Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 1:2 - ಪರಿಶುದ್ದ ಬೈಬಲ್‌

2 ವ್ಯರ್ಥವೇ ವ್ಯರ್ಥ, ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಪ್ರಸಂಗಿಯು ಹೀಗೆ ಹೇಳುತ್ತಾನೆ. “ವ್ಯರ್ಥವೇ ವ್ಯರ್ಥ, ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಉಪದೇಶಕನು ಹೇಳುವುದನ್ನು ಕೇಳಿ: ವ್ಯರ್ಥಗಳಲ್ಲಿ ವ್ಯರ್ಥ, ವ್ಯರ್ಥವೇ ವ್ಯರ್ಥ, ಎಲ್ಲವೂ ವ್ಯರ್ಥ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಪ್ರಸಂಗಿಯು ಹೀಗೆ ಹೇಳುತ್ತಾನೆ - ವ್ಯರ್ಥವೇ ವ್ಯರ್ಥ, ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ವ್ಯರ್ಥಗಳಲ್ಲಿ ವ್ಯರ್ಥ! ವ್ಯರ್ಥಗಳಲ್ಲಿ ವ್ಯರ್ಥ!” ಎಂದು ಪ್ರಸಂಗಿ ಹೇಳುತ್ತಾನೆ. “ಸಮಸ್ತವೂ ವ್ಯರ್ಥ! ಎಲ್ಲವೂ ವ್ಯರ್ಥ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 1:2
23 ತಿಳಿವುಗಳ ಹೋಲಿಕೆ  

ಮನುಷ್ಯರು ಕೇವಲ ಉಸಿರೇ. ಅವರ ಜೀವಮಾನವು ಬೇಗನೆ ಗತಿಸಿಹೋಗುವ ನೆರಳಿನಂತಿದೆ.


ಸರ್ವಸೃಷ್ಟಿಯು ನಿರರ್ಥಕತೆಗೆ ಒಳಗಾಯಿತು. ಹೀಗಾದದ್ದು ಅದರ ಸ್ವಂತ ಇಚ್ಛೆಯಿಂದಲ್ಲ, ದೇವರ ಇಚ್ಛೆಯಿಂದಲೇ. ಆದರೂ ಅದಕ್ಕೆ ನಿರೀಕ್ಷೆಯಿತ್ತು. ಅದೇನೆಂದರೆ:


ಹಣದಾಸೆಯುಳ್ಳವನು ತನ್ನಲ್ಲಿ ಎಷ್ಟೇ ಹಣವಿದ್ದರೂ ತೃಪ್ತನಾಗಲಾರನು. ಐಶ್ವರ್ಯದಾಸೆಯುಳ್ಳವನು ಎಷ್ಟೇ ಸಂಪಾದಿಸಿದರೂ ತೃಪ್ತನಾಗುವುದಿಲ್ಲ. ಇದು ಸಹ ವ್ಯರ್ಥ.


ಪ್ರತಿಯೊಂದು ಉಪಯೋಗವಿಲ್ಲದ್ದು! ಪ್ರಸಂಗಿಯು ಹೇಳುವುದೇನೆಂದರೆ, ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ.


ದೇವರು ತಾನು ಮೆಚ್ಚಿಕೊಂಡವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ಕೊಡುವನು. ಪಾಪಿಗಾದರೋ ಪ್ರಯಾಸದಿಂದ ಸಂಪಾದಿಸುವ ಮತ್ತು ಕೂಡಿಸಿಡುವ ಕೆಲಸವನ್ನು ಕೊಡುವನು. ಅವನು ಕೂಡಿಸಿಟ್ಟವುಗಳನ್ನು ದೇವರು ತನ್ನ ಮೆಚ್ಚಿಕೆಗೆ ಪಾತ್ರನಾದವನಿಗೆ ಕೊಡುವನು. ಇದು ಸಹ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ.


ನಾನು ಜ್ಞಾನವನ್ನೂ ಪ್ರಯಾಸವನ್ನೂ ಯಾವುದರಲ್ಲಿ ವಿನಿಯೋಗಿಸಿದ್ದೇನೋ ಅದರ ಮೇಲೆ ಬೇರೊಬ್ಬನು ದೊರೆತನ ಮಾಡುವನು. ಅವನು ಜ್ಞಾನಿಯೋ ಮೂಢನೋ ನನಗೆ ಗೊತ್ತಿಲ್ಲ. ಇದೂ ವ್ಯರ್ಥವೇ.


ನನ್ನ ಕಾರ್ಯಗಳನ್ನೂ ನನ್ನ ಪ್ರಯಾಸವನ್ನೂ ಆಲೋಚಿಸಿದೆ. ಗಾಳಿಯನ್ನು ಹಿಂದಟ್ಟಿದ ಹಾಗೆ ಅದೆಲ್ಲಾ ವ್ಯರ್ಥವೆಂದು ಕಂಡುಕೊಂಡೆ. ನಮ್ಮ ಈ ಜೀವಮಾನದ ಯಾವ ಕೆಲಸಗಳಿಂದಲೂ ಲಾಭವಿಲ್ಲ.


ಅವನ ಜೀವಮಾನವೆಲ್ಲಾ ಅವನಿಗೆ ವ್ಯಸನವಿರುವುದು; ಕೆಲಸದಲ್ಲೆಲ್ಲಾ ಕಷ್ಟವಿರುವುದು; ರಾತ್ರಿಯಲ್ಲಿಯೂ ಮನಸ್ಸಿಗೆ ವಿಶ್ರಾಂತಿಯಿರದು. ಇದೂ ವ್ಯರ್ಥವೇ.


ಈ ಲೋಕದ ಕಾರ್ಯಗಳೆಲ್ಲಾ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೆಂದು ನನಗೆ ಕಂಡುಬಂದದ್ದರಿಂದ ಜೀವನವೇ ನನಗೆ ಅಸಹ್ಯವಾಯಿತು.


ನಿನ್ನ ಜೀವನದ ಪ್ರತಿಯೊಂದು ದಿನದಲ್ಲಿಯೂ ಆನಂದಿಸು. ನೀನು ಎಷ್ಟುಕಾಲ ಬದುಕುವೆ ಎಂಬುದು ಮುಖ್ಯವಲ್ಲ. ಆದರೆ ಕತ್ತಲೆಯ ದಿನಗಳು ಬಹಳವೆಂದು ಜ್ಞಾಪಕದಲ್ಲಿಟ್ಟುಕೊ. ಮುಂದೆ ಸಂಭವಿಸುವುದೆಲ್ಲಾ ವ್ಯರ್ಥವೇ.


ಸ್ವಂತ ಕುಟುಂಬವನ್ನು ಹೊಂದಿಲ್ಲದವನು ಅಂದರೆ ಅಣ್ಣತಮ್ಮಂದಿರಾಗಲಿ ಮಕ್ಕಳಾಗಲಿ ಇಲ್ಲದವನು ಸಹ ಪ್ರಯಾಸಪಟ್ಟು ದುಡಿಯುವನು. ಅವನಿಗೂ ತನ್ನ ಆಸ್ತಿಯಲ್ಲಿ ತೃಪ್ತಿಯಿಲ್ಲ. ಅವನು ಬಿಡುವಿಲ್ಲದೆ ಪ್ರಯಾಸಪಟ್ಟು ದುಡಿಯುವನು. “ನಾನೇಕೆ ಪ್ರಯಾಸಪಟ್ಟು ದುಡಿಯುತ್ತಿರುವೆ? ನಾನೇಕೆ ಜೀವನದ ಸುಖವನ್ನು ಅನುಭವಿಸುತ್ತಿಲ್ಲ?” ಎಂದು ಅವನು ಆಲೋಚಿಸುವುದೇ ಇಲ್ಲ. ಇದು ಸಹ ಕೆಟ್ಟದ್ದೂ ವ್ಯರ್ಥವಾದದ್ದೂ ಆಗಿದೆ.


ಆಮೇಲೆ ನಾನು, “ಜನರು ಪ್ರಯಾಸಪಟ್ಟು ಕೆಲಸ ಮಾಡುವುದೇಕೆ?” ಎಂದು ಆಲೋಚಿಸಿದೆ. ಜನರು ಏಳಿಗೆ ಹೊಂದಲು ಮತ್ತು ಬೇರೆಯವರಿಗಿಂತ ಹೆಚ್ಚು ಅಭಿವೃದ್ಧಿಯಾಗಲು ಪ್ರಯತ್ನಿಸುವರು; ಅದಕ್ಕೆ ಅವರ ಮತ್ಸರವೇ ಕಾರಣ. ಇದೂ ಗಾಳಿಯನ್ನು ಹಿಂದಟ್ಟಿದ್ದ ಹಾಗೆ ವ್ಯರ್ಥ.


ಮನುಷ್ಯನು ಪ್ರಾಣಿಗಿಂತಲೂ ಉತ್ತಮನಾಗಿರುವನೇ? ಇಲ್ಲ! ಏಕೆಂದರೆ ಪ್ರತಿಯೊಂದು ಉಪಯೋಗವಿಲ್ಲದ್ದು. ಪ್ರಾಣಿಗಳಿಗೂ ಮನುಷ್ಯರಿಗೂ ಒಂದೇ ಗತಿಯಾಗುವುದು; ಪ್ರಾಣಿಗಳೂ ಸಾಯುವವು, ಮನುಷ್ಯರೂ ಸಾಯುವರು. ಮನುಷ್ಯರಿಗೂ ಪ್ರಾಣಿಗಳಿಗೂ ಇರುವುದು ಒಂದೇ ‘ಉಸಿರು.’ ಸತ್ತ ಪ್ರಾಣಿಗೂ ಸತ್ತ ಮನುಷ್ಯನಿಗೂ ವ್ಯತ್ಯಾಸವಿಲ್ಲ.


ಒಬ್ಬನು ತನ್ನ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ಕಾರ್ಯವನ್ನು ಸಫಲಗೊಳಿಸಿದ ಮೇಲೆ ಅದರ ಫಲವನ್ನು ಪ್ರಯಾಸಪಡದ ಬೇರೊಬ್ಬನಿಗೆ ಬಿಟ್ಟು ಹೋಗಬೇಕಾಗುವುದು. ಇದೂ ವ್ಯರ್ಥವೂ ಅನ್ಯಾಯವೂ ಆಗಿದೆ.


ನಿಮ್ಮ ಕೋಪವು ನಿಮ್ಮನ್ನು ಹತೋಟಿಯಲ್ಲಿಡದಂತೆ ನೋಡಿಕೊಳ್ಳಿರಿ. ನಿಮ್ಮ ದೇಹವು ನಿಮ್ಮನ್ನು ಪಾಪಕ್ಕೆ ನಡೆಸದಂತೆ ನೋಡಿಕೊಳ್ಳಿರಿ. ಜನರು ಯೌವನಪ್ರಾಯದಲ್ಲಿರುವಾಗ, ಜೀವನದ ಆರಂಭದಲ್ಲಿಯೇ ಮೂಢಕಾರ್ಯಗಳನ್ನು ಮಾಡುವರು.


ಅನೇಕಾನೇಕ ಜನರು ಆ ಯೌವನಸ್ಥನಿಗೆ ಬೆಂಬಲನೀಡುವರು. ಆದರೆ ಕೊನೆಗಾಲದಲ್ಲಿ ಅವರೇ ಅವನನ್ನು ಇಷ್ಟಪಡುವುದಿಲ್ಲ. ಇದು ಸಹ ಗಾಳಿಯನ್ನು ಹಿಂದಟ್ಟಿದಂತೆ ವ್ಯರ್ಥ.


ನಾನು ನನ್ನೊಳಗೆ, “ಮೂಢನಿಗೆ ಸಂಭವಿಸುವ ಗತಿಯು ನನಗೂ ಸಂಭವಿಸುವುದು. ಹೀಗಿರಲು ಜ್ಞಾನಿಯಾಗಲು ನಾನೇಕೆ ಪ್ರಯಾಸಪಡಬೇಕು? ಇದೂ ವ್ಯರ್ಥವಲ್ಲವೇ?” ಅಂದುಕೊಂಡೆನು.


ಕಾಡುಕತ್ತೆಯು ಮನುಷ್ಯನನ್ನು ಹೇಗೆ ಹೆರಲಾರದೋ ಅದೇ ರೀತಿಯಲ್ಲಿ ದಡ್ಡನು ಎಂದಿಗೂ ಜ್ಞಾನಿಯಾಗಲಾರನು.


ನಮ್ಮ ಜೀವಿತಕಾಲ ಸ್ವಲ್ಪವೆಂಬುದನ್ನು ಜ್ಞಾಪಿಸಿಕೊ. ನಾವು ಸ್ವಲ್ಪಕಾಲ ಬದುಕಿ ಸಾಯುವುದಕ್ಕಾಗಿಯೇ ನೀನು ನಮ್ಮನ್ನು ಸೃಷ್ಟಿಸಿದೆ.


ಇದಲ್ಲದೆ ಬೆಳ್ಳಿಬಂಗಾರಗಳನ್ನು ನನಗೋಸ್ಕರ ಸಂಗ್ರಹಿಸಿದೆ; ರಾಜರುಗಳಿಂದಲೂ ಅವರ ದೇಶಗಳಿಂದಲೂ ಭಂಡಾರಗಳನ್ನು ತೆಗೆದುಕೊಂಡೆ. ನನಗೋಸ್ಕರ ಹಾಡಲು ಗಾಯಕಗಾಯಕಿಯರಿದ್ದರು. ನನ್ನನ್ನು ಸಂತೋಷಪಡಿಸಲು ಅನೇಕ ಉಪಪತ್ನಿಯರಿದ್ದರು. ಮನುಷ್ಯನು ಬಯಸಬಹುದಾದ ಪ್ರತಿಯೊಂದನ್ನೂ ನಾನು ಪಡೆದಿದ್ದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು