಂತೆ ಜೆರುಸಲೇಮು ಸರ್ವವನ್ನೂ ಕಳೆದುಕೊಂಡು ನೆಲದ ಮೇಲೆ ಕುಳಿತು ರೋಧಿಸುವಳು.


“ಯೆಹೂದದ ದ್ರಾಕ್ಷಿಯ ಸಾಲುಬಳ್ಳಿಗಳ ಬಳಿಗೆ ಹೋಗಿರಿ, ಆ ಬಳ್ಳಿಗಳನ್ನು ಕತ್ತರಿಸಿರಿ. ಆದರೆ ಅವುಗಳನ್ನು ಸಂಪೂರ್ಣವಾಗಿ ನಾಶಮಾಡಬೇಡಿರಿ. ಅವುಗಳ ಎಲ್ಲಾ ಕೊಂಬೆಗಳನ್ನು ಕತ್ತರಿಸಿಬಿಡಿ. ಏಕೆಂದರೆ, ಈ ಕೊಂಬೆಗಳು ಯೆಹೋವನಿಗೆ ಸಂಬಂಧಿಸಿಲ್ಲ.


ಆದರೆ ನಾನು ನನ್ನನ್ನು ಹಾಗೆ ಮಾಡದಂತೆ ತಡೆದೆನು. ಇಸ್ರೇಲರನ್ನು ಈಜಿಪ್ಟಿನಿಂದ ಹೊರತರುವದನ್ನು ಬೇರೆ ಜನಾಂಗದವರು ನೋಡಿರುತ್ತಾರೆ. ಆದ್ದರಿಂದ ನಾನು ಅವರನ್ನು ನಾಶಮಾಡಲಿಲ್ಲ. ನನ್ನ ಹೆಸರಿನ ಘನತೆಯನ್ನು ಉಳಿಸಿಕೊಂಡೆನು.


ಯೆಹೋವನು ತಾನು ನಿಯೋಜಿಸಿದಂತೆ ಮಾಡಿದನು. ತಾನು ಮಾಡುತ್ತೇನೆಂದು ಹೇಳಿದ್ದನ್ನು ಆತನು ಮಾಡಿದ್ದಾನೆ. ಪುರಾತನ ಕಾಲದಿಂದ ತಾನು ವಿಧಿಸಿದ್ದನ್ನು ಆತನು ಮಾಡಿದ್ದಾನೆ. ಆತನು ನಿಷ್ಕರುಣೆಯಿಂದ ನಾಶಮಾಡಿದ್ದಾನೆ. ನಿನಗೆ ಸಂಭವಿಸಿದವುಗಳ ಮೂಲಕವಾಗಿ ಆತನು ನಿನ್ನ ವೈರಿಗಳನ್ನು ಸಂತೋಷಪಡಿಸಿದ್ದಾನೆ. ಆತನು ನಿನ್ನ ವೈರಿಗಳ ಸಾಮರ್ಥ್ಯವನ್ನು ಹೆಚ್ಚಿಸಿದ್ದಾನೆ.


ಆತನು ಒಬ್ಬ ಶತ್ರುವಿನಂತಾಗಿದ್ದಾನೆ. ಆತನು ಇಸ್ರೇಲನ್ನು ನಾಶಮಾಡಿದನು. ಆತನು ಅವಳ ಎಲ್ಲ ಅರಮನೆಗಳನ್ನು ನುಂಗಿಬಿಟ್ಟನು. ಆತನು ಅವಳ ಎಲ್ಲ ಕೋಟೆಗಳನ್ನು ನುಂಗಿಬಿಟ್ಟನು. ಯೆಹೂದ ಜನಾಂಗದಲ್ಲಿ ಆತನು ಹೆಚ್ಚಿನ ದುಃಖವನ್ನು ಉಂಟುಮಾಡಿ ಶೋಕವನ್ನು ಹರಡಿದ್ದಾನೆ.


ಯೆಹೋವನು ಯಾಕೋಬನ ಮನೆಗಳನ್ನು ನಾಶಪಡಿಸಿದನು. ಆತನು ಕನಿಕರವಿಲ್ಲದೆ ಅವುಗಳನ್ನು ನುಂಗಿಬಿಟ್ಟನು. ತನ್ನ ಕೋಪದಲ್ಲಿ ಆತನು ಯೆಹೂದದ ಮಗಳ ಕೋಟೆಗಳನ್ನು ನಾಶಪಡಿಸಿದನು. ಯೆಹೋವನು ಯೆಹೂದ ರಾಜ್ಯವನ್ನೂ ಮತ್ತು ಅದರ ಅಧಿಪತಿಗಳನ್ನೂ ನೆಲಕ್ಕೆ ಅಪ್ಪಳಿಸಿದನು. ಆತನು ಯೆಹೂದ ರಾಜ್ಯಕ್ಕೆ ಅವಮಾನ ಮಾಡಿದ್ದಾನೆ.


“ಗೋಡೆಯು ನೆಟ್ಟಗಿದೆಯೆಂದು ನೋಡಲು ಜನರು ಗುಂಡನ್ನೂ ನೂಲನ್ನೂ ಉಪಯೋಗಿಸುತ್ತಾರೆ. ಅದೇ ರೀತಿಯಲ್ಲಿ ನಾನು ನ್ಯಾಯವನ್ನು ನೂಲನ್ನಾಗಿಯೂ ಕರುಣೆಯನ್ನು ಗುಂಡನ್ನಾಗಿಯೂ ಉಪಯೋಗಿಸುವೆನು. ನೀವು ದುಷ್ಟಜನರು. ನೀವು ನಿಮ್ಮ ಸುಳ್ಳುಮೋಸಗಳ ಹಿಂದೆ ಅವಿತುಕೊಳ್ಳುತ್ತಿದ್ದೀರಿ. ಆದರೆ ನೀವು ಶಿಕ್ಷಿಸಲ್ಪಡುವಿರಿ. ನೀವು ಅಡಗಿಕೊಂಡಿರುವ ಸ್ಥಳವನ್ನು ನಾಶಮಾಡುವ ಬಿರುಗಾಳಿಯಂತೆಯೂ ಪ್ರವಾಹದಂತೆಯೂ ಅದಿರುವುದು.


“ನಾನೀಗ ನನ್ನ ದ್ರಾಕ್ಷಿತೋಟಕ್ಕೆ ಏನು ಮಾಡುವೆನೆಂದು ತಿಳಿಸುವೆನು: ಅದರ ಸುತ್ತಲೂ ರಕ್ಷಣೆಗಾಗಿ ಹಾಕಿದ್ದ ಮುಳ್ಳಿನ ಬೇಲಿಯನ್ನು ಕಿತ್ತು ಸುಟ್ಟುಬಿಡುವೆನು. ಅದರ ಕಲ್ಲಿನ ಗೋಡೆಯನ್ನು ಕೆಡವಿ ತುಳಿದಾಟಕ್ಕೆ ಈಡುಮಾಡುವೆನು.


ನನ್ನ ಮೇಲೆತ್ತಿರುವ ನಿನ್ನ ಕೈಯಿಂದ ನನ್ನನ್ನು ದಂಡಿಸಬೇಡ, ಭಯಾನಕವಾದವುಗಳಿಂದ ನನ್ನನ್ನು ಹೆದರಿಸಬೇಡ.


ಮೋವಾಬಿನ ಜನರನ್ನು ಸಹ ದಾವೀದನು ಸೋಲಿಸಿದನು. ಅವರನ್ನು ನೆಲದ ಮೇಲೆ ಬಲವಂತದಿಂದ ಮಲಗಿಸಿ ಹಗ್ಗದಿಂದ ಅವರನ್ನು ಸಾಲುಸಾಲಾಗಿ ವಿಂಗಡಿಸಿದನು. ಎರಡು ಸಾಲಿನ ಗಂಡಸರನ್ನು ಕೊಲ್ಲಿಸಿದನು; ಆದರೆ ಮೂರನೆಯ ಸಾಲಿನ ಗಂಡಸರನ್ನು ಜೀವಂತವಾಗಿ ಉಳಿಸಿದನು. ಮೋವಾಬಿನ ಜನರು ದಾವೀದನ ಸೇವಕರಾದರು. ಅವರು ಅವನಿಗೆ ಕಪ್ಪಕಾಣಿಕೆಗಳನ್ನು ಅರ್ಪಿಸಿದರು.


ಜೆರುಸಲೇಮ್ ನಗರದ ಗೋಡೆಯೇ, ಮನಃಪೂರ್ವಕವಾಗಿ ಯೆಹೋವನಲ್ಲಿ ಮೊರೆಯಿಡು. ನಿನ್ನ ಕಣ್ಣೀರು ಹಗಲಿರುಳು ನದಿಯಂತೆ ಹರಿಯಲಿ, ನಿಲ್ಲಿಸಬೇಡ. ನಿನ್ನ ಕಣ್ಣುಗಳಿಗೆ ವಿರಾಮ ಸಿಗುವುದು ಬೇಡ.


ಯೆಹೋವನು ಒಂದು ವಿಶೇಷ ದಿನವನ್ನು ಆರಿಸಿರುತ್ತಾನೆ. ಆ ದಿನದಲ್ಲಿ ಗಲಭೆ ಮತ್ತು ಗಲಿಬಿಲಿಯು ಇರುವದು. ದಿವ್ಯದರ್ಶನದ ಕಣಿವೆಯಲ್ಲಿ ಜನರು ಒಬ್ಬರನ್ನೊಬ್ಬರು ತುಳಿದುಕೊಂಡು ಅವರ ಮೇಲೆಯೇ ನಡೆದುಕೊಂಡು ಹೋಗುವರು. ನಗರದ ಕೋಟೆಗೋಡೆಗಳು ಕೆಡವಲ್ಪಡುವವು. ಕಣಿವೆಯಲ್ಲಿ ವಾಸಿಸುವ ಜನರು ಬೆಟ್ಟದ ಮೇಲಿನ ನಗರದ ಜನರಿಗೆ ಚೀರಾಡುವರು.


ನೆಬೂಜರದಾನನು ಯೆಹೋವನ ಆಲಯವನ್ನು ಸುಟ್ಟನು. ಅವನು ಜೆರುಸಲೇಮಿನಲ್ಲಿದ್ದ ಅರಮನೆಯನ್ನು ಮತ್ತು ಉಳಿದೆಲ್ಲ ಮನೆಗಳನ್ನು ಸುಟ್ಟುಬಿಟ್ಟನು. ಅವನು ಜೆರುಸಲೇಮಿನ ಎಲ್ಲಾ ಮುಖ್ಯ ಕಟ್ಟಡಗಳನ್ನು ಸುಟ್ಟುಹಾಕಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು