Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 4:6 - ಪರಿಶುದ್ದ ಬೈಬಲ್‌

6 ನನ್ನ ಜನರ ಪಾಪವು ಬಹಳವಾಗಿತ್ತು. ಅವರ ಪಾಪವು ಸೊದೋಮ್ ಪಟ್ಟಣದ ಪಾಪಕ್ಕಿಂತಲೂ ಹೆಚ್ಚಾಗಿತ್ತು. ಸೊದೋಮ್ ಇದ್ದಕ್ಕಿದ್ದಂತೆ ನಾಶವಾಯಿತು. ಅದು ನಾಶವಾದದ್ದು ಯಾವ ಮಾನವನಿಂದಲೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯಾರ ಕೈಯೂ ಸೋಕದೆ ಕ್ಷಣಮಾತ್ರದಲ್ಲಿ ಹಾಳಾದ ಸೊದೋಮಿನ ಪಾಪಕ್ಕಿಂತಲೂ, ನನ್ನ ಪ್ರಜೆಯ ಅಧರ್ಮವು ಹೆಚ್ಚಾಯಿತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ‘ಸೊದೋಮ್’ ಊರು ಹಾಳಾಯಿತು ಕ್ಷಣಮಾತ್ರದಲ್ಲೆ ಅದರ ಮೇಲೆ ಯಾರೂ ಕೈಮಾಡದೆಯೇ. ಅದಕ್ಕಿಂತಲೂ ಹೆಚ್ಚಾಯಿತಲ್ಲಾ ನನ್ನ ಜನರ ಅಧರ್ಮ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯಾರ ಕೈಯೂ ಸೋಕದೆ ಕ್ಷಣಮಾತ್ರದಲ್ಲಿ ಹಾಳಾದ ಸೊದೋವಿುನ ಪಾಪಕ್ಕಿಂತಲೂ ನನ್ನ ಪ್ರಜೆಯ ಅಧರ್ಮವು ಹೆಚ್ಚಾಯಿತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನನ್ನ ಜನರ ಅಕ್ರಮದ ದಂಡನೆಯು ಸೊದೋಮಿನ ಪಾಪದ ದಂಡನೆಗಿಂತ ದೊಡ್ಡದು. ಅದು ಕ್ಷಣಮಾತ್ರದಲ್ಲಿ ಕೆಡವಿ ಹಾಕಲಾಯಿತು ಮತ್ತು ಅವಳಿಗೆ ಸಹಾಯಮಾಡಲು ಯಾವ ಕೈಗಳೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 4:6
14 ತಿಳಿವುಗಳ ಹೋಲಿಕೆ  

ಹೀಗೆ ಯೆಹೋವನು ಆ ಎರಡು ನಗರಗಳನ್ನು ನಾಶಮಾಡಿದನು; ಇಡೀ ಕಣಿವೆಯನ್ನೂ ಅದರಲ್ಲಿ ಬೆಳೆಯುತ್ತಿದ್ದ ಸಸ್ಯಗಳನ್ನೂ ನಗರಗಳಲ್ಲಿದ್ದ ಎಲ್ಲಾ ಜನರನ್ನೂ ನಾಶಮಾಡಿದನು.


ನ್ಯಾಯತೀರ್ಪಿನ ದಿನದಲ್ಲಿ ಆ ಜನರ ಗತಿಯು ಸೊದೋಮಿನ ಜನರ ಗತಿಗಿಂತಲೂ ಕಠಿಣವಾಗಿರುವುದು” ಎಂದು ಹೇಳಿದನು.


“ತನ್ನ ಯಜಮಾನನು ತನ್ನಿಂದ ಏನು ಅಪೇಕ್ಷಿಸುತ್ತಾನೆ ಎಂಬುದು ಆ ಸೇವಕನಿಗೆ ಗೊತ್ತಿತ್ತು. ಆದರೆ ಅವನು ತನ್ನನ್ನು ಸಿದ್ಧಪಡಿಸಿಕೊಳ್ಳಲಿಲ್ಲ ಮತ್ತು ತನ್ನ ಕೆಲಸವನ್ನು ಪೂರೈಸಲು ಪ್ರಯತ್ನಿಸಲಿಲ್ಲ. ಆದ್ದರಿಂದ ಅವನು ಕಠಿಣ ದಂಡನೆಗೆ ಗುರಿಯಾಗುವನು!


ಏಕೆಂದರೆ ಆ ಸಮಯದಲ್ಲಿ ಮಹಾ ಸಂಕಟ ಇರುವುದು. ಲೋಕವು ಸೃಷ್ಟಿಯಾದಂದಿನಿಂದ ಇಂಥ ಸಂಕಟವು ಎಂದೂ ಸಂಭವಿಸಿಲ್ಲ. ಇನ್ನು ಮುಂದೆಯೂ ಸಂಭವಿಸುವುದಿಲ್ಲ.


“ನಮಗೂ ನಮ್ಮ ನಾಯಕರುಗಳಿಗೂ ನೀನು ಹೇಳಿದಂತೆಯೇ ಮಾಡಿರುವೆ. ನೀನು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿರುವೆ. ಜೆರುಸಲೇಮ್ ನಗರಕ್ಕೆ ಉಂಟಾದಷ್ಟು ಕೇಡು ಭೂಮಂಡಲದಲ್ಲಿ ಯಾವ ನಗರಕ್ಕೂ ಆಗಿಲ್ಲ.


ಬರಗಾಲದ ನಿಮಿತ್ತ ಸತ್ತವರಿಗಿಂತಲೂ ಖಡ್ಗಗಳಿಂದ ಹತರಾದವರ ಸಾವೇ ಮೇಲಾಗಿತ್ತು. ಹಸಿವೆಯಿಂದಿದ್ದ ಜನರು ನೋವಿನಿಂದ ನರಳಾಡಿದರು. ಭೂಮಿಯಿಂದ ಆಹಾರವನ್ನು ಪಡೆಯಲಾಗದೆ ಅವರು ಸತ್ತುಹೋದರು.


ಆಗ ಯೆಹೋವನು ಸೊದೋಮ್ ಮತ್ತು ಗೊಮೋರ ಪಟ್ಟಣಗಳ ಮೇಲೆ ಆಕಾಶದಿಂದ ಉರಿಯುವ ಗಂಧಕದ ಮಳೆಯನ್ನು ಸುರಿಸಿದನು.


ಯೆಹೋವನು ಕನಿಕರಪಡದೆ ಕೆಡವಿಬಿಟ್ಟ ನಗರಗಳ ಗತಿಯು ಅವನಿಗೆ ಬರಲಿ. ಬೆಳಿಗ್ಗೆ ಯುದ್ಧದ ಕೂಗಾಟವೂ, ಮಧ್ಯಾಹ್ನದಲ್ಲಿ ಯುದ್ಧದ ಕಿರುಚಾಟವೂ ಅವನ ಕಿವಿಗೆ ಬೀಳಲಿ.


ಆ ಸಮಯದಲ್ಲಿ ಸಾಧಾರಣ ಜನರಿಗೂ ಯಾಜಕವರ್ಗದವರಿಗೂ ವ್ಯತ್ಯಾಸವಿರದು. ಸೇವಕರಿಗೂ ಅವರ ಯಜಮಾನರಿಗೂ ವ್ಯತ್ಯಾಸವಿರದು. ದಾಸಿಯರಿಗೂ ಅವರ ಯಜಮಾನಿಯರಿಗೂ ವ್ಯತ್ಯಾಸವಿರದು. ಮಾರುವವರಿಗೂ ಕೊಳ್ಳುವವರಿಗೂ ವ್ಯತ್ಯಾಸವಿರದು. ಸಾಲಕೊಡುವವರಿಗೂ ಸಾಲ ತೆಗೆದುಕೊಳ್ಳುವವರಿಗೂ ವ್ಯತ್ಯಾಸವಿರದು. ಬಡ್ಡಿಹಾಕುವವನಿಗೂ ಬಡ್ಡಿಕೊಡುವವನಿಗೂ ವ್ಯತ್ಯಾಸವಿರದು.


ಯೆಹೂದದ ಪ್ರವಾದಿಗಳು ಜೆರುಸಲೇಮಿನಲ್ಲಿ ಭಯಂಕರ ದುಷ್ಕೃತ್ಯಗಳನ್ನು ಮಾಡುವುದನ್ನು ನಾನು ನೋಡಿದ್ದೇನೆ. ಈ ಪ್ರವಾದಿಗಳು ವ್ಯಭಿಚಾರ ಮಾಡುತ್ತಾರೆ. ಅವರು ಸುಳ್ಳುಗಳನ್ನು ಕೇಳಿ, ಆ ಸುಳ್ಳುಬೋಧನೆಗಳನ್ನು ಪಾಲಿಸುತ್ತಾರೆ. ಅವರು ದುಷ್ಟರಿಗೆ ಅವರ ದುಷ್ಟತನವನ್ನು ಮುಂದುವರಿಸಲು ಪ್ರೋತ್ಸಾಹಿಸುತ್ತಾರೆ. ಆದ್ದರಿಂದ ಜನರು ಪಾಪಮಾಡುವುದನ್ನು ನಿಲ್ಲಿಸಲಿಲ್ಲ. ಅವರೆಲ್ಲರು ನನಗೆ ಸೊದೋಮ್ ನಗರದಂತೆ ಇದ್ದಾರೆ. ಜೆರುಸಲೇಮಿನ ಜನರು ಗೊಮೋರ ನಗರದಂತೆ ಇದ್ದಾರೆ.”


“ಅರಸನು ಚತುರನೂ ಕುತಂತ್ರಿಯೂ ಆಗಿರುವನು. ಅವನು ತನ್ನ ಬುದ್ಧಿಶಕ್ತಿಯನ್ನೂ ಹುಸಿನುಡಿಗಳನ್ನೂ ಬಳಸಿಕೊಂಡು ಅಭಿವೃದ್ಧಿ ಹೊಂದುವನು. ತಾನು ಬಹಳ ಮುಖ್ಯನೆಂದು ಅವನು ಭಾವಿಸುವನು. ನೆಮ್ಮದಿಯಾಗಿರುವ ಅನೇಕ ಜನರನ್ನು ಅನಿರೀಕ್ಷಿತವಾಗಿ ನಾಶಮಾಡುವನು. ಅವನು ರಾಜರುಗಳ ರಾಜನೊಂದಿಗೆ (ದೇವರೊಂದಿಗೆ) ಸಹ ಹೋರಾಡುವ ಪ್ರಯತ್ನ ಮಾಡುವನು. ಆದರೆ ಆ ಕ್ರೂರ ರಾಜನ ಶಕ್ತಿಯು ನಾಶವಾಗುವುದು. ಆದರೆ ಅದು ಮನುಷ್ಯನ ಕೈಯಿಂದ ನಾಶವಾಗುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು