Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 1:16 - ಪರಿಶುದ್ದ ಬೈಬಲ್‌

16 ನಾನು ಮನಸ್ಸಿನಲ್ಲಿ, “ನಾನು ಬಹು ಜ್ಞಾನಿ. ನನಗಿಂತ ಮೊದಲು ಜೆರುಸಲೇಮನ್ನು ಆಳಿದ ಎಲ್ಲಾ ರಾಜರುಗಳಿಗಿಂತ ನಾನು ಜ್ಞಾನಿ. ನಾನು ಜ್ಞಾನವನ್ನೂ ವಿವೇಕವನ್ನೂ ಚೆನ್ನಾಗಿ ತಿಳಿದುಕೊಂಡಿರುವೆ” ಎಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನು ನನ್ನ ಮನಸ್ಸಿನಲ್ಲಿ ಯೋಚಿಸುತ್ತಾ, “ನೋಡು, ನನಗಿಂತ ಮೊದಲು ಯೆರೂಸಲೇಮನ್ನು ಆಳಿದವರೆಲ್ಲರಿಗಿಂತಲೂ ಹೆಚ್ಚು ಜ್ಞಾನವನ್ನು ಸಂಪಾದಿಸಿಕೊಂಡಿದ್ದೇನೆ. ನನ್ನ ಹೃದಯವು ಜ್ಞಾನವನ್ನೂ, ತಿಳಿವಳಿಕೆಯನ್ನೂ ವಿಶೇಷವಾಗಿ ಹೊಂದಿದೆ” ಎಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನನ್ನಷ್ಟಕ್ಕೆ ನಾನೇ ಹೀಗೆಂದುಕೊಂಡೆ: “ನನಗಿಂತ ಮೊದಲು ಜೆರುಸಲೇಮನ್ನು ಆಳಿದ ಎಲ್ಲಾ ಅರಸರಿಗಿಂತಲೂ ಹೆಚ್ಚು ಜ್ಞಾನವನ್ನು ಸಂಪಾದಿಸಿಕೊಂಡಿದ್ದೇನೆ. ಜ್ಞಾನ ಹಾಗೂ ತಿಳುವಳಿಕೆಯ ವಿಶೇಷ ಅನುಭವ ನನಗಿದೆ".

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಾನು ಮನಸ್ಸಿನಲ್ಲಿ ಯೋಚಿಸುತ್ತಾ - ಆಹಾ, ನನಗಿಂತ ಮೊದಲು ಯೆರೂಸಲೇಮನ್ನು ಆಳಿದವರೆಲ್ಲರಿಗಿಂತಲೂ ಹೆಚ್ಚು ಜ್ಞಾನವನ್ನು ಸಂಪಾದಿಸಿಕೊಂಡಿದ್ದೇನೆ; ನನ್ನ ಹೃದಯವು ಜ್ಞಾನವನ್ನೂ ತಿಳುವಳಿಕೆಯನ್ನೂ ವಿಶೇಷವಾಗಿ ಹೊಂದಿದೆ ಎಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನನ್ನಷ್ಟಕ್ಕೆ ನಾನೇ ಹೀಗೆಂದುಕೊಂಡೆನು, “ನೋಡು, ಯೆರೂಸಲೇಮಿನಲ್ಲಿ ನನಗಿಂತ ಮೊದಲು ಆಳಿದವರಿಗಿಂತ ನಾನು ಹೆಚ್ಚು ಜ್ಞಾನವನ್ನು ಸಂಪಾದಿಸಿದ್ದೇನೆ. ಹೌದು, ಜ್ಞಾನದ ಹಾಗೂ ತಿಳುವಳಿಕೆಯ ಅನುಭವ ನನಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 1:16
20 ತಿಳಿವುಗಳ ಹೋಲಿಕೆ  

ನಾನು ಬಹು ಐಶ್ವರ್ಯವಂತನಾದೆ; ಪ್ರಸಿದ್ಧನಾದೆ. ನನಗಿಂತ ಮೊದಲು ಜೆರುಸಲೇಮಿನಲ್ಲಿದ್ದ ಎಲ್ಲರಿಗಿಂತಲೂ ನಾನು ದೊಡ್ಡವನಾದೆ. ನನಗೆ ಸಹಾಯಕ್ಕಾಗಿ ಯಾವಾಗಲೂ ನನ್ನಲ್ಲಿ ಜ್ಞಾನವಿತ್ತು.


ಅವನ ಜ್ಞಾನವು ಈಜಿಪ್ಟಿನ ಗಂಡಸರೆಲ್ಲರ ಜ್ಞಾನಕ್ಕಿಂತಲೂ ಹೆಚ್ಚಿನದಾಗಿತ್ತು. ಸೊಲೊಮೋನನ ಜ್ಞಾನವು ಪೂರ್ವದಿಕ್ಕಿನ ಜನರೆಲ್ಲರ ಜ್ಞಾನಕ್ಕಿಂತ ವಿಶಾಲವಾಗಿತ್ತು.


ನಾನೇ ಬಂದು, ನನ್ನ ಸ್ವಂತ ಕಣ್ಣುಗಳಿಂದ ಆ ಸಂಗತಿಗಳನ್ನು ನೋಡುವವರೆಗೆ ನಾನು ನಂಬಲೇ ಇಲ್ಲ. ಆದರೆ ನಾನು ಕೇಳಿದುದಕ್ಕಿಂತಲೂ ಮಹತ್ವವಾದ ಸಂಗತಿಗಳನ್ನು ಈಗ ನೋಡುತ್ತಿದ್ದೇನೆ. ಜನರು ಹೇಳಿದುದಕ್ಕಿಂತ ಅತ್ಯಂತ ಹೆಚ್ಚಿನ ಜ್ಞಾನವೂ ಐಶ್ವರ್ಯವೂ ನಿನ್ನಲ್ಲಿದೆ.


ಆದರೆ ಗಟ್ಟಿಯಾದ ಆಹಾರವು ಜ್ಞಾನದಲ್ಲಿ ಬೆಳವಣಿಗೆ ಹೊಂದಿರುವವರಿಗೇ ಹೊರತು ಮಕ್ಕಳಿಗಲ್ಲ. ಇವರು ಅನುಭವದಿಂದ ತಮ್ಮ ಮನಸ್ಸುಗಳನ್ನು ಹಿಡಿತದಲ್ಲಿ ಇಟ್ಟುಕೊಂಡಿರುವುದರಿಂದ ಒಳಿತು ಕೆಡುಕುಗಳಿಗಿರುವ ಭೇದವನ್ನು ತಿಳಿದುಕೊಳ್ಳಬಲ್ಲವರಾಗಿದ್ದಾರೆ.


ನೀವು ಕೋಪದಿಂದಿರುವಾಗ ಎಚ್ಚರಿಕೆಯಾಗಿದ್ದು ಪಾಪಮಾಡದಿರಿ. ಹಾಸಿಗೆಯ ಮೇಲಿರುವಾಗ ಹೃದಯಗಳನ್ನು ಪರೀಕ್ಷಿಸಿಕೊಳ್ಳಿರಿ.


ಇಸ್ರೇಲರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ, ಆತನು ಭೂಪರಲೋಕಗಳನ್ನು ಉಂಟುಮಾಡಿದನು. ಅರಸನಾದ ದಾವೀದನಿಗೆ ಒಬ್ಬ ಜ್ಞಾನವುಳ್ಳ ಮಗನನ್ನು ಅನುಗ್ರಹಿಸಿದ್ದಾನೆ. ನಿನಗೆ ಜ್ಞಾನವೂ ತಿಳುವಳಿಕೆಯೂ ಇರುವದರಿಂದ ನೀನು ದೇವಾಲಯವನ್ನು ಕಟ್ಟುವೆ ಮತ್ತು ನಿನಗೂ ಒಂದು ಅರಮನೆಯನ್ನು ಕಟ್ಟುವೆ.


“ಯೆಹೋಯಾಕೀಮನು, ‘ನಾನೇ ಒಂದು ದೊಡ್ಡ ಅರಮನೆಯನ್ನು ಕಟ್ಟಿಸುತ್ತೇನೆ. ನಾನು ಮಹಡಿಯ ಮೇಲೆ ದೊಡ್ಡದೊಡ್ಡ ಕೋಣೆಗಳನ್ನು ಕಟ್ಟಿಸುತ್ತೇನೆ’ ಎಂದು ಹೇಳುತ್ತಾನೆ. ಅವನು ದೊಡ್ಡದೊಡ್ಡ ಕಿಟಕಿಗಳುಳ್ಳ ಮನೆಯನ್ನು ಕಟ್ಟಿಸುತ್ತಾನೆ. ದೇವದಾರಿನ ಹಲಗೆಗಳನ್ನು ಹೊದಿಸುತ್ತಾನೆ. ಅದಕ್ಕೆ ಕೆಂಪು ಬಣ್ಣವನ್ನು ಬಳಿಯುತ್ತಾನೆ.


ರಾತ್ರಿಯಲ್ಲಿ, ನಾನು ಮಾಡುತ್ತಿದ್ದ ಗಾನವನ್ನು ನೆನಸಿಕೊಳ್ಳುವೆನು; ಆಂತರ್ಯದಲ್ಲಿ ಮಾತಾಡುತ್ತಾ ಅರ್ಥಮಾಡಿಕೊಳ್ಳಲು ಪ್ರಯತ್ನಿಸುವೆನು.


ಆದರೆ ದೇವಮನುಷ್ಯನಾದ ಎಲೀಷನ ಸೇವಕನಾದ ಗೇಹಜಿಯು, “ನೋಡು, ಅರಾಮ್ಯನಾದ ನಾಮಾನನು ತಂದಿದ್ದ ಕಾಣಿಕೆಯನ್ನು ಸ್ವೀಕರಿಸದೆ ನನ್ನ ಒಡೆಯನಾದ ಎಲೀಷನು ಅವನನ್ನು ಕಳುಹಿಸಿಬಿಟ್ಟನು! ಯೆಹೋವನಾಣೆಯಾಗಿ, ನಾನು ನಾಮಾನನ ಹಿಂದೆ ಓಡಿಹೋಗಿ ಅವನಿಂದ ಏನನ್ನಾದರೂ ಪಡೆಯುತ್ತೇನೆ!” ಎಂದು ತನ್ನೊಳಗೆ ಅಂದುಕೊಂಡು,


ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರತೀರಕ್ಕೆ ತರುತ್ತಾರೆ. ನಂತರ ನಾನು ಅವುಗಳನ್ನು ಒಟ್ಟಾಗಿ ಕಟ್ಟಿ, ನೀನು ತಿಳಿಸಿದ ಸ್ಥಳಕ್ಕೆ ತೇಲಿಬಿಡುತ್ತೇನೆ. ಗೊತ್ತುಪಡಿಸಿದ ಸ್ಥಳದಲ್ಲಿ ದಿಮ್ಮಿಗಳನ್ನು ಬೇರ್ಪಡಿಸುತ್ತೇನೆ; ನೀನು ಅವುಗಳನ್ನು ತೆಗೆದುಕೊಳ್ಳಬಹುದು. ಅವುಗಳಿಗೆ ಬದಲಾಗಿ ನೀನು ನನ್ನ ಮನೆಯವರಿಗೆ ಆಹಾರಸಾಮಾಗ್ರಿಗಳನ್ನು ಕೊಡಬೇಕೆಂಬುದೇ ನನ್ನ ಅಪೇಕ್ಷೆಯಾಗಿದೆ.”


ನಾನು ನನ್ನ ಹೃದಯದಲ್ಲಿ, “ಬಾ, ನಿನ್ನನ್ನು ಸುಖದ ಮೂಲಕ ಪರೀಕ್ಷಿಸುವೆನು; ಆಗ ನೀನು ನೀತಿಮಾರ್ಗವನ್ನು ಕಲಿತುಕೊಳ್ಳುವೆ” ಎಂದುಕೊಂಡೆನು. ಆದರೆ ಇದು ಸಹ ವ್ಯರ್ಥವೆಂದು ಕಂಡುಕೊಂಡೆನು.


ನಾನು ನನ್ನೊಳಗೆ, “ಮೂಢನಿಗೆ ಸಂಭವಿಸುವ ಗತಿಯು ನನಗೂ ಸಂಭವಿಸುವುದು. ಹೀಗಿರಲು ಜ್ಞಾನಿಯಾಗಲು ನಾನೇಕೆ ಪ್ರಯಾಸಪಡಬೇಕು? ಇದೂ ವ್ಯರ್ಥವಲ್ಲವೇ?” ಅಂದುಕೊಂಡೆನು.


ಆಗ ನಾನು ಮನಸ್ಸಿನಲ್ಲಿ, “ದೇವರು ಪ್ರತಿಯೊಂದಕ್ಕೂ ಸಮಯವನ್ನು ಗೊತ್ತುಪಡಿಸಿದ್ದಾನೆ. ಜನರು ಮಾಡುವ ಪ್ರತಿಯೊಂದಕ್ಕೂ ನ್ಯಾಯತೀರಿಸಲು ಆತನು ಸಮಯವನ್ನು ಗೊತ್ತುಪಡಿಸಿದ್ದಾನೆ. ದೇವರು ನೀತಿವಂತರಿಗೂ ದುಷ್ಟರಿಗೂ ನ್ಯಾಯತೀರಿಸುವನು” ಎಂದುಕೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು