Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:7 - ಪರಿಶುದ್ದ ಬೈಬಲ್‌

7 ಯೆಹೋವನು ನನ್ನನ್ನು ಬಂಧಿಸಿ ನಾನು ಹೊರಗೆ ಬರಲಾಗದಂತೆ ಮಾಡಿದನು. ಆತನು ನನ್ನನ್ನು ಬಲವಾದ ಸರಪಣಿಗಳಿಂದ ಕಟ್ಟಿ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನು ತಪ್ಪಿಸಿಕೊಂಡು ಹೋಗದಂತೆ ನನ್ನ ಸುತ್ತಲು ಗೋಡೆಯನ್ನು ಕಟ್ಟಿ, ನನಗೆ ಭಾರವಾದ ಬೇಡಿಯನ್ನು ಹಾಕಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಾನು ಹೊರಗಡೆ ಹೋಗದಂತೆ ಗೋಡೆಯೆಬ್ಬಿಸಿರುವನು, ಭಾರವಾದ ಬೇಡಿಗಳನ್ನು ನನಗೆ ತೊಡಿಸಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾನು ಆಚೆಹೋಗದಂತೆ ನನ್ನ ಸುತ್ತಲು ಗೋಡೆ ಕಟ್ಟಿ ನನಗೆ ಭಾರಿ ಬೇಡಿಹಾಕಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾನು ಹೊರಗೆ ಬಾರದ ಹಾಗೆ, ಅವರು ನನ್ನ ಸುತ್ತಲೂ ಗೋಡೆಯನ್ನು ಕಟ್ಟಿದ್ದಾರೆ. ಅವರು ನನ್ನ ಸಂಕೋಲೆಯ ಭಾರವನ್ನು ಹೆಚ್ಚಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:7
11 ತಿಳಿವುಗಳ ಹೋಲಿಕೆ  

ದೇವರು ನನ್ನ ಮಾರ್ಗವನ್ನು ಮುಚ್ಚಿಬಿಟ್ಟಿದ್ದಾನೆ; ಆದ್ದರಿಂದ ನಾನು ಮುಂದೆ ಹೋಗಲಾರೆ. ಆತನು ನನ್ನ ಮಾರ್ಗವನ್ನು ಕತ್ತಲೆಯಲ್ಲಿ ಮರೆಮಾಡಿದ್ದಾನೆ.


ದೇವರು ಯಾರ ಭವಿಷ್ಯವನ್ನು ರಹಸ್ಯವಾಗಿಡುತ್ತಾನೊ, ಯಾರ ಸುತ್ತಲೂ ಗೋಡೆಯನ್ನು ಕಟ್ಟುತ್ತಾನೊ ಅವರಿಗೆ ಯಾಕೆ ಜೀವವನ್ನು ಕೊಡುತ್ತಾನೆ?


“ಅದಕ್ಕಾಗಿ ಯೆಹೋವನಾದ ನಾನು ಇಸ್ರೇಲರ ಮಾರ್ಗವನ್ನು ಮುಳ್ಳುಗಳಿಂದ ಮುಚ್ಚಿಬಿಡುವೆನು. ನಾನು ಗೋಡೆ ಕಟ್ಟುವೆನು. ಆಗ ಅವಳು ತನ್ನ ದಾರಿಯನ್ನು ಕಂಡುಕೊಳ್ಳಲಾರಳು.


“ನನ್ನ ಪಾಪಗಳನ್ನೆಲ್ಲ ಒಟ್ಟುಗೂಡಿಸಿ ನೊಗದಂತೆ ಕಟ್ಟಲಾಗಿದೆ. ಯೆಹೋವನು ತನ್ನ ಕೈಗಳಿಂದ ನನ್ನ ಪಾಪಗಳನ್ನು ಒಟ್ಟಿಗೆ ಕಟ್ಟಿದ್ದಾನೆ. ಯೆಹೋವನ ಆ ನೊಗವು ನನ್ನ ಕತ್ತಿನ ಮೇಲೆ ಇದೆ. ಯೆಹೋವನು ನನ್ನನ್ನು ದುರ್ಬಲಗೊಳಿಸಿದ್ದಾನೆ. ನಾನು ಎದುರಿಸಲಾಗದ ಜನರ ಕೈಗೆ ಯೆಹೋವನು ನನ್ನನ್ನು ಒಪ್ಪಿಸಿಕೊಟ್ಟಿದ್ದಾನೆ.


ಯೆರೆಮೀಯನೇ, ನಾನು ಈಗ ನಿನ್ನನ್ನು ಬಿಡುಗಡೆ ಮಾಡುವೆನು. ನಾನು ನಿನ್ನ ಕೈಗಳಿಂದ ಸಂಕೋಲೆಗಳನ್ನು ಬಿಚ್ಚುವೆನು. ನೀನು ಇಷ್ಟಪಟ್ಟರೆ ನನ್ನ ಸಂಗಡ ಬಾಬಿಲೋನಿಗೆ ಬಾ, ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ. ನಿನಗೆ ನನ್ನ ಸಂಗಡ ಬರುವ ಇಷ್ಟವಿಲ್ಲದಿದ್ದರೆ ಬರಬೇಡ. ಇಡೀ ದೇಶದಲ್ಲಿ ನಿನಗೆ ಎಲ್ಲಿ ಇಷ್ಟವೋ ಅಲ್ಲಿಗೆ ಹೋಗು.


ಆಗ ಆ ಅಧಿಕಾರಿಗಳು ಯೆರೆಮೀಯನನ್ನು ಹಿಡಿದು ಮಲ್ಕೀಯನ ಬಾವಿಯೊಳಗೆ ಹಾಕಿದರು. (ಮಲ್ಕೀಯನು ರಾಜವಂಶದವನಾಗಿದ್ದನು.) ಆ ಬಾವಿಯು ಕಾರಾಗೃಹದ ಅಂಗಳದಲ್ಲಿತ್ತು. ಆ ಅಧಿಕಾರಿಗಳು ಹಗ್ಗಗಳನ್ನು ಕಟ್ಟಿ ಯೆರೆಮೀಯನನ್ನು ಬಾವಿಯಲ್ಲಿ ಇಳಿಬಿಟ್ಟರು. ಆ ಬಾವಿಯಲ್ಲಿ ಸ್ವಲ್ಪವೂ ನೀರಿರಲಿಲ್ಲ. ಕೇವಲ ಕೇಸರಿತ್ತು. ಯೆರೆಮೀಯನು ಕೆಸರಿನಲ್ಲಿ ಮುಳುಗಿಹೋದನು.


ಸ್ನೇಹಿತರು ನನ್ನನ್ನು ತೊರೆದುಬಿಟ್ಟರು. ಹೊಲೆಯಾದ ಮನುಷ್ಯನಂತೆ ಅವರೆಲ್ಲರೂ ನನ್ನನ್ನು ದೂರ ಮಾಡಿದ್ದಾರೆ. ನನ್ನನ್ನು ಮನೆಯೊಳಗೆ ದೊಬ್ಬಿ ಬೀಗ ಹಾಕಿದ್ದಾರೆ; ನಾನು ಹೊರಗೆ ಹೋಗಲಾರೆನು.


“ನಮಗೂ ನಮ್ಮ ನಾಯಕರುಗಳಿಗೂ ನೀನು ಹೇಳಿದಂತೆಯೇ ಮಾಡಿರುವೆ. ನೀನು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿರುವೆ. ಜೆರುಸಲೇಮ್ ನಗರಕ್ಕೆ ಉಂಟಾದಷ್ಟು ಕೇಡು ಭೂಮಂಡಲದಲ್ಲಿ ಯಾವ ನಗರಕ್ಕೂ ಆಗಿಲ್ಲ.


ಮರಣದವರೆಗೂ ನಾವು ಹಿಂದಟ್ಟಲ್ಪಟ್ಟಿದ್ದೇವೆ. ನಾವು ಬಳಲಿಹೋಗಿದ್ದೇವೆ; ನಾವು ವಿಶ್ರಾಂತಿಯನ್ನೇ ಪಡೆದಿಲ್ಲ.


ಆತನು ನನ್ನ ದಾರಿಯನ್ನು ಕಲ್ಲುಗಳಿಂದ ಮುಚ್ಚಿದ್ದಾನೆ. ಆತನು ನನ್ನ ಹಾದಿಯನ್ನು ಡೊಂಕುಗೊಳಿಸಿದ್ದಾನೆ.


ನನ್ನ ಎಲ್ಲಾ ಸಂಕಟಗಳಿಂದ ಅತ್ತುಅತ್ತು ನನ್ನ ಕಣ್ಣುಗಳು ನೋಯುತ್ತಿವೆ. ಯೆಹೋವನೇ, ನಾನು ನಿನಗೆ ಎಡಬಿಡದೆ ಪ್ರಾರ್ಥಿಸುವೆನು! ನನ್ನ ಕೈಗಳನ್ನು ಎತ್ತಿ ನಿನಗೆ ಪ್ರಾರ್ಥಿಸುವೆನು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು