Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 4:7 - ಪರಿಶುದ್ದ ಬೈಬಲ್‌

7 ಯೆಹೂದದ ಕೆಲವು ಜನರು ದೇವರಿಗೆ ವಿಶೇಷವಾದ ರೀತಿಯಲ್ಲಿ ಸಮರ್ಪಿತರಾಗಿದ್ದರು. ಅವರು ಬಹಳ ಶುದ್ಧರಾಗಿದ್ದರು. ಅವರು ಹಿಮಕ್ಕಿಂತಲೂ ಹಾಲಿಗಿಂತಲೂ ಬಿಳುಪಾಗಿದ್ದರು. ಅವರ ದೇಹಗಳು ಹವಳದಂತೆ ಕೆಂಪಾಗಿದ್ದವು. ಅವರ ಗಡ್ಡಗಳು ಇಂದ್ರನೀಲಮಣಿಯಂತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ಪ್ರಜೆಯಲ್ಲಿನ ಮಹನೀಯರು ಹಿಮಕ್ಕಿಂತ ಶುಭ್ರವಾಗಿಯೂ, ಹಾಲಿಗಿಂತ ಬಿಳುಪಾಗಿಯೂ ಇದ್ದರು. ಅವರ ದೇಹದ ಬಣ್ಣವು ಹವಳವನ್ನು ಮೀರಿತ್ತು, ಅವರ ರೂಪವು ಇಂದ್ರನೀಲಮಣಿಯಷ್ಟು ಅಂದವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನನ್ನ ಜನತೆಯ ಮಹನೀಯರು ಹಿಮಕ್ಕಿಂತ ಶುಭ್ರ, ಹಾಲಿಗಿಂತ ಬಿಳುಪು. ಅವರ ದೇಹದ ಬಣ್ಣ ಹವಳವನ್ನು ಮೀರಿತ್ತು ಅವರ ರೂಪ ಇಂದ್ರನೀಲ ಮಣಿಯಂತೆ ಅಂದವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆ ಪ್ರಜೆಯಲ್ಲಿನ ಮಹನೀಯರು ಹಿಮಕ್ಕಿಂತ ಶುಭ್ರವಾಗಿಯೂ ಹಾಲಿಗಿಂತ ಬಿಳುಪಾಗಿಯೂ ಇದ್ದರು. ಅವರ ದೇಹದ ಬಣ್ಣವು ಹವಳವನ್ನು ಮೀರಿತ್ತು, ಅವರ ರೂಪವು ಇಂದ್ರನೀಲಮಣಿಯಷ್ಟು ಅಂದವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವಳ ರಾಜಕುಮಾರರು ಹಿಮಕ್ಕಿಂತಲೂ ಪ್ರಕಾಶಮಾನವಾಗಿದ್ದರು. ಹಾಲಿಗಿಂತಲೂ ಬೆಳ್ಳಗಿದ್ದರು. ಅವರು ಮೈಕಟ್ಟಿನಲ್ಲಿ ಹವಳಕ್ಕಿಂತಲೂ ಕೆಂಪಾಗಿದ್ದರು. ಅವರ ಹೊಳಪು ಇಂದ್ರನೀಲ ಮಣಿಯ ಹಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 4:7
15 ತಿಳಿವುಗಳ ಹೋಲಿಕೆ  

ಹಿಸ್ಸೋಪ್ ಗಿಡದ ಬರಲಿನಿಂದ ನನ್ನನ್ನು ತೊಳೆದು ಶುದ್ಧೀಕರಿಸು; ನಾನು ಹಿಮಕ್ಕಿಂತಲೂ ಬಿಳುಪಾಗುವ ತನಕ ನನ್ನನ್ನು ತೊಳೆ!


ನನ್ನ ಪ್ರಿಯನದು ಹೊಳಪಾದ ಕಂದುಬಣ್ಣ. ಹತ್ತು ಸಾವಿರ ಪುರುಷರಲ್ಲಿ ಅವನೇ ಆಕರ್ಷಕ ಪುರುಷ.


ನಮ್ಮ ಯುವಕರು ಮಹಾವೃಕ್ಷಗಳಂತಿದ್ದಾರೆ. ನಮ್ಮ ಯುವತಿಯರು ಅರಮನೆಯಲ್ಲಿ ಸುಂದರವಾಗಿ ಕೆತ್ತಲ್ಪಟ್ಟ ಕಂಬಗಳಂತಿರುವರು.


ಇಷಯನು ಕಿರಿಯ ಮಗನನ್ನು ಕರೆತರಲು ಒಬ್ಬನನ್ನು ಕಳುಹಿಸಿದನು. ಇವನಾದರೋ ಕೆಂಬಣ್ಣದವನೂ ಸುಂದರನೇತ್ರನೂ ನೋಟಕ್ಕೆ ರಮಣೀಯನೂ ಆಗಿದ್ದನು. ಯೆಹೋವನು ಸಮುವೇಲನಿಗೆ, “ಮೇಲೆದ್ದು ನಿಲ್ಲು, ಅವನನ್ನು ಅಭಿಷೇಕಿಸು. ಇವನನ್ನೇ ನಾನು ಆರಿಸಿದ್ದು” ಎಂದು ಆಜ್ಞಾಪಿಸಿದನು.


