Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 4:11 - ಪರಿಶುದ್ದ ಬೈಬಲ್‌

11 ಯೆಹೋವನು ತನ್ನ ಕೋಪವನ್ನೆಲ್ಲ ಉಪಯೋಗಿಸಿದನು; ತನ್ನ ಕೋಪವನ್ನೆಲ್ಲಾ ಸುರಿದುಬಿಟ್ಟನು. ಆತನು ಚೀಯೋನಿನಲ್ಲಿ ಬೆಂಕಿ ಹೊತ್ತಿಸಿದನು. ಆ ಬೆಂಕಿಯು ಚೀಯೋನಿನ ಅಡಿಪಾಯಗಳವರೆಗೂ ದಹಿಸಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನು ತನ್ನ ರೋಷಾಗ್ನಿಯನ್ನು ಸುರಿಸಿ ತನ್ನ ಸಿಟ್ಟನ್ನು ತೀರಿಸಿದ್ದಾನೆ; ಚೀಯೋನಿನ ಅಸ್ತಿವಾರಗಳನ್ನು ನುಂಗಿಬಿಟ್ಟ ಬೆಂಕಿಯನ್ನು ಅಲ್ಲಿ ಹೊತ್ತಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸುರಿಸಿದ್ದಾನೆ ಸರ್ವೇಶ್ವರ ತನ್ನ ರೋಷಾಗ್ನಿಯನ್ನು ತೀರಿಸಿಕೊಂಡಿದ್ದಾನೆ ತನ್ನ ಉಗ್ರಕೋಪವನ್ನು. ಆತ ಹೊತ್ತಿಸಿದ ಬೆಂಕಿಗೆ ಸಿಯೋನಿನ ಅಸ್ತಿವಾರ ಆಹುತಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನು ತನ್ನ ರೋಷಾಗ್ನಿಯನ್ನು ಸುರಿಸಿ ತನ್ನ ಸಿಟ್ಟನ್ನು ತೀರಿಸಿದ್ದಾನೆ; ಚೀಯೋನಿನ ಅಸ್ತಿವಾರಗಳನ್ನು ನುಂಗಿಬಿಟ್ಟ ಬೆಂಕಿಯನ್ನು ಅಲ್ಲಿ ಹೊತ್ತಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೆಹೋವ ದೇವರು ತಮ್ಮ ರೋಷವನ್ನು ತೀರಿಸಿದ್ದಾರೆ. ಅವರು ತಮ್ಮ ಉಗ್ರವಾದ ಕೋಪವನ್ನು ಸುರಿದಿದ್ದಾರೆ. ಚೀಯೋನಿನಲ್ಲಿ ಹೊತ್ತಿಸಿದ ಬೆಂಕಿಯು ಅದರ ಅಸ್ತಿವಾರಗಳನ್ನು ತಿಂದುಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 4:11
29 ತಿಳಿವುಗಳ ಹೋಲಿಕೆ  

ಅದಕ್ಕಾಗಿ ನಾನು ಅವರಿಗೆ ನನ್ನ ಕೋಪವನ್ನು ತೋರಿಸುವೆನು. ಅವರ ದುಷ್ಟತನಕ್ಕಾಗಿ ನಾನು ಅವರನ್ನು ಶಿಕ್ಷಿಸುವೆನು. ಅವರೇ ಅದಕ್ಕೆ ಜವಾಬ್ದಾರರು.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.


ಯೆಹೋವನು ಹೀಗೆಂದನು: “ನಾನು ಈ ಸ್ಥಳಕ್ಕೆ ವಿರೋಧವಾಗಿ ನನ್ನ ಕೋಪವನ್ನು ತೋರಿಸುವೆನು. ನಾನು ಜನರನ್ನೂ ಪ್ರಾಣಿಗಳನ್ನೂ ದಂಡಿಸುವೆನು. ಕಾಡಿನ ಮರಗಳನ್ನೂ ಹೊಲದ ಬೆಳೆಗಳನ್ನೂ ದಂಡಿಸುವೆನು. ನನ್ನ ಕೋಪವು ಉರಿಯುವ ಬೆಂಕಿಯಂತಿರುವದು; ಅದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ.”


ಯೆಹೋವನು ತಾನು ನಿಯೋಜಿಸಿದಂತೆ ಮಾಡಿದನು. ತಾನು ಮಾಡುತ್ತೇನೆಂದು ಹೇಳಿದ್ದನ್ನು ಆತನು ಮಾಡಿದ್ದಾನೆ. ಪುರಾತನ ಕಾಲದಿಂದ ತಾನು ವಿಧಿಸಿದ್ದನ್ನು ಆತನು ಮಾಡಿದ್ದಾನೆ. ಆತನು ನಿಷ್ಕರುಣೆಯಿಂದ ನಾಶಮಾಡಿದ್ದಾನೆ. ನಿನಗೆ ಸಂಭವಿಸಿದವುಗಳ ಮೂಲಕವಾಗಿ ಆತನು ನಿನ್ನ ವೈರಿಗಳನ್ನು ಸಂತೋಷಪಡಿಸಿದ್ದಾನೆ. ಆತನು ನಿನ್ನ ವೈರಿಗಳ ಸಾಮರ್ಥ್ಯವನ್ನು ಹೆಚ್ಚಿಸಿದ್ದಾನೆ.


“‘ನೀವು ನನ್ನ ಮಾತನ್ನು ಕೇಳದಿದ್ದರೆ ಮತ್ತು ನನ್ನ ಆಜ್ಞೆಯನ್ನು ಪಾಲಿಸದಿದ್ದರೆ ಕೇಡಾಗುವುದು. ಸಬ್ಬತ್‌ದಿನದಲ್ಲಿ ಹೊರೆಗಳನ್ನು ಹೊತ್ತುಕೊಂಡು ಜೆರುಸಲೇಮಿಗೆ ಹೋದರೆ ನೀವು ಆ ದಿನವನ್ನು ಪವಿತ್ರದಿನವೆಂದು ಆಚರಿಸಿದಂತೆ ಆಗುವುದಿಲ್ಲ. ಆಗ ನಾನು ನಂದಿಸಲಾಗದ ಬೆಂಕಿಯನ್ನು ಹೊತ್ತಿಸುತ್ತೇನೆ. ಆ ಬೆಂಕಿಯು ಜೆರುಸಲೇಮಿನ ದ್ವಾರಗಳಲ್ಲಿ ಪ್ರಾರಂಭವಾಗಿ ಅರಮನೆಗಳನ್ನು ಸುಡುವವರೆಗೂ ಉರಿಯುತ್ತಿರುವುದು.’”


ದೇವರು ತನ್ನ ಜನರನ್ನು ಶಿಕ್ಷಿಸುವ ಕಾಲದ ಬಗ್ಗೆ ಪ್ರವಾದಿಗಳು ಬರೆದಿರುವ ಸಂಗತಿಗಳೆಲ್ಲಾ ಆಗ ನೆರವೇರುತ್ತದೆ.


ಪ್ರವಾದಿಗಳು ನನ್ನ ಸೇವಕರು. ನಿಮ್ಮ ಪೂರ್ವಿಕರಿಗೆ ನ್ಯಾಯಪ್ರಮಾಣಗಳನ್ನು ಬೋಧಿಸಲು ನಾನು ಅವರನ್ನು ಉಪಯೋಗಿಸಿದೆನು. ನಿಮ್ಮ ಪೂರ್ವಿಕರು ಕಟ್ಟಕಡೆಗೆ ಪಾಠವನ್ನು ಕಲಿತರು. ಅವರು, ‘ಸರ್ವಶಕ್ತನಾದ ಯೆಹೋವನು ತಾನು ಹೇಳಿದ್ದನ್ನು ನೆರವೇರಿಸಿದನು. ನಮ್ಮ ದುಷ್ಕೃತ್ಯಗಳಿಗಾಗಿ ನಮ್ಮನ್ನು ಶಿಕ್ಷಿಸಿದನು’ ಎಂದು ಹೇಳಿದರು ಮತ್ತು ದೇವರ ಕಡೆಗೆ ತಿರುಗಿದರು.”


“ನಮಗೂ ನಮ್ಮ ನಾಯಕರುಗಳಿಗೂ ನೀನು ಹೇಳಿದಂತೆಯೇ ಮಾಡಿರುವೆ. ನೀನು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿರುವೆ. ಜೆರುಸಲೇಮ್ ನಗರಕ್ಕೆ ಉಂಟಾದಷ್ಟು ಕೇಡು ಭೂಮಂಡಲದಲ್ಲಿ ಯಾವ ನಗರಕ್ಕೂ ಆಗಿಲ್ಲ.


ಚೀಯೋನೇ, ನಿನಗಾಗಬೇಕಿದ್ದ ದಂಡನೆಯು ಸಂಪೂರ್ಣವಾಯಿತು. ಮತ್ತೆ ನೀನು ಸೆರೆವಾಸಕ್ಕೆ ಹೋಗುವುದಿಲ್ಲ. ಆದರೆ ಎದೋಮಿನ ಜನರೇ, ನಿಮ್ಮ ಪಾಪಗಳಿಗಾಗಿ ಯೆಹೋವನು ನಿಮ್ಮನ್ನು ದಂಡಿಸುವನು. ಆತನು ನಿಮ್ಮ ಪಾಪಗಳನ್ನು ಬಹಿರಂಗಪಡಿಸುವನು.


ಯೆಹೋವನು ಚೀಯೋನ್ ಕುಮಾರಿಯ ಪೌಳಿಗೋಡೆಯನ್ನು ನಾಶಮಾಡಬೇಕೆಂದು ಯೋಚಿಸಿದ್ದಾನೆ. ಆತನು ಅಳತೆದಾರದಿಂದ ಒಡೆಯಬೇಕಾದ ಗೋಡೆಗೆ ಗುರುತು ಮಾಡಿದ್ದಾನೆ. ಆತನು ತಾನು ಮಾಡುತ್ತಿದ್ದ ನಾಶನವನ್ನು ನಿಲ್ಲಿಸಲಿಲ್ಲ. ಪೌಳಿಗೋಡೆಗಳು ಮತ್ತು ಗೋಪುರಗಳು ದುಃಖದಿಂದ ಗೋಳಾಡುವಂತೆ ಆತನು ಮಾಡಿದ್ದಾನೆ. ಅವೆರಡೂ ಕುಸಿದುಹೋಗಿವೆ.


“ನೀವು ತಕ್ಕ ಶಿಕ್ಷೆಯನ್ನು ಅನುಭವಿಸುವಿರಿ. ನಾನು ನಿಮ್ಮ ಅರಣ್ಯಗಳಲ್ಲಿ ಬೆಂಕಿಯನ್ನು ಹೊತ್ತಿಸುತ್ತೇನೆ. ಆ ಬೆಂಕಿಯು ನಿಮ್ಮ ಸುತ್ತಮುತ್ತಲಿನ ಪ್ರತಿಯೊಂದು ವಸ್ತುವನ್ನು ಸುಟ್ಟುಹಾಕುತ್ತದೆ.”


ಯೆಹೂದದ ಜನರು ಎಡವಿ, ಒಬ್ಬರಮೇಲೊಬ್ಬರು ಬೀಳುವಂತೆ ನಾನು ಮಾಡುವೆನು. ತಂದೆ ಮತ್ತು ಮಕ್ಕಳು ಒಬ್ಬರಮೇಲೊಬ್ಬರು ಬೀಳುವರು.’” ಇದು ಯೆಹೋವನ ನುಡಿ. “‘ನಾನು ಅವರಿಗಾಗಿ ಕನಿಕರಪಡುವದಿಲ್ಲ ಅಥವಾ ಕರುಣೆ ತೋರಿಸುವದಿಲ್ಲ. ಯೆಹೂದದ ಜನರ ವಿನಾಶವನ್ನು ಕರುಣೆಯು ತಡೆಯದಂತೆ ನೋಡಿಕೊಳ್ಳುತ್ತೇನೆ.’”


ಬಹುಶಃ ಆ ಜನರು ತಮಗೆ ಸಹಾಯಮಾಡೆಂದು ಯೆಹೋವನನ್ನು ಪ್ರಾರ್ಥಿಸಬಹುದು. ಆಗ ಪ್ರತಿಯೊಬ್ಬನೂ ದುಷ್ಕೃತ್ಯ ಮಾಡುವದನ್ನು ನಿಲ್ಲಿಸಬಹುದು. ಆ ಜನರ ಮೇಲೆ ತನಗೆ ಬಹಳ ಕೋಪಬಂದಿದೆ ಎಂದು ಯೆಹೋವನು ಪ್ರಕಟಿಸಿದ್ದಾನೆ.”


ದೂರದಲ್ಲಿರುವ ಜನರು ರೋಗಗಳಿಂದ ಸಾಯುವರು. ಹತ್ತಿರದಲ್ಲಿರುವವರು ಕತ್ತಿಯಿಂದ ಸಾಯುವರು. ತಪ್ಪಿಸಿಕೊಂಡವರೂ ಉಳಿಸಲ್ಪಟ್ಟವರೂ ಹಸಿವೆಯಿಂದ ಸಾಯುವರು. ಆಗಲೇ ನನ್ನ ಕೋಪವು ಶಮನವಾಗುವದು.


ಆ ದೇಶದಲ್ಲಿ ಜನರನ್ನು ಕೊಲೆಮಾಡಿ ಅವರ ರಕ್ತವನ್ನು ನೆಲದ ಮೇಲೆ ಸುರಿದರು. ತಮ್ಮ ವಿಗ್ರಹಗಳಿಂದ ದೇಶವನ್ನು ಹೊಲಸು ಮಾಡಿದರು. ಆದ್ದರಿಂದ ನಾನು ಎಷ್ಟು ಸಿಟ್ಟುಗೊಂಡಿದ್ದೇನೆ ಎಂಬುದನ್ನು ನಾನು ತೋರಿಸಿದೆನು.


ನೀವು ಒಣಗಿ, ಸತ್ತ ಹೂವಿನೋಪಾದಿಯಾಗುವ ಮೊದಲೇ ನಿಮ್ಮ ಜೀವಿತವನ್ನು ಮಾರ್ಪಡಿಸಿರಿ. ಬಿಸಿಲೇರಿದಾಗ ಹೂವು ಬಾಡಿಹೋಗಿ ಒಣಗುತ್ತದೆ. ಅದೇ ಪ್ರಕಾರ ಯೆಹೋವನು ತನ್ನ ಕೋಪವನ್ನು ಪ್ರದರ್ಶಿಸುವಾಗ ನೀವು ಹಾಗೆ ಆಗುವಿರಿ. ಆದ್ದರಿಂದ ಯೆಹೋವನ ಕೋಪದ ದಿನವು ನಿಮ್ಮ ಮೇಲೆ ಬರುವುದಕ್ಕಿಂತ ಮೊದಲೇ ನಿಮ್ಮ ಜೀವಿತವನ್ನು ಬದಲಾಯಿಸಿರಿ.


ನಾನು ನಿಜವಾಗಿ ನನ್ನ ಕೋಪವನ್ನು ತೋರಿಸುವೆನು. ಹೌದು, ನಾನೇ ನಿಮ್ಮ ಪಾಪಗಳಿಗಾಗಿ ನಿಮ್ಮನ್ನು ಏಳರಷ್ಟಾಗಿ ದಂಡಿಸುವೆನು.


ನಿನ್ನ ಜನರು ಬಲಹೀನರಾದರು. ಅವರು ನೆಲದ ಮೇಲೆ ಬಿದ್ದು ಅಲ್ಲಿಯೇ ಮಲಗಿದರು. ಆ ಜನರು ರಸ್ತೆಯ ಮೂಲೆಮೂಲೆಗಳಲ್ಲಿ ಬಿದ್ದುಕೊಂಡಿರುತ್ತಾರೆ. ಅವರು ಬಲೆಯೊಳಗೆ ಸಿಕ್ಕಿಬಿದ್ದ ಜಿಂಕೆಯಂತಿರುವರು. ಯೆಹೋವನ ಕೋಪದಿಂದ ಇನ್ನೂ ಹೆಚ್ಚಿನ ಶಿಕ್ಷೆಯನ್ನು, ತಾಳಲಾರದಷ್ಟು ಶಿಕ್ಷೆಯನ್ನು ಅನುಭವಿಸಿದರು. ದೇವರು ಇನ್ನೂ ಹೆಚ್ಚಾಗಿ ಶಿಕ್ಷೆಕೊಡುವುದಾಗಿ ಹೇಳಿದಾಗ ಅವರು ಕಂಗಾಲಾದರು.


ಕೋಪೋದ್ರಿಕ್ತನಾದ ಯೆಹೋವನು ಚೀಯೋನಿನ ಮಗಳ ಮೇಲೆ ಹೇಗೆ ಕಾರ್ಮೋಡಗಳು ಕವಿಯುವಂತೆ ಮಾಡಿದ್ದಾನೆ ನೋಡಿರಿ. ಆತನು ಇಸ್ರೇಲಿನ ವೈಭವವನ್ನು ಆಕಾಶದಿಂದ ಭೂಮಿಗೆ ಎಸೆದಿದ್ದಾನೆ. ಯೆಹೋವನಿಗೆ ಕೋಪ ಬಂದಾಗ ಆತನು ಇಸ್ರೇಲ್ ತನ್ನ ಪಾದಪೀಠವೆಂಬುದನ್ನು ಗಮನಕ್ಕೆ ತಂದುಕೊಳ್ಳಲಿಲ್ಲ.


ನನ್ನ ಕೋಪದ ಭರದಲ್ಲಿ ಯೆಹೋವನು ಇಸ್ರೇಲಿನ ಶಕ್ತಿಯನ್ನೆಲ್ಲ ಕತ್ತರಿಸಿಹಾಕಿದನು. ಆತನು ಇಸ್ರೇಲಿನಿಂದ ತನ್ನ ಬಲಗೈಯನ್ನು ಹಿಂತೆಗೆದುಕೊಂಡನು. ಶತ್ರು ಬಂದಾಗ ಆತನು ಹೀಗೆ ಮಾಡಿದನು. ಅಗ್ನಿಜ್ವಾಲೆಗಳಂತೆ ಆತನು ಯಾಕೋಬಿನಲ್ಲಿ ಉರಿದನು. ಸುತ್ತಮುತ್ತಲೆಲ್ಲ (ಪ್ರತಿಯೊಂದನ್ನೂ) ದಹಿಸುವ ಬೆಂಕಿಯಂತೆ ಆತನಿದ್ದನು.


ಯೆಹೋವನು ವೈರಿಯಂತೆ ತನ್ನ ಬಿಲ್ಲನ್ನು ಬಾಗಿಸಿದನು. ತನ್ನ ಬಲಗೈಯಲ್ಲಿ ಖಡ್ಗವನ್ನು ಧರಿಸಿದನು: ಆತನು ಯೆಹೂದದ ಎಲ್ಲ ಆಕರ್ಷಕ ಜನರನ್ನು ಕೊಂದುಹಾಕಿದನು. ಆತನು ಶತ್ರುವಿನಂತೆ ಅವರನ್ನು ಕೊಂದನು. ಆತನು ತನ್ನ ರೋಷಾಗ್ನಿಯನ್ನು ಹೊರಸೂಸಿದನು. ಆತನು ಅದನ್ನು ಚೀಯೋನಿನ ಗುಡಾರಗಳ ಮೇಲೆ ಸುರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು