1 ನೋಡು, ಬಂಗಾರವು ಹೇಗೆ ಕಪ್ಪಾಗಿದೆ. ನೋಡು, ಶುದ್ಧಬಂಗಾರವು ಹೇಗೆ ಬದಲಾಗಿದೆ. ಅಮೂಲ್ಯವಾದ ಕಲ್ಲುಗಳು ಎಲ್ಲೆಲ್ಲಿಯೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಅವು ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.
ರಾತ್ರಿಯ ಒಂದೊಂದು ಜಾವದ ಆರಂಭದಲ್ಲಿ ಎದ್ದೆದ್ದು ಗೋಳಾಡಿರಿ. ನಿಮ್ಮ ಹೃದಯವು ನೀರಿನಂತೆ ಹರಿಯಲಿ. ನಿಮ್ಮ ಹೃದಯಸಾರವನ್ನು ಯೆಹೋವನ ಸಮ್ಮುಖದಲ್ಲಿ ಹೊಯ್ದುಬಿಡಿರಿ. ನಿಮ್ಮ ಕೈಗಳನ್ನು ಮೇಲೆತ್ತಿ ಯೆಹೋವನಿಗೆ ಪ್ರಾರ್ಥಿಸಿರಿ. ನಿಮ್ಮ ಮಕ್ಕಳು ಬದುಕಲಿ ಎಂದು ಆತನನ್ನು ಕೇಳಿಕೊಳ್ಳಿರಿ. ಹಸಿವೆಯಿಂದ ಮೂರ್ಛೆಹೋಗುತ್ತಿದ್ದ ನಿಮ್ಮ ಮಕ್ಕಳ ಪ್ರಾಣ ಉಳಿಯಲಿ ಎಂದು ಆತನನ್ನು ಪ್ರಾರ್ಥಿಸಿರಿ. ಹಸಿವೆಯಿಂದ ಅವರು ನಗರದ ಎಲ್ಲ ಬೀದಿಗಳಲ್ಲಿ ಮೂರ್ಛೆಹೋಗುತ್ತಿದ್ದಾರೆ.
ದೇವರು ಹೇಳುವುದೇನೆಂದರೆ: “ಜೆರುಸಲೇಮಿನ ಕಡೆಗೆ ನೋಡಿರಿ. ಆಕೆ ನನ್ನ ಮೇಲೆ ನಂಬಿಕೆ ಇಟ್ಟು ಹಿಂಬಾಲಿಸಿದಂಥ ನಗರಿಯಾಗಿದ್ದಳು. ಆದರೆ ಈಗ ಆಕೆ ಸೂಳೆಯಾಗಲು ಕಾರಣವೇನು? ಈಗ ಆಕೆ ನನ್ನನ್ನು ಹಿಂಬಾಲಿಸುತ್ತಿಲ್ಲ. ಜೆರುಸಲೇಮು ನ್ಯಾಯನೀತಿಗಳಿಂದ ತುಂಬಿರಬೇಕಿತ್ತು. ಅಲ್ಲಿ ವಾಸಿಸುವ ಜನರು ದೇವರ ಇಚ್ಛೆಯಂತೆ ನಡೆಯಬೇಕಿತ್ತು. ಆದರೆ ಈಗ ಕೊಲೆಗಡುಕರು ಅಲ್ಲಿ ವಾಸಿಸುತ್ತಿದ್ದಾರೆ.
ಆಗ ಯೇಸು “ಈ ಕಟ್ಟಡಗಳನ್ನೆಲ್ಲ ನೋಡುತ್ತಿದ್ದೀರಾ? ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಇವುಗಳೆಲ್ಲಾ ನಾಶವಾಗುತ್ತವೆ. ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದಂತೆ ಎಲ್ಲಾ ಕಲ್ಲುಗಳು ಕೆಡವಲ್ಪಡುತ್ತವೆ” ಎಂದು ಹೇಳಿದನು.
ನೆಬೂಜರದಾನನು ಯೆಹೋವನ ಆಲಯವನ್ನು ಸುಟ್ಟನು. ಅವನು ಜೆರುಸಲೇಮಿನಲ್ಲಿದ್ದ ಅರಮನೆಯನ್ನು ಮತ್ತು ಉಳಿದೆಲ್ಲ ಮನೆಗಳನ್ನು ಸುಟ್ಟುಬಿಟ್ಟನು. ಅವನು ಜೆರುಸಲೇಮಿನ ಎಲ್ಲಾ ಮುಖ್ಯ ಕಟ್ಟಡಗಳನ್ನು ಸುಟ್ಟುಹಾಕಿದನು.
ನೀನು ಉದಯ ನಕ್ಷತ್ರದಂತೆ ಇರುವೆ. ಆದರೆ ನೀನು ಆಕಾಶದಿಂದ ಕೆಳಗೆ ಬಿದ್ದಿರುವೆ. ಹಿಂದಿನ ಕಾಲದಲ್ಲಿ ಲೋಕದ ಎಲ್ಲಾ ರಾಜ್ಯಗಳು ನಿನಗೆ ಅಡ್ಡಬಿದ್ದವು. ಆದರೆ ಈಗ ನೀನು ಉರುಳಿಸಲ್ಪಟ್ಟಿರುವೆ.
ಯೇಸು, “ನೀವು ಈ ದೊಡ್ಡ ಕಟ್ಟಡಗಳನ್ನು ನೋಡುತ್ತಿರುವಿರಾ? ಇವುಗಳನ್ನೆಲ್ಲ ನಾಶಪಡಿಸಲಾಗುವುದು. ಪ್ರತಿಯೊಂದು ಕಲ್ಲನ್ನೂ ನೆಲಕ್ಕೆ ಕೆಡವಲಾಗುವುದು. ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಉಳಿಯುವುದಿಲ್ಲ” ಎಂದನು.
“ನರಪುತ್ರನೇ, ಇಸ್ರೇಲ್ ಜನಾಂಗವು ನನ್ನ ಪಾಲಿಗೆ ನಿಷ್ಪ್ರಯೋಜಕವಾಗಿದೆ. ಅವರು ತಾಮ್ರದಂತೆ, ತವರದಂತೆ, ಕಬ್ಬಿಣದಂತೆ ಮತ್ತು ಸೀಸದಂತೆ ಮತ್ತು ಬೆಳ್ಳಿಯನ್ನು ಕುಲುಮೆಯಲ್ಲಿ ಕರಗಿಸಿ ಶುದ್ಧೀಕರಿಸಿದಾಗ ಉಳಿಯುವ ಕಂದುಬೆಳ್ಳಿಯಂತೆ ಇದ್ದಾರೆ.
ಆದ್ದರಿಂದ ನಾನು ಸಮಾರ್ಯವನ್ನು ಕಲ್ಲಿನ ರಾಶಿಯನ್ನಾಗಿ ಮಾಡುವೆನು. ಅದು ದ್ರಾಕ್ಷಿಬಳ್ಳಿ ನೆಡಲು ಸಿದ್ಧವಾಗುವುದು. ಸಮಾರ್ಯದ ಕಲ್ಲುಗಳನ್ನೆಲ್ಲಾ ತಗ್ಗಿಗೆ ನೂಕಿಬಿಡುವೆನು; ಆಗ ಅಲ್ಲಿ ಕೇವಲ ಅಸ್ತಿವಾರಗಳು ಕಾಣುವವು.