ಹತ್ತು ದಿನಗಳ ತರುವಾಯ ದಾನಿಯೇಲ ಮತ್ತು ಅವನ ಸ್ನೇಹಿತರು ಅರಸನ ಆಹಾರವನ್ನು ಊಟಮಾಡಿದ ಇತರ ಎಲ್ಲ ತರುಣರಿಗಿಂತ ಆರೋಗ್ಯವಂತರಾಗಿ ಕಾಣಿಸಿದರು.


ಕೊನೆಗೆ ಸಂಸೋನನು ದೆಲೀಲಳಿಗೆ ಎಲ್ಲವನ್ನು ಹೇಳಿದನು. “ನಾನೆಂದೂ ನನ್ನ ತಲೆಕೂದಲನ್ನು ಕತ್ತರಿಸಿಕೊಂಡಿಲ್ಲ. ನಾನು ಹುಟ್ಟುವ ಮೊದಲೇ ನನ್ನನ್ನು ದೇವರಿಗೆ ಪ್ರತಿಷ್ಠಿಸಲಾಗಿತ್ತ್ತು. ಯಾರಾದರೂ ನನ್ನ ತಲೆಬೋಳಿಸಿದರೆ ನಾನು ನನ್ನ ಶಕ್ತಿಯನ್ನು ಕಳೆದುಕೊಳ್ಳುತ್ತೇನೆ. ನಾನು ಬೇರೆ ಮನುಷ್ಯರಷ್ಟೇ ದುರ್ಬಲನಾಗುತ್ತೇನೆ” ಎಂದು ಹೇಳಿದನು.


ಆದರೆ ಅವನು ನನಗೆ, ‘ನೀನು ಗರ್ಭವತಿಯಾಗಿರುವೆ; ನಿನಗೊಬ್ಬ ಮಗನು ಹುಟ್ಟುತ್ತಾನೆ. ನೀನು ದ್ರಾಕ್ಷಾರಸವನ್ನಾಗಲಿ ಬೇರೆ ಯಾವ ಮದ್ಯವನ್ನಾಗಲಿ ಕುಡಿಯಬೇಡ. ಯಾವ ನಿಷಿದ್ಧ ಆಹಾರವನ್ನೂ ತಿನ್ನಬೇಡ. ಏಕೆಂದರೆ ಆ ಹುಡುಗನು ಹುಟ್ಟಿದಂದಿನಿಂದ ಸಾಯುವವರೆಗೂ ದೇವರಿಗೆ ಪ್ರತಿಷ್ಠಿತನಾಗಿರುವನು ಎಂದು ಹೇಳಿದನು’” ಅಂದಳು.


ಏಕೆಂದರೆ ನೀನು ಗರ್ಭವತಿಯಾಗಿರುವೆ ಮತ್ತು ನಿನಗೊಬ್ಬ ಮಗನು ಹುಟ್ಟಲಿದ್ದಾನೆ. ಅವನು ಹುಟ್ಟಿದಂದಿನಿಂದಲೇ ದೇವರಿಗೆ ಪ್ರತಿಷ್ಠಿತನಾಗಿದ್ದಾನೆ. ಆದ್ದರಿಂದ ಅವನ ಕೂದಲನ್ನು ಕತ್ತರಿಸಕೂಡದು. ಅವನು ಇಸ್ರೇಲರನ್ನು ಫಿಲಿಷ್ಟಿಯರ ಹಿಡಿತದಿಂದ ಬಿಡಿಸುವನು” ಎಂದು ಹೇಳಿದನು.


ಪ್ರಭುವಿನ ದೃಷ್ಟಿಯಲ್ಲಿ ಯೋಹಾನನು ಮಹಾಪುರುಷನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿಯುವುದಿಲ್ಲ. ಯೋಹಾನನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು.


ಈ ಜನರು ಇಸ್ರೇಲರ ಯೆಹೋವನನ್ನು ನೋಡಿದರು. ದೇವರು ಆಕಾಶಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟಿನ ಮೇಲೆ ನಿಂತುಕೊಂಡಿದ್ದನು!


ಓಫೀರ್ ದೇಶದ ಬಂಗಾರದಿಂದಾಗಲಿ ಅಮೂಲ್ಯವಾದ ಗೋಮೇಧಕ ರತ್ನದಿಂದಾಗಲಿ ಇಂದ್ರನೀಲಮಣಿಗಳಿಂದಾಗಲಿ ಜ್ಞಾನವನ್ನು ಕೊಂಡುಕೊಳ್ಳಲಾಗದು.


ಜ್ಞಾನವು ಹವಳಕ್ಕಿಂತಲೂ ಸ್ಪಟಿಕಕ್ಕಿಂತಲೂ ಹೆಚ್ಚು ಬೆಲೆ ಬಾಳುತ್ತದೆ. ಜ್ಞಾನವು ಮಾಣಿಕ್ಯಕ್ಕಿಂತಲೂ ಅಮೂಲ್ಯವಾಗಿದೆ.


ಅವನ ಕಾಲುಗಳು ಬಂಗಾರದ ಪಾದಗಳುಳ್ಳ ಅಮೃತ ಶಿಲೆಯ ಕಂಬಗಳಂತಿವೆ. ಅವನು ಲೆಬನೋನಿನ ದೇವದಾರು ವೃಕ್ಷದಂತೆ ಎತ್ತರವಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು