Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 4:4 - ಪರಿಶುದ್ದ ಬೈಬಲ್‌

4 ಎಳೆಕೂಸಿನ ನಾಲಿಗೆಯು ಬಾಯಾರಿಕೆಯಿಂದ ಅಂಗಳಿಗೆ ಅಂಟಿಕೊಳ್ಳುತ್ತದೆ. ಎಳೆಯ ಮಕ್ಕಳು ರೊಟ್ಟಿಯನ್ನು ಕೇಳಿದರೆ ಅವರಿಗೆ ಯಾರೂ ಏನೂ ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮೊಲೆಕೂಸಿನ ನಾಲಿಗೆಯು ದಾಹದಿಂದ ಸೇದಿಹೋಗಿದೆ. ಅನ್ನ ಬೇಕೆನ್ನುವ ಎಳೆಯ ಮಕ್ಕಳಿಗೆ ಅನ್ನಕೊಡುವವರು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ದಾಹದಿಂದ ಸೇದುಹೋಗಿದೆ ಮೊಲೆಕೂಸಿನ ನಾಲಿಗೆ ಅನ್ನವಿಕ್ಕುವರಾರೂ ಇಲ್ಲ, ಹಂಬಲಿಸುವ ಆ ಹಸುಳೆಗಳಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮೊಲೆಕೂಸಿನ ನಾಲಿಗೆಯು ದಾಹದಿಂದ ಸೇದಿಹೋಗಿದೆ. ಅನ್ನ ಬೇಕೆನ್ನುವ ಎಳೆಯ ಮಕ್ಕಳಿಗೆ ಯಾರೂ ಅನ್ನವಿಕ್ಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಹಸುಳೆಗಳ ನಾಲಿಗೆಯು ದಾಹದಿಂದ ಅಂಗಳಕ್ಕೆ ಹತ್ತುತ್ತದೆ. ಎಳೆಯ ಕೂಸುಗಳು ಅನ್ನ ಕೇಳುತ್ತವೆ. ಆದರೆ ಅವರಿಗೆ ಯಾರೂ ಅದನ್ನು ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 4:4
12 ತಿಳಿವುಗಳ ಹೋಲಿಕೆ  

ನನ್ನ ಶಕ್ತಿಯು ಒಡೆದುಹೋದ ಮಡಿಕೆಯ ಒಣ ತುಂಡಿನಂತಿದೆ. ನನ್ನ ನಾಲಿಗೆಯು ಬಾಯಿ ಮೇಲ್ಭಾಗಕ್ಕೆ ಅಂಟಿಕೊಳ್ಳುತ್ತಿದೆ. ನೀನು ನನ್ನನ್ನು ಮಣ್ಣಿಗೆ ಸೇರಿಸಿರುವೆ.


ಜೆರುಸಲೇಮಿನ ಎಲ್ಲ ಜನರು ನರಳಾಡುತ್ತಿದ್ದಾರೆ. ಅವಳ ಎಲ್ಲ ಜನರು ಆಹಾರಕ್ಕಾಗಿ ಹುಡುಕುತ್ತಿದ್ದಾರೆ. ಅವರು ತಮ್ಮ ಎಲ್ಲ ಒಳ್ಳೆಯ ವಸ್ತುಗಳನ್ನು ಆಹಾರಕ್ಕಾಗಿ ಕೊಟ್ಟುಬಿಡುತ್ತಿದ್ದಾರೆ. ಬದುಕಿರುವ ಸಲುವಾಗಿ ಅವರು ಹೀಗೆ ಮಾಡುತ್ತಿದ್ದಾರೆ. “ಯೆಹೋವನೇ, ನನ್ನ ಕಡೆಗೆ ನೋಡು! ಜನರು ನನ್ನನ್ನು ಹೇಗೆ ದ್ವೇಷಿಸುತ್ತಾರೆ ನೋಡು” ಎಂದು ಜೆರುಸಲೇಮ್ ಬೇಡಿಕೊಂಡಳು.


ಜೆರುಸಲೇಮೇ, ನಿನ್ನನ್ನು ನಾನೆಂದಾದರೂ ಮರೆಯುವುದಾದರೆ, ನಾನು ಮತ್ತೆಂದಿಗೂ ಹಾಡಲು ಶಕ್ತನಾಗದಂತಾಗಲಿ. ಜೆರುಸಲೇಮೇ, ನಿನ್ನ ವಿಷಯದಲ್ಲೇ ನಾನು ಅತ್ಯಾನಂದಪಡುವೆನೆಂದು ಪ್ರಮಾಣ ಮಾಡುವೆ.


ಹಸಿವೆಯಿಂದ ಅವರು ಕ್ಷೀಣವಾಗುವರು; ಭಯಂಕರ ವ್ಯಾಧಿಯಿಂದ ಅವರು ನಾಶವಾಗುವರು. ಕಾಡುಪ್ರಾಣಿಗಳನ್ನು ಅವರ ಮಧ್ಯೆ ಕಳುಹಿಸುವೆನು. ವಿಷಸರ್ಪಗಳೂ ಹಲ್ಲಿಗಳೂ ಅವರನ್ನು ಕಚ್ಚುವವು.


‘ನಮ್ಮ ಕಾಲುಗಳಿಗೆ ಹತ್ತಿದ ನಿಮ್ಮ ಊರಿನ ಧೂಳನ್ನು ನಿಮಗೆ ವಿರುದ್ಧವಾಗಿ ಝಾಡಿಸಿಬಿಡುತ್ತೇವೆ. ದೇವರ ರಾಜ್ಯ ಸಮೀಪಿಸುತ್ತಿದೆ ಎಂಬುದು ನಿಮಗೆ ತಿಳಿದಿರಲಿ’ ಎಂದು ಹೇಳಿರಿ.


ಆದ್ದರಿಂದ ಆತನು ನಿಮ್ಮ ವೈರಿಗಳನ್ನು ಕಳುಹಿಸಿ ಅವರ ಸೇವೆ ನೀವು ಮಾಡುವಂತೆ ಮಾಡುವನು. ನೀವು ಹಸಿವು ಬಾಯಾರಿಕೆಗಳಿಂದ ಬಳಲುವಿರಿ; ಬಟ್ಟೆಯಿಲ್ಲದೆ ಬಡವರಾಗಿ ಜೀವಿಸುವಿರಿ. ನಿಮ್ಮ ಯೆಹೋವನು ನಿಮ್ಮ ಮೇಲೆ ಭಾರವನ್ನು ಹೊರಿಸುವನು. ಆ ಭಾರವನ್ನು ನಿಮ್ಮಿಂದ ತೆಗೆಯಲಾಗುವುದಿಲ್ಲ; ನೀವು ನಾಶವಾಗುವಿರಿ.


ಜನನಾಯಕರು ನೀರು ತರುವದಕ್ಕಾಗಿ ತಮ್ಮ ಸೇವಕರನ್ನು ಕಳುಹಿಸುತ್ತಾರೆ. ಆ ಸೇವಕರು ನೀರಿರುವ ಸ್ಥಳಗಳಿಗೆ ಹೋಗುತ್ತಾರೆ. ಆದರೆ ಅಲ್ಲಿ ಅವರಿಗೆ ನೀರು ಸಿಕ್ಕುವದಿಲ್ಲ. ಸೇವಕರು ಕೇವಲ ಪಾತ್ರೆಗಳನ್ನು ತೆಗೆದುಕೊಂಡು ಹಿಂದಿರುಗಿ ಬರುತ್ತಾರೆ. ಅವರು ನಾಚಿಕೆಪಟ್ಟುಕೊಳ್ಳುತ್ತಾರೆ ಮತ್ತು ಪೇಚಾಡುತ್ತಾರೆ. ಅವರು ನಾಚಿಕೆಯಿಂದ ತಮ್ಮ ಮುಖಗಳನ್ನು ಮುಚ್ಚಿಕೊಳ್ಳುತ್ತಾರೆ.


ಆದರೆ ರಬ್ಷಾಕೆಯು ಅವರಿಗೆ, “ನನ್ನ ಒಡೆಯನು ನನ್ನನ್ನು ಕಳುಹಿಸಿದ್ದು ನಾನು ನಿಮ್ಮೊಂದಿಗೆ ಮತ್ತು ನಿಮ್ಮ ರಾಜನೊಂದಿಗೆ ಮಾತ್ರ ಮಾತಾಡುವುದಕ್ಕಲ್ಲ. ಗೋಡೆಯ ಮೇಲೆ ಕುಳಿತಿರುವ ಇತರ ಜನರೊಂದಿಗೂ ನಾನು ಮಾತನಾಡುತ್ತೇನೆ! ಅವರು ನಿಮ್ಮೊಂದಿಗಿದ್ದರೆ ತಮ್ಮ ಮಲವನ್ನು ತಾವೇ ತಿನ್ನಬೇಕಾಗುತ್ತದೆ ಮತ್ತು ತಮ್ಮ ಮೂತ್ರವನ್ನು ತಾವೇ ಕುಡಿಯಬೇಕಾಗುತ್ತದೆ!” ಎಂದು ಹೇಳಿದನು.


ನಾಲ್ಕನೆಯ ತಿಂಗಳ ಒಂಭತ್ತನೆಯ ದಿನದಂದು ನಗರದಲ್ಲಿ ಭೀಕರ ಬರಗಾಲವಿತ್ತು. ಅಲ್ಲಿನ ಸಾಮಾನ್ಯರಿಗೆ ಆಹಾರವೇನೂ ಇರಲಿಲ್ಲ.


ಯೆಹೋವನು ಹೇಳುವುದೇನೆಂದರೆ: “ನನ್ನ ಜನರು ಸೆರೆಹಿಡಿಯಲ್ಪಟ್ಟು ಒಯ್ಯಲ್ಪಡುವರು. ಯಾಕೆಂದರೆ ಅವರು ನಿಜವಾಗಿಯೂ ನನ್ನನ್ನು ಅರಿತಿಲ್ಲ. ಇಸ್ರೇಲಿನಲ್ಲಿ ವಾಸಿಸುವ ಕೆಲವು ಜನರು ಈಗ ಪ್ರಮುಖರಾಗಿದ್ದಾರೆ. ತಮ್ಮ ಸುಖಜೀವಿತದಲ್ಲಿ ಆನಂದಿಸುತ್ತಾರೆ. ಆದರೆ ಆ ಗಣ್ಯವ್ಯಕ್ತಿಗಳೆಲ್ಲಾ ಬಾಯಾರಿಕೆಯಿಂದಲೂ ಹಸಿವೆಯಿಂದಲೂ ನರಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು